AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng: ಓವಲ್‌ ಟೆಸ್ಟ್‌ನಲ್ಲಿ ಅಶ್ವಿನ್ ಬದಲು ಜಡೇಜಾಗೆ ಅವಕಾಶ; ಸೂಕ್ತ ಕಾರಣ ವಿವರಿಸಿದ ವಿರಾಟ್ ಕೊಹ್ಲಿ

Ind vs Eng: ಇಂಗ್ಲೆಂಡ್ ನಾಲ್ಕು ಎಡಗೈ ಆಟಗಾರರನ್ನು ಹೊಂದಿದೆ, ಆದ್ದರಿಂದ ಜಡೇಜಾಗೆ ಇದು ಸುಲಭವಾಗಬಹುದು, ಅಲ್ಲದೆ ಜಡೇಜಾ ನಮಗೆ ಬ್ಯಾಟಿಂಗ್​ನಲ್ಲೂ ಸಹಾಯಕ್ಕೆ ಬರಬಲ್ಲರು

Ind vs Eng: ಓವಲ್‌ ಟೆಸ್ಟ್‌ನಲ್ಲಿ ಅಶ್ವಿನ್ ಬದಲು ಜಡೇಜಾಗೆ ಅವಕಾಶ; ಸೂಕ್ತ ಕಾರಣ ವಿವರಿಸಿದ ವಿರಾಟ್ ಕೊಹ್ಲಿ
Virat Kohli and R Ashwin
Follow us
TV9 Web
| Updated By: ಪೃಥ್ವಿಶಂಕರ

Updated on: Sep 02, 2021 | 6:06 PM

ಲಂಡನ್‌ನ ಓವಲ್‌ನಲ್ಲಿ ಗುರುವಾರ ಆರಂಭವಾಗಿರುವ ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್‌ಗಾಗಿ ಭಾರತ ತನ್ನ ಇಲೆವೆನ್‌ನಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡಿದೆ. ಟಾಸ್ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ವೇಗದ ಬೌಲರ್‌ಗಳಾದ ಉಮೇಶ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ಅಂತಿಮ ಇಲೆವೆನ್‌ಗೆ ಬಂದಿರುವುದನ್ನು ಖಚಿತಪಡಿಸಿದರು ಮತ್ತು ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿಯನ್ನು ತಂಡದಿಂದ ಕೈಬಿಡಲಾಗಿದೆ ಎಂಬುದನ್ನು ವಿವರಿಸಿದರು.

ಇಶಾಂತ್ ಮತ್ತು ಶಮಿಗೆ ಇಂಜುರಿ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತೊಮ್ಮೆ ಟಾಸ್ ಕಳೆದುಕೊಂಡಿತು. ಜೋ ರೂಟ್ ನಾಲ್ಕನೇ ಟೆಸ್ಟ್​ನಲ್ಲಿ ಟಾಸ್​ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡರು. ಟಾಸ್​ ನಂತರ ಮಾತನಾಡಿದ ನಾಯಕ ಕೊಹ್ಲಿ, ಇಶಾಂತ್ ಮತ್ತು ಶಮಿಗೆ ಇಂಜುರಿ ಇದೆ, ಹೀಗಾಗಿ ಆಟಕ್ಕೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಿದರು. ಟಾಸ್​ ಗೆದ್ದಿದ್ದರೆ ನಾವು ಕೂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೇವು ಎಂದು ಕೊಹ್ಲಿ ಹೇಳಿದರು.

ಎರಡು ಬದಲಾವಣೆಗಳು ಇಶಾಂತ್ ಮತ್ತು ಶಮಿಗೆ ಇಂಜುರಿಯಾಗಿದೆ. ಹೀಗಾಗಿ ಉಮೇಶ್ ಮತ್ತು ಶಾರ್ದೂಲ್ ಮರಳಿದ್ದಾರೆ. ಇಂಗ್ಲೆಂಡ್ ನಾಲ್ಕು ಎಡಗೈ ಆಟಗಾರರನ್ನು ಹೊಂದಿದೆ, ಆದ್ದರಿಂದ ಜಡೇಜಾಗೆ ಇದು ಸುಲಭವಾಗಬಹುದು, ಅಲ್ಲದೆ ಜಡೇಜಾ ನಮಗೆ ಬ್ಯಾಟಿಂಗ್​ನಲ್ಲೂ ಸಹಾಯಕ್ಕೆ ಬರಬಲ್ಲರು. ನಮ್ಮ ಸೀಮರುಗಳು ವಿಕೆಟ್ ಮೇಲೆ ಬೌಲಿಂಗ್ ಮಾಡುತ್ತಾರೆ. ಆರಂಭಿಕ ಪಾಲುದಾರಿಕೆ ನಮಗೆ ಅದ್ಭುತವಾಗಿದೆ, ಹೀಗಾಗಿ ನಮಗೆ ಉತ್ತಮ ಆರಂಭ ಸಿಗುವ ನಿರೀಕ್ಷೆ ಇದೆ ಎಂದರು.

ಮತ್ತೊಂದೆಡೆ, ಇಂಗ್ಲೆಂಡ್ ಕೂಡ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡಿದ್ದು, ಜೋಸ್ ಬಟ್ಲರ್ ಮತ್ತು ಸ್ಯಾಮ್ ಕುರ್ರನ್ ಅವರ ಸ್ಥಾನವನ್ನು ಒಲ್ಲಿ ಪೋಪ್ ಮತ್ತು ಕ್ರಿಸ್ ವೋಕ್ಸ್ ತುಂಬಲಿದ್ದಾರೆ.

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ