AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇತಿಹಾಸ ಸೃಷ್ಟಿಸುವ ಗುರಿಯೊಂದಿಗೆ ಇಂಗ್ಲೆಂಡ್‌ ತಲುಪಿದ ಟೀಂ ಇಂಡಿಯಾ

India vs England Test Series: ವಿರಾಟ್ ಮತ್ತು ರೋಹಿತ್ ಅವರ ಅನುಪಸ್ಥಿತಿಯಲ್ಲಿ ಶುಭ್ಮನ್ ಗಿಲ್ ನೇತೃತ್ವದ ಯುವ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲು ಸಜ್ಜಾಗಿದೆ. ಜೂನ್ 20ರಿಂದ ಆರಂಭವಾಗುವ ಈ ಸರಣಿಯಲ್ಲಿ ಯುವ ಆಟಗಾರರ ಸಾಮರ್ಥ್ಯವನ್ನು ಪ್ರದರ್ಶಿಸುವ ನಿರೀಕ್ಷೆಯಿದೆ. ಗಿಲ್ ತಂಡದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 18 ವರ್ಷಗಳ ನಂತರ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಗುರಿ ಭಾರತ ತಂಡದ್ದಾಗಿದೆ.

IND vs ENG: ಇತಿಹಾಸ ಸೃಷ್ಟಿಸುವ ಗುರಿಯೊಂದಿಗೆ ಇಂಗ್ಲೆಂಡ್‌ ತಲುಪಿದ ಟೀಂ ಇಂಡಿಯಾ
Team India
ಪೃಥ್ವಿಶಂಕರ
|

Updated on: Jun 06, 2025 | 5:31 PM

Share

ಹೊಸ ನಾಯಕ ಶುಭ್​ಮನ್ ಗಿಲ್ (Shubman Gill) ನೇತೃತ್ವದಲ್ಲಿ, ಭಾರತ ಯುವ ತಂಡವು ಇತಿಹಾಸ ರಚಿಸಲು ಇಂಗ್ಲೆಂಡ್ ತಲುಪಿದೆ. ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಮೊದಲ ಟೆಸ್ಟ್ ಜೂನ್ 20 ರಂದು ಲೀಡ್ಸ್ ಮೈದಾನದಲ್ಲಿ ಆರಂಭವಾಗಲಿದೆ. ಈ ಬಾರಿ ಇಂಗ್ಲೆಂಡ್ ವಿರುದ್ಧದ 5-ಟೆಸ್ಟ್ ಸರಣಿಯಲ್ಲಿ, ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat Kohli) ಇಬ್ಬರೂ ಆಟಗಾರರು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತರಾಗಿರುವುದರಿಂದ ಭಾರತ ತಂಡವು ಅವರಿಲ್ಲದೆ ಆಡಲಿದೆ. ಅಂತಹ ಪರಿಸ್ಥಿತಿಯಲ್ಲಿ, ಆಡುವ ಹನ್ನೊಂದರಲ್ಲಿ ಈ ಇಬ್ಬರು ಆಟಗಾರರನ್ನು ಯಾರು ಬದಲಾಯಿಸುತ್ತಾರೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ? ಆದರೆ ಮುಂದಿನ 10 ದಿನಗಳಲ್ಲಿ ಬಲಿಷ್ಠ ಪ್ಲೇಯಿಂಗ್ 11 ಕಟ್ಟುವ ವಿಶ್ವಾಸ ನಾಯಕ ಶುಭಮನ್ ಗಿಲ್ ಅವರಿಗಿದೆ.

ವಿರಾಟ್- ರೋಹಿತ್ ಸ್ಥಾನ ತುಂಬುವುದು ಕಷ್ಟ

ಇಂಗ್ಲೆಂಡ್ ಪ್ರವಾಸಕ್ಕೆ ತೆರಳುವ ಮೊದಲು ಪತ್ರಿಕಾಗೋಷ್ಠಿಯಲ್ಲಿ ನಾಯಕ ಶುಭ್​ಮನ್ ಗಿಲ್, ವಿರಾಟ್ ಮತ್ತು ರೋಹಿತ್ ಅವರ ಸ್ಥಾನವನ್ನು ತುಂಬುವುದು ಕಷ್ಟ, ಆದರೆ ನಾವು ಅದರ ಯಾವುದೇ ಒತ್ತಡವನ್ನು ತೆಗೆದುಕೊಳ್ಳುತ್ತಿಲ್ಲ ಎಂದು ಹೇಳಿದರು. ತಂಡದ ಮೇಲೆ ನಮಗೆ ಸಂಪೂರ್ಣ ನಂಬಿಕೆ ಇದೆ. ಪ್ಲೇಯಿಂಗ್ ಇಲೆವೆನ್ ಬಗ್ಗೆ ಈಗಲೇ ಏನನ್ನೂ ಹೇಳುವುದು ಕಷ್ಟ, ಆದರೆ ಶೀಘ್ರದಲ್ಲೇ ನಾವು ವಿನ್ನಿಂಗ್ ಪ್ಲೇಯಿಂಗ್ ಇಲೆವೆನ್ ಅನ್ನು ಮಾಡುತ್ತೇವೆ. ಯಾವುದೇ ಕಷ್ಟದ ಸಮಯದಲ್ಲಿ ಆಡಲು ಸಿದ್ಧರಾಗಿರುವ ಉತ್ತಮ ಬ್ಯಾಟ್ಸ್‌ಮನ್‌ಗಳನ್ನು ನಮ್ಮ ತಂಡ ಹೊಂದಿದೆ ಎಂದು ಗಿಲ್ ಹೇಳಿದರು. ಈ ಬಾರಿ ಟೀಂ ಇಂಡಿಯಾ 2007 ರ ನಂತರ ಮೊದಲ ಬಾರಿಗೆ ಟೆಸ್ಟ್ ಸರಣಿಯನ್ನು ಗೆಲ್ಲುವ ಉದ್ದೇಶದಿಂದ ಇಂಗ್ಲೆಂಡ್ ತಲುಪಿದೆ. 18 ವರ್ಷಗಳಲ್ಲಿ, ಟೀಂ ಇಂಡಿಯಾ ಇಂಗ್ಲೆಂಡ್‌ನಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಈ ಹಿನ್ನೆಲೆಯಲ್ಲಿ, ಭಾರತ ತಂಡ ಶೀಘ್ರದಲ್ಲೇ ಅಭ್ಯಾಸವನ್ನು ಪ್ರಾರಂಭಿಸಲಿದೆ.

ಅಭ್ಯಾಸ ಶಿಬಿರ ಜೂನ್ 8 ರಂದು ಆರಂಭ

ಜೂನ್ 8 ರಿಂದ ಇಂಗ್ಲೆಂಡ್‌ನಲ್ಲಿ ಟೀಂ ಇಂಡಿಯಾ ತನ್ನ ಅಭ್ಯಾಸ ಶಿಬಿರವನ್ನು ಪ್ರಾರಂಭಿಸಲಿದೆ. ಅದಕ್ಕೂ ಮೊದಲು, ತಂಡದ ಕೆಲವು ಆಟಗಾರರು ಇಂಗ್ಲೆಂಡ್ ಲಯನ್ಸ್ ವಿರುದ್ಧ ಅನಧಿಕೃತ ಪಂದ್ಯವನ್ನು ಆಡಲಿದ್ದಾರೆ. ಜೂನ್ 6, ಶುಕ್ರವಾರದಿಂದ ಪ್ರಾರಂಭವಾಗುವ ಎರಡನೇ ಅನಧಿಕೃತ ಪಂದ್ಯದಲ್ಲಿ ಕೆಎಲ್ ರಾಹುಲ್ ಆಡುವ ನಿರೀಕ್ಷೆಯಿದೆ. ಇದರ ನಂತರ, ಟೀಂ ಇಂಡಿಯಾ ಮೇ 13 ರಂದು ಭಾರತ-ಎ ವಿರುದ್ಧ ಅಭ್ಯಾಸ ಪಂದ್ಯವನ್ನು ಆಡಲಿದೆ. ಜೂನ್ 20 ರಂದು ಪ್ರಾರಂಭವಾಗುವ ಮೊದಲ ಟೆಸ್ಟ್ ಪಂದ್ಯದ ಮೊದಲು ಈ ಅಭ್ಯಾಸ ಪಂದ್ಯವು ಟೀಂ ಇಂಡಿಯಾಕ್ಕೆ ತುಂಬಾ ಉಪಯುಕ್ತವಾಗಿದೆ.

ಟೀಂ ಇಂಡಿಯಾ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್ ಮತ್ತು ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೆಲ್, ವಾಷಿಂಗ್ಟನ್ ಸುಂದರ್, ಶಾರ್ದುಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರಿತ್ ಬುಮ್ರಾ. ಅರ್ಷದೀಪ್ ಸಿಂಗ್ ಮತ್ತು ಕುಲ್ದೀಪ್ ಯಾದವ್.

IND vs ENG: ಐಪಿಎಲ್ ಮಧ್ಯದಲ್ಲಿ ಇಂಗ್ಲೆಂಡ್ ತಲುಪಿದ ಟೀಂ ಇಂಡಿಯಾ ಆಟಗಾರರು

ಮೊದಲ ಟೆಸ್ಟ್ ಪಂದ್ಯಕ್ಕೆ ಇಂಗ್ಲೆಂಡ್ ತಂಡ: ಬೆನ್ ಸ್ಟೋಕ್ಸ್ (ನಾಯಕ), ಶೋಯೆಬ್ ಬಶೀರ್, ಜಾಕೋಬ್ ಬೆಥೆಲ್, ಹ್ಯಾರಿ ಬ್ರೂಕ್, ಬ್ರೈಡೆನ್ ಕಾರ್ಸೆ, ಸ್ಯಾಮ್ ಕುಕ್, ಜ್ಯಾಕ್ ಕ್ರಾಲೆ, ಬೆನ್ ಡಕೆಟ್, ಜೇಮೀ ಓವರ್ಟನ್, ಓಲಿ ಪೋಪ್, ಜೋ ರೂಟ್, ಜೇಮೀ ಸ್ಮಿತ್, ಜೋಶ್ ಟಂಗ್, ಕ್ರಿಸ್ ವೋಕ್ಸ್.

ಟೆಸ್ಟ್ ಸರಣಿ ವೇಳಾಪಟ್ಟಿ

  1. ಮೊದಲ ಟೆಸ್ಟ್: ಜೂನ್ 20-24, ಲೀಡ್ಸ್
  2. ಎರಡನೇ ಟೆಸ್ಟ್: ಜುಲೈ 2- 6, ಬರ್ಮಿಂಗ್ಹ್ಯಾಮ್
  3. ಮೂರನೇ ಟೆಸ್ಟ್: ಜುಲೈ 10-14, ಲಾರ್ಡ್ಸ್
  4. ನಾಲ್ಕನೇ ಟೆಸ್ಟ್: ಜುಲೈ 23- 27, ಮ್ಯಾಂಚೆಸ್ಟರ್
  5. ಐದನೇ ಟೆಸ್ಟ್: ಜುಲೈ 31 – ಆಗಸ್ಟ್ 4, ಕೆನ್ನಿಂಗ್ಟನ್ ಓವಲ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು