AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs IND: ಕೊನೆಯ ದಿನ ಚೇಸ್ ಮಾಡಿ ಗೆಲ್ಲಲಿದೆಯಾ ಇಂಗ್ಲೆಂಡ್? ಟೀಮ್ ಇಂಡಿಯಾಗೆ ಭಯ ಶುರು

IND vs ENG: ಇಂಗ್ಲೆಂಡ್ ತಂಡವು ಇತ್ತೀಚೆಗೆ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳನ್ನು ಚೇಸಿಂಗ್ ಮಾಡಿ ಗೆದ್ದುಕೊಂಡಿದೆ.

ENG vs IND: ಕೊನೆಯ ದಿನ ಚೇಸ್ ಮಾಡಿ ಗೆಲ್ಲಲಿದೆಯಾ ಇಂಗ್ಲೆಂಡ್? ಟೀಮ್ ಇಂಡಿಯಾಗೆ ಭಯ ಶುರು
IND vs ENG
TV9 Web
| Edited By: |

Updated on: Jul 04, 2022 | 6:58 PM

Share

ಭಾರತ-ಇಂಗ್ಲೆಂಡ್ (India vs England) ನಡುವೆ ಎಡ್ಜ್​ಬಾಸ್ಟನ್​ನಲ್ಲಿರುವ ನಡೆಯುತ್ತಿರುವ 5ನೇ ಟೆಸ್ಟ್ ಪಂದ್ಯವು ಇದೀಗ ಕುತೂಹಲಘಟ್ಟದತ್ತ ಸಾಗುತ್ತಿದೆ. ಏಕೆಂದರೆ ಮೊದಲ ಇನಿಂಗ್ಸ್​ ಭರ್ಜರಿ ಬ್ಯಾಟಿಂಗ್ ಮಾಡಿದ್ದ ಟೀಮ್ ಇಂಡಿಯಾ 2ನೇ ಇನಿಂಗ್ಸ್​ನಲ್ಲಿ ನಿರೀಕ್ಷಿತ ಆಟ ಪ್ರದರ್ಶಿಸಿಲ್ಲ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕಲೆಹಾಕಿದ 416 ರನ್​ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತಂಡವು 284 ರನ್​ಗಳಿಗೆ ಆಲೌಟ್ ಆಗಿತ್ತು. ಇದೀಗ ಮೊದಲ ಇನಿಂಗ್ಸ್​ನ 132 ರನ್​ಗಳ ಮುನ್ನಡೆಯೊಂದಿಗೆ 4ನೇ ದಿನದಾಟದಲ್ಲಿ ಟೀಮ್ ಇಂಡಿಯಾ 245 ರನ್​ಗಳಿಗೆ ಆಲೌಟ್ ಆಗಿದೆ. ಇದರೊಂದಿಗೆ ಭಾರತ ತಂಡವು ಇಂಗ್ಲೆಂಡ್​ಗೆ 378 ರನ್​ಗಳ ಟಾರ್ಗೆಟ್ ನೀಡಿದೆ. ವಿಶೇಷ ಎಂದರೆ ನಾಲ್ಕನೇ ದಿನದಾಟ ಮೂರನೇ ಸೆಷನ್ ಇನ್ನಷ್ಟೇ ಮುಗಿಯಬೇಕಿದೆ. ಇನ್ನು ಐದನೇ ದಿನದಾಟದ ಕೂಡ ಉಳಿದಿದ್ದು, ಹೀಗಾಗಿ ಇಂಗ್ಲೆಂಡ್ ತಂಡವು ಈ ಬೃಹತ್ ಮೊತ್ತವನ್ನು ಚೇಸ್ ಮಾಡಲಿದೆಯಾ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

ಏಕೆಂದರೆ ಇಂಗ್ಲೆಂಡ್ ತಂಡವು ಇತ್ತೀಚೆಗೆ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ದದ ಟೆಸ್ಟ್ ಸರಣಿಯಲ್ಲಿ ಮೂರು ಪಂದ್ಯಗಳನ್ನು ಚೇಸಿಂಗ್ ಮಾಡಿ ಗೆದ್ದುಕೊಂಡಿದೆ. ಲಾರ್ಡ್ಸ್​ನಲ್ಲಿ ನಡೆದ ಮೊದಲ ಟೆಸ್ಟ್​ನಲ್ಲಿ ಇಂಗ್ಲೆಂಡ್ 277 ರನ್​ಗಳನ್ನು ಚೇಸ್ ಮಾಡಿತ್ತು. ಇನ್ನು ಟ್ರೆಂಟ್ ಬ್ರಿಡ್ಜ್​ನಲ್ಲಿ ನಡೆದ 2ನೇ ಪಂದ್ಯವನ್ನು ಚೇಸ್ ಮಾಡಿ ಹೊಸ ದಾಖಲೆ ಬರೆದಿತ್ತು. ಕೊನೆಯ ದಿನದಾಟದಲ್ಲಿ 299 ರನ್​ಗಳ ಟಾರ್ಗೆಟ್ ಪಡೆದ ಇಂಗ್ಲೆಂಡ್ 22 ಓವರ್​ಗಳು ಬಾಕಿಯಿರುವಂತೆ ಬೆನ್ನತ್ತಿ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತ್ತು. ಹಾಗೆಯೇ ಹೆಡಿಂಗ್ಲೆಯಲ್ಲಿ ನಡೆದ ಮೂರನೇ ಪಂದ್ಯವನ್ನೂ ಕೂಡ ಇಂಗ್ಲೆಂಡ್​ 296 ರನ್​ಗಳ ಗುರಿ ಬೆನ್ನತ್ತಿ ಗೆದ್ದುಕೊಂಡಿತ್ತು.

ಈ ಮೂರು ಪಂದ್ಯಗಳ ಗೆಲುವಿನ ರೂವಾರಿಗಳೆಂದರೆ ಜೋ ರೂಟ್, ಜಾನಿ ಬೈರ್​ಸ್ಟೋವ್ ಹಾಗೂ ಬೆನ್​ ಸ್ಟೋಕ್ಸ್. ಇಲ್ಲಿ ಮೊದಲ ಇನಿಂಗ್ಸ್​ನಲ್ಲಿ ಭರ್ಜರಿ ಶತಕ ಸಿಡಿಸಿ ಬೈರ್​ಸ್ಟೋವ್ ಟೀಮ್ ಇಂಡಿಯಾ ಬೌಲರ್​ಗಳಿಗೆ ನಡುಕ ಹುಟ್ಟಿಸಿದ್ದಾರೆ. ಇದೀಗ 2ನೇ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಇಂಗ್ಲೆಂಡ್​ಗೆ 378 ರನ್​ಗಳ ಟಾರ್ಗೆಟ್ ನೀಡಿದೆ. ಇಲ್ಲಿ ಒಂದು ದಿನದಾಟ ಸಂಪೂರ್ಣ ಬಾಕಿಯಿರುವ ಕಾರಣ ಪಂದ್ಯದ ಚಿತ್ರಣ ಬದಲಾಗಲಿದೆಯಾ ಎಂಬ ಪ್ರಶ್ನೆಗಳು ಕಾಡಲಾರಂಭಿಸಿದೆ.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಏಕೆಂದರೆ ಈ ಹಿಂದೆ ಕೂಡ ಇಂಗ್ಲೆಂಡ್ ತಂಡವು ನಾಲ್ಕನೇ ಇನಿಂಗ್ಸ್​ನಲ್ಲಿ 2 ಬಾರಿ 300ಕ್ಕೂ ಅಧಿಕ ರನ್​ಗಳನ್ನು ಬೆನ್ನತ್ತಿ ಗೆದ್ದ ಇತಿಹಾಸ ಹೊಂದಿದೆ. 1977 ರಲ್ಲಿ ಭಾರತದ ವಿರುದ್ದ ಇಂಗ್ಲೆಂಡ್ 339 ರನ್​ಗಳ ಚೇಸ್ ಮಾಡಿ ಗೆಲುವು ದಾಖಲಿಸಿತ್ತು. ಇದಾದ ಬಳಿಕ ಮತ್ತೊಮ್ಮೆ ಐತಿಹಾಸಿಕ ಚೇಸಿಂಗ್ ಗೆಲುವು ದಾಖಲಿಸಿದ್ದು ಆಸ್ಟ್ರೇಲಿಯಾ ವಿರುದ್ದ ಎಂಬುದು ವಿಶೇಷ. ಹೌದು, 2019 ರಲ್ಲಿ ಇಂಗ್ಲೆಂಡ್ ತಂಡವು ಲೀಡ್ಸ್​ನಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ಕೊನೆಯ ಇನಿಂಗ್ಸ್​ನಲ್ಲಿ ಬರೋಬ್ಬರಿ 359 ರನ್​ ಬೆನ್ನತ್ತುವ ಮೂಲಕ ದಾಖಲೆ ಬರೆದಿತ್ತು.

ಇದೀಗ 378 ರನ್​ಗಳ ಟಾರ್ಗೆಟ್ ಇಂಗ್ಲೆಂಡ್ ಮುಂದಿದೆ. ಇಲ್ಲಿ ಇಂಗ್ಲೆಂಡ್​ ಮುಂದಿರುವುದು ಗೆಲುವಿನ ಆಯ್ಕೆ ಮಾತ್ರ. ಏಕೆಂದರೆ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೆ ಸರಣಿ ಟೀಮ್ ಇಂಡಿಯಾ ಪಾಲಾಗಲಿದೆ. ಹೀಗಾಗಿ ಸರಣಿಯನ್ನು ಸಮಬಲಗೊಳಿಸಲು ಇಂಗ್ಲೆಂಡ್​ ಗೆಲ್ಲಲೇಬೇಕು. ಏಕೆಂದರೆ ಈ ಸರಣಿಯು ಕಳೆದ ವರ್ಷ ನಡೆದ ಭಾರತ-ಇಂಗ್ಲೆಂಡ್ ನಡುವಣ ಸರಣಿಯ ಕೊನೆಯ ಪಂದ್ಯವಾಗಿದೆ. ಅಂದರೆ 5 ಪಂದ್ಯಗಳ ಸರಣಿಯ ಮೊದಲ 4 ಪಂದ್ಯಗಳು ಈಗಾಗಲೇ ಮುಗಿದಿದೆ. ಇನ್ನು ಐದನೇ ಪಂದ್ಯವನ್ನು ಕೊರೋನಾ ಕಾರಣದಿಂದಾಗಿ ಈ ವರ್ಷಕ್ಕೆ ಮುಂದೂಡಲಾಗಿತ್ತು. ಅದರಂತೆ ಇದೀಗ ಐದನೇ ಟೆಸ್ಟ್ ಪಂದ್ಯವನ್ನು ಆಡಲಾಗುತ್ತಿದೆ.

ಈ ಸರಣಿಯಲ್ಲಿ ಟೀಮ್ ಇಂಡಿಯಾ 2 ಪಂದ್ಯಗಳನ್ನು ಗೆದ್ದಿದ್ರೆ, ಇಂಗ್ಲೆಂಡ್ ಒಂದು ಜಯ ಸಾಧಿಸಿದೆ. ಇನ್ನು ಇಂದು ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡಿತ್ತು. ಸದ್ಯ ಸರಣಿಯು 2-1 ಅಂತರದಲ್ಲಿದ್ದು, ಹೀಗಾಗಿ ಈ ಪಂದ್ಯದಲ್ಲಿ ಇಂಗ್ಲೆಂಡ್​ ಗೆದ್ದರೆ ಮಾತ್ರ ಸರಣಿ ಸಮಬಲಗೊಳ್ಳಲಿದೆ. ಹಾಗಾಗಿ ಕೊನೆಯ ದಿನದಾಟದಲ್ಲಿ ಇಂಗ್ಲೆಂಡ್ ತಂಡವು ಆಕ್ರಮಣಕಾರಿ ಆಟಕ್ಕೆ ಒತ್ತು ನೀಡುವ ಸಾಧ್ಯತೆ ಹೆಚ್ಚು. ಅದರಂತೆ ಮತ್ತೊಮ್ಮೆ ಜೋ ರೂಟ್, ಜಾನಿ ಬೈರ್​ಸ್ಟೋವ್, ಬೆನ್ ಸ್ಟೋಕ್ಸ್ ಅಬ್ಬರಿಸಲಿದ್ದಾರಾ ಕಾದು ನೋಡಬೇಕಿದೆ.

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ