AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ- ಇಂಗ್ಲೆಂಡ್ ಅಂತಿಮ ಟೆಸ್ಟ್​ ರದ್ದು; ಇಸಿಬಿ ಖಜಾನೆಗೆ ಬಿತ್ತು ಭಾರಿ ಮೊತ್ತದ ಬರೆ!

IND vs ENG: ಇದು ಏಳು-ಅಂಕಿಗಳ ಬಹು-ಮಿಲಿಯನ್ ಪೌಂಡ್ ಒಪ್ಪಂದವಾಗಿತ್ತು. ಈಗ ನಾವು ನಷ್ಟವನ್ನು ಸರಿದೂಗಿಸುವುದರ ಮೇಲೆ ಕೆಲಸ ಮಾಡಬೇಕು ಎಂದಿದ್ದಾರೆ.

IND vs ENG: ಭಾರತ- ಇಂಗ್ಲೆಂಡ್ ಅಂತಿಮ ಟೆಸ್ಟ್​ ರದ್ದು; ಇಸಿಬಿ ಖಜಾನೆಗೆ ಬಿತ್ತು ಭಾರಿ ಮೊತ್ತದ ಬರೆ!
ಮ್ಯಾಂಚೆಸ್ಟರ್ ಟೆಸ್ಟ್
TV9 Web
| Edited By: |

Updated on: Sep 10, 2021 | 7:59 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ಇಂದಿನಿಂದ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್​ನಲ್ಲಿ ಆರಂಭವಾಗಬೇಕಿತ್ತು. ಆದರೆ ಟೀಂ ಇಂಡಿಯಾದಲ್ಲಿ ಕೋವಿಡ್ ಪ್ರಕರಣಗಳಿಂದಾಗಿ ಅದನ್ನು ರದ್ದುಗೊಳಿಸಲಾಗಿದೆ. ತಂಡದ ಎರಡನೇ ಫಿಸಿಯೋ ಯೋಗೇಶ್ ಪರ್ಮಾರ್ ಅವರ ಕೋವಿಡ್ ಫಲಿತಾಂಶವು ಪಾಸಿಟಿವ್ ಬಂದಿದೆ. ಆದ್ದರಿಂದ ತಂಡದ ಆಟಗಾರರು ಮೈದಾನಕ್ಕಿಳಿಯಲು ನಿರಾಕರಿಸಿದರು. ಇಡೀ ಕ್ರಿಕೆಟ್ ಜಗತ್ತು ಇದರಿಂದ ನಿರಾಶೆಗೊಂಡಿದೆ ಏಕೆಂದರೆ ಈ ಪಂದ್ಯದಿಂದ ಸರಣಿಯನ್ನು ನಿರ್ಧರಿಸಲಾಗುತ್ತಿತ್ತು. ಇದೆಲ್ಲವೂಗಳ ಜೊತೆಗೆ ಪಂದ್ಯವನ್ನು ರದ್ದುಗೊಳಿಸುವುದರಿಂದ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯ ಮೇಲೆ ಆರ್ಥಿಕ ಪರಿಣಾಮ ಬೀರುತ್ತದೆ ಮತ್ತು ಲಂಕಶೈರ್ ಕೌಂಟಿ ಕ್ಲಬ್‌ಗೂ ಸಂಕಷ್ಟ ಎದುರಾಗಿದೆ. ಲಂಕ್ಶೈರ್ ಕೌಂಟಿ ಕ್ರಿಕೆಟ್ ಕ್ಲಬ್ ಸಿಇಒ ಡೇನಿಯಲ್ ಗಿಡ್ನಿ ಶುಕ್ರವಾರ ಇದು ಆರ್ಥಿಕ ಪರಿಣಾಮಗಳ ಬಗ್ಗೆ ಮಾತನಾಡಿದರು.

ಭಾರತ ತಂಡದ ಫಿಸಿಯೊ ಯೋಗೀಶ್ ಪರ್ಮಾರ್ ಗುರುವಾರ ಕೊರೊನಾ ಪಾಸಿಟಿವ್ ಎಂದು ಕಂಡುಬಂದ ನಂತರ ಪಂದ್ಯ ಆರಂಭಕ್ಕೆ ಕೆಲವು ಗಂಟೆಗಳ ಮೊದಲು ಕೊನೆಯ ಟೆಸ್ಟ್ ಅನ್ನು ರದ್ದುಗೊಳಿಸಲಾಯಿತು. ಈ ಬಗ್ಗೆ ಮಾತನಾಡಿದ ಗಿಡ್ನಿ, ಇದು ಖಂಡಿತವಾಗಿಯೂ ಗಂಭೀರವಾದ ಆರ್ಥಿಕ ಪರಿಣಾಮಗಳನ್ನು ಉಂಟುಮಾಡುತ್ತದೆ. ಓಲ್ಡ್ ಟ್ರಾಫರ್ಡ್ ನೂರು ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ಅನ್ನು ಆಯೋಜಿಸುತ್ತಿರುವುದರಿಂದ ವಿಶ್ವಾಸಾರ್ಹತೆಯ ಮೇಲೆ ಪರಿಣಾಮ ಬೀಳಲಿದೆ. ಇದರಿಂದ ನಮಗೆ ದುಃಖ ಮತ್ತು ನಿರಾಶೆಯಾಗಿದೆ.

ಟಿಕೆಟ್ ಹಣವನ್ನು ಹಿಂತಿರುಗಿಸಲಾಗುತ್ತದೆ ಈ ಪಂದ್ಯಕ್ಕಾಗಿ ಟಿಕೆಟ್ ಖರೀದಿಸಿದವರಿಗೆ ಅವರ ಹಣವನ್ನು ಹಿಂತಿರುಗಿಸಲಾಗುವುದು ಎಂದು ಗಿಡ್ನಿ ಹೇಳಿದ್ದಾರೆ. ನನ್ನ ಸಿಬ್ಬಂದಿ, ಪೂರೈಕೆದಾರರು, ಷೇರುದಾರರು, ಪಾಲುದಾರರು ಮತ್ತು ಪ್ರಾಯೋಜಕರು ಹಾಗೂ ಪ್ರೇಕ್ಷಕರ ಬಗ್ಗೆ ನನಗೆ ಕರುಣೆ ಇದೆ. ಅವರು ಕೊರೊನಾ ಸಾಂಕ್ರಾಮಿಕದ ನಡುವೆ ಟಿಕೆಟ್ಗಳಿಗಾಗಿ ಹಣವನ್ನು ಖರ್ಚು ಮಾಡಿದರು ಮತ್ತು ಪಂದ್ಯವನ್ನು ವೀಕ್ಷಿಸಲು ಬಯಸಿದ್ದರು. ಲಂಕಶೈರ್ ಕ್ರಿಕೆಟ್ ಕ್ಲಬ್ ಪರವಾಗಿ ನಾನು ಅವರಲ್ಲಿ ಕ್ಷಮೆಯಾಚಿಸುತ್ತೇನೆ. ಎಲ್ಲಾ ಪ್ರೇಕ್ಷಕರು ಟಿಕೆಟ್ ಹಣವನ್ನು ಮರಳಿ ಪಡೆಯುತ್ತಾರೆ. ನಾವು ಈ ಬಗ್ಗೆ ಇಸಿಬಿಯೊಂದಿಗೆ ಮಾತನಾಡುತ್ತಿದ್ದೇವೆ ಎಂದಿದ್ದಾರೆ.

ತುಂಬಾ ನಷ್ಟ ಅದೇ ಸಮಯದಲ್ಲಿ, ಆಂಗ್ಲ ಪತ್ರಿಕೆ ಟೆಲಿಗ್ರಾಫ್ ಗಿಡ್ನಿಯವರನ್ನು ಉಲ್ಲೇಖಿಸಿ, ಈ ಕ್ಲಬ್ ದೊಡ್ಡ ನಷ್ಟವನ್ನು ಅನುಭವಿಸಿದೆ, ಅದಕ್ಕೆ ಸಹಾಯದ ಅಗತ್ಯವಿದೆ. ಇದು ಏಳು-ಅಂಕಿಗಳ ಬಹು-ಮಿಲಿಯನ್ ಪೌಂಡ್ ಒಪ್ಪಂದವಾಗಿತ್ತು. ಈಗ ನಾವು ನಷ್ಟವನ್ನು ಸರಿದೂಗಿಸುವುದರ ಮೇಲೆ ಕೆಲಸ ಮಾಡಬೇಕು ಎಂದಿದ್ದಾರೆ.

ಇಸಿಬಿ ಸಿಇಒ ಹೇಳಿದ್ದಿದು ಒಂದು ವೇಳೆ ಭಾರತ ಈ ಪಂದ್ಯವನ್ನು ಸೋತಿದ್ದರೆ, ಇಸಿಬಿಯು ಅದಕ್ಕೆ ವಿಮೆಯನ್ನು ಹೊಂದಿತ್ತು. ಇದರ ಹೊರತಾಗಿ, ರಾಜಕಾರಣಿ ಅಥವಾ ಭಯೋತ್ಪಾದಕ ದಾಳಿಯಿಂದಾಗಿ ಈ ಪಂದ್ಯವನ್ನು ರದ್ದುಗೊಳಿಸಿದರೆ, ಅದನ್ನು ಇಸಿಬಿಯೊಂದಿಗೆ ವಿಮೆ ಮಾಡಲಾಗಿತ್ತು. ಆದರೆ ಕೋವಿಡ್‌ನಿಂದ ಪಂದ್ಯವನ್ನು ರದ್ದುಗೊಳಿಸಲು ಇಸಿಬಿಗೆ ವಿಮೆ ಇರಲಿಲ್ಲ, ಇದು ಬಹಳಷ್ಟು ನಷ್ಟವನ್ನು ಉಂಟುಮಾಡುತ್ತದೆ. ಇಸಿಬಿಯ ಸಿಇಒ ಟಾಮ್ ಹ್ಯಾರಿಸನ್ ರನ್ನು ಉಲ್ಲೇಖಿಸಿದ ಟೆಲಿಗ್ರಾಫ್, ನಾವು ವಿವಿಧ ರೀತಿಯ ವಿಮೆಯನ್ನು ಹೊಂದಿದ್ದೇವೆ ಮತ್ತು ಇದು ಕಠಿಣ ಪರಿಸ್ಥಿತಿಯಾಗಿದೆ. ಜೊತೆಗೆ ಹಣಕಾಸಿನ ಪರಿಣಾಮಗಳನ್ನು ಹೊಂದಿದೆ, ಆದರೆ ನಾವು ಅದನ್ನು ಸರಿದೂಗಿಸಲು ಪ್ರಯತ್ನಿಸುತ್ತಿದ್ದೇವೆ ಎಂದಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ