AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 4 ಬದಲಾವಣೆ ಸಾಧ್ಯತೆ

India vs England Test: ಅ್ಯಂಡರ್ಸನ್-ತೆಂಡೂಲ್ಕರ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡ 5 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ 336 ರನ್​ಗಳಿಂದ ಟೀಮ್ ಇಂಡಿಯಾ ಗೆಲುವು ದಾಖಲಿಸಿತ್ತು. ಮೂರನೇ ಮ್ಯಾಚ್​ನಲ್ಲಿ 22 ರನ್​ಗಳ ಜಯ ಸಾಧಿಸುವಲ್ಲಿ ಇಂಗ್ಲೆಂಡ್ ಯಶಸ್ವಿಯಾಗಿತ್ತು. ಹಾಗೆಯೇ ನಾಲ್ಕನೇ ಪಂದ್ಯವನ್ನು ಟೀಮ್ ಇಂಡಿಯಾ ಡ್ರಾನಲ್ಲಿ ಕೊನೆಗೊಳಿಸಿದೆ. ಇದೀಗ ಐದನೇ ಪಂದ್ಯಕ್ಕಾಗಿ ಉಭಯ ತಂಡಗಳು ಸಜ್ಜಾಗಿದೆ.

IND vs ENG: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 4 ಬದಲಾವಣೆ ಸಾಧ್ಯತೆ
Team India
ಝಾಹಿರ್ ಯೂಸುಫ್
|

Updated on: Jul 30, 2025 | 2:33 PM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಮ್ಯಾಚ್ ನಾಳೆಯಿಂದ (ಜುಲೈ 31) ಶುರುವಾಗಲಿದೆ. ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ 4 ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಈ ಪಂದ್ಯದಿಂದ ಭಾರತ ತಂಡದ ವಿಕೆಟ್ ಕೀಪರ್ ರಿಷಭ್ ಪಂತ್ ಹೊರಗುಳಿದಿದ್ದಾರೆ. ಗಾಯದ ಕಾರಣ ಈ ಪಂದ್ಯಕ್ಕೆ ಪಂತ್ ಅಲಭ್ಯರಾಗಿದ್ದಾರೆ. ಮತ್ತೊಂದೆಡೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಜಸ್​ಪ್ರೀತ್ ಬುಮ್ರಾಗೆ ಕೊನೆಯ ಮ್ಯಾಚ್ ವೇಳೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ. ಅದರಂತೆ ಭಾರತ ತಂಡದ ಆಡುವ ಬಳಗದಲ್ಲಿ 2 ಬದಲಾವಣೆ ಕಂಡು ಬರುವುದು ಖಚಿತ.

ಇನ್ನು ತೊಡೆಸಂದು ಗಾಯದ ಸಮಸ್ಯೆಯ ಕಾರಣ 4ನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಆಕಾಶ್ ದೀಪ್ ಇದೀಗ ಸಂಪೂರ್ಣ ಫಿಟ್ ಆಗಿದ್ದಾರೆ. ಹೀಗಾಗಿ ಅವರು ಸಹ ಐದನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

ಹಾಗೆಯೇ ಕಳೆದ 4 ಪಂದ್ಯಗಳಲ್ಲಿ ಬೆಂಚ್ ಕಾದಿದ್ದ ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಕುಲ್ದೀಪ್ ಯಾದವ್ ಅವರನ್ನು ಕೊನೆಯ ಮ್ಯಾಚ್​ನಲ್ಲಿ ಕಣಕ್ಕಿಳಿಸಲಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ಕುಲ್ದೀಪ್ ಸಹ ಆಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ 4 ಬದಲಾವಣೆ ಕಂಡು ಬರುವ ಸಾಧ್ಯತೆಯಿದೆ.

  • ರಿಷಭ್ ಪಂತ್ ಬದಲಿಗೆ ಐದನೇ ಟೆಸ್ಟ್ ಪಂದ್ಯದಲ್ಲಿ ಧ್ರುವ್ ಜುರೇಲ್ ವಿಕೆಟ್ ಕೀಪರ್ ಬ್ಯಾಟರ್ ಕಣಕ್ಕಿಳಿಯುವುದು ಬಹುತೇಕ ಖಚಿತ.
  • ಜಸ್​ಪ್ರೀತ್ ಬುಮ್ರಾ ಸ್ಥಾನದಲ್ಲಿ ಎಡಗೈ ವೇಗಿ ಅರ್ಷದೀಪ್ ಸಿಂಗ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
  • ಅನ್ಶುಲ್ ಕಂಬೋಜ್ ಬದಲಿಗೆ ಈ ಬಾರಿ ಆಕಾಶ್ ದೀಪ್ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.
  • ಆಲ್​ರೌಂಡರ್ ಶಾರ್ದೂಲ್ ಠಾಕೂರ್ ಅವರನ್ನು ಕೈ ಬಿಟ್ಟು ಕುಲ್ದೀಪ್ ಯಾದವ್​ಗೆ ಚಾನ್ಸ್ ನೀಡುವ ಸಾಧ್ಯತೆ ಹೆಚ್ಚಿದೆ.

ಟೀಮ್ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ 11:

  1. ಕೆಎಲ್ ರಾಹುಲ್
  2. ಯಶಸ್ವಿ ಜೈಸ್ವಾಲ್
  3. ಸಾಯಿ ಸುದರ್ಶನ್
  4. ಶುಭ್​ಮನ್ ಗಿಲ್
  5. ಧ್ರುವ್ ಜುರೇಲ್ (ವಿಕೆಟ್ ಕೀಪರ್)
  6. ರವೀಂದ್ರ ಜಡೇಜಾ
  7. ವಾಷಿಂಗ್ಟನ್ ಸುಂದರ್
  8. ಕುಲ್ದೀಪ್ ಯಾದದ್
  9. ಮೊಹಮ್ಮದ್ ಸಿರಾಜ್
  10. ಆಕಾಶ್ ದೀಪ್ಜ
  11. ಅರ್ಷದೀಪ್ ಸಿಂಗ್.

ಟೀಮ್ ಇಂಡಿಯಾ ಪಾಲಿನ ನಿರ್ಣಾಯಕ ಪಂದ್ಯ:

ಅಂತಿಮ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿನ ನಿರ್ಣಾಯಕ ಪಂದ್ಯ. ಏಕೆಂದರೆ 5 ಪಂದ್ಯಗಳ ಸರಣಿಯ ಮೊದಲ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಇನ್ನು ಮೂರನೇ ಪಂದ್ಯವನ್ನು ಇಂಗ್ಲೆಂಡ್ ಗೆದ್ದುಕೊಂಡಿದೆ. ನಾಲ್ಕನೇ ಮ್ಯಾಚ್ ಡ್ರಾನಲ್ಲಿ ಅಂತ್ಯಗೊಂಡರೂ ಸರಣಿಯಲ್ಲಿ ಇಂಗ್ಲೆಂಡ್ 2-1 ಅಂತರದಿಂದ ಮುನ್ನಡೆ ಹೊಂದಿದೆ.

ಇದನ್ನೂ ಓದಿ: ಜಯ ಜಯ ಜಯ ಜಯ ಜಯಯೇ… ಆಸ್ಟ್ರೇಲಿಯಾ ದಾಖಲೆಯ ಜಯಭೇರಿ

ಇತ್ತ ಸರಣಿ ಸೋಲನ್ನು ತಪ್ಪಿಸಲು ಟೀಮ್ ಇಂಡಿಯಾ ಕೊನೆಯ ಮ್ಯಾಚ್​ನಲ್ಲಿ ಗೆಲ್ಲಲೇಬೇಕು. ಅದರಂತೆ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಜರುಗಲಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯನ್ನು 2-2 ಅಂತರದಿಂದ ಡ್ರಾ ಮಾಡಿಕೊಳ್ಳಬಹುದು. ಹೀಗಾಗಿ ಕೊನೆಯ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ ಪಂದ್ಯವಾಗಿದೆ.

ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ