AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಭಾರತಕ್ಕೆ ಬಿಗ್ ಶಾಕ್; ಸೆಮಿಫೈನಲ್ ಪಂದ್ಯಕ್ಕೆ ಪೂಜಾ ಅಲಭ್ಯ! ನಾಯಕಿ ಆಡುವುದು ಅನುಮಾನ

IND vs AUS: ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ಆಲ್​ರೌಂಡರ್ ಪೂಜಾ ವಸ್ತ್ರಾಕರ್ ಸೆಮಿಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ.

IND vs AUS: ಭಾರತಕ್ಕೆ ಬಿಗ್ ಶಾಕ್; ಸೆಮಿಫೈನಲ್ ಪಂದ್ಯಕ್ಕೆ ಪೂಜಾ ಅಲಭ್ಯ! ನಾಯಕಿ ಆಡುವುದು ಅನುಮಾನ
ಹರ್ಮನ್​ಪ್ರೀತ್ ಕೌರ್, ಪೂಜಾ ವಸ್ತ್ರಾಕರ್
ಪೃಥ್ವಿಶಂಕರ
|

Updated on:Feb 23, 2023 | 2:55 PM

Share

ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್​ನಲ್ಲಿ (Women’s T20 World Cup 2023) ಇಂದು ಸೆಮಿಫೈನಲ್ ಪಂದ್ಯ ನಡೆಯುತ್ತಿದ್ದು, ಮೊದಲ ಸೆಮಿಫೈನಲ್ ಪಂದ್ಯ ಭಾರತ ಹಾಗೂ ಅಸ್ಟ್ರೇಲಿಯಾ (India Vs Australia) ತಂಡಗಳ ನಡುವೆ ನಡೆಯಲಿದೆ. ಆದರೆ ಈ ನಡುವೆ ಟೀಂ ಇಂಡಿಯಾ ಪಾಳಯದಿಂದ ಆಘಾತಕ್ಕಾರಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಸ್ಟಾರ್ ಆಲ್​ರೌಂಡರ್ ಪೂಜಾ ವಸ್ತ್ರಾಕರ್ (Pooja Vastrakar) ಸೆಮಿಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ. ಈ ಬಗ್ಗೆ ಐಸಿಸಿ (ICC) ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಮಾಹಿತಿ ನೀಡಿದ್ದು, ಅನಾರೋಗ್ಯದ ಕಾರಣದಿಂದಾಗಿ ಟೀಂ ಇಂಡಿಯಾದ ವೇಗದ ಬೌಲರ್ ಪೂಜಾ ವಸ್ತ್ರಾಕರ್ ಸೆಮಿಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ ಎಂದು ಬರೆದುಕೊಂಡಿದೆ.

ಪೂಜಾ ವಸ್ತ್ರಾಕರ್ ಜೊತೆಗೆ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಕೂಡ ಈ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎಂದು ಇಂದು ಮುಂಜಾನೆಯಿಂದಲೂ ವರದಿಗಳು ಕೇಳಿ ಬರುತ್ತಿದ್ದವು. ಆದರೆ ಟೀಂ ಇಂಡಿಯಾ ಅಭಿಮಾನಿಗಳಿಗೆ ಕೊಂಚ ಸಮಾದಾನಕರ ಸಂಗತಿಯೆಂಬಂತೆ ನಾಯಕಿ ಹರ್ಮನ್‌ಪ್ರೀತ್ ಇಂದಿನ ಪಂದ್ಯದಲ್ಲಿ ಆಡುವ ನಿರೀಕ್ಷೆಯಿದೆ. ಆದರೆ ಪೂಜಾ ವಸ್ತ್ರಕರ್ ತಂಡದಿಂದ ಹೊರಗುಳಿದಿರುವುದು ಖಚಿತವಾಗಿದೆ. ಇದೀಗ ಪೂಜಾ ವಸ್ತ್ರಾಕರ್ ಬದಲಿಗೆ ಸ್ನೇಹ ರಾಣಾ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಪೂಜಾ ಪ್ರದರ್ಶನ

2023 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಪೂಜಾ ವಸ್ತ್ರಾಕರ್ ಅವರ ಈವರೆಗಿನ ಪ್ರದರ್ಶನವು ವಿಶೇಷವೇನೂ ಆಗಿಲ್ಲ. ಗ್ರೂಪ್ ಹಂತದ 4 ಪಂದ್ಯಗಳನ್ನು ಆಡಿರುವ ಪೂಜಾ, ಕೇವಲ 2 ವಿಕೆಟ್ ಮಾತ್ರ ಕಬಳಿಸಿದ್ದಾರೆ. ಆದರೆ, ತಂಡದಲ್ಲಿ ಅವರಿದ್ದರೆ ಕೆಳ ಕ್ರಮಾಂಕದ ಬ್ಯಾಟಿಂಗ್‌ಗೆ ಸ್ವಲ್ಪ ಬಲ ಬರುತ್ತಿತ್ತು. ಒಟ್ಟಾರೆಯಾಗಿ, ಅವರು ಆಡದಿರುವುದು ತಂಡದ ಸಂಯೋಜನೆಯ ಮೇಲೆ ಪರಿಣಾಮ ಬೀರುವುದಂತೂ ಖಚಿತವಾಗಿದೆ.

IND vs AUS: ಪ್ರಮುಖರ ಗೈರು; ಮೂರನೇ ಟೆಸ್ಟ್​ಗೆ ಆಸೀಸ್ ತಂಡದಲ್ಲಿ ಮಹತ್ವದ ಬದಲಾವಣೆ

ಕೌರ್ ಆಡದಿದ್ದರೆ, ಸ್ಮೃತಿಗೆ ನಾಯಕತ್ವ

ಪೂಜಾ ವಸ್ತ್ರಾಕರ್ ಜೊತೆಗೆ ಎಡಗೈ ಸ್ಪಿನ್ನರ್ ರಾಧಾ ಯಾದವ್ ಕೂಡ ಫಿಟ್‌ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಇಬ್ಬರಲ್ಲದೆ, ನಾಯಕಿ ಹರ್ಮನ್​ಪ್ರೀತ್ ಕೂಡ ತಂಡದಿಂದ ಹೊರಗುಳಿದರೆ, ಭಾರತಕ್ಕೆ ಹಿನ್ನಡೆಯುಂಟಾಗುವುದಂತೂ ಖಚಿತ. ಒಂದು ವೇಳೆ ಕೌರ್ ಚೇತರಿಸಿಕೊಳ್ಳದಿದ್ದರೆ, ಅವರ ಸ್ಥಾನದಲ್ಲಿ ಸ್ಮೃತಿ ಮಂಧಾನ ತಂಡದ ನಾಯಕತ್ವ ವಹಿಸಲಿದ್ದಾರೆ. ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಕೌರ್ ಅವರ ಜಾಗಕ್ಕೆ ಹರ್ಲೀನ್ ಡಿಯೋಲ್ ಆಯ್ಕೆಯಾಗಲಿದ್ದಾರೆ.

ನಾಯಕಿ ಹರ್ಮನ್​ಪ್ರೀತ್ ಪಂದ್ಯಾವಳಿಯಲ್ಲಿ ಇಲ್ಲಿಯವರೆಗೆ ಹೇಳಿಕೊಳ್ಳುವಂತಹ ಪ್ರದರ್ಶನವನ್ನೇನೂ ನೀಡಿಲ್ಲ. ಕೌರ್ ಆಡಿರುವ ನಾಲ್ಕು ಪಂದ್ಯಗಳಲ್ಲಿ ಕೇವಲ 66 ರನ್ ಗಳಿಸಿದ್ದಾರೆ. ಆದರೆ ಬಿಗ್ ಮ್ಯಾಚ್​ಗಳಲ್ಲಿ ಪುಟಿದೇಳುವ ಸಾಮಥ್ಯ್ರವಿರುವ ಕೌರ್ ಲಭ್ಯತೆ ಭಾರತಕ್ಕೆ ಅವಶ್ಯಕವಾಗಿದೆ. ಒಂದು ವೇಳೆ ಈ ಪಂದ್ಯಕ್ಕೆ ವಸ್ತ್ರಕರ್ ಮತ್ತು ರಾಧಾ ಲಭ್ಯವಿಲ್ಲದಿದ್ದರೆ, ತಂಡದ ಬೌಲಿಂಗ್ ಸಂಯೋಜನೆಯನ್ನು ಬದಲಾಯಿಸಲೇಬೇಕಾಗುತ್ತದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:28 pm, Thu, 23 February 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್