AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG Test: ಇಂಗ್ಲೆಂಡ್ ವಿರುದ್ಧದ ಟೆಸ್ಟ್​ಗೂ ಮುನ್ನ ದೊಡ್ಡ ಸುದ್ದಿ: ಭಾರತ ತಂಡಕ್ಕೆ ವಿಶೇಷ ವ್ಯಕ್ತಿಯ ಆಗಮನ

ಐಪಿಎಲ್ 2025 ರ ರನ್ನರ್-ಅಪ್ ಆಗಿದ್ದ ಪಂಜಾಬ್ ಕಿಂಗ್ಸ್ ಜೊತೆಗಿನ ತಮ್ಮ ಕೆಲಸವನ್ನು ಕೊನೆಗೊಳಿಸಿದ ನಂತರ, ಆಡ್ರಿಯನ್ ಲೆ ರೌಕ್ಸ್ ಅವರು ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಹೊಸ ಬಲ ಮತ್ತು ಕಂಡೀಷನಿಂಗ್ ಕೋಚ್ ಆಗಿ ಸೇರುವುದಾಗಿ ಘೋಷಿಸಿದ್ದಾರೆ. ಜನವರಿ 2002 ರಿಂದ ಮೇ 2003 ರವರೆಗೆ ಇವರು ಭಾರತ ತಂಡದಲ್ಲಿ ಇದೇ ಹುದ್ದೆಯಲ್ಲಿದ್ದರು.

IND vs ENG Test: ಇಂಗ್ಲೆಂಡ್ ವಿರುದ್ಧದ ಟೆಸ್ಟ್​ಗೂ ಮುನ್ನ ದೊಡ್ಡ ಸುದ್ದಿ: ಭಾರತ ತಂಡಕ್ಕೆ ವಿಶೇಷ ವ್ಯಕ್ತಿಯ ಆಗಮನ
Shubman Gill And Adrian Le Roux
Vinay Bhat
|

Updated on: Jun 06, 2025 | 10:08 AM

Share

ಬೆಂಗಳೂರು (ಜೂ. 06): ಇಂಗ್ಲೆಂಡ್ ಪ್ರವಾಸದಲ್ಲಿ ಭಾರತ ತಂಡವು ಐದು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು, ಇದಕ್ಕಾಗಿ ಟೀಮ್ ಇಂಡಿಯಾ (Team India) ತಂಡವನ್ನು ಈಗಾಗಲೇ ಘೋಷಿಸಲಾಗಿದೆ. ಈ ಬಾರಿ ನಾಯಕತ್ವದ ಜವಾಬ್ದಾರಿಯನ್ನು ಶುಭ್​ಮನ್ ಗಿಲ್ ಅವರಿಗೆ ವಹಿಸಲಾಗಿದೆ. ಕೆಲ ಆಟಗಾರರು ಆಂಗ್ಲರ ನಾಡಿಗೆ ತೆರಳಿದ್ದಾರೆ ಕೂಡ. ಇದರ ಮಧ್ಯೆ ಟೀಮ್ ಇಂಡಿಯಾಕ್ಕೆ ಹೊಸ ವ್ಯಕ್ತಿಯ ಆಗಮನವಾಗಿದೆ. ಈ ಟೆಸ್ಟ್ ಸರಣಿಗೂ ಮುನ್ನ, ಆಡ್ರಿಯನ್ ಲೆ ರೌಕ್ಸ್ ಹೊಸ ಸ್ಟ್ರೆಂತ್ ಮತ್ತು ಕಂಡೀಷನಿಂಗ್ ಕೋಚ್ ಆಗಿ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ. ಚಾಂಪಿಯನ್ಸ್ ಟ್ರೋಫಿಯ ನಂತರ ಸುಮಾರು 8 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸೋಹಮ್ ದೇಸಾಯಿ ಅವರ ಸ್ಥಾನವನ್ನು ಅವರು ಅಲಂಕರಿಸಲಿದ್ದಾರೆ.

ಐಪಿಎಲ್ 2025 ರ ರನ್ನರ್-ಅಪ್ ಆಗಿದ್ದ ಪಂಜಾಬ್ ಕಿಂಗ್ಸ್ ಜೊತೆಗಿನ ತಮ್ಮ ಕೆಲಸವನ್ನು ಕೊನೆಗೊಳಿಸಿದ ನಂತರ, ಆಡ್ರಿಯನ್ ಲೆ ರೌಕ್ಸ್ ಅವರು ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಹೊಸ ಬಲ ಮತ್ತು ಕಂಡೀಷನಿಂಗ್ ಕೋಚ್ ಆಗಿ ಸೇರುವುದಾಗಿ ಘೋಷಿಸಿದ್ದಾರೆ. ಜನವರಿ 2002 ರಿಂದ ಮೇ 2003 ರವರೆಗೆ ಇದೇ ಹುದ್ದೆಯಲ್ಲಿದ್ದ ಲೆ ರೌಕ್ಸ್ ಅವರು ಈಗ ಭಾರತೀಯ ತಂಡದೊಂದಿಗೆ ಎರಡನೇ ಬಾರಿಗೆ ಸೇವೆ ಸಲ್ಲಿಸಲಿದ್ದಾರೆ.

ಇದನ್ನೂ ಓದಿ
Image
ಆರ್​ಸಿಬಿ ಚಾಂಪಿಯನ್ ಆದ ಬೆನ್ನಲ್ಲೇ ಜಿತೇಶ್ ಶರ್ಮಾಗೆ ಜಾಕ್‌ಪಾಟ್
Image
ಚಾಂಪಿಯನ್ ಆರ್‌ಸಿಬಿ ತಂಡದಿಂದ ಈ 5 ಆಟಗಾರರು ಹೊರಕ್ಕೆ?
Image
ಇಂಗ್ಲೆಂಡ್‌ ಪ್ರವಾಸಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಎಚ್ಚರಿಕೆ ನೀಡಿದ ಕೋಚ್
Image
ಇಂಗ್ಲೆಂಡ್ ಪ್ರವಾಸದ ಬಗ್ಗೆ ಗಿಲ್, ಗಂಭೀರ್ ಮಾತು

ಪಂಜಾಬ್ ಕಿಂಗ್ಸ್ ತಂಡವನ್ನು ತೊರೆದು ಭಾರತೀಯ ತಂಡವನ್ನು ಸೇರುವ ಬಗ್ಗೆ ಆಡ್ರಿಯನ್ ಲೀ ರೌಕ್ಸ್ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, “ಪಂಜಾಬ್ ಕಿಂಗ್ಸ್‌ನೊಂದಿಗಿನ ನನ್ನ 6 ವರ್ಷಗಳ ಪ್ರಯಾಣವು ಕೊನೆಗೊಂಡಿದೆ. ಈ ಋತುವಿನಲ್ಲಿ ನಾವು ಫೈನಲ್‌ಗೆ ತಲುಪಿದೆವು. ಆದರೆ, ಸ್ವಲ್ಪದರಲ್ಲೆ ಟ್ರೋಫಿ ಗೆಲ್ಲಲು ವಿಫಲವಾಯಿತು, ಹೌದು ಇದು ನಿಜವಾಗಿಯೂ ನೋವುಂಟುಮಾಡಿದೆ. ಆದರೆ ತಂಡದ ಬಗ್ಗೆ, ನಾವು ತಯಾರಿ ನಡೆಸಿದ ರೀತಿ, ನಾವು ಆಡಿದ ರೀತಿ ಮತ್ತು ಕೊನೆಯವರೆಗೂ ನಾವು ಹೋರಾಡಿದ ರೀತಿ ಬಗ್ಗೆ ನನಗೆ ತುಂಬಾ ಹೆಮ್ಮೆ ಇದೆ” ಎಂದು ಬರೆದಿದ್ದಾರೆ.

‘‘ತಂಡದ ನಿರ್ವಹಣೆ, ಮಾಲೀಕರು, ತರಬೇತುದಾರರು, ಆಟಗಾರರು ಮತ್ತು ವೈದ್ಯಕೀಯ ತಂಡದಲ್ಲಿರುವ ನನ್ನ ಸಹೋದ್ಯೋಗಿಗಳಿಗೆ ಹೃತ್ಪೂರ್ವಕ ಧನ್ಯವಾದಗಳು. ನಾನು ಭಾರತೀಯ ಕ್ರಿಕೆಟ್ ತಂಡದಲ್ಲಿ ಹೊಸ ಪಾತ್ರಕ್ಕೆ ಹೆಜ್ಜೆ ಹಾಕುತ್ತೇನೆ. ಈ ನೆನಪುಗಳನ್ನು ನನ್ನೊಂದಿಗೆ ಇಟ್ಟುಕೊಳ್ಳುತ್ತೇನೆ. ಕೆಲವು ಒಳ್ಳೆಯ ಮತ್ತು ಪ್ರತಿಭಾನ್ವಿತ ಕ್ರಿಕೆಟಿಗರೊಂದಿಗೆ ಕೆಲಸ ಮಾಡುವ ಅವಕಾಶ ನನಗೆ ಸಿಕ್ಕಿದೆ’’ ಎಂದಿದ್ದಾರೆ.

Jitesh Sharma: ಆರ್​ಸಿಬಿ ಚಾಂಪಿಯನ್ ಆದ ಬೆನ್ನಲ್ಲೇ ಜಿತೇಶ್ ಶರ್ಮಾಗೆ ಜಾಕ್‌ಪಾಟ್: ಮಹತ್ವದ ಸ್ಥಾನ

ಈ ಮೂಲಕ ಭಾರತೀಯ ಕ್ರಿಕೆಟ್ ತಂಡದ ಸಹಾಯಕ ಸಿಬ್ಬಂದಿಯಲ್ಲಿ ಹಲವು ದೊಡ್ಡ ಬದಲಾವಣೆಗಳನ್ನು ಮಾಡಲಾಗಿದೆ. ಮೊದಲು ಅಭಿಷೇಕ್ ನಾಯರ್ ಅವರನ್ನು ವಜಾಗೊಳಿಸಲಾಯಿತು. ಟಿ ದಿಲೀಪ್ ಅವರನ್ನು ಫೀಲ್ಡಿಂಗ್ ಕೋಚ್ ಹುದ್ದೆಯಿಂದಲೂ ತೆಗೆದುಹಾಕಲಾಯಿತು. ಆದರೆ ಇದಾದ ನಂತರ, ರೋಹಿತ್ ಶರ್ಮಾ ಅವರ ಕೋರಿಕೆಯ ಮೇರೆಗೆ ದಿಲೀಪ್ ಅವರನ್ನು ಮತ್ತೆ ಕರೆತರಲಾಯಿತು. ಅವರ ಒಪ್ಪಂದವನ್ನು ಒಂದು ವರ್ಷದವರೆಗೆ ವಿಸ್ತರಿಸಲಾಗಿದೆ.

ಶುಭ್​ಮನ್ ಗಿಲ್ ನೇತೃತ್ವದ ತಂಡವು ಎಡ್ಜ್‌ಬಾಸ್ಟನ್, ಲಾರ್ಡ್ಸ್ ಮತ್ತು ಓಲ್ಡ್ ಟ್ರಾಫರ್ಡ್‌ನಲ್ಲಿ ಟೆಸ್ಟ್ ಪಂದ್ಯಗಳನ್ನು ಆಡಲಿದೆ. ನಂತರ ದಿ ಓವಲ್‌ನಲ್ಲಿ ಅಂತಿಮ ಸರಣಿಯನ್ನು ಆಡಲಿದೆ. 2007 ರ ನಂತರ ಮೊದಲ ಬಾರಿಗೆ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ಗುರಿಯನ್ನು ಭಾರತ ಹೊಂದಿದೆ. ಆಗಸ್ಟ್ 4 ರವರೆಗೆ ನಡೆಯುವ ಈ ಸರಣಿಯು ಗಿಲ್ ನೇತೃತ್ವದಲ್ಲಿ ಭಾರತಕ್ಕೆ ಹೊಸ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಋತುವಿನ ಆರಂಭ ಕೂಡ ಆಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು