AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕಪಿಲ್ ದೇವ್ ಸೃಷ್ಟಿಸಿದ್ದ 41 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ ಬುಮ್ರಾ..!

Jasprit Bumrah: ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯೂ ಒಂದಾಗಿದೆ.

ಪೃಥ್ವಿಶಂಕರ
|

Updated on: Feb 03, 2024 | 5:51 PM

Share
ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯೂ ಒಂದಾಗಿದೆ.

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್​ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ ಪ್ರಮುಖವಾದದ್ದು, ಟೀಂ ಇಂಡಿಯಾದ ಮಾಜಿ ನಾಯಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯೂ ಒಂದಾಗಿದೆ.

1 / 8
ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು. ಅವರು ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ ಮತ್ತು ಟಾಮ್ ವಿಲಿಯಂ ಹಾರ್ಟ್ಲಿ ಹಾಗೂ ಜೇಮ್ಸ್ ಅಂಡರ್ಸನ್ ವಿಕೆಟ್ ಪಡೆದರು.

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 6 ವಿಕೆಟ್ ಪಡೆದರು. ಅವರು ಓಲಿ ಪೋಪ್, ಜೋ ರೂಟ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್ ಮತ್ತು ಟಾಮ್ ವಿಲಿಯಂ ಹಾರ್ಟ್ಲಿ ಹಾಗೂ ಜೇಮ್ಸ್ ಅಂಡರ್ಸನ್ ವಿಕೆಟ್ ಪಡೆದರು.

2 / 8
ಬುಮ್ರಾ ಪಡೆದ ಈ 6 ವಿಕೆಟ್​ಗಳಲ್ಲಿ 4 ವಿಕೆಟ್​ಗಳು 3 ರಿಂದ 6 ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಆಟಗಾರರದ್ದಾಗಿತ್ತು. 1983 ರ ನಂತರ ಭಾರತದಲ್ಲಿ ವೇಗದ ಬೌಲರ್ 3, ನಂಬರ್ 4, ನಂಬರ್ 5 ಮತ್ತು ನಂಬರ್ 6 ಬ್ಯಾಟ್ಸ್‌ಮನ್‌ಗಳ ವಿಕೆಟ್ ಪಡೆದದ್ದು ಇದೇ ಮೊದಲು.

ಬುಮ್ರಾ ಪಡೆದ ಈ 6 ವಿಕೆಟ್​ಗಳಲ್ಲಿ 4 ವಿಕೆಟ್​ಗಳು 3 ರಿಂದ 6 ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸುವ ಆಟಗಾರರದ್ದಾಗಿತ್ತು. 1983 ರ ನಂತರ ಭಾರತದಲ್ಲಿ ವೇಗದ ಬೌಲರ್ 3, ನಂಬರ್ 4, ನಂಬರ್ 5 ಮತ್ತು ನಂಬರ್ 6 ಬ್ಯಾಟ್ಸ್‌ಮನ್‌ಗಳ ವಿಕೆಟ್ ಪಡೆದದ್ದು ಇದೇ ಮೊದಲು.

3 / 8
ಇದಕ್ಕೂ ಮೊದಲು ಕಪಿಲ್ ದೇವ್ 1983ರಲ್ಲಿ ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂತಹ ಸಾಧನೆ ಮಾಡಿದ್ದರು. ಆ ಪಂದ್ಯದಲ್ಲಿ ಕಪಿಲ್ ದೇವ್ 83 ರನ್ ನೀಡಿ 9 ವಿಕೆಟ್ ಪಡೆದಿದ್ದರು.

ಇದಕ್ಕೂ ಮೊದಲು ಕಪಿಲ್ ದೇವ್ 1983ರಲ್ಲಿ ಅಹಮದಾಬಾದ್‌ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಇಂತಹ ಸಾಧನೆ ಮಾಡಿದ್ದರು. ಆ ಪಂದ್ಯದಲ್ಲಿ ಕಪಿಲ್ ದೇವ್ 83 ರನ್ ನೀಡಿ 9 ವಿಕೆಟ್ ಪಡೆದಿದ್ದರು.

4 / 8
ಇದೀಗ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟೆಸ್ಟ್​ನಲ್ಲಿ 150 ವಿಕೆಟ್ ಪಡೆದ 8ನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ

ಇದೀಗ ಬುಮ್ರಾ ಟೆಸ್ಟ್ ಕ್ರಿಕೆಟ್‌ನಲ್ಲಿ ಈ ಸಾಧನೆ ಮಾಡಿದ ಎರಡನೇ ಭಾರತೀಯ ವೇಗಿ ಎನಿಸಿಕೊಂಡಿದ್ದಾರೆ. ಈ ಮೂಲಕ ಕಪಿಲ್ ದೇವ್ ಅವರ 41 ವರ್ಷಗಳ ಹಳೆಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅಲ್ಲದೆ ಟೆಸ್ಟ್​ನಲ್ಲಿ 150 ವಿಕೆಟ್ ಪಡೆದ 8ನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ

5 / 8
ಹಾಗೆಯೇ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಮೊದಲ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ. ಬುಮ್ರಾ 6781 ಎಸೆತಗಳಲ್ಲಿ 150 ವಿಕೆಟ್​ಗಳ ಮೈಲಿಗಲ್ಲನ್ನು ದಾಟಿದ್ದಾರೆ.

ಹಾಗೆಯೇ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಮೊದಲ ಬೌಲರ್ ಎಂಬ ದಾಖಲೆಯನ್ನು ಬುಮ್ರಾ ನಿರ್ಮಿಸಿದ್ದಾರೆ. ಬುಮ್ರಾ 6781 ಎಸೆತಗಳಲ್ಲಿ 150 ವಿಕೆಟ್​ಗಳ ಮೈಲಿಗಲ್ಲನ್ನು ದಾಟಿದ್ದಾರೆ.

6 / 8
ಬುಮ್ರಾಗೂ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ವೇಗಿ ಉಮೇಶ್ ಯಾದವ್ 7661 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದರು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಅಗ್ರಸ್ಥಾನಕ್ಕೇರಿದರೆ, ಉಮೇಶ್ ಯಾದವ್ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

ಬುಮ್ರಾಗೂ ಮೊದಲು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ವೇಗಿ ಉಮೇಶ್ ಯಾದವ್ 7661 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದರು. ಇದೀಗ ಈ ಪಟ್ಟಿಯಲ್ಲಿ ಬುಮ್ರಾ ಅಗ್ರಸ್ಥಾನಕ್ಕೇರಿದರೆ, ಉಮೇಶ್ ಯಾದವ್ ಎರಡನೇ ಸ್ಥಾನಕ್ಕೆ ಜಾರಿದ್ದಾರೆ.

7 / 8
ಈ ಇಬ್ಬರನ್ನು ಹೊರತುಪಡಿಸಿ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಭಾರತದ ವೇಗಿಗಳ ಪೈಕಿ ಮೂರನೇ ಸ್ಥಾನದಲ್ಲಿರುವ ಮೊಹಮ್ಮದ್ ಶಮಿ, 7755 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. 8378 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದ ಕಪಿಲ್ ದೇವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

ಈ ಇಬ್ಬರನ್ನು ಹೊರತುಪಡಿಸಿ ಅತಿ ಕಡಿಮೆ ಎಸೆತಗಳಲ್ಲಿ 150 ವಿಕೆಟ್ ಪೂರೈಸಿದ ಭಾರತದ ವೇಗಿಗಳ ಪೈಕಿ ಮೂರನೇ ಸ್ಥಾನದಲ್ಲಿರುವ ಮೊಹಮ್ಮದ್ ಶಮಿ, 7755 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದರು. 8378 ಎಸೆತಗಳಲ್ಲಿ 150 ವಿಕೆಟ್ ಪಡೆದಿದ್ದ ಕಪಿಲ್ ದೇವ್ ನಾಲ್ಕನೇ ಸ್ಥಾನದಲ್ಲಿದ್ದಾರೆ.

8 / 8
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ