AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಶಮಿಗೆ ತಂಡದಲ್ಲಿ ಸ್ಥಾನ

IND vs ENG: ಜನವರಿ 23 ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಪ್ರಕಟಿಸಲಾಗಿದೆ. ಅಚ್ಚರಿಯ ಆಯ್ಕೆ ಎಂಬಂತೆ ವರ್ಷಗಳಿಂದ ತಂಡದಿಂದ ದೂರ ಉಳಿದಿದ್ದ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ. ಉಳಿದಂತೆ ಕೊನೆಯ ಟಿ20 ಸರಣಿಯಲ್ಲಿ ತಂಡದ ಪರ ಕಣಕ್ಕಿಳಿದಿದ್ದ ಆಟಗಾರರೇ ಇಂಗ್ಲೆಂಡ್ ವಿರುದ್ಧವೂ ಆಯ್ಕೆಯಾಗಿದ್ದಾರೆ.

IND vs ENG: ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾ ಪ್ರಕಟ; ಶಮಿಗೆ ತಂಡದಲ್ಲಿ ಸ್ಥಾನ
ಭಾರತ ತಂಡ
ಪೃಥ್ವಿಶಂಕರ
|

Updated on:Jan 11, 2025 | 9:09 PM

Share

ನಿರೀಕ್ಷೆಯಂತೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾವನ್ನು ಇಂದು ಪ್ರಕಟಿಸಲಾಗಿದೆ. ಬಿಸಿಸಿಐನ ಹಿರಿಯ ಆಯ್ಕೆ ಸಮಿತಿಯು ನಾಯಕ ಸೂರ್ಯಕುಮಾರ್ ಯಾದವ್ ನೇತೃತ್ವದಲ್ಲಿ ಈ ತಿಂಗಳ ಕೊನೆಯಲ್ಲಿ ನಡೆಯಲ್ಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಸ್ಟಾರ್ ವೇಗಿ ಮೊಹಮ್ಮದ್ ಶಮಿಗೆ ತಂಡದಲ್ಲಿ ಸ್ಥಾನ ನೀಡುವ ಮೂಲಕ ಆಯ್ಕೆ ಸಮಿತಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ ಆಟದಿಂದ ಹೊರಗುಳಿದಿದ್ದ ಶಮಿ ಟಿ20 ಕ್ರಿಕೆಟ್‌ನಿಂದ ತಂಡಕ್ಕೆ ಮರಳುತ್ತಿದ್ದಾರೆ. ಶಮಿಯನ್ನು ಹೊರತುಪಡಿಸಿ ಉಳಿದ ಭಾಗಶಃ ಆಟಗಾರರು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಆಡಿದವರೇ ಆಗಿದ್ದಾರೆ. ಈ ಮೊದಲೇ ಹೇಳಿದಂತೆ ಟಿ20 ಸರಣಿಗೆ ಮಾತ್ರ ತಂಡವನ್ನು ಆಯ್ಕೆ ಮಾಡಲಾಗಿದ್ದು, ಏಕದಿನ ಸರಣಿ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ತಂಡವನ್ನು ತಡವಾಗಿ ಪ್ರಕಟಿಸುವ ಸಾಧ್ಯತೆಗಳಿವೆ.

ಶಮಿಗೆ ಟಿ20 ತಂಡದಲ್ಲಿ ಸ್ಥಾನ

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನೇತೃತ್ವದಲ್ಲಿ ಇಂದು ನಡೆದ ಆಯ್ಕೆ ಸಮಿತಿಯ ಸಭೆಯ ಬಳಿಕ ತಂಡವನ್ನು ಪ್ರಕಟಿಸಲಾಗಿದೆ. ಆಯ್ಕೆಯಾಗಿರುವ ತಂಡದಲ್ಲಿ ಈ ಮೊದಲೇ ನಿರೀಕ್ಷಿಸಿದ್ದ ಹೆಸರುಗಳಿದ್ದು, ಅಚ್ಚರಿಯೆಂಬಂತೆ ಮೊಹಮ್ಮದ್ ಶಮಿಗೆ ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ. ವಾಸ್ತವವಾಗಿ ಶಮಿ 2023ರ ವಿಶ್ವಕಪ್‌ ಬಳಿಕ ಇಂಜುರಿಯಿಂದಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಆಶ್ಚರ್ಯಕರ ಸಂಗತಿಯೆಂದರೆ 2022 ರ ಟಿ20 ವಿಶ್ವಕಪ್ ನಂತರ ಶಮಿ ಯಾವುದೇ ಅಂತರರಾಷ್ಟ್ರೀಯ ಟಿ20 ಪಂದ್ಯವನ್ನು ಆಡಿಲ್ಲ. ಹೀಗಾಗಿ ಶಮಿಯನ್ನು ಟಿ20 ತಂಡಕ್ಕೆ ಆಯ್ಕೆ ಮಾಡುವ ಕಲ್ಪನೆ ಇರಲಿಲ್ಲ.

ಆದರೆ ಶಮಿಯನ್ನು ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಗೆ ಹಾಗೂ ಚಾಂಪಿಯನ್ಸ್ ಟ್ರೋಫಿಗೆ ತಂಡದಲ್ಲಿ ಆಯ್ಕೆ ಮಾಡಬಹುದು ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಏಕದಿನ ಸರಣಿಗೂ ಮುನ್ನ ಶಮಿಯನ್ನು ಟಿ20 ಸರಣಿಯಲ್ಲಿ ಕಣಕ್ಕಿಳಿಸಿ ಅವರ ಫಿಟ್ನೆಸ್ ಅನ್ನು ಪರೀಕ್ಷಿಸುವ ಕೆಲಸಕ್ಕೆ ಬಿಸಿಸಿಐ ಮುಂದಾಗಿರುವ ಸಾಧ್ಯತೆಗಳಿವೆ. ಏಕೆಂದರೆ ಟಿ20 ಸರಣಿಯಲ್ಲಿ ಹಾಗೂ ಏಕದಿನ ಸರಣಿಯಲ್ಲಿ ಶಮಿ ಉತ್ತಮ ಪ್ರದರ್ಶನ ನೀಡಿದರೆ, ಆ ಬಳಿಕ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೂ ಶಮಿಯನ್ನು ಆಯ್ಕೆ ಮಾಡುವ ಇರಾದೆಯಲ್ಲಿ ಬಿಸಿಸಿಐ ಇರುವುದು ಇದರಿಂದ ಸ್ಪಷ್ಟವಾಗಿದೆ.

ಅಕ್ಷರ್​ ಪಟೇಲ್​ಗೆ ಉಪನಾಯಕತ್ವ

ಮೇಲೆ ಹೇಳಿದಂತೆ ಟಿ20 ತಂಡದಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲದಿದ್ದರೂ, ಉಪನಾಯಕತ್ವದ ಜವಬ್ದಾರಿಯನ್ನು ಆಲ್​ರೌಂಡರ್ ಅಕ್ಷರ್​ ಪಟೇಲ್​ಗೆ ವಹಿಸಲಾಗಿದೆ. ಉಳಿದಂತೆ ನವೆಂಬರ್​ನಲ್ಲಿ ನಡೆದ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ತಂಡದ ಭಾಗವಾಗಿದ್ದ ಬಹುತೇಕ ಆಟಗಾರರು ಈ ಸರಣಿಗೆ ಆಯ್ಕೆಯಾಗಿದ್ದಾರೆ. ಇವರಲ್ಲದೆ, ನಿತೀಶ್ ಕುಮಾರ್ ರೆಡ್ಡಿ, ಧ್ರುವ್ ಜುರೆಲ್ ಮತ್ತು ಹರ್ಷಿತ್ ರಾಣಾ ಕೂಡ ತಂಡಕ್ಕೆ ಮರಳಿದ್ದಾರೆ. ವಾಸ್ತವವಾಗಿ ಈ ಮೂವರು ಬಾರ್ಡರ್- ಗವಾಸ್ಕರ್ ಟ್ರೋಫಿ ಟೆಸ್ಟ್​ ಸರಣಿಗಾಗಿ ಟೀಂ ಇಂಡಿಯಾದೊಂದಿಗೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಕಾರಣ ಇವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಿಂದ ಕೈಬಿಡಲಾಗಿತ್ತು.

ಪಂತ್-ಅಯ್ಯರ್ ಔಟ್

ಮತ್ತೊಂದೆಡೆ, ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದ ಇಬ್ಬರು ಪ್ರಮುಖ ಆಟಗಾರರಾದ ರಿಷಬ್ ಪಂತ್ ಮತ್ತು ಶಿವಂ ದುಬೆ ಅವರಿಗೆ ಈ ಸರಣಿಯಲ್ಲಿ ಆಯ್ಕೆ ಸಮಿತಿ ಅವಕಾಶ ನೀಡಿಲ್ಲ. ಏಕದಿನ ಸರಣಿ ಮತ್ತು ಚಾಂಪಿಯನ್ಸ್ ಟ್ರೋಫಿಯನ್ನು ಗಮನದಲ್ಲಿಟ್ಟುಕೊಂಡು ಪಂತ್ ಅವರಿಗೆ ವಿಶ್ರಾಂತಿ ನೀಡಲಾಗಿದೆಯೇ ಅಥವಾ ತಂಡದಿಂದ ಕೈಬಿಡಲಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ದುಬೆ ಟಿ20 ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದರೆ, ಇತ್ತ ತನ್ನ ನಾಯಕತ್ವದಲ್ಲಿ ಮುಂಬೈ ತಂಡವನ್ನು ಸೈಯದ್ ಮುಷ್ತಾಕ್ ಅಲಿ ಟಿ20 ಟ್ರೋಫಿಯಲ್ಲಿ ಚಾಂಪಿಯನ್ ಮಾಡಿದ್ದ ಶ್ರೇಯಸ್ ಅಯ್ಯರ್ ಕೂಡ ಟಿ20 ತಂಡದಲ್ಲಿ ಸ್ಥಾನ ಗಳಿಸಲು ಸಾಧ್ಯವಾಗಲಿಲ್ಲ. ಆದರೆ, ಅಯ್ಯರ್ ಏಕದಿನ ಸರಣಿಯಲ್ಲಿ ಆಡುವುದು ಖಚಿತವಾಗಿದೆ.

ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:47 pm, Sat, 11 January 25

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ