AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಭಾರತ ಮೊದಲು ಬೌಲಿಂಗ್; ನಾಯಕನಿಲ್ಲದೆ ಕಣಕ್ಕಿಳಿದ ಬಾಂಗ್ಲಾ; ಉಭಯ ತಂಡಗಳು ಹೀಗಿವೆ

IND vs BAN, ICC World Cup 2023: ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ವಿಶ್ವಕಪ್ 17ನೇ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.

IND vs BAN: ಭಾರತ ಮೊದಲು ಬೌಲಿಂಗ್; ನಾಯಕನಿಲ್ಲದೆ ಕಣಕ್ಕಿಳಿದ ಬಾಂಗ್ಲಾ; ಉಭಯ ತಂಡಗಳು ಹೀಗಿವೆ
ಭಾರತ- ಬಾಂಗ್ಲಾದೇಶ
ಪೃಥ್ವಿಶಂಕರ
|

Updated on:Oct 19, 2023 | 2:50 PM

Share

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ (India vs Bangladesh) ನಡುವಿನ ವಿಶ್ವಕಪ್ (ICC World Cup 2023) 17ನೇ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪುಣೆಯಲ್ಲಿ ನಡೆಯುತ್ತಿರುವ ಈ ಪಂದ್ಯವು ಐತಿಹಾಸಿಕವಾಗಿದ್ದು, ಬಾಂಗ್ಲಾದೇಶ ತಂಡ ಬರೋಬ್ಬರಿ 25 ವರ್ಷಗಳ ಬಳಿಕ ಟೀಂ ಇಂಡಿಯಾ (Team India) ವಿರುದ್ಧ ಭಾರತದ ನೆಲದಲ್ಲಿ ಏಕದಿನ ಪಂದ್ಯ ಆಡುತ್ತಿದೆ. ಬಾಂಗ್ಲಾದೇಶ 1998 ರಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ಟೀಂ ಇಂಡಿಯಾ ವಿರುದ್ಧ ಕೊನೆಯ ಬಾರಿಗೆ ಏಕದಿನ ಪಂದ್ಯವನ್ನು ಆಡಿತ್ತು.

ಟಾಸ್ ಬಳಿಕ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಕೂಡ ಹೊರಬಿದ್ದಿದ್ದು, ಟೀಂ ಇಂಡಿಯಾ ಎಂದಿನಂತೆ ತನ್ನ ಗೆಲುವಿನ ಸಂಯೋಜನೆಯನ್ನು ಮುಂದುವರೆಸಿದೆ. ಅಂದರೆ ತಂಡದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಆದರೆ ಬಾಂಗ್ಲಾದೇಶ ತಂಡದಲ್ಲಿ ಬದಲಾವಣೆಯಾಗಿದ್ದು,ಇಂಜುರಿಯಿಂದ ಬಳಲುತ್ತಿರುವ ಖಾಯಂ ನಾಯಕ ಶಕೀಬ್ ಅಲ್ ಹಸನ್ ಬದಲಿಗೆ ನಜ್ಮುಲ್ ಹೊಸೈನ್ ಶಾಂಟೊ ನಾಯಕತ್ವ ವಹಿಸಿದ್ದಾರೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲಿಯೂ ತಸ್ಕಿನ್ ಅಹ್ಮದ್ ಬದಲಿಗೆ ನಸುಮ್ ಅಹ್ಮದ್ ಅವಕಾಶ ಪಡೆದಿದ್ದಾರೆ.

ಬಾಂಗ್ಲಾದೇಶ ತಂಡ: ನಜ್ಮುಲ್ ಹುಸೇನ್ ಶಾಂಟೊ (ನಾಯಕ), ಲಿಟನ್ ದಾಸ್, ತಂಝೀದ್ ಹಸನ್, ಮೆಹದಿ ಹಸನ್ ಮಿರಾಜ್, ತೌಹೀದ್ ಹೃದಯ್, ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ಮಹಮ್ಮದುಲ್ಲಾ, ನಸುಮ್ ಅಹ್ಮದ್, ಹಸನ್ ಮಹಮೂದ್, ಮುಸ್ತಫಿಜುರ್ ರಹಮಾನ್ ಮತ್ತು ಶರೀಫುಲ್ ಇಸ್ಲಾಂ.

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

Published On - 2:36 pm, Thu, 19 October 23

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್