IND vs BAN: ‘ನನಗಿರುವುದು ಎರಡೇ ಕೈ’; ಕೊಹ್ಲಿಯ ಈ ಮಾತಿಗೆ ನೆಟ್ಟಿಗರು ಗರಂ..! ವಿಡಿಯೋ ವೈರಲ್

Virat Kohli: ಹೋಟೆಲ್​ಗೆ ಬಂದ ಕೊಹ್ಲಿಗೆ ಅಲ್ಲಿನ ಹೋಟೆಲ್​ ಸಿಬ್ಬಂದಿಯೊಬ್ಬರು ಹೂ ಗುಚ್ಛ ನೀಡಿ ಸ್ವಾಗತಿಸಿದ್ದಾರೆ. ಅದೇ ವೇಳೆಗೆ ಇನ್ನೊಬ್ಬ ಸಿಬ್ಬಂದಿ ಕೊಹ್ಲಿಗೆ ಕೈ ಕುಲುಕಲು ಮುಂದಾಗಿದ್ದಾರೆ. ಆದರೆ ಕೊಹ್ಲಿ 'ಸರ್, ನನಗಿರುವುದು ಕೇವಲ ಎರಡು ಕೈ ಮಾತ್ರ. ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ವಿರಾಟ್ ಆ ಹೂ ಗುಚ್ಛವನ್ನು ಬೇರೆ ಅಧಿಕಾರಿಗೆ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾರೆ.

IND vs BAN: ‘ನನಗಿರುವುದು ಎರಡೇ ಕೈ’; ಕೊಹ್ಲಿಯ ಈ ಮಾತಿಗೆ ನೆಟ್ಟಿಗರು ಗರಂ..! ವಿಡಿಯೋ ವೈರಲ್
ವಿರಾಟ್ ಕೊಹ್ಲಿ
Follow us
|

Updated on:Sep 25, 2024 | 3:58 PM

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ಇದೀಗ ಕಾನ್ಪುರ ತಲುಪಿವೆ. ಟೀಂ ಇಂಡಿಯಾ ಮಂಗಳವಾರ ಕಾನ್ಪುರದ ನೆಲಕ್ಕೆ ಕಾಲಿಟ್ಟಿದ್ದು, ಎಲ್ಲಾ ಆಟಗಾರರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಆ ಬಳಿಕ ತಂಡದ ಆಟಗಾರರು ಹೋಟೆಲ್​ಗೆ ತೆರಳಿದರು. ಈ ವೇಳೆ ಹೋಟೆಲ್​ಗೆ ಬಂದ ಆಟಗಾರರಿಗೆ ಹೋ ಗುಚ್ಛ ನೀಡಿ ಸ್ವಾಗತಿಸಲಾಯಿತು. ಅದರಂತೆ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಗೂ ಅದೇ ರೀತಿಯ ಸ್ವಾಗತ ಸಿಕ್ಕಿತು. ಆದರೆ, ಈ ವೇಳೆ ಕೊಹ್ಲಿಗೆ ಕೈಕುಲಕಲು ಮುಂದಾದ ಹೋಟೆಲ್​ ಸಿಬ್ಬಂದಿ ಬಳಿ ಕೊಹ್ಲಿ ನಡೆದುಕೊಂಡ ರೀತಿಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಲಾಗುತ್ತಿದೆ. ಕೊಹ್ಲಿ ನಡೆಯನ್ನು ನೆಟ್ಟಿಗರು ಖಂಡಿಸಿದ್ದು, ತರಹೆವಾರಿ ಕಾಮೆಂಟ್​ಗಳ ಮೂಲಕ ಕೊಹ್ಲಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ನನಗಿರುವುದು ಎರಡೇ ಕೈ

ಅಷ್ಟಕ್ಕೂ ನಡೆದಿದ್ದೇನೆಂದರೆ ಹೋಟೆಲ್​ಗೆ ಬಂದ ಕೊಹ್ಲಿಗೆ ಅಲ್ಲಿನ ಹೋಟೆಲ್​ ಸಿಬ್ಬಂದಿಯೊಬ್ಬರು ಹೂ ಗುಚ್ಛ ನೀಡಿ ಸ್ವಾಗತಿಸಿದ್ದಾರೆ. ಅದೇ ವೇಳೆಗೆ ಇನ್ನೊಬ್ಬ ಸಿಬ್ಬಂದಿ ಕೊಹ್ಲಿಗೆ ಕೈ ಕುಲುಕಲು ಮುಂದಾಗಿದ್ದಾರೆ. ಆದರೆ ಕೊಹ್ಲಿ ‘ಸರ್, ನನಗಿರುವುದು ಕೇವಲ ಎರಡು ಕೈ ಮಾತ್ರ. ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ವಿರಾಟ್ ಆ ಹೂ ಗುಚ್ಛವನ್ನು ಬೇರೆ  ಅಧಿಕಾರಿಗೆ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾರೆ.

ವಿರಾಟ್ ಮೇಲೆ ಫ್ಯಾನ್ಸ್ ಕೋಪ

ವಿರಾಟ್ ಕೊಹ್ಲಿಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅನೇಕ ಅಭಿಮಾನಿಗಳು ಅವರ ಈ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ. ಕೊಹ್ಲಿಯ ವರ್ತನೆಯನ್ನು ಕೆಲವರು ಟೀಕಿಸಿದ್ದು, ಅವರಲ್ಲಿ ಒಬ್ಬ ಅಭಿಮಾನಿ, ‘ಹಣ ಬಂದ ನಂತರ ಎಲ್ಲರೂ ತಮ್ಮನ್ನು ತಾವು ದೇವರೆಂದು ಭಾವಿಸಲು ಪ್ರಾರಂಭಿಸುತ್ತಾರೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಕೊಹ್ಲಿ ಹಾಗೆ ಹೇಳಲು ಕಾರಣವೇನು?

ವಾಸ್ತವವಾಗಿ, ವಿರಾಟ್ ಕೊಹ್ಲಿ ಈ ರೀತಿಯಾಗಿ ಹೇಳುವುದಕ್ಕೆ ಕಾರಣವೂ ಇದೆ. ಸಿಬ್ಬಂದಿಯೊಬ್ಬರು, ಕೊಹ್ಲಿಗೆ ಕೈ ಕುಲುಕಲು ಬಂದಾಗ ಕೊಹ್ಲಿ ಒಂದು ಕೈಯಲ್ಲಿ ತಮ್ಮ ಬ್ಯಾಗ್ ಮತ್ತು ಇನ್ನೊಂದು ಕೈಯಲ್ಲಿ ಹೂವಿನ ಬೊಕೆಯನ್ನು ಹಿಡಿದಿದ್ದರು. ಇದರಿಂದಾಗಿ ಕೊಹ್ಲಿಗೆ ಹೋಟೆಲ್ ಅಧಿಕಾರಿಯೊಂದಿಗೆ ಕೈಕುಲುಕಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Wed, 25 September 24

CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
CM ವಿರುದ್ದ ದೂರಿಗೆ ಹಿಂಬರಹ ನೀಡಲು ಲೋಕಾಯುಕ್ತ SPಗೆ ಗಡುವು ನೀಡಿದ ದೂರುದಾರ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಪಾಕಿಸ್ತಾನಕ್ಕೆ ಹೋಲಿಕೆ: ಹೈಕೋರ್ಟ್​ ನ್ಯಾಯಾಧೀಶರಿಗೆ ಸುಪ್ರಿಂ ತರಾಟೆ
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್​ನಲ್ಲಿ ಆ್ಯಪಲ್ ಐಫೋನ್ ಆಫರ್
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಯತ್ನ: ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಎಲೆಕ್ಟ್ರಾನಿಕ್ ಸಿಟಿಯಲ್ಲಿ ಓಡಾಡುತ್ತ ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕ್ಷಣಾರ್ಧದಲ್ಲೇ ಜಲ ಸಮಾಧಿಯಾದ ಎರಡಂತಸ್ತಿನ ಮನೆ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಕೋಲಾರದಲ್ಲಿ ಅನುಮಾನಾಸ್ಪದ ಸೂಟ್​ಕೇಸ್​ ಪತ್ತೆ, ಸ್ಥಳೀಯರಿಗೆ ಆತಂಕ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
ಯುವ ದಸರಾ ವೇದಿಕೆ ಮೇಲೆ ನಕ್ಕ ರುಕ್ಮಿಣಿ ವಸಂತ್; ವಿಡಿಯೋ ನೋಡಿ
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Daily Devotional: ಯಾವ ಗ್ರಹ ಪೂಜಿಸಿದರೆ ಏನೇನು ಫಲ ಸಿಗುತ್ತೆ?
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು
Nithya Bhavishya: ಈ ರಾಶಿಯ ಮಹಿಳೆಯರು ಇಂದು ಉದ್ಯಮದಲ್ಲಿ ಪ್ರಗತಿ ಕಾಣುವರು