IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ

IND vs AUS Final, ICC World Cup 2023: 2011ರ ವಿಶ್ವಕಪ್​ನಲ್ಲಿ ಭಾರತ ತಂಡದಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡ ರೋಹಿತ್ ಶರ್ಮಾ ಅವರಿಗೆ 2023 ವಿಶ್ವಕಪ್ ಫೈನಲ್ ಪಂದ್ಯ ಭಾವನಾತ್ಮಕ ಕ್ಷಣವಾಗಿದೆ. ಈ ಕುರಿತಾಗಿ ಪಂದ್ಯ ಆರಂಭಕ್ಕೂ ಮುನ್ನ ಮಾತನಾಡಿರುವ ನಾಯಕ ರೋಹಿತ್ ಶರ್ಮಾ, ತಂಡವನ್ನು ಮುನ್ನಡೆಸುತ್ತಿರುವ ನನ್ನ ಕನಸು ನನಸಾಗಿದೆ ಎಂದು ಹೇಳಿದ್ದಾರೆ.

IND vs AUS: ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ: ರೋಹಿತ್ ಶರ್ಮಾ
ಭಾರತ ತಂಡದ ನಾಯಕ ರೋಹಿತ್ ಶರ್ಮಾ
Follow us
|

Updated on: Nov 19, 2023 | 3:46 PM

2011ರ ವಿಶ್ವಕಪ್​ನಲ್ಲಿ ಭಾರತ ತಂಡದಲ್ಲಿ ಆಡುವ ಅವಕಾಶವನ್ನು ಕಳೆದುಕೊಂಡ ನಂತರ ರೋಹಿತ್ ಶರ್ಮಾ (Rohit Sharma) ಅವರು ಇದೀಗ ಅದೇ ಭಾರತ ತಂಡದ ನಾಯಕರಾಗಿ ನರೇಂದ್ರ ಮೋದಿ ಸ್ಟೇಡಿಯಂಗೆ ಆಗಮಿಸಿದ್ದು ಇದು ಭಾವನಾತ್ಮಕ ಕ್ಷಣವಾಗಿದೆ. ಫೈನಲ್ ಪಂದ್ಯ ಆರಂಭಕ್ಕೂ ಮುನ್ನ ಟಾಸ್ ಸಮಯದಲ್ಲಿ ಭಾರತದ ಮಾಜಿ ಕೋಚ್ ರವಿ ಶಾಸ್ತ್ರಿ ಅವರೊಂದಿಗೆ ಮಾತನಾಡಿದ ನಾಯಕ ರೋಹಿತ್ ಶರ್ಮಾ, ನನ್ನ ಕನಸು ನನಸಾಗುವ ಕ್ಷಣ ಎಂದು ಹೇಳಿದ್ದಾರೆ.

ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಪ್ಯಾಟ್‌ ಕಮಿನ್ಸ್​ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಒಂದು ವೇಳೆ ಭಾರತ ಟಾಸ್​ ಗೆದಿದ್ದರೆ ಏನು ಮಾಡುತ್ತಿದ್ದಿರಿ ಎಂಬ ಪ್ರಶ್ನೆಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳುವುದಾಗಿ ರೋಹಿತ್ ಹೇಳಿದ್ದಾರೆ.

ಇದನ್ನೂ ಓದಿ: IND vs AUS Final: ರೋಹಿತ್, ಗಿಲ್ ಔಟ್; 10 ಓವರ್​ಗಳಲ್ಲಿ 80 ರನ್ ಚಚ್ಚಿದ ಭಾರತ

‘ನಾನು ಮೊದಲು ಬ್ಯಾಟಿಂಗ್ ಮಾಡುತ್ತಿದ್ದೆ. ಉತ್ತಮ ಪಿಚ್, ದೊಡ್ಡ ಪಂದ್ಯ ಇದು ಅದ್ಭುತವಾಗಿರುತ್ತದೆ. ಪ್ರತಿ ಬಾರಿ ನಾವು ಇಲ್ಲಿ ಆಡಿದಾಗ, ಪ್ರೇಕ್ಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಕ್ರಿಕೆಟ್ ಒಂದು ಅತಿದೊಡ್ಡ ಸಂದರ್ಭ. ನಾವು ಚೆನ್ನಾಗಿ ಮತ್ತು ಶಾಂತವಾಗಿ ಇರಬೇಕು’ ಎಂದು ರೋಹಿತ್ ಹೇಳಿದ್ದಾರೆ.

2011 ರಿಂದ 2023 ರವರೆಗೆ ಅವರ ಕ್ರಿಡಾ ಪ್ರಯಾಣದ ಬಗ್ಗೆ ಶಾಸ್ತ್ರಿ ಕೇಳಿದಾಗ ರೋಹಿತ್, ‘ತಮ್ಮ ಕನಸು ನನಸಾಗಿದೆ. ಫೈನಲ್​ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಬೇಕೆಂಬ ನನ್ನ ಕನಸು ನನಸಾಗಿದೆ. ನಮ್ಮ ಮುಂದೆ ಏನಿದೆ ಎಂದು ನನಗೆ ಗೊತ್ತು. ನಾವು ಉತ್ತಮವಾಗಿ ಆಡಬೇಕು ಮತ್ತು ಫಲಿತಾಂಶವನ್ನು ಪಡೆಯಬೇಕು. ಸರಿಯಾದ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು. ಕಳೆದ 10 ಪಂದ್ಯಗಳಲ್ಲಿ ನಾವು ಸ್ಥಿರವಾಗಿ ಆಡಿದ್ದೇವೆ. ಅದೇ ತಂಡ ಇಂದಿನ ಪಂದ್ಯವನ್ನು ಆಡುತ್ತಿದೆ’ ಎಂದಿದ್ದಾರೆ.

ಇದನ್ನೂ ಓದಿ: IND vs AUS, World Cup Final: ಭಾರತ ತಂಡಕ್ಕೆ ಆಲ್ ದಿ ಬೆಸ್ಟ್​ ಎಂದ ಪ್ರಧಾನಿ ನರೇಂದ್ರ ಮೋದಿ

2003ರ ವಿಶ್ವಕಪ್ ಫೈನಲ್ ಸೋಲಿನ ಸೇಡು ತೀರಿಸಿಕೊಳ್ಳಲು ಭಾರತ ತವಕದಲ್ಲಿದೆ. ಟೀಂ ಇಂಡಿಯಾ ಗೆಲ್ಲಲಿ ಎಂದು ದೇಶಾದ್ಯಂತ ಶುಭಾಷಯಗಳ ಸುರಿಮಳೆಯ ಹರಿದು ಬರುತ್ತಿದೆ. ಆಸ್ಟ್ರೇಲಿಯಾ ಕೂಡ 6ನೇ ಬಾರಿ ಟ್ರೋಫಿ ಗೆಲ್ಲುವ ವಿಶ್ವಾಸ ಹೊಂದಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ಜೆಸಿಬಿಯಲ್ಲಿ ಕಲ್ಯಾಣ ಮಂಟಪಕ್ಕೆ ಬಂದು, ಅಂಕದ ಕೋಳಿ ಪೈಟ್ ಆಡಿದ ನವಜೋಡಿಗಳು
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ರಿಜಿಸ್ಟ್ರೇಷನ್ ಸರ್ಟಿಫಿಕೇಟ್ ನೀಡದಿದ್ದಕ್ಕೆ KNC ಬಳಿ ವಿದ್ಯಾರ್ಥಿಗಳ ಗಲಾಟೆ
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ವಂಟಮೂರಿ ಘಟನೆ ಅವಮಾನದಿಂದ ತಲೆ ತಗ್ಗಿಸುವಂತೆ ಮಾಡಿದೆ:ಲಕ್ಷ್ಮಿ ಹೆಬ್ಬಾಳ್ಕರ್
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರದ ಬಗ್ಗೆ ಚರ್ಚಿಸದೆ ಪ್ರತಿಭಟಿಸುವ ಶಾಸಕರಿಗೆ ನಾಚಿಕೆಯಾಗಬೇಕು: ಸಿಎಂ
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಬರ ಮತ್ತು ಉತ್ತರ ಕರ್ನಾಟಕ ಚರ್ಚೆಗೆ ಅಧಿವೇಶನ ವಾರ ವಿಸ್ತರಿಸಲಿ: ಯತ್ನಾಳ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಗೆ ಎಲ್ಲ ನಮಸ್ಕಾರ್ ಸಾರ್ ಅನ್ನಬೇಕು ಅಂದರೆ ತಪ್ಪೇನು?ಜಮೀರ್ ಅಹ್ಮದ್
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಸ್ಪೀಕರ್ ಖಾದರ್ ಹೇಳುವ ಮಾತು ಸದನದಲ್ಲಿರುವವರೆಲ್ಲರ ಮನಸ್ಸಿಗೆ ನಾಟುತ್ತದೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಹುಟ್ಟೂರು ಹರದನಹಳ್ಳಿಯಲ್ಲಿ ಮನೆ ದೇವರಿಗೆ ಹೆಚ್​ಡಿಡಿ ದಂಪತಿ ಪೂಜೆ
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬಿಗ್ ಬಾಸ್​ನಲ್ಲಿ ಆಪ್ತರನ್ನೇ ನಾಮಿನೇಟ್ ಮಾಡಿದ ಕಂಟೆಸ್ಟಂಟ್​ಗಳು
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ
ಬೆಂಗಳೂರಿನ ಜಯನಗರದಲ್ಲಿ ಹಾಡಹಗಲೇ ಸ್ಕೂಟರ್‌ ಕಳ್ಳತನ