IND vs BAN: ಸಂಜು- ಸೂರ್ಯ ಸಿಡಿಲಬ್ಬರಕ್ಕೆ 133 ರನ್​ಗಳಿಂದ ಸೋತ ಬಾಂಗ್ಲಾದೇಶ

IND vs BAN: ಮೂರನೇ ಟಿ20 ಪಂದ್ಯದಲ್ಲಿ ಬಾಂಗ್ಲಾದೇಶ ಹೀನಾಯ ಸೋಲು ಕಂಡಿದೆ. ಈ ಪಂದ್ಯವನ್ನು ಭಾರತ 133 ರನ್‌ಗಳಿಂದ ಗೆದ್ದಿದೆ. ಈ ಪಂದ್ಯವನ್ನು ಗೆದ್ದು ಟೀಂ ಇಂಡಿಯಾ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಭಾರತ ನೀಡಿದ 298 ರನ್​ಗಳ ಗುರಿ ಬೆನ್ನತ್ತಿದ ಬಾಂಗ್ಲಾದೇಶ 7 ವಿಕೆಟ್ ಕಳೆದುಕೊಂಡು 164 ರನ್ ಗಳಿಸಲಷ್ಟೇ ಶಕ್ತವಾಯಿತು.

IND vs BAN: ಸಂಜು- ಸೂರ್ಯ ಸಿಡಿಲಬ್ಬರಕ್ಕೆ 133 ರನ್​ಗಳಿಂದ ಸೋತ ಬಾಂಗ್ಲಾದೇಶ
ಟೀಂ ಇಂಡಿಯಾ
Follow us
|

Updated on:Oct 12, 2024 | 11:05 PM

ಬಾಂಗ್ಲಾದೇಶ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಗೆದ್ದು ಸರಣಿ ವಶಪಡಿಸಿಕೊಂಡಿದ್ದ ಟೀಂ ಇಂಡಿಯಾ, ಇದೀಗ ಮೂರನೇ ಹಾಗೂ ಕೊನೆಯ ಪಂದ್ಯದಲ್ಲೂ ಬಾಂಗ್ಲಾದೇಶವನ್ನು ಮಣಿಸಿದೆ. ಹೈದರಾಬಾದ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಬರೋಬ್ಬರಿ 133 ರನ್​ಗಳಿಂದ ಸೋಲಿಸಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಇತ್ತ ಟೆಸ್ಟ್ ಸರಣಿಯನ್ನೂ 2-0 ಅಂತರದಿಂದ ಕಳೆದುಕೊಂಡಿದ್ದ ಬಾಂಗ್ಲಾದೇಶ ತಂಡಕ್ಕೆ ಭಾರತ ಪ್ರವಾಸದಲ್ಲಿ ಒಂದೇ ಒಂದು ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಭಾರತಕ್ಕೆ ಬರುವ ಮುನ್ನ ಪಾಕಿಸ್ತಾನವನ್ನು ಅವರದ್ದೇ ನೆಲದಲ್ಲಿ ಮಣಿಸಿದ್ದ ಬಾಂಗ್ಲಾ ತಂಡದ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಡಲಾಗಿತ್ತು. ಆದರೆ ಭಾರತವನ್ನು ಭಾರತದಲ್ಲಿ ಮಣಿಸಲು ಸಾಧ್ಯವೇ ಇಲ್ಲ ಎಂಬುದನ್ನು ಸಾಭೀತು ಮಾಡುವಲ್ಲಿ ಟೀಂ ಇಂಡಿಯಾ ಯಶಸ್ವಿಯಾಗಿದೆ.

ಅಬ್ಬರಿಸಿದ ಬ್ಯಾಟಿಂಗ್ ವಿಭಾಗ

ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 6 ವಿಕೆಟ್ ನಷ್ಟಕ್ಕೆ 297 ರನ್ ಗಳಿಸಿತು. ತಂಡದ ಪರ ಶತಕದ ಇನ್ನಿಂಗ್ಸ್ ಆಡಿದ ಸಂಜು ಸ್ಯಾಮ್ಸನ್ ಗೆಲುವಿನ ರೂವಾರಿಗಳಲ್ಲಿ ಪ್ರಮುಖರಾಗಿದ್ದಾರೆ. ತಮ್ಮ ಇನ್ನಿಂಗ್ಸ್​ನಲ್ಲಿ 111 ರನ್ ಬಾರಿಸಿದ ಸಂಜು ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರೆ, ಆ ಬಳಿಕ 40 ಎಸೆತಗಳಲ್ಲಿ ಶತಕ ಸಿಡಿಸಿದರು. ಸಂಜುಗೆ ಸಾಥ್ ನೀಡಿದ ನಾಯಕ ಸೂರ್ಯಕುಮಾರ್ ಯಾದವ್ 35 ಎಸೆತಗಳಲ್ಲಿ 8 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ 75 ರನ್ ಗಳಿಸಿದರು.

ಕೊನೆಯಲ್ಲಿ ಸ್ಕೋರ್ ಬೋರ್ಡ್​ ವೇಗ ಹೆಚ್ಚಿಸದ ಹಾರ್ದಿಕ್ ಪಾಂಡ್ಯ 18 ಎಸೆತಗಳಲ್ಲಿ 47 ರನ್ ಬಾರಿಸಿದರೆ, ಬ್ಯಾಟಿಂಗ್ ಕ್ರಮಾಂಕದಲ್ಲಿ ಮುಂಬಡ್ತಿ ಪಡೆದು ಬಂದ ರಿಯಾನ್ ಪರಾಗ್ 13 ಎಸೆತಗಳಲ್ಲಿ 34 ರನ್ ಗಳಿಸಿದರು. ಉಳಿದಂತೆ ರಿಂಕು ಸಿಂಗ್ ಔಟಾಗದೆ 8 ರನ್ ಬಾರಿಸಿದರೆ, ಅಭಿಷೇಕ್ ಶರ್ಮಾ 4 ರನ್ ಕೊಡುಗೆ ನೀಡಿದರು. ವಾಷಿಂಗ್ಟನ್ ಸುಂದರ್ 1 ರನ್ ಗಳಿಸಿ ಅಜೇಯರಾಗಿ ಮರಳಿದರು. ಬಾಂಗ್ಲಾದೇಶ ಪರ ತಂಜಿಮ್ ಹಸನ್ ಶಾಕಿಬ್ 3 ವಿಕೆಟ್ ಪಡೆದರೆ, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ಮತ್ತು ಮಹಮ್ಮದುಲ್ಲಾ ತಲಾ 1 ವಿಕೆಟ್ ಪಡೆದರು.

ತತ್ತರಿಸಿದ ಬಾಂಗ್ಲಾ ಇನ್ನಿಂಗ್ಸ್

ಭಾರತ ನೀಡಿದ 297 ರನ್​ಗಳ ಬೃಹತ್ ಗುರಿಗೆ ಉತ್ತರವಾಗಿ ಬಾಂಗ್ಲಾದೇಶ ನಿಗದಿತ ಓವರ್‌ಗಳಲ್ಲಿ ಏಳು ವಿಕೆಟ್‌ಗೆ 164 ರನ್ ಗಳಿಸಲಷ್ಟೇ ಶಕ್ತವಾಯಿತು. ಬಾಂಗ್ಲಾದೇಶ ಪರ ತೌಹೀದ್ ಹೃದೋಯ್ 42 ಎಸೆತಗಳಲ್ಲಿ 63 ರನ್ ಗಳಿಸಿ ಅಜೇಯರಾಗಿ ಉಳಿದರೆ ಲಿಟ್ಟನ್ ದಾಸ್ 42 ರನ್​​ಗಳ ಕಾಣಿಕೆ ನೀಡಿದರು. ಉಳಿದಂತೆ ಯಾರಿಂದಲೂ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ. ಭಾರತದ ಪರ ರವಿ ಬಿಷ್ಣೋಯ್ ಗರಿಷ್ಠ ಮೂರು ವಿಕೆಟ್ ಪಡೆದರೆ, ವೇಗದ ಬೌಲರ್ ಮಯಾಂಕ್ ಯಾದವ್ ಎರಡು ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:55 pm, Sat, 12 October 24

ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಅದ್ದೂರಿ, ಸಡಗರದ ದಸರಾ ಉತ್ಸವ, ಸಿದ್ದರಾಮಯ್ಯ ಸರ್ಕಾರಕ್ಕೆ ಫುಲ್ ಮಾರ್ಕ್ಸ್
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜಂಬೂ ಸವಾರಿಗೆ ಮಳೆ ಕಾಟವಿಲ್ಲ, ದಸರಾ ಉತ್ಸವದಲ್ಲಿ ಭಾಗಿಯಾದವರು ನಿರಾಳ
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ಜೆಡಿಎಸ್ ಸಾಮಾನ್ಯ ಕಾರ್ಯಕರ್ತ ಸಹ ಚನ್ನಪಟ್ಟದಿಂದ ಗೆಲ್ತಾನೆ: ನಿಖಿಲ್
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ನನ್ನ ಪ್ರೀತಿಗೆ ಭಾಗಿ ಆಗಿ, ಸವಾಲು ಹಾಕಬೇಡಿ: ಅಬ್ಬರಿಸಿದ ಕಿಚ್ಚ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ದಸರಾ: ವಾದ್ಯ ನುಡಿಸುವವರ ಉತ್ಸಾಹಕ್ಕೆ ಮಳೆ ಕಿಂಚಿತ್ತೂ ಅಡ್ಡಿಯಾಗಿಲ್ಲ
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ಹಿಂಗಾರು ಮಳೆ ಆರ್ಭಟಕ್ಕೆ ನೀರಲ್ಲಿ ಕೊಚ್ಚಿ ಹೋದ ಈರುಳ್ಳಿ; ರೈತರು ಕಂಗಾಲು
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ವಿಡಿಯೋ: ರಾಜ್ ಬಿ ಶೆಟ್ಟಿಯ ಹುಲಿ ಕುಣಿತಕ್ಕೆ ಪ್ರೇಕ್ಷಕರು ಫಿದಾ
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ನಂದಿಗಿರಿಧಾಮಕ್ಕೆ ಹರಿದು ಬಂದ ಜನ ಸಾಗರ: ನಡುರಸ್ತೆಯಲ್ಲೇ ನಿಂತ ವಾಹನಗಳು
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಕೆಟ್ಟದ್ದನ್ನು ಬಯಸುವ ಜನರಿಗೆ ಚಾಮುಂಡೇಶ್ವರಿ ಸದ್ಬುದ್ಧಿ ನೀಡಲಿ: ಸಿಎಂ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ
ಜಂಬೂಸವಾರಿಗೆ ಮುನ್ನ ಫೋಟೋಶೂಟ್​ನಲ್ಲಿ ಭಾಗಿಯಾದ ಗಜಪಡೆ