AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

IND vs AUS Final, ICC World Cup 2023: 2011ರ ವಿಶ್ವಕಪ್​ನಲ್ಲಿ ಭಾರತ ತಂಡದಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡ ರೋಹಿತ್ ಶರ್ಮಾ ಅವರಿಗೆ 2023 ವಿಶ್ವಕಪ್ ಫೈನಲ್ ಪಂದ್ಯ ಭಾವನಾತ್ಮಕ ಕ್ಷಣವಾಗಿದೆ. ಈ ಕುರಿತಾಗಿ ಪಂದ್ಯ ಆರಂಭಕ್ಕೂ ಮುನ್ನ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ತಂಡವನ್ನು ಮುನ್ನಡೆಸುತ್ತಿರುವ ನನ್ನ ಕನಸು ನನಸಾಗಿದೆ ಎಂದು ಹೇಳಿದ್ದಾರೆ.

IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ
ಭಾರತ ತಂಡದ ನಾಯಕ ರೋಹಿತ್ ಶರ್ಮಾ
ಗಂಗಾಧರ​ ಬ. ಸಾಬೋಜಿ
|

Updated on: Nov 19, 2023 | 3:46 PM

Share

2011ರ ವಿಶ್ವಕಪ್​ನಲ್ಲಿ ಭಾರತ ತಂಡದಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡ ನಂತರ ರೋಹಿತ್ ಶರ್ಮಾ (Rohit Sharma) ಅವರು ಇದೀಗ ಅದೇ ಭಾರತ ತಂಡದ ನಾಯಕರಾಗಿ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿದ್ದು ಇದು ಭಾವನಾತ್ಮಕ ಕ್ಷಣವಾಗಿದೆ. ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಟಾಸ್ ಸಮಯದಲ್ಲಿ ಭಾರತದ ಮಾಜಿ ಕೋಚ್ ರವಿ ಶಾಸ್ತ್ರಿ ಅವರೊಂದಿಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ನನ್ನ ಕನಸು ನನಸಾಗುವ ಕ್ಷಣ ಎಂದು ಹೇಳಿದ್ದಾರೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಒಂದು ವೇಳೆ ಭಾರತ ಟಾಸ್​ ಗೆದಿದ್ದರೆ ಏನು ಮಾಡುತ್ತಿದ್ದಿರಿ ಎಂಬ ಪ್ರಶ್ನೆಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದಾಗಿ ರೋಹಿತ್ ಹೇಳಿದ್ದಾರೆ.

ಇದನ್ನೂ ಓದಿ: IND vs AUS Final: ರೋಹಿತ್, ಗಿಲ್ ಔಟ್; 10 ಓವರ್​ಗಳಲ್ಲಿ 80 ರನ್ ಚಚ್ಚಿದ ಭಾರತ

‘ನಾನು ಮೊದಲು ಬ್ಯಾಟಿಂಗ್ ಮಾಡುತ್ತಿದ್ದೆ. ಉತ್ತಮ ಪಿಚ್, ದೊಡ್ಡ ಪಂದ್ಯ ಇದು ಅದ್ಭುತವಾಗಿರುತ್ತದೆ. ಪ್ರತಿ ಬಾರಿ ನಾವು ಇಲ್ಲಿ ಆಡಿದಾಗ, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಕ್ರಿಕೆಟ್ ಒಂದು ಅತಿದೊಡ್ಡ ಸಂದರ್ಭ. ನಾವು ಚೆನ್ನಾಗಿ ಮತ್ತು ಶಾಂತವಾಗಿ ಇರಬೇಕು’ ಎಂದು ರೋಹಿತ್ ಹೇಳಿದ್ದಾರೆ.

2011 ರಿಂದ 2023 ರವರೆಗೆ ಅವರ ಕ್ರಿಡಾ ಪ್ರಯಾಣದ ಬಗ್ಗೆ ಶಾಸ್ತ್ರಿ ಕೇಳಿದಾಗ ರೋಹಿತ್, ‘ತಮ್ಮ ಕನಸು ನನಸಾಗಿದೆ. ಫೈನಲ್​ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ. ನಮ್ಮ ಮುಂದೆ ಏನಿದೆ ಎಂದು ನನಗೆ ಗೊತ್ತು. ನಾವು ಉತ್ತಮವಾಗಿ ಆಡಬೇಕು ಮತ್ತು ಫಲಿತಾಂಶವನ್ನು ಪಡೆಯಬೇಕು. ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕಳೆದ 10 ಪಂದ್ಯಗಳಲ್ಲಿ ನಾವು ಸ್ಥಿರವಾಗಿ ಆಡಿದ್ದೇವೆ. ಅದೇ ತಂಡ ಇಂದಿನ ಪಂದ್ಯವನ್ನು ಆಡುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: IND vs AUS, World Cup Final: ಭಾರತ ತಂಡಕ್ಕೆ ಆಲ್ ದಿ ಬೆಸ್ಟ್​ ಎಂದ ಪ್ರಧಾನಿ ನರೇಂದ್ರ ಮೋದಿ

2003ರ ವಿಶ್ವಕಪ್ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತ ತವಕದಲ್ಲಿದೆ. ಟೀಂ ಇಂಡಿಯಾ ಗೆಲ್ಲಲಿ ಎಂದು ದೇಶಾದ್ಯಂತ ಶುಭಾಷಯಗಳ ಸುರಿಮಳೆಯ ಹರಿದು ಬರುತ್ತಿದೆ. ಆಸ್ಟ್ರೇಲಿಯಾ ಕೂಡ 6ನೇ ಬಾರಿ ಟ್ರೋಫಿ ಗೆಲ್ಲುವ ವಿಶ್ವಾಸ ಹೊಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ