AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ಚೆನ್ನೈಗೆ ಬಂದಿಳಿದ ಬಾಂಗ್ಲಾದೇಶ ತಂಡ

IND vs BAN: ನಜ್ಮುಲ್ ಹಸನ್ ಶಾಂಟೊ ನಾಯಕತ್ವದ 15 ಸದಸ್ಯರ ಬಾಂಗ್ಲಾದೇಶ ಪಡೆ ಭಾರತಕ್ಕೆ ಕಾಲಿಟ್ಟಿದೆ. ಇಂದು ಮುಂಜಾನೆ ಡಾಕಾದಿಂದ ವಿಮಾನವೇರಿದ್ದ ಬಾಂಗ್ಲಾದೇಶ ತಂಡ ಇದೀಗ ಚೆನ್ನೈಗೆ ಬಂದಿಳಿದೆ. ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಈಗಾಗಲೇ ತನ್ನ ತಯಾರಿಯನ್ನು ಆರಂಭಿಸಿದ್ದು, ಈಗ ಚೆನ್ನೈಗೆ ಬಂದಿಳಿದಿರುವ ಬಾಂಗ್ಲಾದೇಶ ತಂಡ ನಾಳೆಯಿಂದ ತನ್ನ ಅಭ್ಯಾಸ ಆರಂಭಿಸಲಿದೆ.

IND vs BAN: ಭಾರತ ವಿರುದ್ಧದ ಟೆಸ್ಟ್ ಸರಣಿಗಾಗಿ ಚೆನ್ನೈಗೆ ಬಂದಿಳಿದ ಬಾಂಗ್ಲಾದೇಶ ತಂಡ
ಬಾಂಗ್ಲಾದೇಶ ತಂಡ
Follow us
ಪೃಥ್ವಿಶಂಕರ
|

Updated on:Sep 15, 2024 | 7:58 PM

ಟೀಂ ಇಂಡಿಯಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿ ಹಾಗೂ ಮೂರು ಪಂದ್ಯಗಳ ಟಿ20 ಸರಣಿಗಾಗಿ ಬಾಂಗ್ಲಾದೇಶ ತಂಡ ಚೆನ್ನೈಗೆ ಬಂದಿಳಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಸೆಪ್ಟೆಂಬರ್ 19 ರಿಂದ ಇದೇ ಚೆನ್ನೈನ ಎಂಎ ಚಿದಂಬರಂ ಮೈದಾನದಲ್ಲಿ ಆರಂಭವಾಗಲಿದೆ. ಹೀಗಾಗಿ ನಜ್ಮುಲ್ ಹಸನ್ ಶಾಂಟೊ ನಾಯಕತ್ವದ 15 ಸದಸ್ಯರ ಬಾಂಗ್ಲಾದೇಶ ಪಡೆ ಭಾರತಕ್ಕೆ ಕಾಲಿಟ್ಟಿದೆ. ಇಂದು ಮುಂಜಾನೆ ಡಾಕಾದಿಂದ ವಿಮಾನವೇರಿದ್ದ ಬಾಂಗ್ಲಾದೇಶ ತಂಡ ಇದೀಗ ಚೆನ್ನೈಗೆ ಬಂದಿಳಿದೆ. ಮೊದಲ ಟೆಸ್ಟ್ ಪಂದ್ಯಕ್ಕಾಗಿ ಟೀಂ ಇಂಡಿಯಾ ಈಗಾಗಲೇ ತನ್ನ ತಯಾರಿಯನ್ನು ಆರಂಭಿಸಿದ್ದು, ಈಗ ಚೆನ್ನೈಗೆ ಬಂದಿಳಿದಿರುವ ಬಾಂಗ್ಲಾದೇಶ ತಂಡ ನಾಳೆಯಿಂದ ತನ್ನ ಅಭ್ಯಾಸ ಆರಂಭಿಸಲಿದೆ.

ಬಾಂಗ್ಲಾದೇಶ ತಂಡ ಇತ್ತೀಚೆಗಷ್ಟೇ ಪಾಕಿಸ್ತಾನವನ್ನು ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಹೀನಾಯವಾಗಿ ಮಣಿಸಿತ್ತು. ಬಲಿಷ್ಠ ಪಾಕಿಸ್ತಾನ ವಿರುದ್ಧ ಸಾಂಘೀಕ ಹೋರಾಟ ನೀಡಿದ್ದ ಬಾಂಗ್ಲಾದೇಶ ತಂಡ ಮೊಟ್ಟ ಮೊದಲ ಬಾರಿಗೆ ಪಾಕಿಸ್ತಾನದ ವಿರುದ್ಧ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತು. ಹೀಗಾಗಿ ಬಾಂಗ್ಲಾದೇಶ ತಂಡದ ಆತ್ಮವಿಶ್ವಾಸ ಹೆಚ್ಚಿದ್ದು, ಒಂದು ವೇಳೆ ಟೀಂ ಇಂಡಿಯಾ ಪ್ರವಾಸಿ ತಂಡವನ್ನು ಕಡೆಗಣಿಸಿದರೆ ಸೋಲು ಕಟ್ಟಿಟ್ಟ ಬುತ್ತಿ.

ಆತ್ಮವಿಶ್ವಾಸ ಖಂಡಿತವಾಗಿಯೂ ಹೆಚ್ಚಿದೆ

ಇನ್ನು ಭಾರತಕ್ಕೆ ಬಂದಿಳಿಯುವುದಕ್ಕು ಮುನ್ನ ಬಾಂಗ್ಲಾದೇಶದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹಸನ್ ಶಾಂಟೊ, ಟೆಸ್ಟ್ ಸರಣಿಯಲ್ಲಿ ತಂಡದಿಂದ ಉತ್ತಮ ಪ್ರದರ್ಶನ ನೀಡುವ ಭರವಸೆ ವ್ಯಕ್ತಪಡಿಸಿದರು. ‘ಇದು ಖಂಡಿತವಾಗಿಯೂ ನಮಗೆ ಅತ್ಯಂತ ಸವಾಲಿನ ಸರಣಿಯಾಗಿದೆ. ಉತ್ತಮ ಸರಣಿಯ ನಂತರ (ಪಾಕಿಸ್ತಾನ ವಿರುದ್ಧ), ತಂಡ ಮತ್ತು ದೇಶದ ಜನರ ಆತ್ಮವಿಶ್ವಾಸ ಖಂಡಿತವಾಗಿಯೂ ಹೆಚ್ಚಿದೆ. ಪ್ರತಿಯೊಂದು ಸರಣಿಯೂ ಒಂದು ಅವಕಾಶ. ನಾವು ಎರಡೂ ಪಂದ್ಯಗಳನ್ನು ಗೆಲ್ಲಲು ಆಡುತ್ತೇವೆ. ಟೀಂ ಇಂಡಿಯಾ ಶ್ರೇಯಾಂಕದಲ್ಲಿ ನಮಗಿಂತ ಹೆಚ್ಚು ಮುಂದಿದೆ. ಆದರೆ ನಾವು ಇತ್ತೀಚೆಗೆ ಉತ್ತಮ ಪ್ರದರ್ಶನ ನೀಡಿದ್ದೇವೆ. ಐದು ದಿನ ಚೆನ್ನಾಗಿ ಆಡುವುದು ನಮ್ಮ ಗುರಿ ಎಂದರು.

ಅಜೇಯ ಟೀಂ ಇಂಡಿಯಾ

ಭಾರತ ಮತ್ತು ಬಾಂಗ್ಲಾದೇಶ ನಡುವೆ ಇದುವರೆಗೆ ಒಟ್ಟು 13 ಟೆಸ್ಟ್ ಪಂದ್ಯಗಳು ನಡೆದಿದ್ದು, ಅದರಲ್ಲಿ ಭಾರತ 11 ಪಂದ್ಯಗಳನ್ನು ಗೆದ್ದಿದೆ. ಉಳಿದಂತೆ 2 ಟೆಸ್ಟ್ ಪಂದ್ಯಗಳು ಡ್ರಾ ಆಗಿವೆ. ಅಂದರೆ ಬಾಂಗ್ಲಾದೇಶ ತಂಡಕ್ಕೆ ಇಲ್ಲಿಯವರೆಗೆ ಭಾರತದ ವಿರುದ್ಧ ಟೆಸ್ಟ್ ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ.

ಟೆಸ್ಟ್ ಸರಣಿಗೆ ಬಾಂಗ್ಲಾದೇಶ ತಂಡ:

ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಜಾಕಿರ್ ಹಸನ್, ಮೊಮಿನುಲ್ ಹಕ್, ಮುಶ್ಫಿಕರ್ ರಹೀಮ್, ಶಾದ್ಮನ್ ಇಸ್ಲಾಂ, ಶಕೀಬ್ ಅಲ್ ಹಸನ್, ಮೆಹದಿ ಹಸನ್ ಮಿರಾಜ್, ಝಾಕರ್ ಅಲಿ ಅನಿಕ್, ತಸ್ಕಿನ್ ಅಹ್ಮದ್, ಲಿಟನ್ ದಾಸ್, ಹಸನ್ ಮಹಮೂದ್, ತೈಜುಲ್ ಇಸ್ಲಾಂ, ಮಹ್ಮುದುಲ್ ಹಸನ್ ಜಾಯ್, ನಹಿದ್ ರಾಣಾ, ಖಾಲಿದ್ ಅಹ್ಮದ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:29 pm, Sun, 15 September 24

ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ಹುಟ್ಟುಹಬ್ಬದ ದಿನವೇ ಕಣ್ಣೀರು ಹಾಕಿದ ನಟಿ ರಾಗಿಣಿ: ಕಾರಣ?
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ತಮನ್ನಾ ವಿವಾದದಲ್ಲಿ ಯಶ್ ಹೆಸರು ಹೇಳಿದ ನಟಿ ಕಾರುಣ್ಯ ರಾಮ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಇ-ಖಾತಾ ಬಗ್ಗೆ ಮಹತ್ವದ ಮಾಹಿತಿ ನೀಡಿದ ಡಿಕೆ ಶಿವಕುಮಾರ್
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
ಬೆಂಗಳೂರಿನಲ್ಲಿ ಫುಟ್ ಪಾತ್ ಅಂಗಡಿ ತೆರವುಗೊಳಿಸಲು ನಿರ್ಧಾರ: ಡಿಕೆಶಿ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
​ ಕ್ರಿಪ್ಟೋ ಕರೆನ್ಸಿ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚನೆ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಝಾನ್ಸಿಯಲ್ಲಿ ಬಿರುಗಾಳಿಯ ಹೊಡೆತಕ್ಕೆ 70ಕ್ಕೂ ಹೆಚ್ಚು ಗಿಳಿಗಳು ಬಲಿ
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಎಲ್ಲ ಪಕ್ಷಗಳ ಮುಖ್ಯಮಂತ್ರಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ