AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಮೊಹಮ್ಮದ್ ಸಿರಾಜ್ ಬೆಂಕಿ ಬೌಲಿಂಗ್: ಒಂದೇ ಓವರ್​ನಲ್ಲಿ ಕೊನ್​ಸ್ಟಾಸ್, ಹೆಡ್ ಔಟ್

India vs Australia 5th Test: ಸಿಡ್ನಿ ಕ್ರಿಕೆಟ್ ಗ್ರೌಂಡ್​ನಲ್ಲಿ ಟೀಮ್ ಇಂಡಿಯಾ ವೇಗಿಗಳು ಪರಾಕ್ರಮ ಮೆರೆಯುತ್ತಿದ್ದಾರೆ. ಅದರಲ್ಲೂ ಮೊಹಮ್ಮದ್ ಸಿರಾಜ್ 3 ಎಸೆತಗಳಲ್ಲಿ ಆಸ್ಟ್ರೇಲಿಯಾ ತಂಡದ ಇಬ್ಬರು ಡೇಂಜರಸ್ ಬ್ಯಾಟರ್​ಗಳಾದ ಸ್ಯಾಮ್ ಕೊನ್​ಸ್ಟಾಸ್ ಹಾಗೂ ಟ್ರಾವಿಸ್ ಹೆಡ್ ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಈ ವಿಕೆಟ್​ಗಳೊಂದಿಗೆ ಭಾರತೀಯ ಬೌಲರ್​​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದು, ಈ ಮೂಲಕ 2ನೇ ದಿನದಾಟದ ಆರಂಭದಲ್ಲೇ ಆಸ್ಟ್ರೇಲಿಯಾ ಬ್ಯಾಟರ್​​ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾಗಿದ್ದಾರೆ.

IND vs AUS: ಮೊಹಮ್ಮದ್ ಸಿರಾಜ್ ಬೆಂಕಿ ಬೌಲಿಂಗ್: ಒಂದೇ ಓವರ್​ನಲ್ಲಿ ಕೊನ್​ಸ್ಟಾಸ್, ಹೆಡ್ ಔಟ್
Travis Head - Siraj
ಝಾಹಿರ್ ಯೂಸುಫ್
|

Updated on: Jan 04, 2025 | 6:13 AM

Share

ಸಿಡ್ನಿಯ ಎಸ್​ಸಿಜಿ ಮೈದಾನದಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 5ನೇ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟದ ಆರಂಭದಲ್ಲೇ ಮೊಹಮ್ಮದ್ ಸಿರಾಜ್ ಅದ್ಭುತ ಬೌಲಿಂಗ್ ಪ್ರದರ್ಶಿಸಿದ್ದಾರೆ. ಆಸ್ಟ್ರೇಲಿಯಾ ಇನಿಂಗ್ಸ್​ನ 12ನೇ ಓವರ್ ಎಸೆದ ಸಿರಾಜ್ ಬ್ಯಾಕ್ ಟು ಬ್ಯಾಕ್ ಎರಡು ವಿಕೆಟ್ ಕಬಳಿಸಿ ಟೀಮ್ ಇಂಡಿಯಾಗೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದಾರೆ.

ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ನಿರೀಕ್ಷಿತ ಪ್ರದರ್ಶನ ನೀಡಿರಲಿಲ್ಲ. ಪರಿಣಾಮ ಮೊದಲ ಇನಿಂಗ್ಸ್​ನಲ್ಲಿ 185 ರನ್​ಗಳಿಸಿ ಭಾರತ ತಂಡವು ಆಲೌಟ್ ಆಯಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಆಸ್ಟ್ರೇಲಿಯಾ ತಂಡಕ್ಕೆ ಜಸ್​ಪ್ರೀತ್ ಬುಮ್ರಾ ಆರಂಭಿಕ ಆಘಾತ ನೀಡಿದ್ದರು.

ಮೊದಲ ದಿನದಾಟದ ಕೊನೆಯ ಓವರ್​ನ ಅಂತಿಮ ಎಸೆತದಲ್ಲಿ ಉಸ್ಮಾನ್ ಖ್ವಾಜಾ (2) ವಿಕೆಟ್ ಕಬಳಿಸಿ ಬುಮ್ರಾ ಟೀಮ್ ಇಂಡಿಯಾಗೆ ಮೊದಲ ಯಶಸ್ಸು ತಂದುಕೊಟ್ಟಿದ್ದರು. 9 ರನ್​ಗಳೊಂದಿಗೆ ಮೊದಲ ದಿನದಾಟ ಅಂತ್ಯಗೊಳಿಸಿದ ಆಸ್ಟ್ರೇಲಿಯಾ ಪರ ದ್ವಿತೀಯ ದಿನದಾಟದಲ್ಲಿ ಸ್ಯಾಮ್ ಕೊನ್​ಸ್ಟಾಸ್ ಹಾಗೂ ಮಾರ್ನಸ್ ಲಾಬುಶೇನ್ ಕಣಕ್ಕಿಳಿದರು.

ಪಂದ್ಯದ 7ನೇ ಓವರ್​ನ 2ನೇ ಎಸೆತದಲ್ಲಿ ಲಾಬುಶೇನ್ (2) ವಿಕೆಟ್ ಕಬಳಿಸಿ ಜಸ್​ಪ್ರೀತ್ ಬುಮ್ರಾ ಆಸೀಸ್ ಪಡೆಗೆ ಮತ್ತೆ ಆಘಾತ ನೀಡಿದರು. ಮತ್ತೊಂದು ತುದಿಯಲ್ಲಿ ಕರಾರುವಾಕ್ ದಾಳಿ ಸಂಘಟಿಸುವ ಮೂಲಕ ಮೊಹಮ್ಮದ್ ಸಿರಾಜ್ ಕೂಡ ಆಸ್ಟ್ರೇಲಿಯಾ ಬ್ಯಾಟರ್​ಗಳನ್ನು ಕಾಡಿದರು.

ಸಿರಾಜ್ ಎಸೆದ 12ನೇ ಓವರ್​ನ 2ನೇ ಎಸೆತದಲ್ಲಿ ಸ್ಯಾಮ್ ಕೊನ್​ಸ್ಟಾಸ್ (23) ಯಶಸ್ವಿ ಜೈಸ್ವಾಲ್​ಗೆ ಕ್ಯಾಚಿತ್ತರು. ಇದರ ಬೆನ್ನಲ್ಲೇ ಟ್ರಾವಿಸ್ (4) ವಿಕೆಟ್ ಕಬಳಿಸುವ ಮೂಲಕ ಮೊಹಮ್ಮದ್ ಸಿರಾಜ್ ಆಸ್ಟ್ರೇಲಿಯಾ ತಂಡಕ್ಕೆ ಆಘಾತದ ಮೇಲೆ ಆಘಾತ ನೀಡಿದರು.

ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ವಿಡಿಯೋ

ಎರಡನೇ ದಿನದಾಟದ ಆರಂಭದಲ್ಲೇ ಸಿಕ್ಕ ಮೂರು ಯಶಸ್ಸುಗಳೊಂದಿಗೆ ಟೀಮ್ ಇಂಡಿಯಾ ಭರ್ಜರಿ ಬೌಲಿಂಗ್ ಮುಂದುವರೆಸಿದ್ದಾರೆ. ಅಲ್ಲದೆ 15 ಓವರ್​ಗಳ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡವು 4 ವಿಕೆಟ್ ಕಳೆದುಕೊಂಡು 53 ರನ್ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಸ್ಟೀವ್ ಸ್ಮಿತ್ ಹಾಗೂ ಬ್ಯೂ ವೆಬ್​ಸ್ಟರ್ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಆಸ್ಟ್ರೇಲಿಯಾ ಪ್ಲೇಯಿಂಗ್ 11: ಸ್ಯಾಮ್ ಕೊನ್​ಸ್ಟಾಸ್ , ಉಸ್ಮಾನ್ ಖ್ವಾಜಾ , ಮಾರ್ನಸ್ ಲಾಬುಶೇನ್, ಸ್ಟೀವ್ ಸ್ಮಿತ್ , ಟ್ರಾವಿಸ್ ಹೆಡ್ , ಬ್ಯೂ ವೆಬ್​ಸ್ಟರ್ , ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್) , ಪ್ಯಾಟ್ ಕಮ್ಮಿನ್ಸ್ (ನಾಯಕ) , ಮಿಚೆಲ್ ಸ್ಟಾರ್ಕ್ , ನಾಥನ್ ಲಿಯಾನ್ , ಸ್ಕಾಟ್ ಬೋಲ್ಯಾಂಡ್.

ಇದನ್ನೂ ಓದಿ: ಜಸ್​ಪ್ರೀತ್ ಬುಮ್ರಾ ಖಡಕ್ ಲುಕ್​ಗೆ ಸ್ಯಾಮ್​ ಕೊನ್​ಸ್ಟಾಸ್ ಗಪ್ ಚುಪ್

ಭಾರತ ಪ್ಲೇಯಿಂಗ್ 11: ಯಶಸ್ವಿ ಜೈಸ್ವಾಲ್ , ಕೆಎಲ್ ರಾಹುಲ್ , ಶುಭ್​ಮನ್ ಗಿಲ್ , ವಿರಾಟ್ ಕೊಹ್ಲಿ , ರಿಷಬ್ ಪಂತ್ (ವಿಕೆಟ್ ಕೀಪರ್) , ರವೀಂದ್ರ ಜಡೇಜಾ , ನಿತೀಶ್ ಕುಮಾರ್ ರೆಡ್ಡಿ , ವಾಷಿಂಗ್ಟನ್ ಸುಂದರ್ , ಜಸ್​ಪ್ರೀತ್ ಬುಮ್ರಾ (ನಾಯಕ) , ಪ್ರಸಿದ್ಧ್ ಕೃಷ್ಣ , ಮೊಹಮ್ಮದ್ ಸಿರಾಜ್

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ