AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೀನಾಯವಾಗಿ ಸೋತು ಬಿಸಿಸಿಐ ಮೇಲೆ ಗೂಬೆ ಕೂರಿಸಿದ ಪಾಕ್ ತಂಡದ ನಿರ್ದೇಶಕ

India vs Pakistan, ICC World Cup 2023: ಇದು ವಿಶ್ವಕಪ್ ಪಂದ್ಯಾವಳಿ ಅನಿಸಲಿಲ್ಲ. ಬದಲಿಗೆ ಇದು ಬಿಸಿಸಿಐ ಆಯೋಜಿಸಿದ ದ್ವಿಪಕ್ಷೀಯ ಸರಣಿಯಿಂದ ಬಾಸವಾಯಿತು. ಪಾಕಿಸ್ತಾನದ ಅಭಿಮಾನಿಗಳಿಗೆ ಭಾರತಕ್ಕೆ ಬರಲು ವೀಸಾ ನೀಡಲಾಗಿಲ್ಲ. ಇದು ತಂಡದ ಪ್ರದರ್ಶನಕ್ಕೆ ಕೊಂಚ ಹಿನ್ನಡೆಯುಂಟು ಮಾಡಿತು’ ಎಂದರು.

IND vs AUS: ಹೀನಾಯವಾಗಿ ಸೋತು ಬಿಸಿಸಿಐ ಮೇಲೆ ಗೂಬೆ ಕೂರಿಸಿದ ಪಾಕ್ ತಂಡದ ನಿರ್ದೇಶಕ
ಮಿಕ್ಕಿ ಆರ್ಥರ್Image Credit source: insidesport
ಪೃಥ್ವಿಶಂಕರ
|

Updated on:Oct 15, 2023 | 9:56 AM

Share

ಏಕದಿನ ವಿಶ್ವಕಪ್​ನಲ್ಲಿ (ICC World Cup 2023) ಆಸ್ಟ್ರೇಲಿಯಾ, ಅಫ್ಘಾನಿಸ್ತಾನ ತಂಡಗಳನ್ನು ಮಣಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದ ಟೀಂ ಇಂಡಿಯಾ ಇದೀಗ ತನ್ನ ಮೂರನೇ ಪಂದ್ಯದಲ್ಲಿ ಬದ್ದವೈರಿ ಪಾಕಿಸ್ತಾನವನ್ನು (India vs Pakistan) ಮಣಿಸಿ ತನ್ನ ಗೆಲುವಿನ ನಾಗಾಲೋಟವನ್ನು ಮುಂದುವರೆಸಿದ. ಪಾಕಿಸ್ತಾನ ನೀಡಿದ 192 ರನ್‌ಗಳ ಸವಾಲನ್ನು ಟೀಂ ಇಂಡಿಯಾ 3 ವಿಕೆಟ್ ಕಳೆದುಕೊಂಡು ಪೂರ್ಣಗೊಳಿಸಿತು. ಇದುವರೆಗಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಪಾಕಿಸ್ತಾನದ ಸತತ ಎಂಟನೇ ಸೋಲು ಇದಾಗಿದೆ. ಇದೀಗ ಟೀಂ ಇಂಡಿಯಾ ವಿರುದ್ಧ ಸೋತ ನಂತರ ಪಾಕಿಸ್ತಾನ ತಂಡದಲ್ಲಿ ಅಸಮಾಧಾನ ಮೂಡಿದ್ದು, ಪಾಕಿಸ್ತಾನ ತಂಡದ ನಿರ್ದೇಶಕ ಮಿಕ್ಕಿ ಆರ್ಥರ್ (Mickey Arthur) ಬಿಸಿಸಿಐ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ವಿಶ್ವಕಪ್ ಪಂದ್ಯಾವಳಿ ಅನಿಸಲಿಲ್ಲ

ಪಾಕಿಸ್ತಾನ ತಂಡದ ಹೀನಾಯ ಸೋಲಿನ ಬಳಿಕ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪಾಕ್ ತಂಡದ ನಿರ್ದೇಶಕ ಮಿಕ್ಕಿ ಆರ್ಥರ್, ಬಿಸಿಸಿಐ ವಿರುದ್ಧ ವಾಗ್ದಾಳಿ ನಡೆಸಿದರು. ಪಾಕಿಸ್ತಾನದ ಅಭಿಮಾನಿಗಳ ಅನುಪಸ್ಥಿತಿ ತಂಡದ ಪ್ರದರ್ಶನದ ಮೇಲೆ ಪ್ರಭಾವ ಬೀರಿತ ಎಂದು ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಆರ್ಥರ್, ‘ಇದು ವಿಶ್ವಕಪ್ ಪಂದ್ಯಾವಳಿ ಅನಿಸಲಿಲ್ಲ. ಬದಲಿಗೆ ಇದು ಬಿಸಿಸಿಐ ಆಯೋಜಿಸಿದ ದ್ವಿಪಕ್ಷೀಯ ಸರಣಿಯಿಂದ ಬಾಸವಾಯಿತು. ಪಾಕಿಸ್ತಾನದ ಅಭಿಮಾನಿಗಳಿಗೆ ಭಾರತಕ್ಕೆ ಬರಲು ವೀಸಾ ನೀಡಲಾಗಿಲ್ಲ. ಇದು ತಂಡದ ಪ್ರದರ್ಶನಕ್ಕೆ ಕೊಂಚ ಹಿನ್ನಡೆಯುಂಟು ಮಾಡಿತು’ ಎಂದರು.

90 ಮೀ. ಸಿಕ್ಸರ್ ಬಾರಿಸಿ ಅಂಪೈರ್‌ಗೆ ಬೈಸೆಪ್ಸ್ ತೋರಿಸಿದ ರೋಹಿತ್ ಶರ್ಮಾ..! ವಿಡಿಯೋ ವೈರಲ್

ಬಿಸಿಸಿಐ ಕಾರ್ಯಕ್ರಮದಂತೆ ತೋರುತ್ತಿದೆ

ಪಾಕಿಸ್ತಾನದ ಪ್ರೇಕ್ಷಕರ ಅನುಪಸ್ಥಿತಿ ಆಟಗಾರರ ಮನಸ್ಥಿತಿಯ ಮೇಲೆ ಪ್ರಭಾವ ಬೀರಿದೆಯೇ ಎಂದು ಕೇಳಿದಾಗ, ‘ನೋಡಿ, ಅದನ್ನು ಅಲ್ಲಗಳೆಯುವುದಕ್ಕೆ ಸಾಧ್ಯವಿಲ್ಲ. ನಿಜವಾಗಿ ಹೇಳಬೇಕೆಂದರೆ ಇದು ಐಸಿಸಿ ಪಂದ್ಯಾವಳಿಯಂತೆ ತೋರುತ್ತಿಲ್ಲ. ಇದು ದ್ವಿಪಕ್ಷೀಯ ಸರಣಿಯಂತೆ ಕಾಣುತ್ತದೆ, ಇದು ಬಿಸಿಸಿಐ ಕಾರ್ಯಕ್ರಮದಂತೆ ತೋರುತ್ತಿದೆ. ಆದಾಗ್ಯೂ, ಪ್ರೇಕ್ಷಕರ ಬೆಂಬಲದ ಕೊರತೆಯು ಪಾಕಿಸ್ತಾನ ತಂಡದ ಸೋಲಿಗೆ ಕಾರಣ ಎಂದು ಹೇಳಲು ಸಾಧ್ಯವಿಲ್ಲ. ಆದರೆ ಪ್ರೇಕ್ಷಕರ ಉಪಸ್ಥಿತಿಯೂ ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರುತ್ತದೆ. ಹಾಗಂತ ನಾನು ತಂಡದ ಆಟಗಾರರ ಪ್ರದರ್ಶನವನ್ನು ಕ್ಷಮಿಸಲು ಹೋಗುವುದಿಲ್ಲ ಎಂದಿದ್ದಾರೆ.

ಶ್ರೇಯಸ್ಸನ್ನು ನಾವು ಭಾರತಕ್ಕೆ ನೀಡಬೇಕು

ಆದಾಗ್ಯೂ, ಪಾಕಿಸ್ತಾನ ತಂಡ ಇಂದು ನಿರ್ಭೀತ ಕ್ರಿಕೆಟ್ ಆಡಲಿಲ್ಲ. ನಮ್ಮ ಒಟ್ಟಾರೆ ಪ್ರದರ್ಶನ ತೃಪ್ತಿ ತಂದಿಲ್ಲ. ನಾವು ನಿಜವಾಗಿಯೂ ಆಟದ ಮೇಲೆ ಇನ್ನು ಹೆಚ್ಚು ಗಮನ ಹರಿಸಬೇಕು ಎಂಬುದು ನನ್ನ ಅಭಿಪ್ರಾಯ. ಬಾಬರ್ ಮತ್ತು ರಿಜ್ವಾನ್ ಅವರ 82 ರನ್ ಜೊತೆಯಾಟದ ಲಾಭವನ್ನು ನಾವು ಉಪಯೋಗಿಸಿಕೊಳ್ಳಲಿಲ್ಲ. 2 ವಿಕೆಟ್ ನಷ್ಟಕ್ಕೆ 155 ರನ್ ಕಲೆಹಾಕಿದ ತಂಡ 190 ರನ್​ಗಳಿಗೆ ಆಲೌಟ್ ಆಗುವುದನ್ನು ಕ್ಷಮಿಸಲಾಗುವುದಿಲ್ಲ. ಆದರೆ ಇದರ ಶ್ರೇಯಸ್ಸನ್ನು ನಾವು ಭಾರತಕ್ಕೆ ನೀಡಬೇಕು. ನಿಜವಾಗಿಯೂ ಟೀಂ ಇಂಡಿಯಾ ಅದ್ಭುತ ಬೌಲಿಂಗ್ ಮಾಡಿತು’ ಎಂದಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:55 am, Sun, 15 October 23

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!