AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಸಾಧ್ಯತೆ

India vs Bangladesh 2nd Test: ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆಯಾಗುವ ಸಾಧ್ಯತೆಯಿದೆ. ಅದರಂತೆ ಮೊದಲ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಮೊಹಮ್ಮದ್ ಸಿರಾಜ್ ಕಾನ್ಪುರ ಟೆಸ್ಟ್​ನಿಂದ ಹೊರಗುಳಿಯಬಹುದು. ಅಲ್ಲದೆ ಅವರ ಬದಲಿಗೆ ಸ್ಪಿನ್ನರ್​ ಒಬ್ಬರು ಕಣಕ್ಕಿಳಿಯುವ ಸಾಧ್ಯತೆಯಿದೆ.

ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಸಾಧ್ಯತೆ
Team India
ಝಾಹಿರ್ ಯೂಸುಫ್
|

Updated on: Sep 26, 2024 | 1:04 PM

Share

ಭಾರತ ಮತ್ತು ಬಾಂಗ್ಲಾದೇಶ್ ನಡುವಿನ 2ನೇ ಟೆಸ್ಟ್ ಪಂದ್ಯವು ಶುಕ್ರವಾರದಿಂದ (ಸೆ.26) ಶುರುವಾಗಲಿದೆ. ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ಕಣಕ್ಕಿಳಿಸಲಿದೆ. ಏಕೆಂದರೆ ಈ ಸರಣಿಯ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ದ ಮೂರು ಟೆಸ್ಟ್ ಪಂದ್ಯಗಳನ್ನಾಡಬೇಕಿದೆ. ಅದಕ್ಕೂ ಮುನ್ನ ಪ್ರಮುಖ ಸಮತೋಲಿತ ಆಡುವ ಬಳಗ ರೂಪಿಸುವ ಅನಿವಾರ್ಯತೆ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ಬಾಂಗ್ಲಾದೇಶ್ ವಿರುದ್ಧದ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಪ್ರಮುಖ ಆಟಗಾರರು ಕಣಕ್ಕಿಳಿಯಲಿದ್ದಾರೆ.

ಅದರಂತೆ ಇಲ್ಲಿ ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಮುಂದುವರೆಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಶುಭ್​ಮನ್ ಗಿಲ್ ಆಡುವುದು ಖಚಿತ. ಹಾಗೆಯೇ ನಾಲ್ಕನೇ ಕ್ರಮಾಂಕ ವಿರಾಟ್ ಕೊಹ್ಲಿಗೆ ಖಾಯಂ. ಐದನೇ ಸ್ಥಾನದಲ್ಲಿ ರಿಷಭ್ ಪಂತ್ ಬ್ಯಾಟ್ ಬೀಸಲಿದ್ದಾರೆ.

ಇನ್ನು ಆರನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್​ಗೆ ಮತ್ತೊಂದು ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ. ಇನ್ನು ಏಳನೇ ಮತ್ತು ಎಂಟನೇ ಕ್ರಮಾಂಕಗಳಲ್ಲಿ ಆಲ್​ರೌಂಡರ್​ಗಳಾಗಿ ರವೀಂದ್ರ ಜಡೇಜಾ ಹಾಗೂ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್​ಗೆ ಚಾನ್ಸ್ ಸಿಗುವ ಸಾಧ್ಯತೆಯಿದೆ.

ಇದನ್ನೂ ಓದಿ: IPL 2025: ಧೋನಿಯ ಸಂಭಾವನೆ ಕಡಿತ: ಅತೀ ಕಡಿಮೆ ಮೊತ್ತ ಪಡೆಯಲಿರುವ MSD

ಇಲ್ಲಿ ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸಿದರೆ, ಮೊಹಮ್ಮದ್ ಸಿರಾಜ್ ಅಥವಾ ಆಕಾಶ್ ದೀಪ್ ಸ್ಥಾನ ಕಳೆದುಕೊಳ್ಳಬಹುದು. ಏಕೆಂದರೆ ಗ್ರೀನ್ ಪಾರ್ಕ್​ ಮೈದಾನದ ಪಿಚ್ ಸ್ಪಿನ್ನರ್​ಗಳಿಗೆ ಸಹಕಾರಿಯಾಗುವ ನಿರೀಕ್ಷೆಯಿದೆ. ಹೀಗಾಗಿ ಮೊದಲ ಟೆಸ್ಟ್​ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡದ ಸಿರಾಜ್ ಬದಲಿಗೆ ಕುಲ್ದೀಪ್ ಯಾದವ್​ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಪ್ರಮುಖ ವೇಗಿಯಾಗಿ ಜಸ್​ಪ್ರೀತ್ ಬುಮ್ರಾ ಕಣಕ್ಕಿಳಿಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ….

  1. ಯಶಸ್ವಿ ಜೈಸ್ವಾಲ್
  2. ರೋಹಿತ್ ಶರ್ಮಾ
  3. ಶುಭ್​ಮನ್ ಗಿಲ್
  4. ವಿರಾಟ್ ಕೊಹ್ಲಿ
  5. ರಿಷಭ್ ಪಂತ್
  6. ಕೆಎಲ್ ರಾಹುಲ್
  7. ರವೀಂದ್ರ ಜಡೇಜಾ
  8. ರವಿಚಂದ್ರನ್ ಅಶ್ವಿನ್
  9. ಕುಲ್ದೀಪ್ ಯಾದವ್
  10. ಆಕಾಶ್ ದೀಪ್
  11. ಜಸ್​ಪ್ರೀತ್ ಬುಮ್ರಾ.

ಭಾರತ ಟೆಸ್ಟ್ ತಂಡ:

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ , ಆಕಾಶ್ ದೀಪ್ ಮತ್ತು ಯಶ್ ದಯಾಳ್*, ಧ್ರುವ್ ಜುರೆಲ್* (ವಿಕೆಟ್ ಕೀಪರ್), ಸರ್ಫರಾಝ್ ಖಾನ್*.

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ