AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ ಮೊದಲು ಬೌಲಿಂಗ್; ನಾಯಕನಿಲ್ಲದೆ ಕಣಕ್ಕಿಳಿದ ಬಾಂಗ್ಲಾ; ಉಭಯ ತಂಡಗಳು ಹೀಗಿವೆ

IND vs BAN, ICC World Cup 2023: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ 17ನೇ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

IND vs BAN: ಭಾರತ ಮೊದಲು ಬೌಲಿಂಗ್; ನಾಯಕನಿಲ್ಲದೆ ಕಣಕ್ಕಿಳಿದ ಬಾಂಗ್ಲಾ; ಉಭಯ ತಂಡಗಳು ಹೀಗಿವೆ
ಭಾರತ- ಬಾಂಗ್ಲಾದೇಶ
ಪೃಥ್ವಿಶಂಕರ
|

Updated on:Oct 19, 2023 | 2:50 PM

Share

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಿನ ವಿಶ್ವಕಪ್ (ICC World Cup 2023) 17ನೇ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯವು ಐತಿಹಾಸಿಕವಾಗಿದ್ದು, ಬಾಂಗ್ಲಾದೇಶ ತಂಡ ಬರೋಬ್ಬರಿ 25 ವರ್ಷಗಳ ಬಳಿಕ ಟೀಂ ಇಂಡಿಯಾ (Team India) ವಿರುದ್ಧ ಭಾರತದ ನೆಲದಲ್ಲಿ ಏಕದಿನ ಪಂದ್ಯ ಆಡುತ್ತಿದೆ. ಬಾಂಗ್ಲಾದೇಶ 1998 ರಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ಟೀಂ ಇಂಡಿಯಾ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವನ್ನು ಆಡಿತ್ತು.

ಟಾಸ್ ಬಳಿಕ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾ ಎಂದಿನಂತೆ ತನ್ನ ಗೆಲುವಿನ ಸಂಯೋಜನೆಯನ್ನು ಮುಂದುವರೆಸಿದೆ. ಅಂದರೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಬಾಂಗ್ಲಾದೇಶ ತಂಡದಲ್ಲಿ ಬದಲಾವಣೆಯಾಗಿದ್ದು,ಇಂಜುರಿಯಿಂದ ಬಳಲುತ್ತಿರುವ ಖಾಯಂ ನಾಯಕ ಶಕೀಬ್ ಅಲ್ ಹಸನ್ ಬದಲಿಗೆ ನಜ್ಮುಲ್ ಹೊಸೈನ್ ಶಾಂಟೊ ನಾಯಕತ್ವ ವಹಿಸಿದ್ದಾರೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲಿಯೂ ತಸ್ಕಿನ್ ಅಹ್ಮದ್ ಬದಲಿಗೆ ನಸುಮ್ ಅಹ್ಮದ್ ಅವಕಾಶ ಪಡೆದಿದ್ದಾರೆ.

ಬಾಂಗ್ಲಾದೇಶ ತಂಡ: ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಲಿಟನ್ ದಾಸ್, ತಂಝೀದ್ ಹಸನ್, ಮೆಹದಿ ಹಸನ್ ಮಿರಾಜ್, ತೌಹೀದ್ ಹೃದಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರಹಮಾನ್ ಮತ್ತು ಶರೀಫುಲ್ ಇಸ್ಲಾಂ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

Published On - 2:36 pm, Thu, 19 October 23

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ