AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್‌ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಭಾರತ ಎ ತಂಡ ಪ್ರಕಟ; ಆರ್​ಸಿಬಿ ಆಟಗಾರನಿಗೆ ಅವಕಾಶ

IND vs ENG: ಬಿಸಿಸಿಐ ಆಯ್ಕೆ ಮಾಡಿರುವ ಭಾರತ ಎ ತಂಡದಲ್ಲಿ ಸರ್ಫರಾಜ್ ಖಾನ್ ಮತ್ತು ರಜತ್ ಪಾಟಿದಾರ್​ಗೆ ಅವಲಾಶ ನೀಡಲಾಗಿದೆ. ಈ ತಂಡದ ನಾಯಕತ್ವವನ್ನು ಅಭಿಮನ್ಯು ಈಶ್ವರನ್ ಅವರಿಗೆ ನೀಡಲಾಗಿದ್ದು, ಇವರಲ್ಲದೆ ಟೀಂ ಇಂಡಿಯಾ ಪರ ಆಡಿರುವ ನವದೀಪ್ ಸೈನಿ ಕೂಡ ಈ ತಂಡದ ಭಾಗವಾಗಿದ್ದಾರೆ.

IND vs ENG: ಇಂಗ್ಲೆಂಡ್‌ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಭಾರತ ಎ ತಂಡ ಪ್ರಕಟ; ಆರ್​ಸಿಬಿ ಆಟಗಾರನಿಗೆ ಅವಕಾಶ
ಭಾರತ ಎ ತಂಡ
ಪೃಥ್ವಿಶಂಕರ
|

Updated on:Jan 06, 2024 | 5:20 PM

Share

ಸದ್ಯ ಸುದೀರ್ಘ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಗಿಸಿ ಭಾರತಕ್ಕೆ ಮರಳಿರುವ ಟೀಂ ಇಂಡಿಯಾಕ್ಕೆ 1 ವಾರಗಳ ಕಾಲ ವಿಶ್ರಾಂತಿ ಸಿಗಲಿದೆ. ಆ ಬಳಿಕ ತಂಡ ಅಫ್ಘಾನಿಸ್ತಾನ (India vs Afghanistan) ವಿರುದ್ಧ 3 ಪಂದ್ಯಗಳ ಟಿ20 ಸರಣಿಯನ್ನು ಆಡಲಿದೆ. ತವರಿನಲ್ಲಿ ಅಫ್ಘಾನ್ ಪಡೆಯನ್ನು ಎದುರಿಸಲು ಯಾವ ತಂಡವನ್ನು ಬಿಸಿಸಿಐ (BCCI) ಕಣಕ್ಕಿಳಿಸಲಿದೆ ಎಂಬುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಟಿ20 ವಿಶ್ವಕಪ್​ಗೂ ಮುನ್ನ ಭಾರತಕ್ಕೆ ಇದೇ ಕೊನೆಯ ಟಿ20 ಸರಣಿಯಾಗಿದೆ. ಈ ಸರಣಿಯ ಬಳಿಕ ಟೀಂ ಇಂಡಿಯಾ, ಇಂಗ್ಲೆಂಡ್ (India vs England) ವಿರುದ್ಧ ಟೆಸ್ಟ್ ಸರಣಿಯನ್ನು ಆಡಲಿದೆ. ಈ ಎರಡೂ ಸರಣಿಗಳಿಗಾಗಿ ಇನ್ನು ತಂಡವನ್ನು ಪ್ರಕಟಿಸಬೇಕಿದೆ. ಏತನ್ಮಧ್ಯೆ, ಶನಿವಾರ ಮಧ್ಯಾಹ್ನ ಬಿಸಿಸಿಐ, ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಭಾರತ ಎ ತಂಡವನ್ನು ಪ್ರಕಟಿಸಿದೆ.

ರಜತ್ ಪಾಟಿದಾರ್​ಗೆ ಅವಕಾಶ

ಬಿಸಿಸಿಐ ಆಯ್ಕೆ ಮಾಡಿರುವ ಭಾರತ ಎ ತಂಡದಲ್ಲಿ ಸರ್ಫರಾಜ್ ಖಾನ್ ಮತ್ತು ರಜತ್ ಪಾಟಿದಾರ್​ಗೆ ಅವಕಾಶ ನೀಡಲಾಗಿದೆ. ಈ ತಂಡದ ನಾಯಕತ್ವವನ್ನು ಅಭಿಮನ್ಯು ಈಶ್ವರನ್ ಅವರಿಗೆ ನೀಡಲಾಗಿದ್ದು, ಇವರಲ್ಲದೆ ಟೀಂ ಇಂಡಿಯಾ ಪರ ಆಡಿರುವ ನವದೀಪ್ ಸೈನಿ ಕೂಡ ಈ ತಂಡದ ಭಾಗವಾಗಿದ್ದಾರೆ. ಆದರೆ ಅಚ್ಚರಿಯ ಸಂಗತಿ ಎಂದರೆ ಪ್ರಸ್ತುತ ಕ್ರಿಕೆಟ್ ಲೋಕದ ಸೂಪರ್ ಸ್ಟಾರ್ ರಿಂಕು ಸಿಂಗ್​ಗೆ ಈ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಕೆಎಸ್ ಭರತ್ ಈ ತಂಡದ ಭಾಗವಾಗಿದ್ದರೆ, ಧ್ರುವ್ ಜುರೆಲ್ ಎರಡನೇ ವಿಕೆಟ್ ಕೀಪರ್ ಆಗಿ ಆಯ್ಕೆಯಾಗಿದ್ದಾರೆ.

ಟಿ20 ವಿಶ್ವಕಪ್​ಗೆ ಹಾರ್ದಿಕ್ ನಾಯಕ! ಖಚಿತ ಪಡಿಸಿದ ಸ್ಟಾರ್ ಸ್ಪೋರ್ಟ್ಸ್​ ಪೋಸ್ಟರ್

ವೇಳಾಪಟ್ಟಿ ಹೇಗಿದೆ?

ಈ ಅಭ್ಯಾಸ ಪಂದ್ಯಗಳ ವೇಳಾಪಟ್ಟಿಯನ್ನು ನೋಡುವುದಾದರೆ ಎರಡು ದಿನ ಮತ್ತು ನಾಲ್ಕು ದಿನಗಳ ರೆಡ್ ಬಾಲ್ ಪಂದ್ಯ ನಡೆಯಲಿದೆ. ಈ ಎರಡೂ ಪಂದ್ಯಗಳಿಗೆ ತಂಡವನ್ನು ಆಯ್ಕೆ ಮಾಡಲಾಗಿದೆ. ಮೊದಲ ಪಂದ್ಯ ಜನವರಿ 12 ಮತ್ತು 13 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂ ಬಿ ಗ್ರೌಂಡ್‌ನಲ್ಲಿ ನಡೆಯಲಿದೆ. ನಂತರ ಜನವರಿ 17 ರಿಂದ ಜನವರಿ 20 ರವರೆಗೆ ಎರಡನೇ ಅಭ್ಯಾಸ ಪಂದ್ಯ ನರೇಂದ್ರ ಮೋದಿ ಕ್ರೀಡಾಂಗಣದ ಮುಖ್ಯ ಮೈದಾನದಲ್ಲಿ ನಡೆಯಲಿದೆ. ನಂತರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿಯು ಜನವರಿ 25 ರಿಂದ ಪ್ರಾರಂಭವಾಗಲಿದೆ.

ಅಭ್ಯಾಸ ಪಂದ್ಯಕ್ಕೆ ಭಾರತ ಎ ತಂಡ ಹೀಗಿದೆ

ಅಭಿಮನ್ಯು ಈಶ್ವರನ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಸರ್ಫರಾಜ್ ಖಾನ್, ಪ್ರದೋಶ್ ರಂಜನ್ ಪಾಲ್, ಕೆಎಸ್ ಭರತ್ (ವಿಕೆಟ್ ಕೀಪರ್), ಮಾನವ್ ಸುತಾರ್, ಪುಲ್ಕಿತ್ ನಾರಂಗ್, ನವದೀಪ್ ಸೈನಿ, ತುಷಾರ್ ದೇಶಪಾಂಡೆ, ವಿದ್ವತ್ ಕಾವೇರಪ್ಪ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಆಕಾಶದೀಪ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:18 pm, Sat, 6 January 24

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್