AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಎರಡನೇ ಏಕದಿನ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಅಲಭ್ಯ..! ಖಚಿತ ಪಡಿಸಿದ ಬಿಸಿಸಿಐ

Jasprit Bumrah: ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ನೀಡಿರುವ ಮಾಹಿತಿ ಪ್ರಕಾರ, ಇತ್ತಿಚೆಗೆ ತಂದೆಯಾಗಿರುವ ಬುಮ್ರಾ ತನ್ನ ಕುಟುಂಬವನ್ನು ಬೇಟಿ ಮಾಡುವ ಸಲುವಾಗಿ ತಂಡದಿಂದ ಹೊರನಡೆದಿದ್ದಾರೆ. ಹೀಗಾಗಿ ಅವರು ತಂಡದೊಂದಿಗೆ ಹೋಟೆಲ್​ನಿಂದ ಕ್ರೀಡಾಂಗಣಕ್ಕೆ ಪ್ರಯಾಣ ಬೆಳೆಸಿಲ್ಲ ಎಂದಿದೆ.

Breaking: ಎರಡನೇ ಏಕದಿನ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಅಲಭ್ಯ..! ಖಚಿತ ಪಡಿಸಿದ ಬಿಸಿಸಿಐ
ಜಸ್ಪ್ರೀತ್ ಬುಮ್ರಾ
ಪೃಥ್ವಿಶಂಕರ
|

Updated on:Sep 24, 2023 | 1:22 PM

Share

ಮೊಹಾಲಿಯಲ್ಲಿ ಬಲಿಷ್ಠ ಆಸೀಸ್ ಪಡೆಯನ್ನು ಸುಲಭವಾಗಿ ಮಣಿಸಿದ ಟಿಂ ಇಂಡಿಯಾ (India vs Australia) ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾವನ್ನು ಎದುರಿಸಲು ಸಜ್ಜಾಗಿದೆ. ಇಂದೋರ್ ಮೈದಾನದಲ್ಲಿ ಈ ಬಾರಿಯ ಪಂದ್ಯ ನಡೆಯಲಿದ್ದು, ಅದಕ್ಕೂ ಮುನ್ನ ಟೀಂ ಇಂಡಿಯಾ (Team India) ಪಾಳಯದಿಂದ ಬಿಗ್ ನ್ಯೂಸ್ ಹೊರಬಿದ್ದಿದೆ. ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಎರಡನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಬಿಸಿಸಿಐ (BCCI) ತನ್ನ ಟ್ವಿಟರ್ ಖಾತೆಯಲ್ಲಿ ನೀಡಿರುವ ಮಾಹಿತಿ ಪ್ರಕಾರ, ಇತ್ತಿಚೆಗೆ ತಂದೆಯಾಗಿರುವ ಬುಮ್ರಾ ತನ್ನ ಕುಟುಂಬವನ್ನು ಬೇಟಿ ಮಾಡುವ ಸಲುವಾಗಿ ತಂಡದಿಂದ ಹೊರನಡೆದಿದ್ದಾರೆ. ಹೀಗಾಗಿ ಅವರು ತಂಡದೊಂದಿಗೆ ಹೋಟೆಲ್​ನಿಂದ ಕ್ರೀಡಾಂಗಣಕ್ಕೆ ಪ್ರಯಾಣ ಬೆಳೆಸಿಲ್ಲ ಎಂದಿದೆ.

ಇನ್ನು ಎರಡನೇ ಏಕದಿನ ಪಂದ್ಯದಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಬದಲಿ ಆಟಗಾರನನ್ನು ಬಿಸಿಸಿಐ ಆಯ್ಕೆ ಮಾಡಿದ್ದು, ಯುವ ವೇಗಿ ಮುಖೇಶ್ ಕುಮಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದೀಗ ಎರಡನೇ ಏಕದಿನ ಪಂದ್ಯದಿಂದ ಹೊರಗುಳಿದಿರುವ ಬುಮ್ರಾ, ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಅಂದರೆ, ಸೆಪ್ಟೆಂಬರ್ 27 ರಂದು ನಡೆಯಲ್ಲಿರುವ ಸರಣಿಯ ಅಂತಿಮ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹಿರಿಯರಿಗೆ ವಿಶ್ರಾಂತಿ

ಏಕದಿನ ವಿಶ್ವಕಪ್‌ಗೂ ಮುನ್ನ ಈ ಸರಣಿ ನಡೆಯುತ್ತಿದ್ದು, ಎಲ್ಲಾ ಹಿರಿಯ ಹಾಗೂ ಪ್ರಮುಖ ಆಟಗಾರರಿಗೆ ಸರದಿ ಆಧಾರದ ಮೇಲೆ ವಿಶ್ರಾಂತಿ ನೀಡಲಾಗುತ್ತಿದೆ. ಮೊದಲೆರಡು ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲ್ದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯ ಆಡಿದ ಬಳಿಕ ಎರಡನೇ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದು, ಮೂರನೇ ಪಂದ್ಯದ ಮೂಲಕ ತಂಡಕ್ಕೆ ವಾಪಸಾಗಲಿದ್ದಾರೆ.

ಅಪ್ಪನಾದ ಖುಷಿಯಲ್ಲಿರುವ ಬುಮ್ರಾಗೆ ವಿಶೇಷ ಉಡುಗೊರೆ ನೀಡಿದ ಪಾಕ್ ವೇಗಿ ಶಾಹೀನ್ ಅಫ್ರಿದಿ! ವಿಡಿಯೋ ನೋಡಿ

ಆಸೀಸ್ ತಂಡದಲ್ಲೂ ಬದಲಾವಣೆ

ಭಾರತ ಮಾತ್ರವಲ್ಲದೆ ಆಸ್ಟ್ರೇಲಿಯಾ ತಂಡವೂ ಬದಲಾವಣೆಗಳನ್ನು ಮಾಡಿದ್ದು, ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ಪ್ಯಾಟ್ ಕಮಿನ್ಸ್‌ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಯ ಬಗ್ಗೆ ಮಾತನಾಡುವುದಾದರೆ, ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆದ್ದರೆ, ಭಾರತ ಸರಣಿ ವಶಪಡಿಸಿಕೊಳ್ಳಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Sun, 24 September 23

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್