AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN Test: ಬಾಂಗ್ಲಾದೇಶ್ ಸರಣಿಯಿಂದ ಜಡೇಜಾ ಔಟ್: ಹೊಸ ಆಟಗಾರನಿಗೆ ಅವಕಾಶ

Ravindra Jadeja: ಭಾರತ-ಬಾಂಗ್ಲಾದೇಶ್ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಡಿಸೆಂಬರ್ 4 ರಿಂದ ಶುರುವಾಗಲಿದ್ದು, ಇದಾದ ಬಳಿಕ ಡಿಸೆಂಬರ್ 14 ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

IND vs BAN Test: ಬಾಂಗ್ಲಾದೇಶ್ ಸರಣಿಯಿಂದ ಜಡೇಜಾ ಔಟ್: ಹೊಸ ಆಟಗಾರನಿಗೆ ಅವಕಾಶ
Ravindra Jadeja
TV9 Web
| Edited By: |

Updated on: Nov 26, 2022 | 11:01 PM

Share

India vs Bangladesh: ಭಾರತ-ಬಾಂಗ್ಲಾದೇಶ್ ನಡುವಣ ಏಕದಿನ ಹಾಗೂ ಟೆಸ್ಟ್ ಸರಣಿಯಿಂದ ಟೀಮ್ ಇಂಡಿಯಾದ (Team India) ಆಲ್​ರೌಂಡರ್ ರವೀಂದ್ರ ಜಡೇಜಾ (Ravindra Jadeja) ಹೊರಬಿದ್ದಿದ್ದಾರೆ. ಕಳೆದ ಏಷ್ಯಾಕಪ್​ ವೇಳೆ ಗಾಯಗೊಂಡಿದ್ದ ಜಡೇಜಾ ಮೊಣಕಾಲಿನ ಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಹೀಗಾಗಿ ಟಿ20 ವಿಶ್ವಕಪ್​ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಾಗ್ಯೂ ಬಾಂಗ್ಲಾ ವಿರುದ್ಧದ ಸರಣಿಯ ಮೂಲಕ ಜಡ್ಡು ಕಂಬ್ಯಾಕ್ ಮಾಡಲಿದ್ದಾರೆ ಎನ್ನಲಾಗಿತ್ತು. ಆದರೆ ಸಂಪೂರ್ಣ ಫಿಟ್​ ಆಗದ ಕಾರಣ ಅವರನ್ನು ಏಕದಿನ ತಂಡದ ಆಯ್ಕೆಗೆ ಪರಿಗಣಿಸಿರಲಿಲ್ಲ.

ಇದೀಗ ಟೆಸ್ಟ್ ಸರಣಿಯಿಂದಲೂ ರವೀಂದ್ರ ಜಡೇಜಾ ಹೊರಬಿದ್ದಿದ್ದಾರೆ. ಅಲ್ಲದೆ ಅವರ ಬದಲಿಗೆ ಉತ್ತರ ಪ್ರದೇಶದ ಆಟಗಾರ ಸೌರಭ್ ಕುಮಾರ್​ ಆಯ್ಕೆಯಾಗಲಿದ್ದಾರೆ ಎಂದು ವರದಿಯಾಗಿದೆ. ಹಾಗೆಯೇ ಹೆಚ್ಚುವರಿ ಆಟಗಾರನ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್​ಗೂ ಅವಕಾಶ ಸಿಗುವ ಸಾಧ್ಯತೆಯಿದೆ.

ಜಡೇಜಾ ಅವರು ಸಂಪೂರ್ಣ ಗುಣಮುಖರಾಗಿಲ್ಲ. ಹೀಗಾಗಿ ಟೆಸ್ಟ್ ಸರಣಿ ವೇಳೆಗೆ ಅವರು ಕಂಬ್ಯಾಕ್ ಮಾಡುವುದು ಅನುಮಾನ. ಅಲ್ಲದೆ ಮತ್ತಷ್ಟು ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರ ತಂಡ ಸಲಹೆ ನೀಡಿದೆ. ಹೀಗಾಗಿ ಟೆಸ್ಟ್ ತಂಡದ ಆಯ್ಕೆಗೂ ನಾವು ಜಡೇಜಾ ಅವರನ್ನು ಪರಿಗಣಿಸುತ್ತಿಲ್ಲ ಎಂದು ಆಯ್ಕೆ ಸಮಿತಿಯ ಸದಸ್ಯರೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ
Image
ODI World Cup Super League: ಏಕದಿನ ವಿಶ್ವಕಪ್ ಸೂಪರ್ ಲೀಗ್ ರ್‍ಯಾಂಕಿಂಗ್‌ ಪ್ರಕಟ
Image
Suryakumar Yadav: ಟಿ20 ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ಬರೆದ ಸೂರ್ಯಕುಮಾರ್ ಯಾದವ್
Image
BPL 2023: ಬಾಂಗ್ಲಾದೇಶ್ ಪ್ರೀಮಿಯರ್ ಲೀಗ್​ಗೆ ಭಾರತೀಯ ಆಟಗಾರ ಎಂಟ್ರಿ..!
Image
IPL 2023: 4 ವರ್ಷಗಳ ಬಳಿಕ ಐಪಿಎಲ್​ನತ್ತ ಜೋ ರೂಟ್..!

ಭಾರತ-ಬಾಂಗ್ಲಾದೇಶ್ ನಡುವಣ 3 ಪಂದ್ಯಗಳ ಏಕದಿನ ಸರಣಿಯು ಡಿಸೆಂಬರ್ 4 ರಿಂದ ಶುರುವಾಗಲಿದ್ದು, ಇದಾದ ಬಳಿಕ ಡಿಸೆಂಬರ್ 14 ರಿಂದ 2 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್ (ಉಪ ನಾಯಕ), ಶಿಖರ್ ಧವನ್, ವಿರಾಟ್ ಕೊಹ್ಲಿ, ರಜತ್ ಪಾಟೀದಾರ್, ಶ್ರೇಯಸ್ ಅಯ್ಯರ್, ರಾಹುಲ್ ತ್ರಿಪಾಠಿ, ರಿಷಭ್ ಪಂತ್ (ವಿಕೆಟ್‌ ಕೀಪರ್), ಇಶಾನ್ ಕಿಶನ್, ಶಾಬಾಜ್ ಅಹಮದ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ದೀಪಕ್ ಚಾಹರ್, ಕುಲದೀಪ್ ಸೇನ್.

ಭಾರತ-ಬಾಂಗ್ಲಾದೇಶ್ ಏಕದಿನ ಸರಣಿ ವೇಳಾಪಟ್ಟಿ:

  • ಡಿಸೆಂಬರ್- 4: ಮೊದಲ ಏಕದಿನ ಪಂದ್ಯ
  • ಡಿಸೆಂಬರ್- 7: ಎರಡನೇ ಏಕದಿನ ಪಂದ್ಯ
  • ಡಿಸೆಂಬರ್- 10: ಮೂರನೇ ಏಕದಿನ ಪಂದ್ಯ

ಭಾರತ-ಬಾಂಗ್ಲಾದೇಶ್ ಟೆಸ್ಟ್ ಸರಣಿ ವೇಳಾಪಟ್ಟಿ:

  • ಡಿಸೆಂಬರ್- 14: ಮೊದಲ ಟೆಸ್ಟ್ ಪಂದ್ಯ
  • ಡಿಸೆಂಬರ್- 22: ಎರಡನೇ ಟೆಸ್ಟ್ ಪಂದ್ಯ
Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ