AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಉತ್ತಮ ಚಾನ್ಸ್ ಇತ್ತು, ಆದರೆ… ಸೋಲಿಗೆ ಶುಭ್​ಮನ್ ಗಿಲ್ ದೂರಿದ್ದು ಯಾರನ್ನ..!

India vs England 1st Test: ಹೆಡಿಂಗ್ಲೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿದರೆ, ಇಂಗ್ಲೆಂಡ್ 465 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 364 ರನ್​ಗಳಿಗೆ ಆಲೌಟ್ ಆದರು. ಅತ್ತ 371 ರನ್​ಗಳ ಗುರಿಯನ್ನು ಇಂಗ್ಲೆಂಡ್ 82 ಓವರ್​ಗಳಲ್ಲಿ ಚೇಸ್ ಮಾಡಿ ಭರ್ಜರಿ ಜಯ ಸಾಧಿಸಿದೆ.

ನಮಗೆ ಉತ್ತಮ ಚಾನ್ಸ್ ಇತ್ತು, ಆದರೆ... ಸೋಲಿಗೆ ಶುಭ್​ಮನ್ ಗಿಲ್ ದೂರಿದ್ದು ಯಾರನ್ನ..!
Shubman Gill
ಝಾಹಿರ್ ಯೂಸುಫ್
|

Updated on: Jun 25, 2025 | 10:05 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸೋಲನುಭವಿಸಿದೆ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊಲದು ಬ್ಯಾಟ್ ಮಾಡಿದ ಭಾರತ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 471 ರನ್​ ಕಲೆಹಾಕಿತು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಇಂಗ್ಲೆಂಡ್ ಕಲೆಹಾಕಿದ್ದು 465 ರನ್​ಗಳನ್ನು.  ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು 364 ರನ್​ಗಳಿಗೆ ಆಲೌಟ್ ಆಯಿತು. ಅದರಂತೆ ಕೊನೆಯ ಇನಿಂಗ್ಸ್​ನಲ್ಲಿ 371 ರನ್​ಗಳ ಗುರಿ ಪಡೆದ ಇಂಗ್ಲೆಂಡ್ ತಂಡವು 82 ಓವರ್​ಗಳಲ್ಲಿ ಚೇಸ್ ಮಾಡಿ 5 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಈ ಸೋಲಿನ ಬಳಿಕ ಮಾತನಾಡಿದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್, ನಮಗೆ ಪಂದ್ಯವನ್ನು ಗೆಲ್ಲಲು ಉತ್ತಮ ಅವಕಾಶವಿತ್ತು. ಆದರೆ ಎಲ್ಲರಿಂದ  ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ ಎಂದಿದ್ದಾರೆ. ಅದರಲ್ಲೂ  ಕೆಳ ಕ್ರಮಾಂಕದ ಬ್ಯಾಟರ್​ಗಳು ಎರಡೂ ಇನ್ನಿಂಗ್ಸ್‌ಗಳಲ್ಲಿ ಶೋಚನೀಯವಾಗಿ ವಿಫಲವಾಗಿದ್ದು ಟೀಮ್ ಇಂಡಿಯಾ ಸೋಲಿಗೆ ಕಾರಣವಾಯಿತು.

ಇನ್ನು ನಮ್ಮ ತಂಡದ ಫೀಲ್ಡಿಂಗ್ ಕೂಡ ಕಳಪೆಯಾಗಿತ್ತು. ಈ ಕ್ಷೇತ್ರರಕ್ಷಣಾ ವಿಭಾಗದಲ್ಲಿ ನಾವು ಸುಧಾರಿಸಬೇಕಾಗಿದೆ. ಕ್ಯಾಚ್‌ಗಳನ್ನು ಕೈಬಿಟ್ಟಿದ್ದು ಮತ್ತು ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಕೊಡುಗೆ ನೀಡದಿರುವುದು ನಿರಾಸೆ ಮೂಡಿಸಿತು. ನಿನ್ನೆ, ನಾವು ಅವರಿಗೆ 430 ರನ್‌ಗಳ ಗುರಿ ನೀಡುವ ಬಗ್ಗೆ ಯೋಚಿಸುತ್ತಿದ್ದೆವು. ಆದರೆ ನಮ್ಮ ಕೊನೆಯ ವಿಕೆಟ್‌ಗಳು 25 ರನ್‌ಗಳಿಗೆ ಬಿದ್ದವು ಎಂದು ಶುಭ್​ಮನ್ ಗಿಲ್ ಹೇಳಿದ್ದಾರೆ.

ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್​ನ ಮೊದಲ ವಿಕೆಟ್ ಬಿದ್ದ ನಂತರ ನಮಗೆ ಅವಕಾಶಗಳಿವೆ ಎಂದು ನನಗೆ ಅನಿಸಿತು. ಆದರೆ ನಾವಂದುಕೊಂಡಂತೆ ಎಲ್ಲವೂ ನಡೆಯಲಿಲ್ಲ. ಮೊದಲ ಪಂದ್ಯದಲ್ಲಿನ ತಪ್ಪುಗಳನ್ನು ನಾವು ಅದನ್ನು ಸರಿಪಡಿಸಬೇಕಿದೆ. ಅಂತಹ ಪಿಚ್‌ಗಳಲ್ಲಿ ಅವಕಾಶಗಳು ಸುಲಭವಾಗಿ ಬರುವುದಿಲ್ಲ.  ಇವೆಲ್ಲವೂ ಕಲಿಯಬೇಕಾದ ವಿಷಯ. ಮುಂಬರುವ ಪಂದ್ಯದ ವೇಳೆ ಎಲ್ಲವೂ ಸುಧಾರಿಸುತ್ತದೆ ಎಂದು ಆಶಿಸುತ್ತೇವೆ ಎಂದು ಗಿಲ್ ಹೇಳಿದ್ದಾರೆ.

ಇದನ್ನೂ ಓದಿ: ಟಿ20 ಕ್ರಿಕೆಟ್‌ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಕೀರನ್ ಪೊಲಾರ್ಡ್

ಈ ಮೂಲಕ ಟೀಮ್ ಇಂಡಿಯಾದ ಸೋಲಿಗೆ ಭಾರತ ತಂಡದ ಕೆಳ ಕ್ರಮಾಂಕದ ಬ್ಯಾಟರ್​ಗಳ ವೈಫಲ್ಯ ಹಾಗೂ ಫೀಲ್ಡರ್​ಗಳ ಕಳಪೆ ಪ್ರದರ್ಶನ ಮುಖ್ಯ ಕಾರಣ ಎಂದು ಶುಭ್​ಮನ್ ಗಿಲ್ ಹೇಳಿದ್ದಾರೆ. ಇದಾಗ್ಯೂ ಜುಲೈ 2 ರಿಂದ ಶುರುವಾಗಲಿರುವ 2ನೇ ಟೆಸ್ಟ್ ಪಂದ್ಯದಲ್ಲಿ ನಾವು ಕಂಬ್ಯಾಕ್ ಮಾಡುವ ವಿಶ್ವಾಸವನ್ನು ಟೀಮ್ ಇಂಡಿಯಾ ನಾಯಕ ವ್ಯಕ್ತಪಡಿಸಿದ್ದಾರೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ