AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್​ನಲ್ಲಾದರೂ ಅಶ್ವಿನ್​ಗೆ ಸಿಗುತ್ತಾ ಅವಕಾಶ? ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಹೇಳಿದ್ದೇನು?

IND vs ENG: ಹೆಡಿಂಗ್ಲಿಯಲ್ಲಿ (ಲೀಡ್ಸ್)ಅಶ್ವಿನ್​ಗೆ ಅವಕಾಶ ಸಿಗುವುದು ಅನುಮಾನ ಎಂದಿದ್ದಾರೆ. ಪಿಚ್ ಒಣ ಮತ್ತು ನಿಧಾನವಾಗಿದ್ದರಿಂದ ಲಾರ್ಡ್ಸ್​ನಲ್ಲಿ ಅಶ್ವಿನ್​ರನ್ನು ಆಡಿಸುವ ನಿರೀಕ್ಷೆ ಇತ್ತು. ಆದರೆ ಲೀಡ್ಸ್‌ನಲ್ಲಿ ಸ್ಪಿನ್ನರ್‌ಗಳ ಅಗತ್ಯವಿಲ್ಲ ಎಂದಿದ್ದಾರೆ.

IND vs ENG: ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್​ನಲ್ಲಾದರೂ ಅಶ್ವಿನ್​ಗೆ ಸಿಗುತ್ತಾ ಅವಕಾಶ? ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಹೇಳಿದ್ದೇನು?
ಇನ್ನು ಅಶ್ವಿನ್​ಗೆ ಅವಕಾಶ ನೀಡದಿರಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್​ಗೆ ಯಾವುದೇ ಕಾರಣವಿಲ್ಲ ಎಂದು ಕೂಡ ಹೇಳಬಹುದು. ಓವಲ್​ ಮೈದಾನದಲ್ಲಿ ಈ ಹಿಂದೆ ನಡೆದ ಪಂದ್ಯದಲ್ಲಿ ಒಟ್ಟು 34 ವಿಕೆಟ್​ಗಳು ಉರುಳಿವೆ. ಆ ಪಂದ್ಯದಲ್ಲಿ ಅಶ್ವಿನ್ ಕೂಡ ಭಾಗವಾಗಿದ್ದರು ಎಂಬುದು ವಿಶೇಷ.
TV9 Web
| Edited By: |

Updated on: Aug 19, 2021 | 7:15 PM

Share

ಭಾರತ ಎರಡನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಅನ್ನು ಸೋಲಿಸಿ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿತು. ಜೊತೆಗೆ ನಾಯಕ ವಿರಾಟ್ ಕೊಹ್ಲಿ ಈ ವಿಜಯದೊಂದಿಗೆ ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ. ಅದೇನೆಂದರೆ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಿಗೆ ಲಾರ್ಡ್ಸ್ ಟೆಸ್ಟ್​ನಲ್ಲಿ ಅವಕಾಶ ನೀಡಲಾಗುವುದು ಎಂದು ಪ್ರತಿಯೊಬ್ಬ ಕ್ರಿಕೆಟ್ ತಜ್ಞರು ಊಹಿಸಿದ್ದರು. ಆದರೆ ಇದು ಸಂಭವಿಸದಿದ್ದಾಗ, ನಾಯಕ ಮತ್ತು ಕೋಚ್ ರವಿಶಾಸ್ತ್ರಿ ಅವರನ್ನು ತೀವ್ರವಾಗಿ ಟೀಕಿಸಲಾಯಿತು. ಈಗ ಅದು ಪಂದ್ಯದ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರದ ಕಾರಣ, ಅಶ್ವಿನ್ ಮುಂದಿನ ಟೆಸ್ಟ್​ನಲ್ಲಿ ಅವಕಾಶ ಪಡೆಯುವ ನಿರೀಕ್ಷೆ ಕೂಡ ಇಲ್ಲದಿರುವ ಸಾಧ್ಯತೆ ಹೆಚ್ಚಾಗಿದೆ. ಮಾಜಿ ಕ್ರಿಕೆಟಿಗ ಮತ್ತು ವ್ಯಾಖ್ಯಾನಕಾರ ಆಕಾಶ್ ಚೋಪ್ರಾ ಕೂಡ ಇದನ್ನೇ ಹೇಳಿಕೊಂಡಿದ್ದಾರೆ.

ಭಾರತ ತಂಡವು ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ 4 ವೇಗದ ಬೌಲರ್‌ಗಳು ಮತ್ತು ಒಬ್ಬ ಸ್ಪಿನ್ನರ್ ಜೊತೆಗೆ ಕಣಕ್ಕಿಳಿದಿದೆ. ಇಲ್ಲಿಯವರೆಗೆ ಈ ನಿರ್ಧಾರ ಸರಿಯಾಗಿದೆ ಎಂದು ಸಾಬೀತಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಈ ಸರಣಿಯಲ್ಲಿ ಇದೇ ತಂಡ ಮುಂದುವರಿಯುತ್ತದೆ ಎಂದು ನಿರೀಕ್ಷಿಸಲಾಗಿದೆ. ಆದಾಗ್ಯೂ, ಲಾರ್ಡ್ಸ್‌ನಲ್ಲಿನ ನಿಧಾನಗತಿಯ ಪಿಚ್ ಮತ್ತು ಲಂಡನ್‌ನಲ್ಲಿನ ಶುಷ್ಕ ವಾತಾವರಣವನ್ನು ಪರಿಗಣಿಸಿ, ಅಶ್ವಿನ್‌ಗೆ ಅವಕಾಶ ಸಿಗಬಹುದೆಂದು ಊಹಿಸಲಾಗಿತ್ತು. ಆದರೆ ಅದು ಆಗಲಿಲ್ಲ ಮತ್ತು 4 ಪೇಸರ್‌ಗಳು ಮತ್ತು ರವೀಂದ್ರ ಜಡೇಜಾ ಅವರೊಂದಿಗೆ ಆಡಿದಗಲೂ ತಂಡ ಗೆದ್ದಿತು.

ಲಾರ್ಡ್ಸ್‌ನಲ್ಲಿ ಅವಕಾಶವಿತ್ತು, ಲೀಡ್ಸ್‌ನಲ್ಲಿ ಸಾಧ್ಯವಿಲ್ಲ ಇಂತಹ ಪರಿಸ್ಥಿತಿಯಲ್ಲಿ, ಆಗಸ್ಟ್ 25 ರಿಂದ ಆರಂಭವಾಗುವ ಲೀಡ್ಸ್ ಟೆಸ್ಟ್ ನಲ್ಲಿ ಅಶ್ವಿನ್ ಗೆ ಅವಕಾಶ ಸಿಗುವುದೇ ಎಂಬುದು ಈಗಿರುವ ಪ್ರಶ್ನೆ? ಇದಕ್ಕೆ ಆಕಾಶ್ ಚೋಪ್ರಾ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ತನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ಪೋಸ್ಟ್ ಮಾಡಿದ ವೀಡಿಯೋದಲ್ಲಿ ಅಶ್ವಿನ್‌ಗೆ ಅವಕಾಶ ನೀಡುವ ಸಾಧ್ಯತೆಯ ಕುರಿತು ಮಾತನಾಡಿದ ಆಕಾಶ್, “ಹೆಡಿಂಗ್ಲಿಯಲ್ಲಿ (ಲೀಡ್ಸ್)ಅಶ್ವಿನ್​ಗೆ ಅವಕಾಶ ಸಿಗುವುದು ಅನುಮಾನ ಎಂದಿದ್ದಾರೆ. ಪಿಚ್ ಒಣ ಮತ್ತು ನಿಧಾನವಾಗಿದ್ದರಿಂದ ಲಾರ್ಡ್ಸ್​ನಲ್ಲಿ ಅಶ್ವಿನ್​ರನ್ನು ಆಡಿಸುವ ನಿರೀಕ್ಷೆ ಇತ್ತು. ಆದರೆ ಲೀಡ್ಸ್‌ನಲ್ಲಿ ಸ್ಪಿನ್ನರ್‌ಗಳ ಅಗತ್ಯವಿಲ್ಲ ಎಂದಿದ್ದಾರೆ.

ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಡಲಾಗಿದೆ, ಈಗ ಓವಲ್ ಟೆಸ್ಟ್‌ನಲ್ಲಿ ಅವಕಾಶ ವಿಶ್ವ ನಂಬರ್ ಒನ್ ಟೆಸ್ಟ್ ಸ್ಪಿನ್ನರ್ ಅಶ್ವಿನ್ ಜೂನ್​ನಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಟೀಂ ಇಂಡಿಯಾ ಆಡುವ ಹನ್ನೊಂದರ ಭಾಗವಾಗಿದ್ದರು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಎರಡೂ ವಿಕೆಟ್ಗಳು ಅವರ ಖಾತೆಯಲ್ಲಿ ಬಂದವು. ಇದರ ಹೊರತಾಗಿ, ಟೆಸ್ಟ್ ಸರಣಿ ಆರಂಭವಾಗುವ ಮೊದಲು ಇಂಗ್ಲೆಂಡ್‌ನಲ್ಲಿ ಸರ್ರೆ ಪರ ಕೌಂಟಿ ಪಂದ್ಯವನ್ನು ಆಡಿದ ಅಶ್ವಿನ್ ಎರಡನೇ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು. ಇದರ ಹೊರತಾಗಿಯೂ, ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯದಲ್ಲಿ ಅವರು ಪ್ಲೇಯಿಂಗ್ ಇಲೆವೆನ್ ನಲ್ಲಿ ಸ್ಥಾನ ಪಡೆಯಲಿಲ್ಲ. ಆದಾಗ್ಯೂ, ಲಂಡನ್‌ನ ಓವಲ್‌ನಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್‌ನಲ್ಲಿ ಅವರು ತಂಡಕ್ಕೆ ಬರುವ ನಿರೀಕ್ಷೆಯಿದೆ. ಏಕೆಂದರೆ ಓವಲ್‌ನಲ್ಲಿರುವ ಪಿಚ್ ಸ್ಪಿನ್ನರ್‌ಗಳಿಗೆ ಸಹಾಯ ಮಾಡುತ್ತದೆ ಮತ್ತು ಈ ಮೈದಾನದಲ್ಲಿ ಅಶ್ವಿನ್ ಸರ್ರೆ ಪರ ಆರು ವಿಕೆಟ್ ಪಡೆದರು.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು