IND vs ENG: ಭಾರತದ ಗೆಲುವಿಗೆ ವಿಲನ್ ಆದ ವರುಣ! ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಡ್ರಾದಲ್ಲಿ ಅಂತ್ಯ

IND vs ENG: ನಾಟಿಂಗ್ ಹ್ಯಾಮ್​ನಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯವು ಮಳೆಯ ನಿರಂತರ ಹಸ್ತಕ್ಷೇಪದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

IND vs ENG: ಭಾರತದ ಗೆಲುವಿಗೆ ವಿಲನ್ ಆದ ವರುಣ! ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಡ್ರಾದಲ್ಲಿ ಅಂತ್ಯ
ನಾಟಿಂಗ್‌ಹ್ಯಾಮ್‌ನ ಹವಾಮಾನ
Follow us
| Updated By: ಪೃಥ್ವಿಶಂಕರ

Updated on:Aug 08, 2021 | 9:10 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಯಾರೂ ನಿರೀಕ್ಷಿಸದ ರೀತಿಯಲ್ಲಿ ಆರಂಭವಾಗಿದೆ. ನಾಟಿಂಗ್ ಹ್ಯಾಮ್​ನಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯವು ಮಳೆಯ ನಿರಂತರ ಹಸ್ತಕ್ಷೇಪದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಪಂದ್ಯದ ಕೊನೆಯ ದಿನವಾದ ಭಾನುವಾರ, ಆಗಸ್ಟ್ 8, ಭಾರತಕ್ಕೆ ಗೆಲ್ಲಲು 157 ರನ್ ಗಳ ಅಗತ್ಯವಿತ್ತು. ಆದರೆ ಮಳೆಯಿಂದಾಗಿ ಇಡೀ ದಿನ ಒಂದು ಚೆಂಡನ್ನು ಎಸೆಯಲು ಸಾಧ್ಯವಾಗಲಿಲ್ಲ ಮತ್ತು ಎರಡು ಸೆಷನ್‌ಗಳಿಗಾಗಿ ಕಾಯುತ್ತಿದ್ದ ನಂತರ, ಅಂಪೈರ್‌ಗಳು ದಿನದ ಆಟವನ್ನು ನಿಲ್ಲಿಸಲು ನಿರ್ಧರಿಸಿದರು. ಇದರೊಂದಿಗೆ ಪಂದ್ಯವು ಡ್ರಾದಲ್ಲಿ ಕೊನೆಗೊಂಡಿತು. ಈ ರೀತಿಯಾಗಿ, ಐದು ಪಂದ್ಯಗಳ ಸರಣಿಯಲ್ಲಿ ಯಾವುದೇ ತಂಡವು ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಈಗ ಆಗಸ್ಟ್ 12 ರಿಂದ ಲಾರ್ಡ್ಸ್‌ನಲ್ಲಿ ಎರಡನೇ ಟೆಸ್ಟ್‌ ಆರಂಭವಾಗಲಿದೆ.

ಆಗಸ್ಟ್ 4 ರಂದು ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಈ ಪಂದ್ಯದಲ್ಲಿ, ಪಂದ್ಯದ ಮೊದಲ ಮತ್ತು ನಾಲ್ಕನೇ ದಿನ ಮಾತ್ರ ಪೂರ್ಣವಾಗಿ ಆಡಲು ಸಾಧ್ಯವಾಯಿತು. ಆದರೆ ಎರಡನೇ ಮತ್ತು ಮೂರನೇ ದಿನ ಮಳೆಯು ಹೆಚ್ಚಿನ ಭಾಗವನ್ನು ನುಂಗಿ ಹಾಕಿತು. ಇದರಿಂದಾಗಿ ಈ ಪಂದ್ಯದ ಫಲಿತಾಂಶ ಬರಲು ಸಾಧ್ಯವಾಗಲಿಲ್ಲ . ಐದನೇ ದಿನ, ಎಲ್ಲಾ ಮುನ್ಸೂಚನೆಗಳನ್ನು ಹೊರತುಪಡಿಸಿ, ಬೆಳಿಗ್ಗೆಯಿಂದ ಮಳೆಯಾಯಿತು ಮತ್ತು ಆಟಗಾರರ ಜೊತೆಗೆ ಅಭಿಮಾನಿಗಳು ಕಾಯುತ್ತಿದ್ದರು. ಮಧ್ಯದಲ್ಲಿ ಒಮ್ಮೆ ಭರವಸೆ ಇತ್ತು. ಆದರೆ ನಾಟಿಂಗ್‌ಹ್ಯಾಮ್‌ನ ಹವಾಮಾನವು ಈ ಭರವಸೆಯನ್ನು ತೊಳೆದು ಹಾಕಿತು.

Published On - 9:08 pm, Sun, 8 August 21

ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಸರ್ಕಾರ ಅಸ್ಥಿರಗೊಳಿಸಲು ಇಡಿ ಬಳಕೆ: ಕೇಂದ್ರದ ವಿರುದ್ಧ ಡಿಕೆಸು ವಾಗ್ದಾಳಿ
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉದ್ಯೋಗ/ಶಿಕ್ಷಣದಲ್ಲಿ ಪಂಚಮಸಾಲಿ ಸಮಾಜಕ್ಕೆ 2 ಮೀಸಲಾತಿ ಬೇಕು: ಶ್ರೀಗಳು
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್