AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG 3rd Test: ಮೂರನೇ ಟೆಸ್ಟ್​ಗೆ ಭಾರತ ತಂಡದಲ್ಲಿ ಬಿಗ್ ಚೇಂಜ್: ಒಟ್ಟು ನಾಲ್ಕು ಬದಲಾವಣೆ?

India Squad For 3rd Test vs England: ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಗೆದ್ದ ಬಳಿಕ ಮೂರನೇ ಟೆಸ್ಟ್ ಟೀಮ್ ಇಂಡಿಯಾಕ್ಕೆ ಮಹತ್ವದ್ದಾಗಿದೆ. ಈ ಪಂದ್ಯಕ್ಕಾಗಿ ಬಿಸಿಸಿಐ ಇನ್ನಷ್ಟೆ ತಂಡವನ್ನು ಪ್ರಕಟಿಸಬೇಕಿದೆ. ಆದರೆ, ಮುಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ ಆಗುವುದು ಖಚಿತವಾಗಿದೆ.

IND vs ENG 3rd Test: ಮೂರನೇ ಟೆಸ್ಟ್​ಗೆ ಭಾರತ ತಂಡದಲ್ಲಿ ಬಿಗ್ ಚೇಂಜ್: ಒಟ್ಟು ನಾಲ್ಕು ಬದಲಾವಣೆ?
IND vs ENG 3rd Test
Vinay Bhat
|

Updated on: Feb 06, 2024 | 7:08 AM

Share

ಹೈದರಾಬಾದ್ ಸೋಲಿನ ಬಳಿಕ ವಿಶಾಖಪಟ್ಟಣಂನಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ (India vs England) ಪ್ರಬಲ ಪ್ರತಿದಾಳಿ ನಡೆಸಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದೆ. ರೋಹಿತ್ ಶರ್ಮಾ ನೇತೃತ್ವದ ತಂಡವು ಎರಡನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್‌ಗೆ ಮಂಡಿಯೂರುವಂತೆ ಮಾಡಿತು. ಇಂಗ್ಲೆಂಡ್ ಗೆಲುವಿಗೆ 399 ರನ್ ಗಳ ಅಗತ್ಯವಿತ್ತು. ಆದರೆ ನಾಲ್ಕನೇ ಇನ್ನಿಂಗ್ಸ್​ನಲ್ಲಿ ಬೆನ್ ಸ್ಟೋಕ್ಸ್ ತಂಡ ವಿಫಲವಾಯಿತು. ಆರ್ ಅಶ್ವಿನ್, ಜಸ್ಪ್ರಿತ್ ಬುಮ್ರಾ ಮತ್ತು ಕುಲ್ದೀಪ್ ಯಾದವ್ ಅವರ ಅತ್ಯುತ್ತಮ ಬೌಲಿಂಗ್‌ ಪ್ರದರ್ಶನದಿಂದ ಭಾರತ 106 ರನ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದೀಗ ಐದು ಪಂದ್ಯಗಳ ಸರಣಿ 1-1ರಲ್ಲಿ ಸಮಬಲಗೊಂಡಿದೆ. ಮೂರನೇ ಟೆಸ್ಟ್ ಫೆಬ್ರವರಿ 15 ರಂದು ರಾಜ್‌ಕೋಟ್‌ನಲ್ಲಿ ಶುರುವಾಗಲಿದೆ.

ಮೂರನೇ ಟೆಸ್ಟ್ ಪಂದ್ಯ ಟೀಮ್ ಇಂಡಿಯಾಕ್ಕೆ ಮಹತ್ವದ್ದಾಗಿದೆ. ಈ ಪಂದ್ಯಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇನ್ನಷ್ಟೆ ತಂಡವನ್ನು ಪ್ರಕಟಿಸಬೇಕಿದೆ. ಆದರೆ, ಮುಂದಿನ ಪಂದ್ಯಕ್ಕೆ ಟೀಮ್ ಇಂಡಿಯಾದಲ್ಲಿ ದೊಡ್ಡ ಬದಲಾವಣೆ ಆಗುವುದು ಖಚಿತವಾಗಿದೆ. ಕಳಪೆ ಪ್ರದರ್ಶನ ನೀಡಿದ ಆಟಗಾರರನ್ನು ಕೈಬಿಡುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ. ಇದರಲ್ಲಿ ಮೊದಲ ಹೆಸರು ಕೆಎಸ್ ಭರತ್.

ಕಳೆದ ಎರಡೂ ಪಂದ್ಯಗಳಲ್ಲಿ ವಿಕೆಟ್ ಕೀಪರ್, ಬ್ಯಾಟರ್ ಕೆಎಸ್ ಭರತ್​ಗೆ ರನ್ ಗಳಿಸಲು ಸಾಕಷ್ಟು ಅವಕಾಶಗಳಿತ್ತು. ಆದರೆ, ಎಲ್ಲ ಪಂದ್ಯಗಳಲ್ಲಿ ವೈಫಲ್ಯ ಅನುಭವಿಸಿದರು. ಕಳೆದ 12 ಇನ್ನಿಂಗ್ಸ್​ಗಳಲ್ಲಿ ಕೇವಲ 20 ರ ಸರಾಸರಿಯಲ್ಲಿ 221 ರನ್ ಕಲೆಹಾಕಿದ್ದಾರಷ್ಟೆ. ಇದರಲ್ಲಿ 44 ರನ್ ಅವರ ಅತ್ಯಧಿಕ ಗರಿಷ್ಠ ಸ್ಕೋರ್. ಎರಡನೇ ಟೆಸ್ಟ್ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ವಿಚಾರದಲ್ಲೂ ಭರತ್ ಬಗ್ಗೆ ಪರಿಣಿತರಿಂದ ಒಳ್ಳೆಯ ಅಭಿಪ್ರಾಯ ಮೂಡಿಬಂದಿಲ್ಲ. ಕೆಲವು ಸುಲಭ ಸ್ಟಂಪಿಂಗ್ ಅವಕಾಶಗಳನ್ನು ಕೈಚೆಲ್ಲಿದ್ದಲ್ಲದೆ, ವಿಕೆಟ್ ಹಿಂದೆ ಬೈ ರೂಪದಲ್ಲಿ ಹಲವು ರನ್ ಬಿಟ್ಟುಕೊಟ್ಟಿದ್ದಾರೆ. ಇವರನ್ನು ಕೈಬಿಡುವುದು ಖಚಿತ.

ಇದನ್ನೂ ಓದಿ
Image
ಭಾರತ- ಆಫ್ರಿಕಾ ಸೆಮಿಫೈನಲ್‌ ಫೈಟ್; ಗೆದ್ದವರಿಗೆ ಫೈನಲ್ ಟಿಕಟ್
Image
ಮೂರನೇ ಟೆಸ್ಟ್ ಪಂದ್ಯದಿಂದ ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ..?
Image
‘ಕಿಶನ್ ಈ ಕೆಲಸ ಮಾಡದ ಹೊರತು ತಂಡಕ್ಕೆ ಆಯ್ಕೆ ಮಾಡಲಾಗದು’; ದ್ರಾವಿಡ್
Image
ಇಂಗ್ಲೆಂಡ್ ವಿರುದ್ಧ ಪ್ರಾಬಲ್ಯ ಮುಂದುವರೆಸಿದ ಸ್ಪಿನ್ ಮಾಂತ್ರಿಕ ಅಶ್ವಿನ್

ಹಾಗೆಯೆ ಮುಂದಿನ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ ಅವರನ್ನು ಹೊರಗಿಟ್ಟು ಸರ್ಫರಾಜ್ ಖಾನ್​ಗೆ ಅವಕಾಶ ನೀಡುವುದು ದಟ್ಟವಾಗಿದೆ. ಬೌಲಿಂಗ್​ನಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಲಾಗಿದೆ. ಆಲ್ರೌಂಡರ್ ಅಕ್ಷರ್ ಪಟೇಲ್ ಜಾಗದಲ್ಲಿ ವಾಷಿಂಗ್ಟನ್ ಸುಂದರ್ ಬರುವ ನಿರೀಕ್ಷೆಯಿದೆ. ಅಂತೆಯೆ ಮುಖೇಶ್ ಕುಮಾರ್ ಬದಲು ಆವೇಶ್ ಖಾನ್ ಕಣಕ್ಕಿಳಿಯಬಹುದು.

ಭಾರತದ ಪ್ರದರ್ಶನ:

ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಉತ್ತಮವಾಗಿ ಕಮ್​ಬ್ಯಾಕ್ ಮಾಡಿತು. 106 ರನ್‌ಗಳಿಂದ ಗೆದ್ದು ಸರಣಿಯನ್ನು 1-1 ರಲ್ಲಿ ಸಮಬಲಗೊಳಿಸಿತು. ಭಾರತದ ಗೆಲುವಿನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಶುಭ್​ಮನ್ ಗಿಲ್ ಅವರ ಕೊಡುಗೆ ದೊಡ್ಡದಿದೆ. ಜೈಸ್ವಾಲ್ ಮೊದಲ ಇನ್ನಿಂಗ್ಸ್‌ನಲ್ಲಿ ದ್ವಿಶತಕ ಗಳಿಸಿದ್ದರು. ಗಿಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದರು. ಜಸ್ಪ್ರೀತ್ ಬುಮ್ರಾ ಕೂಡ ಗೆಲುವಿಗೆ ಅದ್ಭುತ ಕೊಡುಗೆ ನೀಡಿದರು. ಈ ಪಂದ್ಯದಲ್ಲಿ ವೇಗದ ಬೌಲರ್ 9 ವಿಕೆಟ್ ಪಡೆದರು. ಬುಮ್ರಾ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆದರು. ಈ ಅತ್ಯುತ್ತಮ ಪ್ರದರ್ಶನಕ್ಕಾಗಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಕೂಡ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ