IND vs ENG: ಸೂರ್ಯ ಮುಳುಗದ ನಾಡಿನಲ್ಲಿ ದಾಖಲೆಗಳ ಮಳೆ ಸುರಿಸಿದ ಸೂರ್ಯ..!

Suryakumar Yadav: ಟೀಂ ಇಂಡಿಯಾದ ಈ ಸ್ಟಾರ್ ಬ್ಯಾಟ್ಸ್‌ಮನ್ ಕೇವಲ 55 ಎಸೆತಗಳಲ್ಲಿ 117 ರನ್‌ಗಳ ಸ್ಮರಣೀಯ ಮತ್ತು ಅದ್ಭುತ ಇನ್ನಿಂಗ್ಸ್ ಆಡಿದರು. ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ಮೊದಲ ಶತಕವಾಗಿದೆ.

IND vs ENG: ಸೂರ್ಯ ಮುಳುಗದ ನಾಡಿನಲ್ಲಿ ದಾಖಲೆಗಳ ಮಳೆ ಸುರಿಸಿದ ಸೂರ್ಯ..!
ಸೂರ್ಯಕುಮಾರ್ ಯಾದವ್ 1000 ರನ್ ಗಡಿ ಮುಟ್ಟಿದರೆ 31ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದ್ದಲ್ಲದೆ, ಇದರೊಂದಿಗೆ ವೇಗವಾಗಿ 1000 ರನ್ ಗಳಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.
Follow us
| Updated By: ಪೃಥ್ವಿಶಂಕರ

Updated on:Jul 11, 2022 | 2:31 PM

ಟಿ20 ವಿಶ್ವಕಪ್‌ (T20 World Cup)ಗೆ 100 ದಿನಗಳಿಗಿಂತ ಕಡಿಮೆ ಸಮಯ ಉಳಿದಿದ್ದು, ಎಲ್ಲಾ ತಂಡಗಳ ಸಿದ್ಧತೆಗಳು ಭರದಿಂದ ಸಾಗಿವೆ. ಭಾರತ ತಂಡ ಕೂಡ ಇದಕ್ಕೆ ಭಿನ್ನವಾಗಿಲ್ಲ. ವಿಶ್ವಕಪ್‌ಗೂ ಮುನ್ನ ಭಾರತ ತಂಡ ಇಂಗ್ಲೆಂಡ್‌ ತಂಡವನ್ನು ದೊಡ್ಡ ಸವಾಲಾಗಿ ಎದುರಿಸಬೇಕಾಗಿತ್ತು. ಮತ್ತು ಇದರಲ್ಲಿ ಟೀಂ ಇಂಡಿಯಾ (Team India) ಯಾವುದೇ ತೊಂದರೆಯಿಲ್ಲದೆ ಯಶಸ್ಸು ಸಾಧಿಸಿದೆ. ಮೂರು ಪಂದ್ಯಗಳ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಈಗಾಗಲೇ ಟೀಂ ಇಂಡಿಯಾ 2-0 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡಿತ್ತು. ಜುಲೈ 10ರ ಭಾನುವಾರದಂದು ನಡೆದ ಕೊನೆಯ ಪಂದ್ಯದಲ್ಲಿ ಸೋತಿದ್ದರು. ಇದರ ಹೊರತಾಗಿಯೂ ಭಾರತ ತಂಡ ಈ ಪಂದ್ಯದಲ್ಲಿ ಹಲವು ದಾಖಲೆಗಳನ್ನು ಮಾಡಿದೆ. ಈ ದಾಖಲೆಗಳಲ್ಲಿ ಹಲವು, ಅದ್ಭುತ ಶತಕ ಸಿಡಿಸಿದ ಸೂರ್ಯಕುಮಾರ್ ಯಾದವ್ (Suryakumar Yadav) ಹೆಸರಿನಲ್ಲಿ ಮಾತ್ರ ದಾಖಲೆಯಾಗಿವೆ.

  1. ಸೂರ್ಯಕುಮಾರ್ ಅವರಿಂದಲೇ ಆರಂಭಿಸೋಣ. ಟೀಂ ಇಂಡಿಯಾದ ಈ ಸ್ಟಾರ್ ಬ್ಯಾಟ್ಸ್‌ಮನ್ ಕೇವಲ 55 ಎಸೆತಗಳಲ್ಲಿ 117 ರನ್‌ಗಳ ಸ್ಮರಣೀಯ ಮತ್ತು ಅದ್ಭುತ ಇನ್ನಿಂಗ್ಸ್ ಆಡಿದರು. ಇದು ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಸೂರ್ಯಕುಮಾರ್ ಯಾದವ್ ಅವರ ಮೊದಲ ಶತಕವಾಗಿದೆ. ಈ ಮೈಲಿಗಲ್ಲನ್ನು ತಲುಪಿದ ಐದನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು.
  2. ಇದು ಅಂತಾರಾಷ್ಟ್ರೀಯ ಮಾತ್ರವಲ್ಲದೆ, ದೇಶೀಯ ಮಟ್ಟದಿಂದ ಐಪಿಎಲ್‌ವರೆಗೆ ಸೂರ್ಯಕುಮಾರ್ ಯಾದವ್ ಅವರ ಮೊದಲ ಟಿ20 ಶತಕವಾಗಿದೆ. ಇದಕ್ಕೂ ಮೊದಲು, ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಬಂದ ಅಜೇಯ 94 ರನ್ ಅವರ ಗರಿಷ್ಠ ಸ್ಕೋರ್ ಆಗಿತ್ತು.
  3. ಇಷ್ಟೇ ಅಲ್ಲ, ಸೂರ್ಯಕುಮಾರ್ ಯಾದವ್ ಟಿ20 ಕ್ರಿಕೆಟ್ ಮೂಲಕ ತಮ್ಮ ಮೊದಲ ಅಂತಾರಾಷ್ಟ್ರೀಯ ಶತಕ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎನಿಸಿಕೊಂಡರು. ಈ ಹಿಂದೆ ದೀಪಕ್ ಹೂಡಾ ಈ ಅದ್ಭುತ ಸಾಧನೆ ಮಾಡಿದ್ದರು. ವಿಶೇಷವೆಂದರೆ ಹೂಡಾ ಕೂಡ 10-12 ದಿನಗಳ ಹಿಂದೆ ಐರ್ಲೆಂಡ್ ವಿರುದ್ಧ ಶತಕ ಬಾರಿಸಿದ್ದರು.
  4. ಸೂರ್ಯಕುಮಾರ್ ಅವರ ಇನ್ನಿಂಗ್ಸ್ 117 ರನ್‌ಗಳ ಹೊರತಾಗಿಯೂ ಟೀಂ ಇಂಡಿಯಾ ಸೋಲನ್ನು ಎದುರಿಸಬೇಕಾಯಿತು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮುನ್ನ ವೆಸ್ಟ್ ಇಂಡೀಸ್ ವಿರುದ್ಧ ಕೆಎಲ್ ರಾಹುಲ್ (ಔಟಾಗದೆ 110) ಶತಕದ ಹೊರತಾಗಿಯೂ ಭಾರತ ಸೋಲನುಭವಿಸಿತ್ತು.
  5. ಇದನ್ನೂ ಓದಿ
    Image
    IND vs ENG: ಆಂಗ್ಲರ ನಾಡಿನಲ್ಲಿ ಸೂರ್ಯ ಸ್ಫೋಟ! ಅಂತಿಮ ಟಿ20ಯಲ್ಲಿ ಅಬ್ಬರದ ಶತಕ ಸಿಡಿಸಿದ ಯಾದವ್
    Image
    IND vs ENG: ಪಾಂಟಿಂಗ್ ದಾಖಲೆ ಮೇಲೆ ಕಣ್ಣಿಟ್ಟ ರೆಕಾರ್ಡ್ ಮೆಷಿನ್ ರೋಹಿತ್! ಲಂಕಾ ದಾಖಲೆಯೂ ಉಡೀಸ್
    Image
    IND vs ENG: ಪವರ್ ಪ್ಲೇಯಲ್ಲಿ 500 ಡಾಟ್ ಬಾಲ್! ಟಿ20 ಕ್ರಿಕೆಟ್​ನ ದಾಖಲೆಗಳ ಸರದಾರ ಭುವನೇಶ್ವರ್ ಕುಮಾರ್
  6. ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಸೂರ್ಯ ಅವರ ಈ ಶತಕ ಬಂದಿತು. ಇದು ಯಾವುದೇ ಬ್ಯಾಟ್ಸ್‌ಮನ್ (ಐಸಿಸಿಯ ಪೂರ್ಣ ಸದಸ್ಯ ರಾಷ್ಟ್ರ) T20 ಇಂಟರ್‌ನ್ಯಾಶನಲ್‌ನಲ್ಲಿ ನಾಲ್ಕನೇ ಅಥವಾ ಅದಕ್ಕಿಂತ ಕೆಳಗಿನ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವಾಗ ಗಳಿಸಿದ ಅತ್ಯಧಿಕ ಸ್ಕೋರ್ ಆಗಿದೆ. ಈ ಮೂಲಕ ಸೂರ್ಯ, ಭಾರತದ ವಿರುದ್ಧ ಗ್ಲೆನ್ ಮ್ಯಾಕ್ಸ್‌ವೆಲ್ (ಔಟಾಗದೆ 113) ಗಳಿಸಿದ ಸ್ಕೋರ್ ಅನ್ನು ಮುರಿದರು.
  7. ವೈಯಕ್ತಿಕವಾಗಿ ಮಾತ್ರವಲ್ಲದೆ ಸೂರ್ಯಕುಮಾರ್ ಯಾದವ್ ಶ್ರೇಯಸ್ ಅಯ್ಯರ್ ಜೊತೆಗೂಡಿ ದಾಖಲೆ ನಿರ್ಮಿಸಿದ್ದಾರೆ. ಇವರಿಬ್ಬರ ನಡುವೆ ನಾಲ್ಕನೇ ವಿಕೆಟ್‌ಗೆ 119 ರನ್‌ಗಳ ಜೊತೆಯಾಟವಿದ್ದು, ಈ ವಿಕೆಟ್‌ಗೆ ಭಾರತದ ಗರಿಷ್ಠ ಜೊತೆಯಾಟದ ದಾಖಲೆಯಾಗಿದೆ.
  8. ಸೂರ್ಯಕುಮಾರ್‌ ಬಿಟ್ಟು ಹೇಳುವುದಾದರೆ, ನಾಯಕ ರೋಹಿತ್ ಶರ್ಮಾ ನಾಯಕತ್ವದಲ್ಲಿ ಸತತ 19 ಪಂದ್ಯಗಳ (ಎಲ್ಲಾ ಸ್ವರೂಪಗಳು) ಭಾರತದ ಗೆಲುವಿನ ಸರಣಿಯು ಸ್ಥಗಿತಗೊಂಡಿತು. ಈ ಮೂಲಕ ರಿಕಿ ಪಾಂಟಿಂಗ್ (ಸತತ 20 ಪಂದ್ಯಗಳ ಗೆಲುವು) ದಾಖಲೆಯನ್ನು ಸರಿಗಟ್ಟುವ ಅವಕಾಶವನ್ನು ಅವರು ಕಳೆದುಕೊಂಡರು. ಇಷ್ಟೇ ಅಲ್ಲ, ಸತತ 16 ಗೆಲುವಿನ ನಂತರ ಪೂರ್ಣ ನಾಯಕನಾದ ನಂತರ ಅವರ ಮೊದಲ ಸೋಲು ಇದಾಗಿದೆ.

Published On - 2:31 pm, Mon, 11 July 22

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ