AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ind vs Eng: ಓವಲ್‌ ಟೆಸ್ಟ್‌ನಲ್ಲಿ ಅಶ್ವಿನ್ ಬದಲು ಜಡೇಜಾಗೆ ಅವಕಾಶ; ಸೂಕ್ತ ಕಾರಣ ವಿವರಿಸಿದ ವಿರಾಟ್ ಕೊಹ್ಲಿ

Ind vs Eng: ಇಂಗ್ಲೆಂಡ್ ನಾಲ್ಕು ಎಡಗೈ ಆಟಗಾರರನ್ನು ಹೊಂದಿದೆ, ಆದ್ದರಿಂದ ಜಡೇಜಾಗೆ ಇದು ಸುಲಭವಾಗಬಹುದು, ಅಲ್ಲದೆ ಜಡೇಜಾ ನಮಗೆ ಬ್ಯಾಟಿಂಗ್​ನಲ್ಲೂ ಸಹಾಯಕ್ಕೆ ಬರಬಲ್ಲರು

Ind vs Eng: ಓವಲ್‌ ಟೆಸ್ಟ್‌ನಲ್ಲಿ ಅಶ್ವಿನ್ ಬದಲು ಜಡೇಜಾಗೆ ಅವಕಾಶ; ಸೂಕ್ತ ಕಾರಣ ವಿವರಿಸಿದ ವಿರಾಟ್ ಕೊಹ್ಲಿ
Virat Kohli and R Ashwin
TV9 Web
| Edited By: |

Updated on: Sep 02, 2021 | 6:06 PM

Share

ಲಂಡನ್‌ನ ಓವಲ್‌ನಲ್ಲಿ ಗುರುವಾರ ಆರಂಭವಾಗಿರುವ ಇಂಗ್ಲೆಂಡ್‌ ವಿರುದ್ಧದ ನಾಲ್ಕನೇ ಟೆಸ್ಟ್‌ಗಾಗಿ ಭಾರತ ತನ್ನ ಇಲೆವೆನ್‌ನಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡಿದೆ. ಟಾಸ್ ಸಮಯದಲ್ಲಿ ನಾಯಕ ವಿರಾಟ್ ಕೊಹ್ಲಿ ವೇಗದ ಬೌಲರ್‌ಗಳಾದ ಉಮೇಶ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ಅಂತಿಮ ಇಲೆವೆನ್‌ಗೆ ಬಂದಿರುವುದನ್ನು ಖಚಿತಪಡಿಸಿದರು ಮತ್ತು ಇಶಾಂತ್ ಶರ್ಮಾ ಮತ್ತು ಮೊಹಮ್ಮದ್ ಶಮಿಯನ್ನು ತಂಡದಿಂದ ಕೈಬಿಡಲಾಗಿದೆ ಎಂಬುದನ್ನು ವಿವರಿಸಿದರು.

ಇಶಾಂತ್ ಮತ್ತು ಶಮಿಗೆ ಇಂಜುರಿ ನಡೆಯುತ್ತಿರುವ ಐದು ಪಂದ್ಯಗಳ ಸರಣಿಯಲ್ಲಿ ಭಾರತ ಮತ್ತೊಮ್ಮೆ ಟಾಸ್ ಕಳೆದುಕೊಂಡಿತು. ಜೋ ರೂಟ್ ನಾಲ್ಕನೇ ಟೆಸ್ಟ್​ನಲ್ಲಿ ಟಾಸ್​ ಗೆದ್ದು ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡರು. ಟಾಸ್​ ನಂತರ ಮಾತನಾಡಿದ ನಾಯಕ ಕೊಹ್ಲಿ, ಇಶಾಂತ್ ಮತ್ತು ಶಮಿಗೆ ಇಂಜುರಿ ಇದೆ, ಹೀಗಾಗಿ ಆಟಕ್ಕೆ ವಿಶ್ರಾಂತಿ ನೀಡಲಾಗಿದೆ ಎಂದು ಹೇಳಿದರು. ಟಾಸ್​ ಗೆದ್ದಿದ್ದರೆ ನಾವು ಕೂಡ ಬೌಲಿಂಗ್ ಆಯ್ಕೆ ಮಾಡಿಕೊಳ್ಳುತ್ತಿದ್ದೇವು ಎಂದು ಕೊಹ್ಲಿ ಹೇಳಿದರು.

ಎರಡು ಬದಲಾವಣೆಗಳು ಇಶಾಂತ್ ಮತ್ತು ಶಮಿಗೆ ಇಂಜುರಿಯಾಗಿದೆ. ಹೀಗಾಗಿ ಉಮೇಶ್ ಮತ್ತು ಶಾರ್ದೂಲ್ ಮರಳಿದ್ದಾರೆ. ಇಂಗ್ಲೆಂಡ್ ನಾಲ್ಕು ಎಡಗೈ ಆಟಗಾರರನ್ನು ಹೊಂದಿದೆ, ಆದ್ದರಿಂದ ಜಡೇಜಾಗೆ ಇದು ಸುಲಭವಾಗಬಹುದು, ಅಲ್ಲದೆ ಜಡೇಜಾ ನಮಗೆ ಬ್ಯಾಟಿಂಗ್​ನಲ್ಲೂ ಸಹಾಯಕ್ಕೆ ಬರಬಲ್ಲರು. ನಮ್ಮ ಸೀಮರುಗಳು ವಿಕೆಟ್ ಮೇಲೆ ಬೌಲಿಂಗ್ ಮಾಡುತ್ತಾರೆ. ಆರಂಭಿಕ ಪಾಲುದಾರಿಕೆ ನಮಗೆ ಅದ್ಭುತವಾಗಿದೆ, ಹೀಗಾಗಿ ನಮಗೆ ಉತ್ತಮ ಆರಂಭ ಸಿಗುವ ನಿರೀಕ್ಷೆ ಇದೆ ಎಂದರು.

ಮತ್ತೊಂದೆಡೆ, ಇಂಗ್ಲೆಂಡ್ ಕೂಡ ತಮ್ಮ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದೆರಡು ಬದಲಾವಣೆಗಳನ್ನು ಮಾಡಿದ್ದು, ಜೋಸ್ ಬಟ್ಲರ್ ಮತ್ತು ಸ್ಯಾಮ್ ಕುರ್ರನ್ ಅವರ ಸ್ಥಾನವನ್ನು ಒಲ್ಲಿ ಪೋಪ್ ಮತ್ತು ಕ್ರಿಸ್ ವೋಕ್ಸ್ ತುಂಬಲಿದ್ದಾರೆ.

Follow Us
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಮೈದುಂಬಿದ ಚಿಕ್ಲಿಹೊಳೆ ಜಲಾಶಯ: ಅರ್ಧ ಚಂದ್ರಾಕೃತಿಯಲ್ಲಿ ಹರಿಯುವ ನೀರು
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಬೀದಿ ದೀಪ ಅಳವಡಿಸದ ಹಿನ್ನೆಲೆ ಅಧಿಕಾರಿಗಳಿಗೆ ಕೃಷ್ಣ ಭೈರೇಗೌಡ ಕ್ಲಾಸ್​​
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
ಶಾಲೆಗೆ ಹೋಗಲು ಪ್ರಾಣ ಪಣಕ್ಕಿಡುತ್ತಿರುವ ಮಕ್ಕಳು! ವಿಡಿಯೋ ವೈರಲ್
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
‘ಅಯೋಗ್ಯ 2’ ತಂಡದ ಭರ್ಜರಿ ಭೋಜನ, ವಿಡಿಯೋ ನೋಡಿ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಮಳೆ ಆರ್ಭಟ: ಉಕ್ಕಿ ಹರಿಯುತ್ತಿರುವ ಮಲಪ್ರಭೆ; ಗಂಗಾಂಬಿಕಾ ಐಕ್ಯ ಸ್ಥಳ ಜಲಾವೃತ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
ಸಿದ್ದರಾಮಯ್ಯ ಮುನಿಸಿಕೊಂಡಿದ್ದಾರಾ?: ಅಸಲಿ ಸತ್ಯ ಬಿಚ್ಚಿಟ್ಟ ಶಿವಲಿಂಗೇಗೌಡ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
3 ವರ್ಷಗಳಲ್ಲಿ 1,000 ರೋಬೋಟಿಕ್ ಸರ್ಜರಿ ಯಶಸ್ವಿ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ದಿನೇಶ್ ಗುಂಡೂರಾವ್​​ಗೆ ಕೈತಪ್ಪಿದ ಸಚಿವ ಸ್ಥಾನ: ಬೆಂಬಲಿಗರಿಂದ ಪ್ರತಿಭಟನೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ಎಒ, ಎಎಒ ನೇಮಕಾತಿ ಸಮಸ್ಯೆ: ವಿದ್ಯಾರ್ಥಿಗಳ ಜೊತೆ ಡಿಕೆಶಿ ಚರ್ಚೆ
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್
ರಾಜೀನಾಮೆ ಬೆದರಿಕೆ ಹಾಕಿದವರ ಮಾಹಿತಿ ಕೋರಿದ ಕಾಂಗ್ರೆಸ್ ಹೈಕಮಾಂಡ್