AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಲಿನ ದುಃಖ ತಡೆಯಲಾಗದೆ ಕಣ್ಣೀರಿಡುತ್ತ ಡ್ರೆಸ್ಸಿಂಗ್ ರೂಂಗೆ ತೆರಳಿದ ರೋಹಿತ್; ವಿಡಿಯೋ ನೋಡಿ

Rohit Sharma, ICC World Cup 2023: ಸೋಲಿನ ಬಳಿಕ ನಾಯಕ ಕೊಹ್ಲಿ ಸೇರಿದಂತೆ ಹಲವು ಆಟಗಾರರು ಮೈದಾನದಲ್ಲೇ ಕಣ್ಣೀರಿಟ್ಟರು. ಒಂದು ಹಂತದವರೆಗೆ ಕಣ್ಣೀರನ್ನು ಅದುಮಿಟ್ಟುಕೊಂಡಿದ್ದ ರೋಹಿತ್​ಗೆ ಅಂತಿಮವಾಗಿ ದುಃಖವನ್ನು ತಡೆಯಲಾಗದೆ, ಮೈದಾನದಿಂದ ಡ್ರೇಸಿಂಗ್ ರೂಂನತ್ತ ಅವಸವಸರವಾಗಿ ಓಡಿದರು.

ಸೋಲಿನ ದುಃಖ ತಡೆಯಲಾಗದೆ ಕಣ್ಣೀರಿಡುತ್ತ ಡ್ರೆಸ್ಸಿಂಗ್ ರೂಂಗೆ ತೆರಳಿದ ರೋಹಿತ್; ವಿಡಿಯೋ ನೋಡಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:Nov 19, 2023 | 10:18 PM

Share

ಏಕದಿನ ವಿಶ್ವಕಪ್‌ನಲ್ಲಿ (ICC World Cup 2023) ಟೀಂ ಇಂಡಿಯಾದೊಂದಿಗೆ ಇಡೀ 140 ಕೋಟಿ ಭಾರತೀಯರ ಕನಸು ನುಚ್ಚು ನೂರಾಗಿದೆ. ವಿಶ್ವಕಪ್ ಪ್ರಶಸ್ತಿಯ ಕನಸು ಕನಸಾಗಿಯೇ ಉಳಿದಿದೆ. ಇಡೀ ಪಂದ್ಯದಲ್ಲಿ ಆರಂಭದಲ್ಲೇ ಹಿಡಿತ ಸಾಧಿಸಿದ್ದ ಆಸ್ಟ್ರೇಲಿಯಾ, ಟೀಂ ಇಂಡಿಯಾವನ್ನು (India Vs Australia) ಆರಂಭದಲ್ಲೇ ಪಂದ್ಯದಿಂದ ಹೊರಹಾಕಿತು. ಮೊದಲು ಭಾರತವನ್ನು 240 ರನ್‌ಗಳಿಗೆ ಸೀಮಿತಗೊಳಿಸಿದ ಕಾಂಗರೂ ಪಡೆ ಈ ಸವಾಲನ್ನು 43 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಈ ಮೂಲಕ ಆಸ್ಟ್ರೇಲಿಯಾ ಆರನೇ ಬಾರಿಗೆ ವಿಶ್ವಕಪ್ ಗೆದ್ದುಕೊಂಡರೆ, ಇತ್ತ ಟೀಂ ಇಂಡಿಯಾ ತವರಿನಲ್ಲಿ ವಿಶ್ವ ಚಾಂಪಿಯನ್ ಆಗುವ ಅವಕಾಶವನ್ನು ಕೈಚೆಲ್ಲಿತು. ಈ ವಿಶ್ವಕಪ್ ನಾಯಕ ರೋಹಿತ್ ಶರ್ಮಾ (ROhit Sharma) ಸೇರಿದಂತೆ ತಂಡದ ಕೆಲವು ಆಟಗಾರರಿಗೆ ಕೊನೆಯ ಏಕದಿನ ವಿಶ್ವಕಪ್ ಆಗಿದ್ದು, ಸೋಲಿನ ಬಳಿಕ ಇಡೀ ತಂಡವೇ ಮೈದಾನದಲ್ಲಿ ಕಣ್ಣೀರಿಟ್ಟಿತು. ಅದರಲ್ಲೂ ತಂಡವನ್ನು ಫೈನಲ್​ವರೆಗೂ ಅಜೇಯರಾಗಿ ಮುನ್ನಡೆಸಿದ್ದ ರೋಹಿತ್ ಕಣ್ಣೀರಿಡುತ್ತಾ ಮೈದಾನ ತೊರೆದಿದ್ದು, ಅಭಿಮಾನಿಗಳ ಕಣ್ಣೀರ ಕಟ್ಟೆ ಹೊಡೆಯುವಂತೆ ಮಾಡಿತು.

ಮೈದಾನದಲ್ಲೇ ಕಣ್ಣೀರಿಟ್ಟ ರೋಹಿತ್

ಸೋಲಿನ ಬಳಿಕ ನಾಯಕ ಕೊಹ್ಲಿ ಸೇರಿದಂತೆ ಹಲವು ಆಟಗಾರರು ಮೈದಾನದಲ್ಲೇ ಕಣ್ಣೀರಿಟ್ಟರು. ಒಂದು ಹಂತದವರೆಗೆ ಕಣ್ಣೀರನ್ನು ಅದುಮಿಟ್ಟುಕೊಂಡಿದ್ದ ರೋಹಿತ್​ಗೆ ಅಂತಿಮವಾಗಿ ದುಃಖವನ್ನು ತಡೆಯಲಾಗದೆ, ಮೈದಾನದಿಂದ ಡ್ರೇಸಿಂಗ್ ರೂಂನತ್ತ ಅವಸವಸರವಾಗಿ ಓಡಿದರು. ಅಷ್ಟರಲ್ಲಾಗಲೇ ರೋಹಿತ್ ಕಣ್ಣಿನಿಂದ ಕಣ್ಣೀರು ಸುರಿಯಲಾರಂಭಿಸಿದ್ದವು. ಕಳೆದೊಂದು ತಿಂಗಳಿನಿಂದ ಈ ಒಂದು ಪ್ರಶಸ್ತಿಗಾಗಿ ನಾಯಕ ರೋಹಿತ್ ತಂಡವನ್ನು ಮುನ್ನಡೆಸಿದ್ದ ಪರಿ ಅಸಮಾನ್ಯವಾಗಿತ್ತು. ಆದರೆ ಕೊನೆಯ ಹಂತದಲ್ಲಿ ಪ್ರಶಸ್ತಿ ಕೈತಪ್ಪಿದ್ದ ಹತಾಶೆ ನಾಯಕ ರೋಹಿತ್ ಅವರ ಮುಖದಲ್ಲಿ ಎದ್ದು ಕಾಣುತ್ತಿತ್ತು.

IND vs AUS Final: ಭಾರತದ ಗೆಲುವು ಕಸಿದುಕೊಂಡ ಹೆಡ್; ಆಸ್ಟ್ರೇಲಿಯಾ ಏಕದಿನ ಚಾಂಪಿಯನ್

ಇಡೀ ಟೂರ್ನಿಯಲ್ಲಿ ಮಿಂಚಿದ ರೋಹಿತ್

ಇನ್ನು ಇಡೀ ಟೂರ್ನಿಯಲ್ಲಿ ತಂಡವನ್ನು ಜಯದತ್ತ ಮುನ್ನಡೆಸಿದಲ್ಲದೆ ಆಟಗಾರನಾಗಿಯೂ ರೋಹಿತ್ ಸ್ಮರಣೀಯ ಪ್ರದರ್ಶನ ನೀಡಿದರು. ಇಡೀ ಟೂರ್ನಿಯಲ್ಲಿ ವಿರಾಟ್ ಕೊಹ್ಲಿ 765 ರನ್‌ ಕಲೆಹಾಕುವುದರೊಂದಿಗೆ ಅತಿ ಹೆಚ್ಚು ರನ್ ಕಲೆಹಾಕಿದ ಆಟಗಾರನೆನಿಸಿಕೊಂಡರೆ ರೋಹಿತ್ ಶರ್ಮಾ ಕೂಡ 597 ರನ್​ಗಳ ಕೋಟೆ ಕಟ್ಟಿದ್ದರು. ಆದರೆ ಇಡೀ ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಅಂತ್ಯ ಬಯಸಿದಂತೆ ಇರಲಿಲ್ಲ. ನಿರ್ಣಾಯಕ ಪಂದ್ಯದಲ್ಲಿ ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್ ಹಾಗೂ ಸೂರ್ಯಕುಮಾರ್ ಯಾದವ್ ಸಂಪೂರ್ಣ ವಿಫಲರಾದರು.

ಪಂದ್ಯ ಹೀಗಿತ್ತು

ಟೀಂ ಇಂಡಿಯಾ ನೀಡಿದ್ದ 241 ರನ್​ಗಳ ಗುರಿಯನ್ನು ಆಸೀಸ್ ಮೂರು ವಿಕೆಟ್ ಕಳೆದುಕೊಂಡು ಬೆನ್ನತ್ತಿತು. ಈ ಮೂಲಕ ಆರನೇ ಬಾರಿ ವಿಶ್ವ ಚಾಂಪಿಯನ್ ಆಯಿತು. ತಂಡದ ಪರ ಟ್ರಾವಿಸ್ ಹೆಡ್ ಬೃಹತ್ ಶತಕ (120 ಎಸೆತಗಳಲ್ಲಿ 137) ಸಿಡಿಸಿದರೆ, ಮಾರ್ನಸ್ ಲಬುಶೇನ್ (58) ಅರ್ಧಶತಕದೊಂದಿಗೆ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಇಬ್ಬರೂ ಅಭೇದ್ಯ ಮೂರನೇ ವಿಕೆಟ್‌ಗೆ 194 ರನ್ ಸೇರಿಸಿ ಆಸ್ಟ್ರೇಲಿಯಾವನ್ನು ಗೆಲುವಿನ ದಡಕ್ಕೆ ತಂದರು. ಭಾರತದ ಪರ ಬುಮ್ರಾ 2 ವಿಕೆಟ್ ಪಡೆದರೆ, ಶಮಿ ಹಾಗೂ ಸಿರಾಜ್ ತಲಾ ಒಂದು ವಿಕೆಟ್ ಪಡೆದರು.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:13 pm, Sun, 19 November 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ