AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ‘ನನಗಿರುವುದು ಎರಡೇ ಕೈ’; ಕೊಹ್ಲಿಯ ಈ ಮಾತಿಗೆ ನೆಟ್ಟಿಗರು ಗರಂ..! ವಿಡಿಯೋ ವೈರಲ್

Virat Kohli: ಹೋಟೆಲ್​ಗೆ ಬಂದ ಕೊಹ್ಲಿಗೆ ಅಲ್ಲಿನ ಹೋಟೆಲ್​ ಸಿಬ್ಬಂದಿಯೊಬ್ಬರು ಹೂ ಗುಚ್ಛ ನೀಡಿ ಸ್ವಾಗತಿಸಿದ್ದಾರೆ. ಅದೇ ವೇಳೆಗೆ ಇನ್ನೊಬ್ಬ ಸಿಬ್ಬಂದಿ ಕೊಹ್ಲಿಗೆ ಕೈ ಕುಲುಕಲು ಮುಂದಾಗಿದ್ದಾರೆ. ಆದರೆ ಕೊಹ್ಲಿ 'ಸರ್, ನನಗಿರುವುದು ಕೇವಲ ಎರಡು ಕೈ ಮಾತ್ರ. ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ವಿರಾಟ್ ಆ ಹೂ ಗುಚ್ಛವನ್ನು ಬೇರೆ ಅಧಿಕಾರಿಗೆ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾರೆ.

IND vs BAN: ‘ನನಗಿರುವುದು ಎರಡೇ ಕೈ’; ಕೊಹ್ಲಿಯ ಈ ಮಾತಿಗೆ ನೆಟ್ಟಿಗರು ಗರಂ..! ವಿಡಿಯೋ ವೈರಲ್
ವಿರಾಟ್ ಕೊಹ್ಲಿ
ಪೃಥ್ವಿಶಂಕರ
|

Updated on:Sep 25, 2024 | 3:58 PM

Share

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಎರಡೂ ತಂಡಗಳು ಇದೀಗ ಕಾನ್ಪುರ ತಲುಪಿವೆ. ಟೀಂ ಇಂಡಿಯಾ ಮಂಗಳವಾರ ಕಾನ್ಪುರದ ನೆಲಕ್ಕೆ ಕಾಲಿಟ್ಟಿದ್ದು, ಎಲ್ಲಾ ಆಟಗಾರರಿಗೆ ಅದ್ಧೂರಿ ಸ್ವಾಗತ ನೀಡಲಾಯಿತು. ಆ ಬಳಿಕ ತಂಡದ ಆಟಗಾರರು ಹೋಟೆಲ್​ಗೆ ತೆರಳಿದರು. ಈ ವೇಳೆ ಹೋಟೆಲ್​ಗೆ ಬಂದ ಆಟಗಾರರಿಗೆ ಹೋ ಗುಚ್ಛ ನೀಡಿ ಸ್ವಾಗತಿಸಲಾಯಿತು. ಅದರಂತೆ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿಗೂ ಅದೇ ರೀತಿಯ ಸ್ವಾಗತ ಸಿಕ್ಕಿತು. ಆದರೆ, ಈ ವೇಳೆ ಕೊಹ್ಲಿಗೆ ಕೈಕುಲಕಲು ಮುಂದಾದ ಹೋಟೆಲ್​ ಸಿಬ್ಬಂದಿ ಬಳಿ ಕೊಹ್ಲಿ ನಡೆದುಕೊಂಡ ರೀತಿಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಲಾಗುತ್ತಿದೆ. ಕೊಹ್ಲಿ ನಡೆಯನ್ನು ನೆಟ್ಟಿಗರು ಖಂಡಿಸಿದ್ದು, ತರಹೆವಾರಿ ಕಾಮೆಂಟ್​ಗಳ ಮೂಲಕ ಕೊಹ್ಲಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ.

ನನಗಿರುವುದು ಎರಡೇ ಕೈ

ಅಷ್ಟಕ್ಕೂ ನಡೆದಿದ್ದೇನೆಂದರೆ ಹೋಟೆಲ್​ಗೆ ಬಂದ ಕೊಹ್ಲಿಗೆ ಅಲ್ಲಿನ ಹೋಟೆಲ್​ ಸಿಬ್ಬಂದಿಯೊಬ್ಬರು ಹೂ ಗುಚ್ಛ ನೀಡಿ ಸ್ವಾಗತಿಸಿದ್ದಾರೆ. ಅದೇ ವೇಳೆಗೆ ಇನ್ನೊಬ್ಬ ಸಿಬ್ಬಂದಿ ಕೊಹ್ಲಿಗೆ ಕೈ ಕುಲುಕಲು ಮುಂದಾಗಿದ್ದಾರೆ. ಆದರೆ ಕೊಹ್ಲಿ ‘ಸರ್, ನನಗಿರುವುದು ಕೇವಲ ಎರಡು ಕೈ ಮಾತ್ರ. ಎಲ್ಲರಿಗೂ ಥ್ಯಾಂಕ್ಸ್ ಎಂದು ಹೇಳಿದ್ದಾರೆ. ಅಷ್ಟೇ ಅಲ್ಲ, ವಿರಾಟ್ ಆ ಹೂ ಗುಚ್ಛವನ್ನು ಬೇರೆ  ಅಧಿಕಾರಿಗೆ ಕೊಟ್ಟು ಅಲ್ಲಿಂದ ಹೊರಟು ಹೋಗಿದ್ದಾರೆ.

ವಿರಾಟ್ ಮೇಲೆ ಫ್ಯಾನ್ಸ್ ಕೋಪ

ವಿರಾಟ್ ಕೊಹ್ಲಿಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಅನೇಕ ಅಭಿಮಾನಿಗಳು ಅವರ ಈ ನಡೆಗೆ ಅಸಮಾಧಾನ ಹೊರಹಾಕಿದ್ದಾರೆ. ಕೊಹ್ಲಿಯ ವರ್ತನೆಯನ್ನು ಕೆಲವರು ಟೀಕಿಸಿದ್ದು, ಅವರಲ್ಲಿ ಒಬ್ಬ ಅಭಿಮಾನಿ, ‘ಹಣ ಬಂದ ನಂತರ ಎಲ್ಲರೂ ತಮ್ಮನ್ನು ತಾವು ದೇವರೆಂದು ಭಾವಿಸಲು ಪ್ರಾರಂಭಿಸುತ್ತಾರೆ’ ಎಂದು ಕಾಮೆಂಟ್ ಮಾಡಿದ್ದಾರೆ.

ಕೊಹ್ಲಿ ಹಾಗೆ ಹೇಳಲು ಕಾರಣವೇನು?

ವಾಸ್ತವವಾಗಿ, ವಿರಾಟ್ ಕೊಹ್ಲಿ ಈ ರೀತಿಯಾಗಿ ಹೇಳುವುದಕ್ಕೆ ಕಾರಣವೂ ಇದೆ. ಸಿಬ್ಬಂದಿಯೊಬ್ಬರು, ಕೊಹ್ಲಿಗೆ ಕೈ ಕುಲುಕಲು ಬಂದಾಗ ಕೊಹ್ಲಿ ಒಂದು ಕೈಯಲ್ಲಿ ತಮ್ಮ ಬ್ಯಾಗ್ ಮತ್ತು ಇನ್ನೊಂದು ಕೈಯಲ್ಲಿ ಹೂವಿನ ಬೊಕೆಯನ್ನು ಹಿಡಿದಿದ್ದರು. ಇದರಿಂದಾಗಿ ಕೊಹ್ಲಿಗೆ ಹೋಟೆಲ್ ಅಧಿಕಾರಿಯೊಂದಿಗೆ ಕೈಕುಲುಕಲು ಸಾಧ್ಯವಾಗಲಿಲ್ಲ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Wed, 25 September 24

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ