AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ತಂಡದ ಬಗ್ಗೆ ನಾಯಕ ರೋಹಿತ್ ಹೇಳಿದಿಷ್ಟು

IND vs ENG: ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದಲ್ಲಿ ಯಾರೆಲ್ಲ ಆಡಬಹುದು ಎಂಬುದಕ್ಕೆ ನಾಯಕ ರೋಹಿತ್ ಶರ್ಮಾ ಸ್ಪಷ್ಟ ಸುಳಿವು ನೀಡಿದ್ದಾರೆ. ಮುಖ್ಯವಾಗಿ ವಿರಾಟ್ ಕೊಹ್ಲಿ ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬುದಕ್ಕೆ ಉತ್ತರ ಸಿಕ್ಕಿದ್ದು, ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್ ಕೊಹ್ಲಿ ಸ್ಥಾನವನ್ನು ತುಂಬುವುದು ಖಚಿತವಾಗಿದೆ.

IND vs ENG: ಇಂಗ್ಲೆಂಡ್ ವಿರುದ್ಧ ಕಣಕ್ಕಿಳಿಯುವ ತಂಡದ ಬಗ್ಗೆ ನಾಯಕ ರೋಹಿತ್ ಹೇಳಿದಿಷ್ಟು
ರೋಹಿತ್ ಶರ್ಮಾ
ಪೃಥ್ವಿಶಂಕರ
|

Updated on: Jan 24, 2024 | 10:35 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಗುರುವಾರದಿಂದ ಹೈದರಾಬಾದ್‌ನಲ್ಲಿ ಆರಂಭವಾಗಲಿದೆ. ಈಗಾಗಲೇ ಆಂಗ್ಲರು ಮೊದಲ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಪ್ರಕಟಿಸಿದ್ದು, ಹಲವು ಆಚ್ಚರಿಯ ಆಯ್ಕೆಗಳನ್ನು ಮಾಡಿದ್ದಾರೆ. ಆದರೆ ಟೀಂ ಇಂಡಿಯಾ (Team India) ಮಾತ್ರ ತಂಡದ ಬಗ್ಗೆ ಯಾವುದೇ ಸುಳುವು ನೀಡದಿದ್ದರೂ, ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ತಂಡದಲ್ಲಿ ಯಾರೆಲ್ಲ ಆಡಬಹುದು ಎಂಬುದಕ್ಕೆ ನಾಯಕ ರೋಹಿತ್ ಶರ್ಮಾ (Rohit Sharma) ಸ್ಪಷ್ಟ ಸುಳಿವು ನೀಡಿದ್ದಾರೆ. ಮುಖ್ಯವಾಗಿ ವಿರಾಟ್ ಕೊಹ್ಲಿ (Virat Kohli) ಸ್ಥಾನದಲ್ಲಿ ಯಾರು ಆಡಲಿದ್ದಾರೆ ಎಂಬುದಕ್ಕೆ ಉತ್ತರ ಸಿಕ್ಕಿದ್ದು, ಈ ಪಂದ್ಯದಲ್ಲಿ ಬ್ಯಾಟ್ಸ್‌ಮನ್ ಆಗಿ ಕಣಕ್ಕಿಳಿಯುತ್ತಿರುವ ಕೆಎಲ್ ರಾಹುಲ್, ಕೊಹ್ಲಿ ಸ್ಥಾನವನ್ನು ತುಂಬುವುದು ಖಚಿತವಾಗಿದೆ. ಹಾಗಾಗಿ ಶ್ರೇಯಸ್ ಅಯ್ಯರ್ 5 ನೇ ಕ್ರಮಾಂಕದಲ್ಲಿ ಆಡುವುದನ್ನು ಕಾಣಬಹುದಾಗಿದೆ.

IND vs ENG: ಹೈದರಾಬಾದ್‌ ಪಿಚ್​ ಯಾರಿಗೆ ಸಹಕಾರಿ? ಕೋಚ್ ದ್ರಾವಿಡ್ ಹೇಳಿದ್ದೇನು?

ವಿಕೆಟ್ ಕೀಪರ್ ಯಾರು?

ಇನ್ನು ಮೊದಲ ಟೆಸ್ಟ್​ಗೆ ಯಾರು ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲ್ಲಿದ್ದಾರೆ ಎಂಬುದನ್ನು ಈಗಲೇ ಹೇಳುವುದು ಕಷ್ಟ. ಏಕೆಂದರೆ ತಂಡದಲ್ಲಿ ಕೆಎಸ್ ಭರತ್ ಮತ್ತು ಧ್ರುವ್ ಜುರೆಲ್ ರೂಪದಲ್ಲಿ ಇಬ್ಬರು ವಿಕೆಟ್ ಕೀಪರ್​ಗಳಿದ್ದಾರೆ. ಹಾಗೆಯೇ ವಿರಾಟ್ ಬದಲಿಗೆ ರಜತ್ ಪಾಟಿದಾರ್ ಅವರನ್ನು ತಂಡಕ್ಕೆ ಆಯ್ಕೆ ಮಾಡಲಾಗಿದೆ. ಆದರೆ ಮೊದಲ ಟೆಸ್ಟ್ ಪಂದ್ಯದಲ್ಲಿ ರಜತ್ ಹಾಗೂ ಧೃವ್ ಜುರೇಲ್ ಆಡುವುದು ಅನುಮಾನ. ಕೊಂಚ ಅನುಭವದ ಆಧಾರದ ಮೇಲೆ ಕೆಎಸ್ ಭರತ್ ವಿಕೆಟ್ ಕೀಪಿಂಗ್ ಮಾಡುವುದನ್ನು ಕಾಣಬಹುದು. ಉಳಿದಂತೆ ರವೀಂದ್ರ ಜಡೇಜಾ 7ನೇ ಕ್ರಮಾಂಕದಲ್ಲಿ ಹಾಗೂ ಅಕ್ಷರ್ ಪಟೇಲ್ ಮತ್ತು ರವಿಚಂದ್ರನ್ ಅಶ್ವಿನ್ ಕ್ರಮವಾಗಿ 8 ಮತ್ತು 9ನೇ ಸ್ಥಾನದಲ್ಲಿ ಬ್ಯಾಟ್ ಬೀಸಲಿದ್ದಾರೆ.

ಐವರು ಬೌಲರ್‌ಗಳಿಗೆ ಅವಕಾಶ

ನಾವು ಭಾರತ ತಂಡದ ಬೌಲಿಂಗ್ ಲೈನ್‌ಅಪ್ ಬಗ್ಗೆ ಮಾತನಾಡಿದರೆ, ಮೂವರು ಸ್ಪಿನ್ನರ್‌ಗಳು ತಂಡದಲ್ಲಿ ಆಡುವುದನ್ನು ಕಾಣಬಹುದು. ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗವನ್ನು ನಿಭಾಯಿಸಲಿದ್ದಾರೆ. ಆದ್ದರಿಂದ ಪೇಸ್ ವಿಭಾಗದ ಜವಾಬ್ದಾರಿ ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ಅವರ ಹೆಗಲ ಮೇಲಿರಲಿದೆ. ಇದು ಸಿರಾಜ್ ಅವರ ತವರು ನೆಲವೂ ಆಗಿರುವುದರಿಂದ ಎಲ್ಲರ ಕಣ್ಣು ಅವರ ಮೇಲಿದೆ. ಇದೆಲ್ಲದರ ಹೊರತಾಗಿಯೂ ರೋಹಿತ್ ಯಾವ ತಂಡವನ್ನು ಕಟ್ಟಿಕೊಂಡು ಕಣಕ್ಕಿಳಿಯಲ್ಲಿದ್ದಾರೆ ಎಂಬುದು ಗುರುವಾರದ ಟಾಸ್ ನಂತರವೇ ತಿಳಿಯಲಿದೆ.

ಭಾರತ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇಂಗ್ಲೆಂಡ್ ತಂಡ: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ನಾಯಕ), ಬೆನ್ ಫೋಕ್ಸ್, ರೆಹಾನ್ ಅಹ್ಮದ್, ಟಾಮ್ ಹಾರ್ಟ್ಲೆ, ಮಾರ್ಕ್ ವುಡ್, ಜ್ಯಾಕ್ ಲೀಚ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ