AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ನಂಗ್ಯಾಕೆ ಹೊಡೀತಿಯಾ… ಪಂತ್-ದಾಸ್ ನಡುವೆ ವಾಕ್ಸಮರ

India vs Bangladesh, 1st Test: ಭಾರತದ ವಿರುದ್ಧದ ಮೊದಲ ಟೆಸ್ಟ್​ನ ಫಸ್ಟ್ ಸೆಷನ್​ನಲ್ಲಿ ಯುವ ವೇಗಿ ಹಸನ್ ಮಹಮೂದ್ ಭರ್ಜರಿ ಬೌಲಿಂಗ್ ಪ್ರದರ್ಶಿಸಿದ್ದಾರೆ. ರೋಹಿತ್ ಶರ್ಮಾ, ಶುಭ್​ಮನ್ ಗಿಲ್ ಹಾಗೂ ವಿರಾಟ್ ಕೊಹ್ಲಿಯ ವಿಕೆಟ್ ಕಬಳಿಸಿರುವ ಹಸನ್ ಬಾಂಗ್ಲಾ ತಂಡಕ್ಕೆ ಆರಂಭಿಕ ಯಶಸ್ಸು ತಂದುಕೊಟ್ಟಿದ್ದಾರೆ. ಆದರೆ ಬಳಿಕ ಟೀಮ್ ಇಂಡಿಯಾ ಪರ ರಿಷಭ್ ಪಂತ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

IND vs BAN: ನಂಗ್ಯಾಕೆ ಹೊಡೀತಿಯಾ... ಪಂತ್-ದಾಸ್ ನಡುವೆ ವಾಕ್ಸಮರ
Rishabh Pant - Litton Das
ಝಾಹಿರ್ ಯೂಸುಫ್
|

Updated on: Sep 19, 2024 | 12:01 PM

Share

ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಮೊದಲ ಟೆಸ್ಟ್ ಪಂದ್ಯದ ಮೊದಲ ಸೆಷನ್​ನಲ್ಲೇ ವಾಕ್ಸಮರ ಶುರುವಾಗಿದೆ. ಅದು ಸಹ ಇಬ್ಬರು ವಿಕೆಟ್​ ಕೀಪರ್​ಗಳ ನಡುವೆ ಎಂಬುದೇ ವಿಶೇಷ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯಲಿಲ್ಲ.

ನಾಯಕ ರೋಹಿತ್ ಶರ್ಮಾ 6 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶುಭ್​ಮನ್ ಗಿಲ್ ಸೊನ್ನೆ ಸುತ್ತಿದರು. ಇನ್ನು ವಿರಾಟ್ ಕೊಹ್ಲಿ (6) ಕೂಡ ಬಂದ ವೇಗದದಲ್ಲೇ ಪೆವಿಲಿಯನ್​ಗೆ ಹಿಂತಿರುಗಿದರು.

ಈ ಹಂತದಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ತಂಡದ ಆರಂಭಿಕ ಆಘಾತವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೇ ಆತ್ಮ ವಿಶ್ವಾಸದಿಂದಲೇ ಬ್ಯಾಟ್ ಬೀಸಿದ ಪಂತ್ ಆಕರ್ಷಕ ಹೊಡೆತಗಳ ಮೂಲಕ ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ್ದರು.

ಇತ್ತ ರಿಷಭ್ ಪಂತ್ ಅಬ್ಬರಿಸುತ್ತಿರುವುದನ್ನು ಗಮನಿಸಿದ ಬಾಂಗ್ಲಾದೇಶ್ ತಂಡದ ವಿಕೆಟ್ ಕೀಪರ್ ಲಿಟ್ಟನ್ ದಾಸ್ ಸುಖಾಸುಮ್ಮನೆ ಕೆಣಕಲು ಮುಂದಾಗಿದ್ದಾರೆ. ಇದಕ್ಕಾಗಿ ಪಂತ್ ಅನ್ನು ಗುರಿಯಾಗಿಸಿ ಚೆಂಡನ್ನು ಎಸೆದಿದ್ದಾರೆ. ಹೀಗೆ ಕ್ರೀಸ್​ನಲ್ಲಿರುವ ತನ್ನನ್ನು ಗುರಿಯಾಗಿಸಿ ಚೆಂಡೆಸೆಯುತ್ತಿರುವುದನ್ನು ಗಮನಿಸಿದ ರಿಷಭ್, ಲಿಟ್ಟನ್ ದಾಸ್ ಅವರನ್ನು ಪ್ರಶ್ನಿಸಿದ್ದಾರೆ.

  • ಅವನನ್ನು ನೋಡಿ ಚೆಂಡೆಸಿ… ನಂಗ್ಯಾಕೆ ಚೆಂಡನ್ನು ಎಸೆಯುತ್ತಿದ್ದೀಯಾ ಎಂದು ರಿಷಭ್ ಪಂತ್ ಕೇಳಿದ್ದಾರೆ.
  • ಇದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಲಿಟ್ಟನ್ ದಾಸ್… ವಿಕೆಟ್ ಮುಂದಿದೆ… ಅದಕ್ಕೆ ಎಸೀತಿದ್ದೀನಿ ಎಂಬ ಉತ್ತರ ನೀಡಿದ್ದಾರೆ.

ಇದೀಗ ಲಿಟ್ಟನ್ ದಾಸ್ ಹಾಗೂ ರಿಷಭ್ ಪಂತ್ ನಡುವಣ ಈ ವಿಡಿಯೋ ವೈರಲ್ ಆಗಿದೆ. ಇತ್ತ ಪಂತ್ ಕೂಡ ವಿಕೆಟ್ ಕೀಪರ್ ಆಗಿರುವುದರಿಂದ ಲಿಟ್ಟನ್ ದಾಸ್ ಬ್ಯಾಟಿಂಗ್​ಗೆ ಬಂದಾಗ ಈ ವಾಕ್ಸಮರ ಮುಂದರೆಯುವ ಸಾಧ್ಯತೆಯಿದೆ.

ರಿಷಭ್ ಪಂತ್-ಲಿಟ್ಟನ್ ದಾಸ್ ವಿಡಿಯೋ:

ಉತ್ತಮ ಸ್ಥಿತಿಯಲ್ಲಿ ಟೀಮ್ ಇಂಡಿಯಾ:

ಆರಂಭಿಕ ಆಘಾತದ ಹೊರತಾಗಿಯೂ ಟೀಮ್ ಇಂಡಿಯಾ ಭೋಜನಾ ವಿರಾಮದ ವೇಳೆಗೆ ಉತ್ತಮ ಸ್ಥಿತಿಗೆ ತಲುಪಿದೆ. 4ನೇ ವಿಕೆಟ್​ಗೆ ಜೊತೆಯಾದ ಯಶಸ್ವಿ ಜೈಸ್ವಾಲ್ (37) ಹಾಗೂ ರಿಷಭ್ ಪಂತ್ (33) 54 ರನ್​ಗಳ ಜೊತೆಯಾಟವಾಡಿದ್ದು, ಈ ಮೂಲಕ ಭಾರತ ತಂಡವು ಮೊದಲ ಸೆಷನ್ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 88 ರನ್ ಕಲೆಹಾಕಿದೆ.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ