AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಯಂಗ್ ಇಂಡಿಯಾ: 7 ಆಟಗಾರರು ಪಾದಾರ್ಪಣೆ

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಐದು ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕು ಮ್ಯಾಚ್​ಗಳು ಮುಗಿದಿವೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಉಳಿದ ಮೂರು ಮ್ಯಾಚ್​ಗಳಲ್ಲಿ ಟೀಮ್ ಇಂಡಿಯಾ ಬ್ಯಾಕ್ ಟು ಬ್ಯಾಕ್ ಜಯ ಸಾಧಿಸಿದೆ. ಇದೀಗ ಧರ್ಮಶಾಲಾದಲ್ಲಿ ಉಭಯ ತಂಡಗಳ ನಡುವಣ ಐದನೇ ಟೆಸ್ಟ್ ಪಂದ್ಯ ನಡೆಯುತ್ತಿದೆ.

IND vs ENG: ಯಂಗ್ ಇಂಡಿಯಾ: 7 ಆಟಗಾರರು ಪಾದಾರ್ಪಣೆ
Team India
TV9 Web
| Edited By: |

Updated on:Mar 07, 2024 | 12:22 PM

Share

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ ಟೆಸ್ಟ್ ಸರಣಿಯ ಐದನೇ ಪಂದ್ಯ ಶುರುವಾಗಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ (Team India) ಪರ ಕರ್ನಾಟಕದ ಆಟಗಾರ ದೇವದತ್ ಪಡಿಕ್ಕಲ್ ಪಾದಾರ್ಪಣೆ ಮಾಡಿದ್ದಾರೆ. ಇದರೊಂದಿಗೆ ಈ ಸರಣಿ ಮೂಲಕ 7 ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದಂತಾಗಿದೆ. ಅಂದರೆ ಐದು ಪಂದ್ಯಗಳ ಸರಣಿ ಮೂಲಕ ಒಟ್ಟು ಏಳು ಆಟಗಾರರು ಟೆಸ್ಟ್ ಕೆರಿಯರ್ ಆರಂಭಿಸಿದ್ದಾರೆ. ಇವರಲ್ಲಿ ಐವರು ಭಾರತೀಯ ಆಟಗಾರರು ಎಂಬುದು ವಿಶೇಷ.

  • ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಪರ ಕಣಕ್ಕಿಳಿಯುವ ಮೂಲಕ ಟಾಮ್ ಹಾರ್ಟ್ಲಿ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯವನ್ನಾಡಿದ್ದರು.
  • ವಿಶಾಖಪಟ್ಟಣಂನಲ್ಲಿ ಆಡಿದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರಜತ್ ಪಾಟಿದಾರ್ ಪಾದಾರ್ಪಣೆ ಮಾಡಿದ್ದರು.
  • ಭಾರತದ ವಿರುದ್ಧ 2ನೇ ಟೆಸ್ಟ್ ಪಂದ್ಯದ ಮೂಲಕವೇ ಶೊಯೆಬ್ ಬಶೀರ್ ಇಂಗ್ಲೆಂಡ್ ಪರ ಚೊಚ್ಚಲ ಪಂದ್ಯವನ್ನಾಡಿದ್ದರು.
  • ರಾಜ್​ಕೋಟ್​ನಲ್ಲಿ ಮೂರನೇ ಟೆಸ್ಟ್ ಪಂದ್ಯದ ಮೂಲಕ ಸರ್ಫರಾಝ್ ಹಾಗೂ ಧ್ರುವ್ ಜುರೇಲ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು.
  • ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಆಕಾಶ್ ದೀಪ್ ಟೀಮ್ ಇಂಡಿಯಾ ಪರ ಚೊಚ್ಚಲ ಪಂದ್ಯವನ್ನಾಡಿದ್ದರು.
  • ಧರ್ಮಶಾಲಾದಲ್ಲಿ ನಡೆಯುತ್ತಿರುವ 5ನೇ ಟೆಸ್ಟ್​ ಪಂದ್ಯದ ಮೂಲಕ ದೇದವತ್ ಪಡಿಕ್ಕಲ್ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದಾರೆ.
  • ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ ಒಟ್ಟು 7 ಆಟಗಾರರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಪಾದಾರ್ಪಣೆ ಮಾಡಿದ್ದಾರೆ.

ಭಾರತದ ದಾಖಲೆ:

ಟೀಮ್ ಇಂಡಿಯಾ ಪರ ಒಂದೇ ಸರಣಿಯಲ್ಲಿ ಐವರು ಆಟಗಾರರು ಪಾದಾರ್ಪಣೆ ಮಾಡಿರುವುದು ಇದೇ ಮೊದಲೇನಲ್ಲ. ಇದಕ್ಕೂ ಮುನ್ನ 1996 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ಪರಾಸ್ ಮಾಂಬ್ರೆ, ವಿಕ್ರಮ್ ರಾಥೋಡ್, ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು.

ಹಾಗೆಯೇ 2020-21ರ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ  ಶುಭಮನ್ ಗಿಲ್, ಮೊಹಮ್ಮದ್ ಸಿರಾಜ್, ಟಿ.ನಟರಾಜನ್, ವಾಷಿಂಗ್ಟನ್ ಸುಂದರ್ ಹಾಗೂ ನವದೀಪ್ ಸೈನಿ ಪಾದಾರ್ಪಣೆ ಮಾಡಿದ್ದರು. ಇದೀಗ ಮೂರನೇ ಬಾರಿ ಭಾರತದ ಪರ ಒಂದೇ ಸರಣಿಯಲ್ಲಿ ಐವರು ಆಟಗಾರರು ಚೊಚ್ಚಲ ಪಂದ್ಯಗಳನ್ನಾಡಿದ್ದಾರೆ.

25 ಆಟಗಾರರ ವಿಶ್ವ ದಾಖಲೆ:

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಒಂದೇ ಸರಣಿಯಲ್ಲಿ 25 ಆಟಗಾರರು ಪಾದಾರ್ಪಣೆ ಮಾಡಿದ ವಿಶೇಷ ವಿಶ್ವ ದಾಖಲೆ ಇದೆ. 1876/77 ರಲ್ಲಿ ನಡೆದ ಆಸ್ಟ್ರೇಲಿಯಾ-ಇಂಗ್ಲೆಂಡ್ ನಡುವಣ ಪಂದ್ಯದಲ್ಲಿ 25 ಆಟಗಾರರು ಚೊಚ್ಚಲ ಪಂದ್ಯವನ್ನಾಡಿದ್ದರು.

ವಿಶೇಷ ಎಂದರೆ ಇದೇ ಸರಣಿಯನ್ನೇ ಅಂತಾರಾಷ್ಟ್ರೀಯ ಕ್ರಿಕೆಟ್​ನ ಮೊದಲ ಸರಣಿ ಎಂದು ಕೂಡ ಪರಿಗಣಿಸಲಾಗುತ್ತದೆ. ಈ ಸರಣಿಯಲ್ಲಿ ಆಸ್ಟ್ರೇಲಿಯಾ ಪರ 14 ಆಟಗಾರರು ಪದಾರ್ಪಣೆ ಮಾಡಿದ್ದರೆ, ಇಂಗ್ಲೆಂಡ್ ಪರ 11 ಆಟಗಾರರು ಚೊಚ್ಚಲ ಪಂದ್ಯವನ್ನಾಡಿದ್ದರು.

ಇದಾದ ಬಳಿಕ 1895/96 ರಲ್ಲಿ ನಡೆದ ಸೌತ್ ಆಫ್ರಿಕಾ-ಇಂಗ್ಲೆಂಡ್ ನಡುವಣ ಸರಣಿಯಲ್ಲೂ 25 ಆಟಗಾರರು ಪಾದರ್ಪಣೆ ಮಾಡಿದ್ದರು. ಇದುವೇ ಈಗಲೂ ವಿಶ್ವ ದಾಖಲೆಯಾಗಿ ಉಳಿದಿದೆ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಇಂಗ್ಲೆಂಡ್ ಉತ್ತಮ ಆರಂಭ:

ಧರ್ಮಶಾಲಾದಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಆರಂಭಿಕ ಆಟಗಾರ ಝಾಕ್ ಕ್ರಾಲಿ ಅವರ ಅರ್ಧಶತಕದ ನೆರವಿನಿಂದ ಈ ಪಂದ್ಯದಲ್ಲಿ ಇಂಗ್ಲೆಂಡ್ ಉತ್ತಮ ಆರಂಭ ಪಡೆದುಕೊಂಡಿದೆ. ಭೋಜನಾ ವಿರಾಮದ ವೇಳೆಗೆ  2 ವಿಕೆಟ್ ಕಳೆದುಕೊಂಡು 100 ರನ್ ಕಲೆಹಾಕುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿದೆ.

Published On - 12:21 pm, Thu, 7 March 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ