AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತದ ಗೆಲುವಿಗೆ ವಿಲನ್ ಆದ ವರುಣ! ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಡ್ರಾದಲ್ಲಿ ಅಂತ್ಯ

IND vs ENG: ನಾಟಿಂಗ್ ಹ್ಯಾಮ್​ನಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯವು ಮಳೆಯ ನಿರಂತರ ಹಸ್ತಕ್ಷೇಪದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿದೆ.

IND vs ENG: ಭಾರತದ ಗೆಲುವಿಗೆ ವಿಲನ್ ಆದ ವರುಣ! ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಡ್ರಾದಲ್ಲಿ ಅಂತ್ಯ
ನಾಟಿಂಗ್‌ಹ್ಯಾಮ್‌ನ ಹವಾಮಾನ
TV9 Web
| Edited By: |

Updated on:Aug 08, 2021 | 9:10 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಯಾರೂ ನಿರೀಕ್ಷಿಸದ ರೀತಿಯಲ್ಲಿ ಆರಂಭವಾಗಿದೆ. ನಾಟಿಂಗ್ ಹ್ಯಾಮ್​ನಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯವು ಮಳೆಯ ನಿರಂತರ ಹಸ್ತಕ್ಷೇಪದಿಂದಾಗಿ ಯಾವುದೇ ಫಲಿತಾಂಶವಿಲ್ಲದೆ ಕೊನೆಗೊಂಡಿದೆ. ಪಂದ್ಯದ ಕೊನೆಯ ದಿನವಾದ ಭಾನುವಾರ, ಆಗಸ್ಟ್ 8, ಭಾರತಕ್ಕೆ ಗೆಲ್ಲಲು 157 ರನ್ ಗಳ ಅಗತ್ಯವಿತ್ತು. ಆದರೆ ಮಳೆಯಿಂದಾಗಿ ಇಡೀ ದಿನ ಒಂದು ಚೆಂಡನ್ನು ಎಸೆಯಲು ಸಾಧ್ಯವಾಗಲಿಲ್ಲ ಮತ್ತು ಎರಡು ಸೆಷನ್‌ಗಳಿಗಾಗಿ ಕಾಯುತ್ತಿದ್ದ ನಂತರ, ಅಂಪೈರ್‌ಗಳು ದಿನದ ಆಟವನ್ನು ನಿಲ್ಲಿಸಲು ನಿರ್ಧರಿಸಿದರು. ಇದರೊಂದಿಗೆ ಪಂದ್ಯವು ಡ್ರಾದಲ್ಲಿ ಕೊನೆಗೊಂಡಿತು. ಈ ರೀತಿಯಾಗಿ, ಐದು ಪಂದ್ಯಗಳ ಸರಣಿಯಲ್ಲಿ ಯಾವುದೇ ತಂಡವು ಮುನ್ನಡೆ ಸಾಧಿಸಲು ಸಾಧ್ಯವಾಗಲಿಲ್ಲ. ಈಗ ಆಗಸ್ಟ್ 12 ರಿಂದ ಲಾರ್ಡ್ಸ್‌ನಲ್ಲಿ ಎರಡನೇ ಟೆಸ್ಟ್‌ ಆರಂಭವಾಗಲಿದೆ.

ಆಗಸ್ಟ್ 4 ರಂದು ಟ್ರೆಂಟ್ ಬ್ರಿಡ್ಜ್ ನಲ್ಲಿ ಆರಂಭವಾದ ಈ ಪಂದ್ಯದಲ್ಲಿ, ಪಂದ್ಯದ ಮೊದಲ ಮತ್ತು ನಾಲ್ಕನೇ ದಿನ ಮಾತ್ರ ಪೂರ್ಣವಾಗಿ ಆಡಲು ಸಾಧ್ಯವಾಯಿತು. ಆದರೆ ಎರಡನೇ ಮತ್ತು ಮೂರನೇ ದಿನ ಮಳೆಯು ಹೆಚ್ಚಿನ ಭಾಗವನ್ನು ನುಂಗಿ ಹಾಕಿತು. ಇದರಿಂದಾಗಿ ಈ ಪಂದ್ಯದ ಫಲಿತಾಂಶ ಬರಲು ಸಾಧ್ಯವಾಗಲಿಲ್ಲ . ಐದನೇ ದಿನ, ಎಲ್ಲಾ ಮುನ್ಸೂಚನೆಗಳನ್ನು ಹೊರತುಪಡಿಸಿ, ಬೆಳಿಗ್ಗೆಯಿಂದ ಮಳೆಯಾಯಿತು ಮತ್ತು ಆಟಗಾರರ ಜೊತೆಗೆ ಅಭಿಮಾನಿಗಳು ಕಾಯುತ್ತಿದ್ದರು. ಮಧ್ಯದಲ್ಲಿ ಒಮ್ಮೆ ಭರವಸೆ ಇತ್ತು. ಆದರೆ ನಾಟಿಂಗ್‌ಹ್ಯಾಮ್‌ನ ಹವಾಮಾನವು ಈ ಭರವಸೆಯನ್ನು ತೊಳೆದು ಹಾಕಿತು.

Published On - 9:08 pm, Sun, 8 August 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?