AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: 2ನೇ ಟಿ20 ಪಂದ್ಯಕ್ಕಾಗಿ ದೆಹಲಿಗೆ ಬಂದಿಳಿದ ಟೀಂ ಇಂಡಿಯಾ

IND vs BAN: ಬಾಂಗ್ಲಾದೇಶ ವಿರುದ್ಧ ಗ್ವಾಲಿಯರ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದ ಬಳಿಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಸೋಮವಾರ ನವದೆಹಲಿಗೆ ಬಂದಿಳಿದಿದೆ. ಉಭಯ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇದೇ ಬುಧವಾರ ನಡೆಯಲಿದೆ.

IND vs BAN: 2ನೇ ಟಿ20 ಪಂದ್ಯಕ್ಕಾಗಿ ದೆಹಲಿಗೆ ಬಂದಿಳಿದ ಟೀಂ ಇಂಡಿಯಾ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Oct 07, 2024 | 6:43 PM

Share

ಬಾಂಗ್ಲಾದೇಶ ವಿರುದ್ಧ ಗ್ವಾಲಿಯರ್‌ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಗೆಲುವು ಸಾಧಿಸಿದ ಬಳಿಕ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡ ಸೋಮವಾರ ನವದೆಹಲಿಗೆ ಬಂದಿಳಿದಿದೆ. ಉಭಯ ತಂಡಗಳ ನಡುವಿನ ಎರಡನೇ ಟಿ20 ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇದೇ ಬುಧವಾರ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ದೆಹಲಿಗೆ ಪ್ರಯಾಣ ಬೆಳೆಸಿದ್ದು, ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಪ್ರಮಾಣದ ಅಭಿಮಾನಿಗಳು ತಂಡದ ಆಟಗಾರರನ್ನು ಸ್ವಾಗತಿಸಿದರು. ಆ ಬಳಿಕ ತಂಡದ ಸದಸ್ಯರು ಹೋಟೆಲ್‌ಗೆ ತೆರಳಿದರು.

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬುಧವಾರ ನಡೆಯಲಿರುವ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಲು ಬಯಸಿದೆ. ದೆಹಲಿಯಲ್ಲಿ ಉಭಯ ತಂಡಗಳ ನಡುವೆ ಹೆಚ್ಚಿನ ಸ್ಕೋರಿಂಗ್ ಪಂದ್ಯವನ್ನು ಕಾಣಬಹುದು ಎಂದು ಊಹಿಲಾಗಿದೆ. ಗ್ವಾಲಿಯರ್‌ನಲ್ಲಿ ನಡೆದ ಮೊದಲ ಪಂದ್ಯವನ್ನು ಏಳು ವಿಕೆಟ್‌ಗಳಿಂದ ಗೆದ್ದಿರುವ ಭಾರತ ತಂಡ ಈಗಾಗಲೇ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಭಾರತಕ್ಕೆ ಏಕಪಕ್ಷೀಯ ಗೆಲುವು

ಬಾಂಗ್ಲಾದೇಶ ವಿರುದ್ಧದ ಮೊದಲ ಪಂದ್ಯದಲ್ಲಿ ಭಾರತ ತಂಡ ಎಲ್ಲಾ ವಿಭಾಗದಲ್ಲೂ ಆಕರ್ಷಕ ಪ್ರದರ್ಶನ ನೀಡಿತ್ತು. ವರುಣ್ ಚಕ್ರವರ್ತಿ ಮತ್ತು ಅರ್ಷದೀಪ್ ಸಿಂಗ್ ಅವರ ಮಾರಕ ಬೌಲಿಂಗ್ ಪ್ರದರ್ಶನದಿಂದಾಗಿ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶವನ್ನು 19.5 ಓವರ್‌ಗಳಲ್ಲಿ 127 ರನ್‌ಗಳಿಗೆ ಆಲೌಟ್ ಮಾಡಿತು. ಇದಾದ ಬಳಿಕ ಅನುಭವಿ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ನಾಯಕ ಸೂರ್ಯಕುಮಾರ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ಭಾರತ ತಂಡ 11.5 ಓವರ್‌ಗಳಲ್ಲಿ ಮೂರು ವಿಕೆಟ್‌ಗೆ 132 ರನ್ ಕಲೆಹಾಕಿ ಪಂದ್ಯವನ್ನು ಗೆದ್ದುಕೊಂಡಿತು. 16 ಎಸೆತಗಳಲ್ಲಿ ಐದು ಬೌಂಡರಿ ಹಾಗೂ 2 ಸಿಕ್ಸರ್ ನೆರವಿನಿಂದ 39 ರನ್ ಗಳಿಸಿ ಅಜೇಯರಾಗಿ ಉಳಿದ ಹಾರ್ದಿಕ್ ಭಾರತದ ಪರ ಗರಿಷ್ಠ ರನ್ ಗಳಿಸಿದರು. ಇನ್ನು ಬೌಲಿಂಗ್​ನಲ್ಲಿ ಅರ್ಷದೀಪ್ ಮತ್ತು ವರುಣ್ ತಲಾ ಮೂರು ವಿಕೆಟ್ ಪಡೆದರೆ, ಅರ್ಷದೀಪ್ ತಮ್ಮ ಅತ್ಯುತ್ತಮ ಬೌಲಿಂಗ್​ಗಾಗಿ ಪಂದ್ಯದ ಆಟಗಾರ ಪ್ರಶಸ್ತಿ ಕೂಡ ಪಡೆದರು.

ಟಿ20 ಸರಣಿಗೆ ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಿಯಾನ್ ಪರಾಗ್, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮಯಾಂಕ್ ಯಾದವ್, ಅರ್ಷದೀಪ್ ಸಿಂಗ್, ಜಿತೇಶ್ ಶರ್ಮಾ, ವರುಣ್ ಚಕ್ರವರ್ತಿ, ನಿತೀಶ್ ರೆಡ್ಡಿ, ಹರ್ಷಿತ್ ರಾಣಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ