AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಕೇವಲ 36 ರನ್​ಗೆ ಆಲೌಟ್: ಟೀಮ್ ಇಂಡಿಯಾವನ್ನು ಕಿಚಾಯಿಸಿದ ಆಸ್ಟ್ರೇಲಿಯಾ

India vs Australia 1st Test: ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ ವಿರುದ್ಧ. ಅದು ಕೂಡ ಬಾರ್ಡರ್ - ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಎಂಬುದು ವಿಶೇಷ.

IND vs AUS: ಕೇವಲ 36 ರನ್​ಗೆ ಆಲೌಟ್: ಟೀಮ್ ಇಂಡಿಯಾವನ್ನು ಕಿಚಾಯಿಸಿದ ಆಸ್ಟ್ರೇಲಿಯಾ
India vs Australia
TV9 Web
| Edited By: |

Updated on:Feb 06, 2023 | 5:06 PM

Share

India vs Australia Test: ಪ್ರತಿಷ್ಠಿತ ಭಾರತ-ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ (Border-Gavaskar Trophy) ಟೆಸ್ಟ್ ಸರಣಿಗೆ ವೇದಿಕೆ ಸಜ್ಜಾಗಿದೆ. 4 ಪಂದ್ಯಗಳ ಈ ಸರಣಿಯ ಮೊದಲ ಪಂದ್ಯವು ಫೆಬ್ರವರಿ 9 ರಿಂದ ಶುರುವಾಗಲಿದೆ. ನಾಗಪುರದ ವಿದರ್ಭ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ ಟೀಮ್ ಇಂಡಿಯಾವನ್ನು ಕಿಚಾಯಿಸಿದೆ. ಅದು ಕೂಡ ಟೀಮ್ ಇಂಡಿಯಾ ಪಾಲಿನ ಮರೆಯಲಾಗದ ಕಹಿ ನೆನಪಿನ ವಿಡಿಯೋ ಮೂಲಕ ಎಂಬುದೇ ವಿಶೇಷ.

ಹೌದು, ಟೀಮ್ ಇಂಡಿಯಾ ಟೆಸ್ಟ್ ಕ್ರಿಕೆಟ್​ನಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆಗಿದ್ದು ಆಸ್ಟ್ರೇಲಿಯಾ ವಿರುದ್ಧ. ಅದು ಕೂಡ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ. 2020-21 ನಡೆದ ಈ ಪಂದ್ಯದಲ್ಲಿ ಭಾರತ ತಂಡವು ಕೇವಲ 36 ರನ್​ಗಳಿಗೆ ಇನಿಂಗ್ಸ್​ ಅಂತ್ಯಗೊಳಿಸಿತ್ತು.

ಇದನ್ನೂ ಓದಿ
Image
ICC Rankings: ಐಸಿಸಿ ರ‍್ಯಾಂಕಿಂಗ್​ನಲ್ಲಿ ನಂಬರ್ 1 ಸ್ಥಾನ ಅಲಂಕರಿಸಿದ ಭಾರತದ 6 ಬೌಲರ್​ಗಳು ಇವರೇ
Image
ವಿದೇಶದಲ್ಲಿ ಪಂದ್ಯವಾಡುತ್ತಿದ್ದ ಆಟಗಾರನನ್ನು ಕ್ರೀಡಾ ಸಚಿವನಾಗಿ ಆಯ್ಕೆ ಮಾಡಿದ ಪಾಕ್ ಸರ್ಕಾರ
Image
Shubman Gill: ಕಿಂಗ್ ಕೊಹ್ಲಿಯ ಮತ್ತೊಂದು ದಾಖಲೆ ಮುರಿದ ಶುಭ್​ಮನ್ ಗಿಲ್
Image
WIPL 2023: ಮಹಿಳಾ ಐಪಿಎಲ್ 5 ತಂಡಗಳ ಘೋಷಣೆ

ಅಡಿಲೇಡ್​ನಲ್ಲಿ ನಡೆದಿದ್ದ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 244 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್​ನಲ್ಲಿ ಆಸ್ಟ್ರೇಲಿಯಾ ತಂಡ ಕೇವಲ 191 ರನ್​ಗಳಿಗೆ ಆಲೌಟ್ ಆಗಿತ್ತು.

ಅಲ್ಪ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಬೌಲಿಂಗ್ ದಾಳಿಗೆ ತತ್ತರಿಸಿತು. ಪರಿಣಾಮ 21.2 ಓವರ್​ಗಳಲ್ಲಿ ಕೇವಲ 36 ರನ್​ಗಳಿಗೆ ಇನಿಂಗ್ಸ್ ಅಂತ್ಯಗೊಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ 93 ರನ್​ಗಳ ಟಾರ್ಗೆಟ್ ಪಡೆದ ಆಸ್ಟ್ರೇಲಿಯಾ ತಂಡವು 2 ವಿಕೆಟ್​ ಕಳೆದುಕೊಂಡು ಗುರಿ ಮುಟ್ಟುವ ಮೂಲಕ ಭರ್ಜರಿ ಜಯ ಸಾಧಿಸಿತ್ತು.

ಇದೀಗ 2023ರ ಬಾರ್ಡರ್-ಗವಾಸ್ಕರ್ ಸರಣಿಯ ಮೊದಲ ಟೆಸ್ಟ್ ಪಂದ್ಯಕ್ಕೂ ಮುನ್ನ ಕ್ರಿಕೆಟ್ ಆಸ್ಟ್ರೇಲಿಯಾ 36 ರನ್​ಗಳಿಗೆ ಆಲೌಟ್ ಆಗಿದ್ದ ಟೀಮ್ ಇಂಡಿಯಾದ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಕಳೆದ ಬಾರಿಯ ಸರಣಿಯ ಮೊದಲ ಪಂದ್ಯದ ಫಲಿತಾಂಶವನ್ನು ಭಾರತ ತಂಡಕ್ಕೆ ನೆನಪಿಸಿ ಕಿಚಾಯಿಸಿದೆ.

ಒಟ್ಟಿನಲ್ಲಿ ಸರಣಿ ಆರಂಭಕ್ಕೂ ಮುನ್ನವೇ ಉಭಯ ತಂಡಗಳ ಸಮರ ಸೋಷಿಯಲ್ ಮೀಡಿಯಾ ಮೂಲಕ ಶುರುವಾಗಿದೆ. ಹೀಗಾಗಿ ಮೊದಲ ಪಂದ್ಯದಿಂದಲೇ ಇಂಡೋ-ಆಸೀಸ್ ಆಟಗಾರರ ನಡುವಣ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ ವೇಳಾಪಟ್ಟಿ:

  1. ಫೆಬ್ರವರಿ 9 ರಿಂದ 13- ಮೊದಲ ಟೆಸ್ಟ್ ಪಂದ್ಯ (ವಿದರ್ಭ ಕ್ರಿಕೆಟ್ ಸ್ಟೇಡಿಯಂ)
  2. ಫೆಬ್ರವರಿ 17 ರಿಂದ 21- ಎರಡನೇ ಟೆಸ್ಟ್ ಪಂದ್ಯ (ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂ, ದೆಹಲಿ)
  3. ಮಾರ್ಚ್ 1 ರಿಂದ 5- ಮೂರನೇ ಟೆಸ್ಟ್ ಪಂದ್ಯ (ಧರ್ಮಶಾಲ ಕ್ರಿಕೆಟ್ ಸ್ಟೇಡಿಯಂ, ಹಿಮಾಚಲ್ ಪ್ರದೇಶ್)
  4. ಮಾರ್ಚ್ 9 ರಿಂದ 13- ನಾಲ್ಕನೇ ಟೆಸ್ಟ್ ಪಂದ್ಯ (ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್).

Published On - 5:06 pm, Mon, 6 February 23

ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ