AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಭಾರತ ಗೆಲ್ಲಬೇಕಿದ್ದರೆ ಈತನನ್ನು ಕಣಕ್ಕಿಳಿಸಲೇಬೇಕು: ಮೈಕೆಲ್ ಕ್ಲಾರ್ಕ್​

India vs England Test Series: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ 5 ವಿಕೆಟ್​ಗಳ ಸೋಲನುಭವಿಸಿದೆ. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದ್ದಾರೆ. ಈ ಮ್ಯಾಚ್​ ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿದೆ.

IND vs ENG: ಭಾರತ ಗೆಲ್ಲಬೇಕಿದ್ದರೆ ಈತನನ್ನು ಕಣಕ್ಕಿಳಿಸಲೇಬೇಕು: ಮೈಕೆಲ್ ಕ್ಲಾರ್ಕ್​
Team India
ಝಾಹಿರ್ ಯೂಸುಫ್
|

Updated on:Jun 28, 2025 | 9:33 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ 2ನೇ ಟೆಸ್ಟ್ ಪಂದ್ಯವು ಜುಲೈ 2 ರಿಂದ ಶುರುವಾಗಲಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲವೆನ್​ನಲ್ಲಿ ಮಹತ್ವದ ಬದಲಾವಣೆ ಮಾಡಬೇಕೆಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್​ ಅಭಿಪ್ರಾಯಪಟ್ಟಿದ್ದಾರೆ. ಕ್ಲಾರ್ಕ್​ ಪ್ರಕಾರ, ಎಡ್ಜ್​ಬಾಸ್ಟನ್​ನಲ್ಲಿ ಟೀಮ್ ಇಂಡಿಯಾ ಗೆಲ್ಲಬೇಕಿದ್ದರೆ ಕುಲ್ದೀಪ್ ಯಾದವ್ ಅವರನ್ನು ಕಣಕ್ಕಿಳಿಸಬೇಕು. ಇದರಿಂದ ಆಂಗ್ಲರ ವಿರುದ್ಧ ಭಾರತ ತಂಡವು ಪಂದ್ಯದ ಮೇಲೆ ಹಿಡಿತ ಸಾಧಿಸಬಹುದು ಎಂದು ಹೇಳಿದ್ದಾರೆ.

ಒಬ್ಬ ಬೌಲರ್ ಆಗಿ, ನಾನು ಯಾವುದೇ ಒಬ್ಬ ಆಟಗಾರನ ಬಗ್ಗೆ ಕೆಟ್ಟದಾಗಿ ಮಾತನಾಡಲು ಇಷ್ಟಪಡುವುದಿಲ್ಲ. ಆದರೆ ನೀವು ಖಂಡಿತವಾಗಿಯೂ ಕುಲ್ದೀಪ್ ಯಾದವ್ ಅವರನ್ನು ಆಡಿಸಬೇಕು . ಅವರಿಗೆ ತಂಡದಲ್ಲಿ ಸ್ಥಾನ ನೀಡಬೇಕು. ಕುಲ್ದೀಪ್ ವಿಕೆಟ್ ತೆಗೆದುಕೊಳ್ಳುವಂತಹ ಬೌಲರ್. ಅಂತಹ ಬೌಲರ್​ ತಂಡದಲ್ಲಿರಲೇಬೇಕು.

ಭಾರತ ತಂಡವು ಹೆಚ್ಚುವರಿ ಬ್ಯಾಟ್ಸ್‌ಮನ್ ಬಗ್ಗೆ ಯೋಚಿಸುತ್ತಾರೆ. ಆದರೆ ಅವರು ವಿಶ್ವದ ನಂಬರ್ 1 ಸ್ಪಿನ್ನರ್ ಅನ್ನು ಆಯ್ಕೆ ಮಾಡಲು ಹೆದರುತ್ತಾರೆ. ಟೀಮ್ ಇಂಡಿಯಾ ನೆನಪಿನಲ್ಲಿಟ್ಟುಕೊಳ್ಳಬೇಕಾದ ಮುಖ್ಯ ಅಂಶವೆಂದರೆ, ಇಂಗ್ಲೆಂಡ್​ನಲ್ಲಿ ಗೆಲ್ಲಬೇಕಿದ್ದರೆ ಅವರನ್ನು ಆಲೌಟ್ ಮಾಡಲೇಬೇಕು. ಹೀಗಾಗಿ ವಿಕೆಟ್ ಟೇಕರ್ ಬೌಲರ್​ಗಳಿಗೆ ಅವಕಾಶ ನೀಡಬೇಕು. ಅದರಂತೆ ಕುಲ್ದೀಪ್ ಯಾದವ್ ಅವರನ್ನು ಆಡಿಸುವುದು ಉತ್ತಮ ಮೈಕೆಲ್ ಕ್ಲಾರ್ಕ್ ಬಿಯಾಂಡ್ 23 ಪಾಡ್‌ಕ್ಯಾಸ್ಟ್‌ನಲ್ಲಿ ಹೇಳಿದರು.

ಇದೇ ವೇಳೆ ಮಾತನಾಡಿದ ಇಂಗ್ಲೆಂಡ್​ನ ಮಾಜಿ ಆಟಗಾರ ನಿಕ್ ನೈಟ್, ಕುಲ್ದೀಪ್ ಯಾದವ್ ಕಣಕ್ಕಿಳಿಯುವುದರಿಂದ ಇಂಗ್ಲೆಂಡ್ ತಂಡವು ತೊಂದರೆಗೆ ಸಿಲುಕಬಹುದು. ಏಕೆಂದರೆ ಆಂಗ್ಲ ಬ್ಯಾಟರ್​ಗಳು ಆಕ್ರಮಣಕಾರಿ ಕ್ರಿಕೆಟ್ ಆಡುತ್ತಿದ್ದಾರೆ. ಇದರಿಂದ ಕುಲ್ದೀಪ್ ಯಾದವ್ ಅವರಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್‌ಗಳನ್ನು ಕಾಡುವುದರಲ್ಲಿ ಅನುಮಾನವೇ ಇಲ್ಲ ಎಂದರು.

ಇದನ್ನೂ ಓದಿ: 6,6,6,6,6,6,6,6: ಪೂರನ್ ಪವರ್​ಫುಲ್ ಶತಕ

ಸರಣಿಯಲ್ಲಿ ಮುನ್ನಡೆ:

ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಸರಣಿಯಲ್ಲಿ ಆಂಗ್ಲರು 1-0 ಅಂತರದಿಂದ ಮುನ್ನಡೆ ಹೊಂದಿದ್ದಾರೆ. ಲೀಡ್ಸ್​ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾವನ್ನು 5 ವಿಕೆಟ್​ಗಳಿಂದ ಮಣಿಸಿ ಇಂಗ್ಲೆಂಡ್ ತಂಡ ಶುಭಾರಂಭ ಮಾಡಿದೆ. ಇದೀಗ ಬರ್ಮಿಂಗ್​​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಡೇಡಿಯಂನಲ್ಲಿ ನಡೆಯಲಿರುವ ದ್ವಿತೀಯ ಪಂದ್ಯದ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಲು ಟೀಮ್ ಇಂಡಿಯಾ ಪ್ಲ್ಯಾನ್ ರೂಪಿಸುತ್ತಿದೆ. ಈ ತಂತ್ರಗಳೊಂದಿಗೆ ಕುಲ್ದೀಪ್ ಯಾದವ್ ಅವರನ್ನು ಸಹ ಕಣಕ್ಕಿಳಿಸಬೇಕೆಂದು ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಮೈಕೆಲ್ ಕ್ಲಾರ್ಕ್​ ಸಲಹೆ ನೀಡಿದ್ದಾರೆ.

Published On - 9:33 am, Sat, 28 June 25

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಎಲ್​ಪಿಜಿ ಕೊರತೆ: ಆಟೋ ಚಾಲಕರಿಗೆ ದಿನಸಿ ಕಿಟ್ ನೀಡಿದ ನಟ ವಿನೋದ್ ರಾಜ್
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​