AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಕಾನ್ಪುರ್​ಗೆ ಬಂದಿಳಿದ ಟೀಮ್ ಇಂಡಿಯಾ: ಇಲ್ಲಿದೆ ವಿಡಿಯೋ

India vs Bangladesh: ಚೆನ್ನೈನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿತ್ತು. ಈ ಗೆಲುವಿನೊಂದಿಗೆ ಟೀಮ್ ಇಂಡಿಯಾ ಎರಡು ಪಂದ್ಯಗಳ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆ ಸಾಧಿಸಿದೆ. ಇದೀಗ ಉಭಯ ತಂಡಗಳು ಎರಡನೇ ಟೆಸ್ಟ್ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದು, ಈ ಪಂದ್ಯವು ಸೆಪ್ಟೆಂಬರ್ 27 ರಿಂದ ಶುರುವಾಗಲಿದೆ.

ಝಾಹಿರ್ ಯೂಸುಫ್
|

Updated on: Sep 25, 2024 | 1:13 PM

Share

ಬಾಂಗ್ಲಾದೇಶ್ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕಾಗಿ ಭಾರತ ತಂಡವು ಕಾನ್ಪುರ್​ಗೆ ಬಂದಿಳಿದಿದೆ.  ಸೆಪ್ಟೆಂಬರ್ 27 ರಿಂದ ಶುರುವಾಗಲಿರುವ ಈ ಪಂದ್ಯವು ಕಾನ್ಪುರದ ಗ್ರೀನ್ ಪಾರ್ಕ್​ ಮೈದಾನದಲ್ಲಿ ನಡೆಯಲಿದೆ. ಚೆನ್ನೈನಿಂದ ವಿಮಾನದ ಮೂಲಕ ಆಗಮಿಸಿದ ಟೀಮ್ ಇಂಡಿಯಾದ ವಿಡಿಯೋವನ್ನು ಬಿಸಿಸಿಐ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದು, ಹಾಸ್ಯಮಯ ಸನ್ನಿವೇಶಗಳನ್ನು ಒಳಗೊಂಡಿರುವ ಈ ವಿಡಿಯೋದಲ್ಲಿ ಭಾರತೀಯ ಆಟಗಾರರು ಪರಸ್ಪರ ಕಾಲೆಳೆಯುವುದನ್ನು ಕಾಣಬಹುದು.

ಇನ್ನು ಚೆನ್ನೈನಲ್ಲಿ ನಡೆದ ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 280 ರನ್​ಗಳ ಅಮೋಘ ಗೆಲುವು ದಾಖಲಿಸಿರುವ ಟೀಮ್ ಇಂಡಿಯಾ, 2ನೇ ಪಂದ್ಯದಲ್ಲಿ ಗೆದ್ದರೆ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳಬಹುದು. ಅತ್ತ ಸರಣಿಯನ್ನು ಡ್ರಾ ನಲ್ಲಿ ಕೊನೆಗೊಳಿಸಬೇಕಿದ್ದರೆ ಬಾಂಗ್ಲಾದೇಶ್ ತಂಡವು ಕಾನ್ಪುರ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು. ಹೀಗಾಗಿ ಒಂದಾರ್ಥದಲ್ಲಿ ಈ ಪಂದ್ಯವು ಬಾಂಗ್ಲಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಪಂದ್ಯದ ಬಳಿಕ ಟೀಮ್ ಇಂಡಿಯಾ ಮೂರು ಪಂದ್ಯಗಳ ಟಿ20 ಸರಣಿಯನ್ನು ಸಹ ಆಡಲಿದೆ. ಈ ಸರಣಿಯು ಅಕ್ಟೋಬರ್ 7 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯವು ಮಧ್ಯಪ್ರದೇಶದ ಗ್ವಾಲಿಯರ್​ನಲ್ಲಿ ನಡೆಯಲಿದೆ. ಇನ್ನು ಅಕ್ಟೋಬರ್ 10 ರಂದು ಜರುಗಲಿರುವ 2ನೇ ಪಂದ್ಯಕ್ಕೆ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಈ ಸರಣಿಯ ಮೂರನೇ ಪಂದ್ಯವು ಅಕ್ಟೋಬರ್ 13 ರಂದು ಹೈದರಾಬಾದ್​ನಲ್ಲಿ ನಡೆಯಲಿದೆ.

ಈ ಪಂದ್ಯಗಳ ಮುಕ್ತಾಯದೊಂದಿಗೆ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಸರಣಿ ಮುಗಿಯಲಿದೆ. ಇದಾದ ಬಳಿಕ ಟೀಮ್ ಇಂಡಿಯಾ ನ್ಯೂಝಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲಿದ್ದು, ಈ ಸರಣಿಯು ಅಕ್ಟೋಬರ್ 16 ರಿಂದ ಶುರುವಾಗಲಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ