AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಅಭ್ಯಾಸಕ್ಕೆ ‘ಗ್ರಹಣ’

India vs England: ಟಿ20 ವಿಶ್ವಕಪ್​ನ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಮಾರ್ಚ್ 5 ರಂದು ಜರುಗಲಿರುವ ಈ ಪಂದ್ಯಕ್ಕೆ ಮುಂಬೈನ ವಾಂಖೆಡೆ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹೀಗಾಗಿಯೇ ಈ ನಿರ್ಣಾಯಕ ಪಂದ್ಯದಲ್ಲಿ ಗೆಲ್ಲುವ ತಂಡ ಫೈನಲ್​ಗೇರಲಿದೆ.

ಟೀಮ್ ಇಂಡಿಯಾ ಅಭ್ಯಾಸಕ್ಕೆ 'ಗ್ರಹಣ'
Team India
ಝಾಹಿರ್ ಯೂಸುಫ್
|

Updated on: Mar 04, 2026 | 9:17 AM

Share

T20 World Cup 2026: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆಯಲ್ಲಿದೆ. ಮಾರ್ಚ್ 5 ರಂದು ನಡೆಯಲಿರುವ ಇಂಗ್ಲೆಂಡ್ ವಿರುದ್ಧ ಈ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಆದರೆ, ಮಾರ್ಚ್ 3 ರಂದು ಸಂಭವಿಸಿದ ಪೂರ್ಣ ಚಂದ್ರಗ್ರಹಣದ ಕಾರಣದಿಂದಾಗಿ ಅಭ್ಯಾಸದ ಸಮಯವನ್ನು ಸುಮಾರು ಒಂದು ಗಂಟೆ ಕಾಲ ಮುಂದೂಡಲಾಗಿತ್ತು.

ಅಭ್ಯಾಸದ ಮೂಲ ವೇಳಾಪಟ್ಟಿಯಂತೆ ಸಂಜೆ 6:00 ಗಂಟೆಗೆ ಆರಂಭವಾಗಬೇಕಿದ್ದ ತರಬೇತಿಯು, ಗ್ರಹಣದ ಹಿನ್ನೆಲೆಯಲ್ಲಿ ಸಂಜೆ 7:20ಕ್ಕೆ ಆರಂಭಿಸಲಾಯಿತು. ಹಿಂದೂ ಸಂಪ್ರದಾಯದಲ್ಲಿ, ಗ್ರಹಣದ ಸಮಯದಲ್ಲಿ ಯಾವುದರೂ ಪ್ರಮುಖ ಕಾರ್ಯದಲ್ಲಿ ನಿರತರಾಗುವುದು ಒಳಿತಲ್ಲ ಎಂದು ನಂಬಲಾಗುತ್ತದೆ.

ಇತ್ತ ಚಂದ್ರಗ್ರಹಣವು ಮಧ್ಯಾಹ್ನ 3:20 ರಿಂದ ಸಂಜೆ 6:47 ರವರೆಗೆ ಇದ್ದ ಆ ಅವಧಿಯನ್ನು ಅಶುಭ ಎಂದು ಪರಿಗಣಿಸಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಆಟಗಾರರು  ಗ್ರಹಣ ಮುಗಿದ ನಂತರವೇ ಮೈದಾನಕ್ಕಿಳಿಯಲು ನಿರ್ಧರಿಸಿತು.

ಅಲ್ಲದೆ ಗ್ರಹಣ ಮುಗಿಯುವವರೆಗೆ ಕ್ರೀಡಾಂಗಣದ ಫ್ಲಡ್‌ಲೈಟ್‌ಗಳನ್ನು ಕೂಡ ಆನ್ ಮಾಡಿರಲಿಲ್ಲ. ಇನ್ನು  ಗ್ರಹಣ ಮುಗಿದ ನಂತರ ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಅಭಿಷೇಕ್ ಶರ್ಮಾ ಸೇರಿದಂತೆ ಪ್ರಮುಖ ಆಟಗಾರರು ಕಠಿಣ ತರಬೇತಿಯಲ್ಲಿ ನಿರತರಾಗಿದ್ದರು. ಈ ಅಭ್ಯಾಸದೊಂದಿಗೆ ಟೀಮ್ ಇಂಡಿಯಾ ಇಂಗ್ಲೆಂಡ್ ತಂಡವನ್ನು ಎದುರಿಸಲು ಸಜ್ಜಾಗುತ್ತಿದೆ.

ಸೆಮಿಫೈನಲ್ ಪಂದ್ಯ ಯಾವಾಗ?

ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯವು ಇಂದು (ಮಾ.4) ನಡೆಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ಮತ್ತು ನ್ಯೂಝಿಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್​ನಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

ಇನ್ನು ನಾಳೆ, ಮಾರ್ಚ್ 5 ರಂದು ನಡೆಯಲಿರುವ ದ್ವಿತೀಯ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಈ ಮ್ಯಾಚ್​ನಲ್ಲಿ ಜಯಗಳಿಸುವ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

ಅದರಂತೆ ಈ ನಾಲ್ಕು ತಂಡಗಳಲ್ಲಿ 2 ಟೀಮ್​ಗಳು ಮಾರ್ಚ್ 8 ರಂದು ಅಹಮದಾಬಾದ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಇದನ್ನೂ ಓದಿ: 50 ಲಕ್ಷ ರೂ. ದಂಡವಲ್ಲ… ಪಾಕ್ ಆಟಗಾರರನ್ನು ಬ್ಯಾನ್ ಮಾಡಿ!

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

Follow Us
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ಚಲಿಸುತ್ತಿದ್ದ ಬಸ್​​ನಿಂದ ಬಿದ್ದು ವೃದ್ಧೆ ಸಾವು
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ತಮಿಳುನಾಡು ಎಲೆಕ್ಷನ್‌ ಪ್ರಚಾರದ ವೇಳೆ ಕನ್ನಡದಲ್ಲಿ ಅಶೋಕ್‌ ಮತಬೇಟೆ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ನೀವು ದಲಿತ ವಿರೋಧಿ: ಶಾಸಕರ ಭಾಷಣಕ್ಕೆ ವ್ಯಕ್ತಿಯೋರ್ವನಿಂದ ಅಡ್ಡಿ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಅನುಷಾ ರೈ ಜೊತೆ ಮದುವೆ ಆಗ್ತೀರಾ? ಧರ್ಮ ಕೀರ್ತಿರಾಜ್ ನೇರ ಉತ್ತರ
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬೆಂಗಳೂರು: ಮಗಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ, ಕಾರಣವೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
ಬಿಹಾರದ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಸಾಮ್ರಾಟ್ ಚೌಧರಿ ಹೇಳಿದ್ದೇನು?
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
‘ಕ್ಯಾಲೆಂಡರ್’ ಸಿನಿಮಾ ಬಗ್ಗೆ ಸುಷ್ಮಿತಾ ಮತ್ತು ನಿವಿಷ್ಕಾ ಮಾತು
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಜಮೀರ್‌ ಅಹಮ್ಮದ್ ತಲೆದಂಡ: ಕಾಂಗ್ರೆಸ್ ಒಳ ಗುಟ್ಟು ಬಿಚ್ಚಿಟ್ಟ ರೇಣುಕಾಚಾರ್ಯ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ
ಡೆಹ್ರಾಡೂನ್‌ನ ಕಾಳಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಪ್ರಧಾನಿ ಮೋದಿ