Jack Leach ruled out: ಎರಡನೇ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಶುಭ ಸುದ್ದಿ: ಇಂಗ್ಲೆಂಡ್‌ ತಂಡಕ್ಕೆ ದೊಡ್ಡ ಶಾಕ್

India vs England Second Test: ಭಾರತ ಹಾಗೂ ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್‌ ಪಂದ್ಯಕ್ಕೂ ಮುನ್ನ ಆಂಗ್ಲರ ತಂಡಕ್ಕೆ ದೊಡ್ಡ ಆಘಾತ ಉಂಟಾಗಿದೆ. ಎಡಗೈ ಸ್ಪಿನ್ನರ್ ಜ್ಯಾಕ್ ಲೀಚ್ ವಿಶಾಖಪಟ್ಟಣಂ ಟೆಸ್ಟ್‌ನಿಂದ ಹೊರಬಿದ್ದಿದ್ದಾರೆ ಎಂದು ವರದಿ ಆಗಿದೆ. ಅಂದರೆ ಅವರು ಎರಡನೇ ಟೆಸ್ಟ್ ಆಡಲು ಸಾಧ್ಯವಿಲ್ಲ. ಇದು ಭಾರತಕ್ಕೆ ದೊಡ್ಡ ಪ್ಲಸ್ ಪಾಯಿಂಟ್ ಆಗಿದೆ.

Jack Leach ruled out: ಎರಡನೇ ಟೆಸ್ಟ್‌ಗೂ ಮುನ್ನ ಭಾರತಕ್ಕೆ ಶುಭ ಸುದ್ದಿ: ಇಂಗ್ಲೆಂಡ್‌ ತಂಡಕ್ಕೆ ದೊಡ್ಡ ಶಾಕ್
IND vs ENG 2nd Test

Updated on: Feb 01, 2024 | 7:21 AM

ಭಾರತ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಇಂಗ್ಲೆಂಡ್ (India vs England) ತಂಡಕ್ಕೆ ಭಾರೀ ಹೊಡೆತ ಬಿದ್ದಿದೆ. ಎಡಗೈ ಸ್ಪಿನ್ನರ್ ಜ್ಯಾಕ್ ಲೀಚ್ ವಿಶಾಖಪಟ್ಟಣಂ ಟೆಸ್ಟ್‌ನಲ್ಲಿ ಆಡುವುದಿಲ್ಲ ಎಂಬ ವರದಿ ಆಗಿದೆ. ಭಾರತ ವಿರುದ್ಧ ಹೈದರಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಜ್ಯಾಕ್ ಲೀಚ್ ಗಾಯಗೊಂಡಿದ್ದರು. ಗಾಯದಿಂದ ಗುಣಮುಖರಾಗದ ಕಾರಣ ಫೆಬ್ರವರಿ 2 ರಿಂದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಎರಡನೇ ಟೆಸ್ಟ್​ನಲ್ಲಿ ಇವರು ಆಡುವುದಿಲ್ಲ ಎಂದು ಹೇಳಲಾಗಿದೆ.

ಭಾರತ ಪ್ರವಾಸ ಕೈಗೊಂಡಿದ್ದ ಇಂಗ್ಲೆಂಡ್ ಟೆಸ್ಟ್ ತಂಡದ ಅತ್ಯಂತ ಅನುಭವಿ ಸ್ಪಿನ್ನರ್ ಜ್ಯಾಕ್ ಲೀಚ್ ಅವರ ಎಡ ಮೊಣಕಾಲಿಗೆ ಗಾಯವಾಗಿದ್ದು, ಇದರಿಂದಾಗಿ ಅವರು ಸಾಕಷ್ಟು ತೊಂದರೆಗೆ ಒಳಗಾಗಿದ್ದರು. ವಿಶಾಖಪಟ್ಟಣಂನಲ್ಲಿ ತಂಡದ ಉಳಿದ ಆಟಗಾರರೊಂದಿಗೆ ಅಭ್ಯಾಸ ಮಾಡದ ಕಾರಣ ಎರಡನೇ ಟೆಸ್ಟ್‌ನಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಎರಡನೇ ಟೆಸ್ಟ್‌ನಿಂದ ಜ್ಯಾಕ್ ಲೀಚ್ ಹೊರಗುಳಿದರೆ ಇಂಗ್ಲೆಂಡ್ ಕೋಚ್ ಬ್ರೆಂಡನ್ ಮೆಕಲಮ್ ಹಾಗೂ ತಂಡಕ್ಕೆ ದೊಡ್ಡ ಹಿನ್ನಡೆಯಾಗಲಿದೆ.

VIDEO: ನ್ಯೂ ಹೆಲಿಕಾಪ್ಟರ್ ಶಾಟ್: ಮುಶೀರ್ ಖಾನ್​ರ ಭರ್ಜರಿ ಸಿಕ್ಸ್ ವಿಡಿಯೋ ವೈರಲ್

ಇದನ್ನೂ ಓದಿ
ಹೆಚ್ಚಿನ ಚಿಕಿತ್ಸೆಗಾಗಿ ಮಯಾಂಕ್ ಅಗರ್ವಾಲ್‌ ಬೆಂಗಳೂರಿಗೆ ಶಿಫ್ಟ್​​
ವಿಷಕಾರಿ ದ್ರವ ಸೇವನೆ: 48 ಗಂಟೆಗಳವರೆಗೆ ಮಯಾಂಕ್​ಗೆ ಮಾತನಾಡಲಾಗುವುದಿಲ್ಲ
Jay Shah: ಸತತ ಮೂರನೇ ಬಾರಿ ಎಸಿಸಿ ಅಧ್ಯಕ್ಷರಾಗಿ ಜಯ್​ ಶಾ ಆಯ್ಕೆ
2ನೇ ಟೆಸ್ಟ್​ಗೆ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಹೆಸರಿಸಿದ ಹರ್ಭಜನ್ ಸಿಂಗ್

ಯಾಕೆಂದರೆ, ಇಂಗ್ಲೆಂಡ್‌ನ ಟೆಸ್ಟ್ ತಂಡದ ಕೋಚ್ ಬ್ರೆಂಡನ್ ಮೆಕಲಮ್ ಅವರು ವಿಶಾಖಪಟ್ಟಣಂ ಟೆಸ್ಟ್‌ನಲ್ಲಿ 4 ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವ ಬಗ್ಗೆ ಸೂಚಿಸಿದ್ದರು. ಆದರೆ, ಜ್ಯಾಕ್ ಲೀಚ್ ಎರಡನೇ ಟೆಸ್ಟ್‌ನಿಂದ ಹೊರಗುಳಿದರೆ, 4 ಸ್ಪಿನ್ನರ್‌ಗಳೊಂದಿಗೆ ಹೋಗುವ ಇಂಗ್ಲಿಷ್ ಕೋಚ್‌ನ ಯೋಜನೆ ತಲೆಕೆಳಗಾಗಲಿದೆ. ಅಂದರೆ ಇಂಗ್ಲೆಂಡ್ ತಂಡವು ಕೇವಲ 3 ಸ್ಪೆಷಲಿಸ್ಟ್ ಸ್ಪಿನ್ನರ್‌ಗಳೊಂದಿಗೆ ವೈಜಾಗ್ ಮೈದಾನಲ್ಲಿ ಆಡಲಿದೆ.

ಜ್ಯಾಕ್ ಲೀಚ್ ಭಾರತ ವಿರುದ್ಧ ಹೈದರಾಬಾದ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 26 ಓವರ್‌ಗಳನ್ನು ಬೌಲ್ ಮಾಡಿ 63 ರನ್ ನೀಡಿ ರೋಹಿತ್ ಶರ್ಮಾ ಅವರ ವಿಕೆಟ್ ಪಡೆದಿದ್ದರು. ಎರಡನೇ ಇನ್ನಿಂಗ್ಸ್‌ನಲ್ಲಿ ಅವರು ಗಾಯದಿಂದ ಹೊಡೆದರು. ಆದ್ದರಿಂದ ಅವರು ಕೇವಲ 10 ಓವರ್‌ಗಳನ್ನು ಬೌಲ್ ಮಾಡಲು ಸಾಧ್ಯವಾಯಿತು, ಇದರಲ್ಲಿ ಅವರು 33 ರನ್ ನೀಡಿ ಶ್ರೇಯಸ್ ಅಯ್ಯರ್ ಅವರನ್ನು ಔಟ್ ಮಾಡಿದರು.

ಭಾರತ ಪರ ನಾಲ್ವರು ಸ್ಪಿನ್ನರ್:

ಟೀಮ್ ಇಂಡಿಯಾ ನಾಲ್ವರು ಸ್ಪಿನ್ನರ್​ಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಶಾಖಪಟ್ಟಣದ ವೈಎಸ್​ ರಾಜಶೇಖರ ರೆಡ್ಡಿ ಕ್ರಿಕೆಟ್ ಮೈದಾನದಲ್ಲಿನ ಪಿಚ್ ಸ್ಪಿನ್ನರ್​​ಗಳಿಗೆ ಸಹಕಾರಿ ಆಗಿದೆ. ಹೀಗಾಗಿ ಆಡುವ ಬಳಗದಲ್ಲಿ ನಾಲ್ವರು ಸ್ಪಿನ್ನರ್​ಗಳನ್ನು ಕಣಕ್ಕಿಳಿಸಲು ಟೀಮ್ ಇಂಡಿಯಾ ಯೋಜನೆ ರೂಪಿಸುತ್ತಿದೆ. ಅದರಂತೆ ಭಾರತದ ಪರ ಅಕ್ಷರ್ ಪಟೇಲ್ ಹಾಗೂ ರವಿಚಂದ್ರನ್ ಅಶ್ವಿನ್ ಕಣಕ್ಕಿಳಿಯುವುದು ಖಚಿತ. ಇನ್ನು ಮೂರನೇ ಸ್ಪಿನ್ನರ್​ ಆಗಿ ವಾಷಿಂಗ್ಟನ್ ಸುಂದರ್​ಗೆ ಚಾನ್ಸ್ ಸಿಗಬಹುದು. ಹಾಗೆಯೇ ಕುಲ್ದೀಪ್ ಯಾದವ್ ಕೂಡ ಆಡುವ ಸಾಧ್ಯತೆ ದಟ್ಟವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ