AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮೂರನೇ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಅಲಭ್ಯ

Team India: ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ಪಂದ್ಯದಲ್ಲಿ ಇಬ್ಬರು ದಿಗ್ಗಜರು ಕಣಕ್ಕಿಳಿಯುವುದು ಖಚಿತ.

IND vs AUS: ಮೂರನೇ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಅಲಭ್ಯ
Team India
TV9 Web
| Edited By: |

Updated on:Sep 26, 2023 | 7:49 PM

Share

ಭಾರತ-ಆಸ್ಟ್ರೇಲಿಯಾ ನಡುವಣ ಮೂರನೇ ಏಕದಿನ ಪಂದ್ಯಕ್ಕೆ ಟೀಮ್ ಇಂಡಿಯಾದ ಐವರು ಆಟಗಾರರು ಅಲಭ್ಯರಾಗಿದ್ದಾರೆ. ರಾಜ್​ಕೋಟ್​ನಲ್ಲಿ ಬುಧವಾರ ನಡೆಯಲಿರುವ ಈ ಪಂದ್ಯದಿಂದ ಗಾಯದ ಕಾರಣ ಅಕ್ಷರ್ ಪಟೇಲ್ ಹೊರಗುಳಿದಿದ್ದಾರೆ. ಇನ್ನು ಟೀಮ್ ಇಂಡಿಯಾ ಆರಂಭಿಕ ಆಟಗಾರ ಶುಭ್​ಮನ್ ಗಿಲ್ ವಿಶ್ರಾಂತಿ ಪಡೆದಿದ್ದಾರೆ.

ಮತ್ತೊಂದೆಡೆ ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಹಾಗೂ ವೇಗಿ ಮೊಹಮ್ಮದ್ ಶಮಿ ಕೂಡ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಹಾಗೆಯೇ 3ನೇ ಪಂದ್ಯದ ವೇಳೆ ತಂಡವನ್ನು ಕೂಡಿಕೊಳ್ಳಬೇಕಿದ್ದ ಉಪನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಅಲ್ಲದೆ ಏಕದಿನ ವಿಶ್ವಕಪ್​ ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ.

ಇದರೊಂದಿಗೆ ರಾಜ್​ಕೋಟ್​ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧ ಅಂತಿಮ ಏಕದಿನ ಪಂದ್ಯದಲ್ಲಿ ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಶುಭ್​ಮನ್ ಗಿಲ್ ಹಾಗೂ ಹಾರ್ದಿಕ್ ಪಾಂಡ್ಯ ಕಣಕ್ಕಿಳಿಯುವುದಿಲ್ಲ ಎಂಬುದು ಖಚಿತವಾಗಿದೆ.

ಇನ್ನು 2ನೇ ಪಂದ್ಯದಿಂದ ಹೊರಗುಳಿದಿದ್ದ ಜಸ್​ಪ್ರೀತ್ ಬುಮ್ರಾ ಅವರ ಬದಲಿಗೆ ಆಯ್ಕೆಯಾಗಿದ್ದ ಮುಖೇಶ್ ಕುಮಾರ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇದಾಗ್ಯೂ ಪ್ರಸ್ತುತ ಭಾರತ ತಂಡದಲ್ಲಿರುವುದು ಕೇವಲ 13 ಆಟಗಾರರು ಮಾತ್ರ ಎಂಬುದು ವಿಶೇಷ.

ರೋಹಿತ್ – ಕೊಹ್ಲಿ ಕಂಬ್ಯಾಕ್:

ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಈಗಾಗಲೇ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ ನಾಳೆ ನಡೆಯಲಿರುವ ಪಂದ್ಯದಲ್ಲಿ ಇಬ್ಬರು ದಿಗ್ಗಜರು ಕಣಕ್ಕಿಳಿಯುವುದು ಖಚಿತ.

ಇದನ್ನೂ ಓದಿ: ಟೀಮ್ ಇಂಡಿಯಾ ಪರ ಸತತ 4 ಸಿಕ್ಸ್ ಸಿಡಿಸಿದ್ದು ಮೂವರು ಬ್ಯಾಟರ್​ಗಳು ಮಾತ್ರ..!

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಮುಖೇಶ್ ಕುಮಾರ್.

Published On - 7:31 pm, Tue, 26 September 23

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ