AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರಿಗೆಲ್ಲ ಸಿಗಲಿದೆ ಅವಕಾಶ?

IND vs ENG: ಭಾರತ ಮತ್ತು ಇಂಗ್ಲೆಂಡ್ ನಡುವಿನ 5 ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣಂ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ಆಡುವ 11ರಲ್ಲಿ ಬದಲಾವಣೆಗಳು ಖಚಿತವಾಗಿದ್ದು, ಆಂಗ್ಲ ಸ್ಪಿನ್ನರ್‌ಗಳ ವಿರುದ್ಧ ತಂಡವು ಯಾವ ರೀತಿಯ ತಂತ್ರವನ್ನು ಹೆಣೆಯುತ್ತದೆ ಎಂಬುದರ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

IND vs ENG: ಎರಡನೇ ಟೆಸ್ಟ್​ಗೆ ಟೀಂ ಇಂಡಿಯಾದಲ್ಲಿ ಬದಲಾವಣೆ ಖಚಿತ; ಯಾರಿಗೆಲ್ಲ ಸಿಗಲಿದೆ ಅವಕಾಶ?
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Feb 01, 2024 | 10:18 PM

Share

ವಿಶಾಖಪಟ್ಟಣಂನಲ್ಲಿ (Visakhapatnam) ನಡೆಯಲಿರುವ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ಒಂದು ದಿನದ ಮುಂಚಿತವಾಗಿ ತನ್ನ ಆಡುವ ಹನ್ನೊಂದರ ಬಳಗವನ್ನು ಆಯ್ಕೆ ಮಾಡಿದೆ. ಅದೇ ಸಮಯದಲ್ಲಿ, ಭಾರತ ತಂಡದ ಆಡುವ 11 ರ ಬಗ್ಗೆ ಅನೇಕ ಪ್ರಶ್ನೆಗಳನ್ನು ಎತ್ತಲಾಗುತ್ತಿದೆ. ಹೈದರಾಬಾದ್ ಟೆಸ್ಟ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ ಇಬ್ಬರು ಆಟಗಾರರಾದ ಕೆಎಲ್ ರಾಹುಲ್ (KL Rahul) ಮತ್ತು ರವೀಂದ್ರ ಜಡೇಜಾ (Ravindra Jadeja) ಈ ಪಂದ್ಯದಲ್ಲಿ ಆಡುವುದಿಲ್ಲ. ಹೀಗಿರುವಾಗ ಅವರ ಸ್ಥಾನಕ್ಕೆ ಯಾರು ಬರುತ್ತಾರೆ ಎಂಬ ಪ್ರಶ್ನೆಗಳು ಎದ್ದಿವೆ. ರಾಹುಲ್ ಸ್ಥಾನಕ್ಕಾಗಿ ಸರ್ಫರಾಜ್ ಖಾನ್ ಮತ್ತು ರಜತ್ ಪಾಟಿದಾರ್ ನಡುವೆ ಪೈಪೋಟಿ ನಡೆದಿದೆ. ಇದಲ್ಲದೇ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ಅಥವಾ ಸೌರಭ್ ಕುಮಾರ್ ಅವರಿಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಉಳಿದಂತೆ ತಂಡದಲ್ಲಿ ಯಾವೆಲ್ಲ ಬದಲಾವಣೆಗಳಾಗಲಿವೆ. ಎರಡನೇ ಟೆಸ್ಟ್​ಗೆ ಯಾರೆಲ್ಲ ತಂಡದಲ್ಲಿ ಅವಕಾಶ ಪಡೆಯುತ್ತಾರೆ ಎಂಬುದರ ವಿವರ ಇಲ್ಲಿದೆ.

ಮೊಹಮ್ಮದ್ ಸಿರಾಜ್​ಗೆ ಕೋಕ್?

ನಾಲ್ವರು ಸ್ಪಿನ್ನರ್‌ಗಳು ಅಥವಾ ಇಂಗ್ಲೆಂಡ್‌ನಂತೆ ಒಬ್ಬ ವೇಗಿಯೊಂದಿಗೆ ಕಣಕ್ಕಿಳಿಯುವಂತೆ ಹಲವು ಕ್ರಿಕೆಟ್ ಪಂಡಿತರು ಟೀಂ ಇಂಡಿಯಾದ ಮ್ಯಾನೇಜ್‌ಮೆಂಟ್‌ಗೆ ಸಲಹೆ ನೀಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಉಪನಾಯಕ ಜಸ್ಪ್ರೀತ್ ಬುಮ್ರಾ ತಂಡದಲ್ಲಿ  ಆಡುವುದು ಖಚಿತ. ಆದರೆ ಮೊಹಮ್ಮದ್ ಸಿರಾಜ್ ಸ್ಥಾನಕ್ಕೆ ಅಪಾಯ ಎದುರಾಗಬಹುದು. ಈಗ ವಿಶಾಖಪಟ್ಟಣದಲ್ಲಿ ಟೀಂ ಇಂಡಿಯಾ ಸಿರಾಜ್ ಅವರನ್ನು ಬಿಟ್ಟುಬಿಡುತ್ತದೆಯೇ ಅಥವಾ ಮತ್ತೊಮ್ಮೆ ಇಬ್ಬರು ವೇಗಿಗಳೊಂದಿಗೆ ಹೋಗುತ್ತದೆಯೇ ಎಂದು ನೋಡಬೇಕಾಗಿದೆ. ಅಶ್ವಿನ್ ಮತ್ತು ಅಕ್ಷರ್ ಜೊತೆಗೆ ಕುಲ್ದೀಪ್ ಸ್ಪಿನ್‌ ವಿಭಾಗದಲ್ಲಿ ಅವಕಾಶ ಪಡೆಯುತ್ತಾರಾ ಅಥವಾ ಸೌರಭ್ ಕುಮಾರ್ ಮತ್ತು ವಾಷಿಂಗ್ಟನ್ ಸುಂದರ್ ತಂಡದಲ್ಲಿ ಸ್ಥಾನ ಪಡೆಯುತ್ತಾರೆಯೇ ಎಂದು ನೋಡಬೇಕಾಗಿದೆ.

IND vs ENG: ಬರೋಬ್ಬರಿ 4467 ದಿನಗಳ ನಂತರ ಈ ನಾಲ್ವರು ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ ಭಾರತ..!

4 ಸ್ಪಿನ್ನರ್‌ಗಳಿಗೆ ಅವಕಾಶ?

ಭಾರತ ತಂಡವು ಕೇವಲ ಒಬ್ಬ ವೇಗಿಯನ್ನು ಕಣಕ್ಕಿಳಿಸಿದರೆ, ಉಳಿದಂತೆ ತಂಡದ ಬೌಲಿಂಗ್ ವಿಭಾಗದಲ್ಲಿ ನಾಲ್ವರು ಸ್ಪಿನ್ನರ್​ಗಳು ಕಾಣಿಸಿಕೊಳ್ಳುವುದು ಸ್ಪಷ್ಟ. ರವೀಂದ್ರ ಜಡೇಜಾ ಬದಲಿಗೆ ಕುಲ್ದೀಪ್ ಯಾದವ್‌ಗೆ ಅವಕಾಶ ಸಿಕ್ಕರೆ ಬ್ಯಾಟಿಂಗ್ ದುರ್ಬಲವಾಗಲಿದೆ. ಆದರೆ ವಾಷಿಂಗ್ಟನ್ ಸುಂದರ್ ಬಂದರೆ ಅನುಭವಿ ಸ್ಪಿನ್ನರ್ ಕೊರತೆ ತಪ್ಪಬಹುದು. ಸಿರಾಜ್ ಅವರನ್ನು ಕೈಬಿಟ್ಟರೆ ಟೀಂ ಇಂಡಿಯಾ ನಾಲ್ವರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಬಹುದು. ಇಂತಹ ಪರಿಸ್ಥಿತಿಯಲ್ಲಿ ರವೀಂದ್ರ ಜಡೇಜಾ ಬದಲಿಗೆ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಬಲಿಷ್ಠವಾಗಲಿದ್ದಾರೆ. ಕೊನೆಯಲ್ಲಿ ಕುಲ್ದೀಪ್ ಯಾದವ್ ಕೂಡ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ.

ಉಭಯ ತಂಡಗಳು

ಇಂಗ್ಲೆಂಡ್ ತಂಡ: ಜ್ಯಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ (ಸಿ), ಬೆನ್ ಫಾಕ್ಸ್ (ವಾಕ್), ಟಾಮ್ ಹಾರ್ಟ್ಲಿ, ರೆಹಾನ್ ಅಹ್ಮದ್, ಶೋಯೆಬ್ ಬಶೀರ್, ಜೇಮ್ಸ್ ಆಂಡರ್ಸನ್.

ಭಾರತದ ಸಂಭಾವ್ಯ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಸರ್ಫರಾಜ್ ಖಾನ್ / ರಜತ್ ಪಾಟಿದಾರ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್ / ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್