AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ನಂಗ್ಯಾಕೆ ಹೊಡೀತಿಯಾ… ಪಂತ್-ದಾಸ್ ನಡುವೆ ವಾಕ್ಸಮರ

India vs Bangladesh, 1st Test: ಭಾರತದ ವಿರುದ್ಧದ ಮೊದಲ ಟೆಸ್ಟ್​ನ ಫಸ್ಟ್ ಸೆಷನ್​ನಲ್ಲಿ ಯುವ ವೇಗಿ ಹಸನ್ ಮಹಮೂದ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿಯ ವಿಕೆಟ್ ಕಬಳಿಸಿರುವ ಹಸನ್ ಬಾಂಗ್ಲಾ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದಾರೆ. ಆದರೆ ಬಳಿಕ ಟೀಮ್ ಇಂಡಿಯಾ ಪರ ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

IND vs BAN: ನಂಗ್ಯಾಕೆ ಹೊಡೀತಿಯಾ... ಪಂತ್-ದಾಸ್ ನಡುವೆ ವಾಕ್ಸಮರ
Rishabh Pant - Litton Das
ಝಾಹಿರ್ ಯೂಸುಫ್
|

Updated on: Sep 19, 2024 | 12:01 PM

Share

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಸೆಷನ್​ನಲ್ಲೇ ವಾಕ್ಸಮರ ಶುರುವಾಗಿದೆ. ಅದು ಸಹ ಇಬ್ಬರು ವಿಕೆಟ್​ ಕೀಪರ್​ಗಳ ನಡುವೆ ಎಂಬುದೇ ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ.

ನಾಯಕ ರೋಹಿತ್ ಶರ್ಮಾ 6 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ ಸೊನ್ನೆ ಸುತ್ತಿದರು. ಇನ್ನು ವಿರಾಟ್ ಕೊಹ್ಲಿ (6) ಕೂಡ ಬಂದ ವೇಗದದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದರು.

ಈ ಹಂತದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ತಂಡದ ಆರಂಭಿಕ ಆಘಾತವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಆತ್ಮ ವಿಶ್ವಾಸದಿಂದಲೇ ಬ್ಯಾಟ್ ಬೀಸಿದ ಪಂತ್ ಆಕರ್ಷಕ ಹೊಡೆತಗಳ ಮೂಲಕ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದರು.

ಇತ್ತ ರಿಷಭ್ ಪಂತ್ ಅಬ್ಬರಿಸುತ್ತಿರುವುದನ್ನು ಗಮನಿಸಿದ ಬಾಂಗ್ಲಾದೇಶ್ ತಂಡದ ವಿಕೆಟ್ ಕೀಪರ್ ಲಿಟ್ಟನ್ ದಾಸ್ ಸುಖಾಸುಮ್ಮನೆ ಕೆಣಕಲು ಮುಂದಾಗಿದ್ದಾರೆ. ಇದಕ್ಕಾಗಿ ಪಂತ್ ಅನ್ನು ಗುರಿಯಾಗಿಸಿ ಚೆಂಡನ್ನು ಎಸೆದಿದ್ದಾರೆ. ಹೀಗೆ ಕ್ರೀಸ್​ನಲ್ಲಿರುವ ತನ್ನನ್ನು ಗುರಿಯಾಗಿಸಿ ಚೆಂಡೆಸೆಯುತ್ತಿರುವುದನ್ನು ಗಮನಿಸಿದ ರಿಷಭ್, ಲಿಟ್ಟನ್ ದಾಸ್ ಅವರನ್ನು ಪ್ರಶ್ನಿಸಿದ್ದಾರೆ.

  • ಅವನನ್ನು ನೋಡಿ ಚೆಂಡೆಸಿ… ನಂಗ್ಯಾಕೆ ಚೆಂಡನ್ನು ಎಸೆಯುತ್ತಿದ್ದೀಯಾ ಎಂದು ರಿಷಭ್ ಪಂತ್ ಕೇಳಿದ್ದಾರೆ.
  • ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಲಿಟ್ಟನ್ ದಾಸ್… ವಿಕೆಟ್ ಮುಂದಿದೆ… ಅದಕ್ಕೆ ಎಸೀತಿದ್ದೀನಿ ಎಂಬ ಉತ್ತರ ನೀಡಿದ್ದಾರೆ.

ಇದೀಗ ಲಿಟ್ಟನ್ ದಾಸ್ ಹಾಗೂ ರಿಷಭ್ ಪಂತ್ ನಡುವಣ ಈ ವಿಡಿಯೋ ವೈರಲ್ ಆಗಿದೆ. ಇತ್ತ ಪಂತ್ ಕೂಡ ವಿಕೆಟ್ ಕೀಪರ್ ಆಗಿರುವುದರಿಂದ ಲಿಟ್ಟನ್ ದಾಸ್ ಬ್ಯಾಟಿಂಗ್​ಗೆ ಬಂದಾಗ ಈ ವಾಕ್ಸಮರ ಮುಂದರೆಯುವ ಸಾಧ್ಯತೆಯಿದೆ.

ರಿಷಭ್ ಪಂತ್-ಲಿಟ್ಟನ್ ದಾಸ್ ವಿಡಿಯೋ:

ಉತ್ತಮ ಸ್ಥಿತಿಯಲ್ಲಿ ಟೀಮ್ ಇಂಡಿಯಾ:

ಆರಂಭಿಕ ಆಘಾತದ ಹೊರತಾಗಿಯೂ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ ಉತ್ತಮ ಸ್ಥಿತಿಗೆ ತಲುಪಿದೆ. 4ನೇ ವಿಕೆಟ್​ಗೆ ಜೊತೆಯಾದ ಯಶಸ್ವಿ ಜೈಸ್ವಾಲ್ (37) ಹಾಗೂ ರಿಷಭ್ ಪಂತ್ (33) 54 ರನ್​ಗಳ ಜೊತೆಯಾಟವಾಡಿದ್ದು, ಈ ಮೂಲಕ ಭಾರತ ತಂಡವು ಮೊದಲ ಸೆಷನ್ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 88 ರನ್ ಕಲೆಹಾಕಿದೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್