AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಮೊದಲ ಟೆಸ್ಟ್​ಗೆ ಮಳೆ ಅಡ್ಡಿಯಾಗದಿದ್ದರೆ ಭಾರತ ಆ ಪಂದ್ಯವನ್ನೂ ಗೆದ್ದು ಬಿಡುತ್ತಿತ್ತು; ಮೈಕೆಲ್ ಅಥರ್ಟನ್

IND vs ENG: ಭಾರತದ ಆಡುವ ರೀತಿ, ಗೆಲ್ಲುವ ಇಚ್ಛೆ ಮತ್ತು ಕಷ್ಟದ ಸಮಯದಲ್ಲಿ ತಮ್ಮನ್ನು ತಾವು ನಿಭಾಯಿಸುವ ಸಾಮರ್ಥ್ಯವನ್ನು ನೋಡಿದ ನಂತರ, ನಾಟಿಂಗ್ಹ್ಯಾಮ್ ಟೆಸ್ಟ್​ನಲ್ಲಿಯೂ ಭಾರತ ಗೆಲ್ಲಬಹುದೆಂದು ಎಲ್ಲರಿಗೂ ಅನಿಸಿತ್ತು.

IND vs ENG: ಮೊದಲ ಟೆಸ್ಟ್​ಗೆ ಮಳೆ ಅಡ್ಡಿಯಾಗದಿದ್ದರೆ ಭಾರತ ಆ ಪಂದ್ಯವನ್ನೂ ಗೆದ್ದು ಬಿಡುತ್ತಿತ್ತು; ಮೈಕೆಲ್ ಅಥರ್ಟನ್
ಸಂಕ್ಷಿಪ್ತ ಸ್ಕೋರ್ ವಿವರ: ಭಾರತ ಮೊದಲ ಇನ್ನಿಂಗ್ಸ್: 191/10 (61.3) (ಶಾರ್ದೂಲ್ ಠಾಕೂರ್ 57). ಇಂಗ್ಲೆಂಡ್ ಮೊದಲ ಇನ್ನಿಂಗ್ಸ್: 290/10 (84) (ಓಲಿ ಪೋಪ್ 81, ಉಮೇಶ್ ಯಾದವ್ 76/3). ಭಾರತ ಎರಡನೇ ಇನ್ನಿಂಗ್ಸ್: 466/10 (148.2) (ರೋಹಿತ್ ಶರ್ಮಾ 127, ಶಾರ್ದೂಲ್ ಠಾಕೂರ್ 60). ಇಂಗ್ಲೆಂಡ್ ಎರಡನೇ ಇನ್ನಿಂಗ್ಸ್: 210/10 (92.2) (ಹಸೀಬ್ ಹಮೀದ್ 63, ಉಮೇಶ್ ಯಾದವ್ 60/3, ಜಸ್​ಪ್ರೀತ್ ಬುಮ್ರಾ 27/2)
TV9 Web
| Edited By: |

Updated on: Aug 21, 2021 | 7:19 PM

Share

ಭಾರತ ತಂಡ ಪ್ರಸ್ತುತ ಇಂಗ್ಲೆಂಡ್ ಪ್ರವಾಸದಲ್ಲಿದ್ದು, ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸುತ್ತಿದೆ. ಸರಣಿಯ ಎರಡು ಪಂದ್ಯಗಳು ಮುಗಿದಿದ್ದು, ಭಾರತ 1-0 ಮುನ್ನಡೆ ಸಾಧಿಸಿದೆ. ಲಾರ್ಡ್ಸ್ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ಈ ಮುನ್ನಡೆ ಸಾಧಿಸಿದೆ, ಆದರೆ ಮಳೆ ಅಡ್ಡಿಯಾಗದಿದ್ದರೆ ಈ ಮುನ್ನಡೆ 2-0 ಆಗಿರುತ್ತಿತ್ತು. ಟ್ರೈಟ್ ಬ್ರಿಡ್ಜ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಕೊನೆಯ ದಿನ ಭಾರತಕ್ಕೆ ಗೆಲ್ಲಲು 157 ರನ್​ಗಳ ಅಗತ್ಯವಿತ್ತು ಮತ್ತು ಒಂಬತ್ತು ವಿಕೆಟುಗಳು ಭಾರತದ ಕೈಲಿತ್ತು. ಆದರೆ ಮಳೆಯಿಂದಾಗಿ ದಿನದ ಪಂದ್ಯವನ್ನು ಆಡಲಾಗಲಿಲ್ಲ. ಹೀಗಾಗಿ ಪಂದ್ಯ ಡ್ರಾದಲ್ಲಿ ಕೊನೆಗೊಂಡಿತು. ಆ ಪಂದ್ಯದಲ್ಲಿ ಭಾರತ ಗೆದ್ದಿದ್ದರೆ, ಈ ಸಮಯದಲ್ಲಿ ಇಂಗ್ಲೆಂಡ್ ವಿರುದ್ಧ 2-0 ಮುನ್ನಡೆ ಸಾಧಿಸುತ್ತಿತ್ತು. ಇಂಗ್ಲೆಂಡಿನ ಮಾಜಿ ನಾಯಕ ಮೈಕೆಲ್ ಅಥರ್ಟನ್ ಕೂಡ ಇದನ್ನೇ ಹೇಳಿದ್ದಾರೆ. ಅವರು ಇಂಗ್ಲೆಂಡ್ ತಂಡದ ಬಗ್ಗೆ ತಮ್ಮ ಅಭಿಪ್ರಾಯವನ್ನೂ ನೀಡಿದ್ದಾರೆ.

ಭಾರತ ಗೆಲ್ಲುವ ಅವಕಾಶವಿತ್ತು ಈ ಬಗ್ಗೆ ಮಾತನಾಡಿರುವ ಅಥರ್ಟನ್ ಭಾರತದ ಆಡುವ ರೀತಿ, ಗೆಲ್ಲುವ ಇಚ್ಛೆ ಮತ್ತು ಕಷ್ಟದ ಸಮಯದಲ್ಲಿ ತಮ್ಮನ್ನು ತಾವು ನಿಭಾಯಿಸುವ ಸಾಮರ್ಥ್ಯವನ್ನು ನೋಡಿದ ನಂತರ, ನಾಟಿಂಗ್ಹ್ಯಾಮ್ ಟೆಸ್ಟ್​ನಲ್ಲಿಯೂ ಭಾರತ ಗೆಲ್ಲಬಹುದೆಂದು ಎಲ್ಲರಿಗೂ ಅನಿಸಿತ್ತು. ಆದರೆ ಮಳೆ ಅದಕ್ಕೆ ಅವಕಾಶ ಕೊಡಲಿಲ್ಲ. ಮಳೆಯಾಗದಿದ್ದರೆ ಭಾರತ ಮೊದಲ ಟೆಸ್ಟ್​ನಲ್ಲೂ ಜಯ ಸಾಧಿಸುತ್ತಿತ್ತು ಎಂದು ಅಥರ್ಟನ್ ಹೇಳಿದ್ದಾರೆ.

ಇಂಗ್ಲೆಂಡ್ ಬಗ್ಗೆ ಹೇಳಿದ್ದಿದು ಇಂಗ್ಲೆಂಡಿಗೆ ಸಂಬಂಧಿಸಿದಂತೆ, ಇಂಗ್ಲೆಂಡ್ ಎರಡು ಪಂದ್ಯಗಳಲ್ಲಿ ಉತ್ತಮವಾಗಿ ಆಡಿದೆ ಆದರೆ ಕೆಲವು ಶ್ರೇಷ್ಠ ಕ್ರಿಕೆಟಿಗರಾದ – ಬೆನ್ ಸ್ಟೋಕ್ಸ್, ಜೋಫ್ರಾ ಆರ್ಚರ್, ಕ್ರಿಸ್ ವೋಕ್ಸ್ ಇವರುಗಳಿಲ್ಲದೆ ತಂಡಕ್ಕೆ ಕೊಂಚ ಹಿನ್ನಡೆಯಾಗಿದೆ ಎಂದಿದ್ದಾರೆ.

Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್