AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೀಮ್ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್ ರಘುವನ್ನು ತಡೆದ ಪೊಲೀಸರು..!

India vs England: ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯು ಗುರುವಾರದಿಂದ (ಫೆ.6) ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು 3 ಪಂದ್ಯಗಳನ್ನಾಡಲಾಗುತ್ತಿದ್ದು, ಮೊದಲ ಪಂದ್ಯಕ್ಕೆ ನಾಗ್ಪುರ ಆತಿಥ್ಯವಹಿಸಲಿದೆ. ಇನ್ನು ದ್ವಿತೀಯ ಪಂದ್ಯವು ಕಟಕ್​ನಲ್ಲಿ ನಡೆದರೆ, ಮೂರನೇ ಪಂದ್ಯ ಅಹಮದಾಬಾದ್​ನಲ್ಲಿ ಜರುಗಲಿದೆ.

IND vs ENG: ಟೀಮ್ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್ ರಘುವನ್ನು ತಡೆದ ಪೊಲೀಸರು..!
Raghu
ಝಾಹಿರ್ ಯೂಸುಫ್
|

Updated on: Feb 05, 2025 | 8:35 AM

Share

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿ ಫೆಬ್ರವರಿ 6 ರಿಂದ ಶುರುವಾಗಲಿದೆ. ಈ ಸರಣಿಯ ಮೊದಲ ಪಂದ್ಯಕ್ಕಾಗಿ ಟೀಮ್ ಇಂಡಿಯಾ ನಾಗ್ಪುರಕ್ಕೆ ಬಂದಿಳಿದಿದೆ. ಹೀಗೆ ಬಂದಿಳಿದ ಭಾರತ ತಂಡದ ಜತೆ ಥ್ರೋಡೌನ್ ಸ್ಪೆಷಲಿಸ್ಟ್ ರಘು ಕೂಡ ಇದ್ದರು. ಆದರೆ ರಘುವನ್ನು ಟೀಮ್ ಇಂಡಿಯಾ ಜತೆ ಹೊಟೇಲ್​ಗೆ ತೆರಳಲು ನಾಗ್ಪುರ ಪೊಲೀಸರು ಅನುಮತಿಸಿರಲಿಲ್ಲ.

ಅಭಿಮಾನಿ ಯಾರೋ ಟೀಮ್ ಇಂಡಿಯಾ ಜೊತೆ ಹೋಗಲು ಯತ್ನಿಸುತ್ತಿದ್ದಾರೆ ಎಂದು ಭಾವಿಸಿ ಹೊಟೇಲ್​ ಬಳಿಯಿದ್ದ ಭದ್ರತಾ ಪೊಲೀಸ್ ಸಿಬ್ಬಂದಿಗಳು ಮೊದಲಿಗೆ ರಘು ಅವರನ್ನು ತಡೆದಿದ್ದಾರೆ. ಈ ವೇಳೆ ಅವರು ತಾನು ಕೂಡ ಟೀಮ್ ಇಂಡಿಯಾ ಸದಸ್ಯ ಎಂದು ಪೊಲೀಸರಿಗೆ ಮನವರಿಕೆ ಮಾಡಲು ಯತ್ನಿಸಿದರು.

ಇದೇ ವೇಳೆ ಅಲ್ಲಿದ್ದ ಕೆಲವರು ರಘು ಭಾರತ ತಂಡದ ಥ್ರೋಡೌನ್ ಸ್ಪೆಷಲಿಸ್ಟ್ ಎಂದು ಪೊಲೀಸರಿಗೆ ತಿಳಿಸಿದ್ದಾರೆ. ಆ ಬಳಿಕ ಅವರನ್ನು ಹೊಟೇಲ್​ ಒಳಗೆ ಬಿಟ್ಟಿದ್ದಾರೆ. ಇದೀಗ ಟೀಮ್ ಇಂಡಿಯಾ ಥ್ರೋಡೌನ್ ಸ್ಪೆಷಲಿಸ್ಟ್ ರಘು ಅವರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ನಮ್ಮೂರ ಹುಡುಗ ರಘು:

ಡಿ ರಾಘವೇಂದ್ರ ಅಲಿಯಾಸ್ ರಘು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಕುಮುಟದವರು. ಇದೀಗ ಟೀಮ್ ಇಂಡಿಯಾದ ಸೈಡ್ ಆರ್ಮ್ ಥ್ರೋಡೌನ್ ಸ್ಪೆಷಲಿಸ್ಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಂದರೆ ಬ್ಯಾಟಿಂಗ್​ ಅಭ್ಯಾಸದ ವೇಳೆ ಅತ್ಯಂತ ವೇಗವಾಗಿ ಚೆಂಡೆಸೆಯುವ ಕೆಲಸ.

2012 ರಿಂದ ಟೀಮ್ ಇಂಡಿಯಾ ಥ್ರೋ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಂಡಿರುವ ರಘು, ಕಳೆದ 13 ವರ್ಷಗಳಿಂದ ಭಾರತೀಯ ಬ್ಯಾಟರ್​ಗಳ ಪ್ರದರ್ಶನಕ್ಕಾಗಿ ತಮ್ಮ ರಕ್ತವನ್ನೇ ಬೆವರಾಗಿ ಪರಿವರ್ತಿಸಿದ್ದಾರೆ. ಅಲ್ಲದೆ ತಲೆಯ ಎತ್ತರಕ್ಕೆ ಪುಟಿದೆಳುವಂತೆ ಚೆಂಡುಗಳನ್ನು ಥ್ರೋ ಮಾಡಿ ಟೀಮ್ ಇಂಡಿಯಾ ಬ್ಯಾಟರ್​ಗಳು ಲೀಲಾಜಾಲವಾಗಿ ಬ್ಯಾಟ್ ಬೀಸಲು ನೆರವಾಗಿದ್ದಾರೆ.

ಈ ಮೂಲಕ ಭಾರತ ತಂಡದ ಗೆಲುವಿನಲ್ಲಿ ತೆರೆಮರೆಯ ಕೊಡುಗೆ ನೀಡಿದ್ದಾರೆ. ಹೀಗೆ ತೆರೆಮರೆಯಲ್ಲೇ ಕೊಡುಗೆ ನೀಡುತ್ತಾ ಸಾಗಿರುವ ರಾಘವೇಂದ್ರ ಅವರ ಪರಿಚಯ ಹೆಚ್ಚಿನ ಜನರಿಗಿಲ್ಲ. ಇದೇ ಕಾರಣದಿಂದ ನಾಗ್ಪುರ ಪೊಲೀಸರು ಕೂಡ ಪ್ರಮಾದ ಎಸೆಗಿದ್ದಾರೆ.

ಏನಿದು ಥ್ರೋಡೌನ್ ಸ್ಪೆಷಲಿಸ್ಟ್?

ಥ್ರೋಡೌನ್ ಸ್ಪೆಷಲಿಸ್ಟ್ ಎಂದರೆ ಬ್ಯಾಟಿಂಗ್ ಅಭ್ಯಾಸದ ವೇಳೆ ಚೆಂಡೆಸೆಯುವುದು. ಇದಕ್ಕಾಗಿ ಸೈಡ್ ಆರ್ಮ್ ಸಾಧನವನ್ನು ಬಳಸಲಾಗುತ್ತದೆ. ಸಾಮಾನ್ಯವಾಗಿ ಚೆಂಡನ್ನು ಥ್ರೋ ಮಾಡುವುದರಲ್ಲಿ ಕಷ್ಟ ಏನಿದೆ ಎಂದು ನಿಮಗೂ ಅನಿಸಬಹುದು. ಆದರೆ ಈ ಕೆಲಸ ಅಂದುಕೊಂಡಷ್ಟು ಸುಲಭವಲ್ಲ. ಅದರಲ್ಲೂ ಒಬ್ಬ ಕ್ರಿಕೆಟಿಗ ಹೇಗೆ ತಯಾರಾಗಬೇಕೊ, ಅದೇ ಮಾದರಿಯಲ್ಲಿ ಥ್ರೋಡೌನ್ ಸ್ಪೆಷಲಿಸ್ಟ್ ಕೂಡ ಫಿಟ್​ ಆಗಿರಬೇಕು.

ಪ್ರತಿ ಕ್ರೀಡಾಪಟುಗಳಂತೆ ಜಿಮ್​ನಲ್ಲಿ ಬೆವರಿಳಿಸಬೇಕಾಗುತ್ತದೆ. ತಮ್ಮ ಥ್ರೋನಲ್ಲಿ ವ್ಯತ್ಯಾಸಗಳಾದಂತೆ ಎಚ್ಚರವಹಿಸಬೇಕು. ಮುಖ್ಯವಾಗಿ ಒಂದೇ ಮಾದರಿಯಲ್ಲಿ ಥ್ರೋಗಳನ್ನು ಎಸೆಯುವ ಸಾಮರ್ಥ್ಯ ರೂಪಿಸಬೇಕು. ಉದಾಹರಣೆಗೆ ವಿರಾಟ್ ಕೊಹ್ಲಿಗೆ ಬೌನ್ಸರ್​ ಥ್ರೋಗಳನ್ನು ಎಸೆಯಬೇಕಾಗಿ ಬರಬಹುದು, ಮತ್ತೊಂದೆಡೆ ರೋಹಿತ್ ಶರ್ಮಾ ಯಾರ್ಕರ್​ ಥ್ರೋಗಳಿಗೆ ಡಿಮ್ಯಾಂಡ್ ಮಾಡಬಹುದು. ಇಲ್ಲಿ ಬ್ಯಾಟ್ಸ್​ಮನ್​ಗಳ ಆಗ್ರಹಕ್ಕೆ ಅನುಗುಣವಾಗಿ ಸತತವಾಗಿ ಚೆಂಡೆಸೆಯಬೇಕಾಗುತ್ತದೆ.

ಇದನ್ನೂ ಓದಿ: ಆ್ಯಂಡ್ರೆ ರಸೆಲ್ ಆರ್ಭಟಕ್ಕೆ ಮ್ಯಾಕ್ಸ್​ವೆಲ್ ವಿಶ್ವ ದಾಖಲೆ ಉಡೀಸ್

ಹಾಗೆಯೇ ಎದುರಾಳಿ ತಂಡಗಳ ಬೌಲರ್​​ಗಳ ತಂತ್ರಗಳ ಬಗ್ಗೆ ಜ್ಞಾನ ಹೊಂದಿರಬೇಕು. ಪ್ರತಿ ಪಂದ್ಯಕ್ಕೂ ಮುನ್ನ ಎದುರಾಳಿ ಬೌಲರ್​ಗಳನ್ನು ಸಾಮರ್ಥ್ಯವನ್ನು ವಿಶ್ಲೇಷಿಸಿ ಅದೇ ರೀತಿಯಲ್ಲಿ ಬ್ಯಾಟರ್​ಗಳಿಗೆ ಚೆಂಡೆಸೆಯಬೇಕಾಗುತ್ತದೆ. ಈ ಮೂಲಕ ಟೀಮ್ ಇಂಡಿಯಾ ಬ್ಯಾಟರ್​ಗಳನ್ನು ಸಜ್ಜಗೊಳಿಸುವ ಕೆಲಸ ಮಾಡುತ್ತಿದ್ದಾರೆ ಕನ್ನಡಿಗ ರಾಘವೇಂದ್ರ.

Follow Us
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ