AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಸರ್ಫರಾಜ್ ಮಾತು ಕೇಳದೆ ಸುವರ್ಣಾವಕಾಶ ಕೈಚೆಲ್ಲಿದ ರೋಹಿತ್; ನೀವೇ ನೋಡಿ

IND vs ENG: ಇಂಗ್ಲೆಂಡ್​ನ ಮೊದಲ ಇನ್ನಿಂಗ್ಸ್​ನ27ನೇ ಓವರ್‌ ಬೌಲ್ ಮಾಡುವ ಜವಬ್ದಾರಿ ಜಸ್ಪ್ರೀತ್ ಬುಮ್ರಾಗೆ ನೀಡಲಾಗಿತ್ತು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಕ್ರೌಲಿ ಮೊದಲ ಎಸೆತವನ್ನು ಡಿಫೆಂಡ್ ಮಾಡಲು ಯತ್ನಿಸಿದರು. ಆದರೆ ಚೆಂಡು ಮೊದಲು ಬ್ಯಾಟಿಗೆ ತಾಗಿ ಆ ನಂತರ ಪ್ಯಾಡ್​ಗೆ ಬಡಿದು, ಶಾರ್ಟ್ ಲೆಗ್ ಹತ್ತಿರ ಫೀಲ್ಡಿಂಗ್ ಮಾಡುತ್ತಿದ್ದ ಸರ್ಫರಾಜ್ ಖಾನ್‌ ಕೈಸೇರಿತು. ಕೂಡಲೇ ಸರ್ಫರಾಜ್ ಔಟ್​ಗಾಗಿ ಮನವಿ ಮಾಡಿದರು.

IND vs ENG: ಸರ್ಫರಾಜ್ ಮಾತು ಕೇಳದೆ ಸುವರ್ಣಾವಕಾಶ ಕೈಚೆಲ್ಲಿದ ರೋಹಿತ್; ನೀವೇ ನೋಡಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on: Mar 07, 2024 | 4:10 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಟೆಸ್ಟ್ ಸರಣಿಯ ಐದನೇ ಪಂದ್ಯ ಧರ್ಮಶಾಲಾದಲ್ಲಿ (Dharamshala) ನಡೆಯುತ್ತಿದೆ. ಈ ಪಂದ್ಯದಲ್ಲಿ ಈಗಾಗಲೇ ಮೊದಲ ಇನ್ನಿಂಗ್ಸ್ ಮುಗಿಸಿರುವ ಇಂಗ್ಲೆಂಡ್ ತಂಡವು ಕುಲ್ದೀಪ್ ಯಾದವ್ ಹಾಗೂ ಅಶ್ವಿನ್ ದಾಳಿಗೆ ತತ್ತರಿಸಿ ಕೇವಲ 218 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಇಂಗ್ಲೆಂಡ್ ಪರ ಆರಂಭಿಕ ಝಾಕ್ ಕ್ರೌಲಿ (Zak Crawley) ಬಾರಿಸಿದ 79 ರನ್​ಗಳ ತಂಡದ ಪರ ದಾಖಲಾದ ಅತ್ಯಧಿಕ ಮೊತ್ತವಾಯಿತು. ವಾಸ್ತವವಾಗಿ ಸರ್ಫರಾಜ್ (Sarfaraz Khan) ಮನವಿಯನ್ನು ಪುರಸ್ಕರಿಸಿ ನಾಯಕ ರೋಹಿತ್ ಶರ್ಮಾ (Rohit Sharma) ಡಿಆರ್​ಎಸ್ ತೆಗೆದುಕೊಂಡಿದ್ದರೆ, ಕ್ರೌಲಿ ಇಷ್ಟು ರನ್ ಕಲೆಹಾಕುವುದಕ್ಕೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಯುವ ಆಟಗಾರನ ಮನವಿಗೆ ಕಿವಿಗೊಡದ ರೋಹಿತ್ ದೊಡ್ಡ ತಪ್ಪನ್ನು ಮಾಡಿದರು.

ಏನಿದು ಇಡೀ ಪ್ರಸಂಗ?

ವಾಸ್ತವವಾಗಿ ಇಂಗ್ಲೆಂಡ್​ನ ಮೊದಲ ಇನ್ನಿಂಗ್ಸ್​ನ27ನೇ ಓವರ್‌ ಬೌಲ್ ಮಾಡುವ ಜವಬ್ದಾರಿ ಜಸ್ಪ್ರೀತ್ ಬುಮ್ರಾಗೆ ನೀಡಲಾಗಿತ್ತು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ಕ್ರೌಲಿ ಮೊದಲ ಎಸೆತವನ್ನು ಡಿಫೆಂಡ್ ಮಾಡಲು ಯತ್ನಿಸಿದರು. ಆದರೆ ಚೆಂಡು ಮೊದಲು ಬ್ಯಾಟಿಗೆ ತಾಗಿ ಆ ನಂತರ ಪ್ಯಾಡ್​ಗೆ ಬಡಿದು, ಶಾರ್ಟ್ ಲೆಗ್ ಹತ್ತಿರ ಫೀಲ್ಡಿಂಗ್ ಮಾಡುತ್ತಿದ್ದ ಸರ್ಫರಾಜ್ ಖಾನ್‌ ಕೈಸೇರಿತು. ಕೂಡಲೇ ಸರ್ಫರಾಜ್ ಔಟ್​ಗಾಗಿ ಮನವಿ ಮಾಡಿದರು. ಅಂಪೈರ್ ಔಟ್ ನೀಡಲಿಲ್ಲ. ನಂತರ ಸರ್ಫರಾಜ್ ರೋಹಿತ್ ಬಳಿ ಡಿಆರ್​ಎಸ್ ತೆಗೆದುಕೊಳ್ಳುವಂತೆ ಸಾಕಷ್ಟು ಮನವಿ ಮಾಡಿದರು. ಅಲ್ಲದೆ ಚೆಂಡು ಬ್ಯಾಟ್‌ಗೆ ಬಡಿದಿದೆ ಎಂಬುದನ್ನು ರೋಹಿತ್​ಗೆ ಅರ್ಥ ಮಾಡಿಸಲು ಪ್ರಯತ್ನಿಸಿದರು. ಆದರೆ ಕ್ಯಾಪ್ಟನ್ ರೋಹಿತ್, ಸರ್ಫರಾಜ್ ಮಾತನ್ನು ಕೇಳಲಿಲ್ಲ.

IND vs ENG: ಕಿಂಗ್ ಕೊಹ್ಲಿಯ ಅತಿ ದೊಡ್ಡ ದಾಖಲೆ ಮುರಿದ ಯಶಸ್ವಿ ಜೈಸ್ವಾಲ್..!

ಆ ನಂತರ ಅಲ್ಟ್ರಾ ಎಡ್ಜ್ ತೋರಿಸಿದಾಗ ಕ್ರೌಲಿ ಬ್ಯಾಟ್‌ಗೆ ಚೆಂಡು ತಾಗಿದೆ ಎಂಬುದು ಸ್ಪಷ್ಟವಾಯಿತು. ಇದಾದ ನಂತರ ರೋಹಿತ್ ಶರ್ಮಾ ನಿರಾಸೆ ವ್ಯಕ್ತಪಡಿಸಿದ್ದು ಕಂಡುಬಂತು. ರೋಹಿತ್ ಇಲ್ಲಿ ಡಿಆರ್​ಎಸ್ ತೆಗೆದುಕೊಂಡಿದ್ದರೆ ಅದು ಭಾರತದ ಪರವಾಗಿ ಹೋಗುತ್ತಿತ್ತು. ಇಲ್ಲಿಂದ ಭಾರತಕ್ಕೆ ಮೂರನೇ ಯಶಸ್ಸು ಸಿಗಬಹುದಿತ್ತು. ಆದರೆ ರೋಹಿತ್ ಡಿಆರ್‌ಎಸ್ ತೆಗೆದುಕೊಳ್ಳದೆ ದೊಡ್ಡ ತಪ್ಪು ಮಾಡಿದರು. ಇತ್ತ ರೋಹಿತ್ ಮನವೊಲಿಸಲು ಪ್ರಯತ್ನಿಸಿ ವಿಫಲರಾಗಿದ್ದ ಸರ್ಫರಾಜ್ ಖಾನ್ ಕೂಡ ನಿರಾಶೆಗೊಂಡರು.

ಮಿಂಚಿದ ಸ್ಪಿನ್ನರ್ಸ್​

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿದ ಇಂಗ್ಲೆಂಡ್​ಗೆ ಉತ್ತಮ ಆರಂಭ ಸಿಕ್ಕಿತು. ಆರಂಭಿಕರಿಬ್ಬರು ಮೊದಲ ವಿಕೆಟ್​ಗೆ 64 ರನ್​ಗಳ ಜೊತೆಯಾಟ ಹಂಚಿಕೊಂಡರು. ಆ ನಂತರ ತಂಡದ ಮೊತ್ತ 100 ರನ್​ಗಳಿರುವಾಗ ಎರಡನೇ ವಿಕೆಟ್ ಪತನವಾಯಿತು. 175 ರನ್​ಗಳಿಗೆ 4ನೇ ವಿಕೆಟ್ ಪತನವಾದ ಬಳಿಕ ಇಂಗ್ಲೆಂಡ್ ತಂಡದ ಪೆವಿಲಿಯನ್ ಪರೇಡ್ ಆರಂಭವಾಯಿತು. ಆಂಗ್ಲ ತಂಡ ಕೇವಲ 43 ರನ್​ಗಳ ಅಂತರದಲ್ಲಿ ಉಳಿದ 6 ವಿಕೆಟ್​ಳನ್ನು ಕಳೆದುಕೊಂಡಿತು. ಭಾರತದ ಪರ ಮಿಂಚಿದ ಸ್ಪಿನ್ನರ್​ಗಳಾದ ಕುಲ್ದೀಪ್ ಯಾದವ್ ಪ್ರಮುಖ 5 ವಿಕೆಟ್ ಪಡೆದರೆ, 100 ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಆರ್​ ಅಶ್ವಿನ್ 4 ವಿಕೆಟ್ ಉರುಳಿಸಿದರು. ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ