AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking: ಎರಡನೇ ಏಕದಿನ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಅಲಭ್ಯ..! ಖಚಿತ ಪಡಿಸಿದ ಬಿಸಿಸಿಐ

Jasprit Bumrah: ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ನೀಡಿರುವ ಮಾಹಿತಿ ಪ್ರಕಾರ, ಇತ್ತಿಚೆಗೆ ತಂದೆಯಾಗಿರುವ ಬುಮ್ರಾ ತನ್ನ ಕುಟುಂಬವನ್ನು ಬೇಟಿ ಮಾಡುವ ಸಲುವಾಗಿ ತಂಡದಿಂದ ಹೊರನಡೆದಿದ್ದಾರೆ. ಹೀಗಾಗಿ ಅವರು ತಂಡದೊಂದಿಗೆ ಹೋಟೆಲ್​ನಿಂದ ಕ್ರೀಡಾಂಗಣಕ್ಕೆ ಪ್ರಯಾಣ ಬೆಳೆಸಿಲ್ಲ ಎಂದಿದೆ.

Breaking: ಎರಡನೇ ಏಕದಿನ ಪಂದ್ಯಕ್ಕೆ ಜಸ್ಪ್ರೀತ್ ಬುಮ್ರಾ ಅಲಭ್ಯ..! ಖಚಿತ ಪಡಿಸಿದ ಬಿಸಿಸಿಐ
ಜಸ್ಪ್ರೀತ್ ಬುಮ್ರಾ
ಪೃಥ್ವಿಶಂಕರ
|

Updated on:Sep 24, 2023 | 1:22 PM

Share

ಮೊಹಾಲಿಯಲ್ಲಿ ಬಲಿಷ್ಠ ಆಸೀಸ್ ಪಡೆಯನ್ನು ಸುಲಭವಾಗಿ ಮಣಿಸಿದ ಟಿಂ ಇಂಡಿಯಾ (India vs Australia) ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾವನ್ನು ಎದುರಿಸಲು ಸಜ್ಜಾಗಿದೆ. ಇಂದೋರ್ ಮೈದಾನದಲ್ಲಿ ಈ ಬಾರಿಯ ಪಂದ್ಯ ನಡೆಯಲಿದ್ದು, ಅದಕ್ಕೂ ಮುನ್ನ ಟೀಂ ಇಂಡಿಯಾ (Team India) ಪಾಳಯದಿಂದ ಬಿಗ್ ನ್ಯೂಸ್ ಹೊರಬಿದ್ದಿದೆ. ತಂಡದ ಸ್ಟಾರ್ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ (Jasprit Bumrah) ಎರಡನೇ ಏಕದಿನ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಬಿಸಿಸಿಐ (BCCI) ತನ್ನ ಟ್ವಿಟರ್ ಖಾತೆಯಲ್ಲಿ ನೀಡಿರುವ ಮಾಹಿತಿ ಪ್ರಕಾರ, ಇತ್ತಿಚೆಗೆ ತಂದೆಯಾಗಿರುವ ಬುಮ್ರಾ ತನ್ನ ಕುಟುಂಬವನ್ನು ಬೇಟಿ ಮಾಡುವ ಸಲುವಾಗಿ ತಂಡದಿಂದ ಹೊರನಡೆದಿದ್ದಾರೆ. ಹೀಗಾಗಿ ಅವರು ತಂಡದೊಂದಿಗೆ ಹೋಟೆಲ್​ನಿಂದ ಕ್ರೀಡಾಂಗಣಕ್ಕೆ ಪ್ರಯಾಣ ಬೆಳೆಸಿಲ್ಲ ಎಂದಿದೆ.

ಇನ್ನು ಎರಡನೇ ಏಕದಿನ ಪಂದ್ಯದಿಂದ ಹೊರಗುಳಿದಿರುವ ಜಸ್ಪ್ರೀತ್ ಬುಮ್ರಾ ಬದಲಿ ಆಟಗಾರನನ್ನು ಬಿಸಿಸಿಐ ಆಯ್ಕೆ ಮಾಡಿದ್ದು, ಯುವ ವೇಗಿ ಮುಖೇಶ್ ಕುಮಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಇದೀಗ ಎರಡನೇ ಏಕದಿನ ಪಂದ್ಯದಿಂದ ಹೊರಗುಳಿದಿರುವ ಬುಮ್ರಾ, ಮೂರನೇ ಏಕದಿನ ಪಂದ್ಯಕ್ಕೂ ಮುನ್ನ ಅಂದರೆ, ಸೆಪ್ಟೆಂಬರ್ 27 ರಂದು ನಡೆಯಲ್ಲಿರುವ ಸರಣಿಯ ಅಂತಿಮ ಪಂದ್ಯಕ್ಕೆ ಲಭ್ಯರಾಗಲಿದ್ದಾರೆ ಎಂದು ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಹಿರಿಯರಿಗೆ ವಿಶ್ರಾಂತಿ

ಏಕದಿನ ವಿಶ್ವಕಪ್‌ಗೂ ಮುನ್ನ ಈ ಸರಣಿ ನಡೆಯುತ್ತಿದ್ದು, ಎಲ್ಲಾ ಹಿರಿಯ ಹಾಗೂ ಪ್ರಮುಖ ಆಟಗಾರರಿಗೆ ಸರದಿ ಆಧಾರದ ಮೇಲೆ ವಿಶ್ರಾಂತಿ ನೀಡಲಾಗುತ್ತಿದೆ. ಮೊದಲೆರಡು ಏಕದಿನ ಪಂದ್ಯಗಳಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕುಲ್ದೀಪ್ ಯಾದವ್ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಇದೀಗ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯ ಆಡಿದ ಬಳಿಕ ಎರಡನೇ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದು, ಮೂರನೇ ಪಂದ್ಯದ ಮೂಲಕ ತಂಡಕ್ಕೆ ವಾಪಸಾಗಲಿದ್ದಾರೆ.

ಅಪ್ಪನಾದ ಖುಷಿಯಲ್ಲಿರುವ ಬುಮ್ರಾಗೆ ವಿಶೇಷ ಉಡುಗೊರೆ ನೀಡಿದ ಪಾಕ್ ವೇಗಿ ಶಾಹೀನ್ ಅಫ್ರಿದಿ! ವಿಡಿಯೋ ನೋಡಿ

ಆಸೀಸ್ ತಂಡದಲ್ಲೂ ಬದಲಾವಣೆ

ಭಾರತ ಮಾತ್ರವಲ್ಲದೆ ಆಸ್ಟ್ರೇಲಿಯಾ ತಂಡವೂ ಬದಲಾವಣೆಗಳನ್ನು ಮಾಡಿದ್ದು, ಎರಡನೇ ಏಕದಿನ ಪಂದ್ಯದಲ್ಲಿ ನಾಯಕ ಪ್ಯಾಟ್ ಕಮಿನ್ಸ್‌ಗೆ ವಿಶ್ರಾಂತಿ ನೀಡಲಾಗಿದೆ. ಹೀಗಾಗಿ ಸ್ಟೀವ್ ಸ್ಮಿತ್ ತಂಡವನ್ನು ಮುನ್ನಡೆಸಲಿದ್ದಾರೆ. ಇನ್ನು ಈ ಸರಣಿಯ ಬಗ್ಗೆ ಮಾತನಾಡುವುದಾದರೆ, ಟೀಂ ಇಂಡಿಯಾ ಈಗಾಗಲೇ ಸರಣಿಯಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದೆ. ಇದೀಗ ಎರಡನೇ ಏಕದಿನ ಪಂದ್ಯವನ್ನು ಗೆದ್ದರೆ, ಭಾರತ ಸರಣಿ ವಶಪಡಿಸಿಕೊಳ್ಳಲಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:56 pm, Sun, 24 September 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ