AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ENG vs IND: ಇಂದು ಟೀಮ್ ಇಂಡಿಯಾ ತಪ್ಪು ಮಾಡಿದ್ರೆ, ಸೋಲು ಕಟ್ಟಿಟ್ಟ ಬುತ್ತಿ..!

IND vs ENG: ಒಂದು ವೇಳೆ ನಾಲ್ಕನೇ ದಿನದಾಟವನ್ನು ಸಂಪೂರ್ಣವಾಗಿ ಆಡಿದರೆ ಈ ಮೊತ್ತವು 500ರ ಗಡಿದಾಟಬಹುದು. ಅಲ್ಲದೆ 5ನೇ ದಿನದಾಟದ ಮೊದಲ ಸೆಷನ್​ನಲ್ಲಿ ಡಿಕ್ಲೇರ್ ಮಾಡಿಕೊಂಡರೆ ಮಾತ್ರ ಇಂಗ್ಲೆಂಡ್ ತಂಡದ ಗೆಲುವನ್ನು ತಪ್ಪಿಸಬಹುದು.

ENG vs IND: ಇಂದು ಟೀಮ್ ಇಂಡಿಯಾ ತಪ್ಪು ಮಾಡಿದ್ರೆ, ಸೋಲು ಕಟ್ಟಿಟ್ಟ ಬುತ್ತಿ..!
ENG vs IND
TV9 Web
| Updated By: ಝಾಹಿರ್ ಯೂಸುಫ್|

Updated on:Jul 04, 2022 | 11:08 AM

Share

ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್​​ನಲ್ಲಿ ನಡೆಯುತ್ತಿರುವ ಭಾರತ-ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು 4ನೇ ದಿನದಾಟಕ್ಕೆ ಕಾಲಿಟ್ಟಿದೆ. ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಕಲೆಹಾಕಿದ 416 ರನ್​ಗಳಿಗೆ ಉತ್ತರವಾಗಿ ಇಂಗ್ಲೆಂಡ್ ತಂಡವು 284 ರನ್​ಗಳಿಗೆ ಆಲೌಟ್ ಆಗಿದೆ. ಇದೀಗ ಮೊದಲ ಇನಿಂಗ್ಸ್​ನ 132 ರನ್​ಗಳ ಮುನ್ನಡೆಯೊಂದಿಗೆ 2ನೇ ಇನಿಂಗ್ಸ್ ಆರಂಭಿಸಿರುವ ಟೀಮ್ ಇಂಡಿಯಾ ಮೂರನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 125 ರನ್​ಗಳಿಸಿದೆ. ಈ ಮೂಲಕ ಒಟ್ಟು 257 ರನ್​ಗಳ ಮುನ್ನಡೆ ಪಡೆದುಕೊಂಡಿದೆ. ವಿಶೇಷ ಎಂದರೆ ಉಭಯ ತಂಡಗಳಿಗೂ ನಾಲ್ಕನೇ ದಿನದಾಟ ಬಹಳ ಮುಖ್ಯವಾಗಿದೆ. ಏಕೆಂದರೆ ನಾಲ್ಕನೇ ದಿನದಾಟದಲ್ಲಿ ಯಾರು ಮೇಲುಗೈ ಸಾಧಿಸುತ್ತಾರೋ ಅವರೇ ಪಂದ್ಯ ಗೆಲ್ಲುವ ಚಾನ್ಸ್ ಜಾಸ್ತಿಯಿದೆ.

ಸದ್ಯ ಟೀಮ್ ಇಂಡಿಯಾ ಮೇಲುಗೈ ಹೊಂದಿದ್ದರೂ ಬೃಹತ್ ಮುನ್ನಡೆ ಪಡೆದುಕೊಂಡಿಲ್ಲ. ಟೀಮ್ ಇಂಡಿಯಾ ಬ್ಯಾಟ್ಸ್​ಮನ್​ಗಳು ನಾಲ್ಕನೇ ದಿನದಾಟವನ್ನು ಸಂಪೂರ್ಣವಾಗಿ ಬಳಸಿಕೊಂಡರೆ ಮಾತ್ರ ಪಂದ್ಯದ ಮೇಲೆ ಹಿಡಿತ ಸಾಧಿಸಬಹುದು. ಅದರಲ್ಲೂ ನಾಲ್ಕನೇ ದಿನದಾಟದೊಳಗೆ ಭಾರತ ತಂಡ ಆಲೌಟ್ ಆದರೆ ಇಂಗ್ಲೆಂಡ್ ತಂಡಕ್ಕೆ​ ಗೆಲ್ಲುವ ಅವಕಾಶ ಇರಲಿದೆ.

ಏಕೆಂದರೆ ಭಾರತ ತಂಡವು ಕನಿಷ್ಠ ಎಂದರೂ 450 ರನ್‌ಗಳಿಗಿಂತ ಮುನ್ನಡೆ ಪಡೆಯಬೇಕಿದೆ. ಒಂದು ವೇಳೆ 350 ರ ಅಸುಪಾಸಿನ ಟಾರ್ಗೆಟ್ ನೀಡಿದರೆ ಇಂಗ್ಲೆಂಡ್ ತಂಡ ಚೇಸ್ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚು. ಏಕೆಂದರೆ ಇತ್ತೀಚೆಗೆ ಮುಕ್ತಾಯವಾಗಿದ್ದ ನ್ಯೂಜಿಲೆಂಡ್ ವಿರುದ್ದ 3ನೇ ಟೆಸ್ಟ್​ ಪಂದ್ಯವನ್ನು ಇಂಗ್ಲೆಂಡ್ ಕೊನೆಯ ದಿನದಾಟದಲ್ಲಿ ಚೇಸ್ ಮಾಡಿ ಗೆದ್ದುಕೊಂಡಿತ್ತು. ಅದು ಕೂಡ 22 ಓವರ್​ಗಳನ್ನು ಬಾಕಿಯಿರಿಸಿ 299 ರನ್​ಗಳನ್ನು ಚೇಸ್ ಮಾಡಿ ಎಂಬುದು ವಿಶೇಷ.

ಇದನ್ನೂ ಓದಿ
Image
IND vs ENG: ಟೀಮ್ ಇಂಡಿಯಾ ಆಟಗಾರರು ವಿಶೇಷ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದು ಯಾಕೆ ಗೊತ್ತಾ?
Image
6,6,6,6,6: ಒಂದೇ ಓವರ್​ನಲ್ಲಿ ಸಿಕ್ಸ್​ಗಳ ಸುರಿಮಳೆ: ಟಿ20 ಬ್ಲಾಸ್ಟ್​ನಲ್ಲಿ ಹೊಸ ದಾಖಲೆ
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!
Image
Test Cricket Records: ಟೆಸ್ಟ್​ನಲ್ಲಿ ಅತೀ ವೇಗದ ಶತಕ ಬಾರಿಸಿದ್ದು ಯಾರು ಗೊತ್ತಾ?

ಹೀಗಾಗಿ ನಾಲ್ಕನೇ ದಿನದಾಟದಲ್ಲಿ ಟೀಮ್ ಇಂಡಿಯಾ ಸಂಪೂರ್ಣವಾಗಿ ಬ್ಯಾಟಿಂಗ್ ಮಾಡುವ ಮೂಲಕ 5ನೇ ದಿನದಾಟದಲ್ಲಿ ಡಿಕ್ಲೇರ್ ಘೋಷಿಸುವುದು ಉತ್ತಮ. ಏಕೆಂದರೆ ಈ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡರೂ ಸರಣಿ ಟೀಮ್ ಇಂಡಿಯಾ ವಶವಾಗಲಿದೆ. ಏಕೆಂದರೆ 5 ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1 ಅಂತರದಿಂದ ಮುನ್ನಡೆಯಲ್ಲಿದ್ದು, ಹೀಗಾಗಿ ಡ್ರಾಗೊಂಡರೂ ಸರಣಿ ಜಯ ಟೀಮ್ ಇಂಡಿಯಾ ಪಾಲಾಗಲಿದೆ.

ಇತ್ತ ಐದನೇ ದಿನದಾಟದಲ್ಲಿ ಇಂಗ್ಲೆಂಡ್ ತಂಡವು ಚೇಸ್ ಮಾಡಿ ಗೆಲ್ಲುವ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ. ಏಕೆಂದರೆ ಸರಣಿ ಸಮಬಲಗೊಳಿಸಬೇಕಿದ್ದರೆ ಇಂಗ್ಲೆಂಡ್​ಗೆ ಗೆಲುವು ಅನಿವಾರ್ಯ. ಹೀಗಾಗಿ ಕೊನೆಯ ದಿನದಾಟದಲ್ಲಿ ಇಂಗ್ಲೆಂಡ್ ತಂಡವು ಸ್ಪೋಟಕ ಬ್ಯಾಟಿಂಗ್ ನಡೆಸುವ ಸಾಧ್ಯತೆ ಹೆಚ್ಚು. ಹಾಗಾಗಿ ನಾಲ್ಕನೇ ದಿನದಾಟದಲ್ಲಿ ಸಂಪೂರ್ಣ ಬ್ಯಾಟಿಂಗ್ ಮಾಡುವ ಮೂಲಕ ಟೀಮ್ ಇಂಡಿಯಾ ಇಂಗ್ಲೆಂಡ್​ಗೆ ಕೊನೆಯ ದಿನದಾಟದಲ್ಲಿ ಕನಿಷ್ಠ ಎಂದರೂ 450 ರನ್​ಗಳ ಟಾರ್ಗೆಟ್ ನೀಡಬೇಕಿದೆ. ಸದ್ಯ 257 ರನ್​ಗಳ ಮುನ್ನಡೆ ಹೊಂದಿರುವ ಟೀಮ್ ಇಂಡಿಯಾ 200 ರನ್ ಕಲೆಹಾಕಿದರೂ ಬೃಹತ್ ಮೊತ್ತದ ಟಾರ್ಗೆಟ್ ಆಗಲಿದೆ.

ಒಂದು ವೇಳೆ ನಾಲ್ಕನೇ ದಿನದಾಟವನ್ನು ಸಂಪೂರ್ಣವಾಗಿ ಆಡಿದರೆ ಈ ಮೊತ್ತವು 500ರ ಗಡಿದಾಟಬಹುದು. ಅಲ್ಲದೆ 5ನೇ ದಿನದಾಟದ ಮೊದಲ ಸೆಷನ್​ನಲ್ಲಿ ಡಿಕ್ಲೇರ್ ಮಾಡಿಕೊಂಡರೆ ಮಾತ್ರ ಇಂಗ್ಲೆಂಡ್ ತಂಡದ ಗೆಲುವನ್ನು ತಪ್ಪಿಸಬಹುದು. ಒಂದು ವೇಳೆ ಟೀಮ್ ಇಂಡಿಯಾ ಟಾರ್ಗೆಟ್ 400ರ ಅಸುಪಾಸಿನಲ್ಲಿದ್ದರೆ ಇಂಗ್ಲೆಂಡ್ ತಂಡದಿಂದ ಆಕ್ರಮಣಕಾರಿ ಬ್ಯಾಟಿಂಗ್ ಅನ್ನು ಎದುರು ನೋಡಬಹುದು. ಹೀಗಾಗಿ 4ನೇ ದಿನದಾಟವು ಟೀಮ್ ಇಂಡಿಯಾ ಪಾಲಿಗೆ ಮಹತ್ವದ್ದಾಗಿದ್ದು, ಎಚ್ಚರಿಕೆಯಿಂದ ಆಡಬೇಕಾದ ಅನಿವಾರ್ಯತೆಯಿದೆ.

ಒಟ್ಟಿನಲ್ಲಿ ಮೊದಲ 3 ದಿನಗಳಲ್ಲಿ ನೀರಸವಾಗಿ ಸಾಗಿದ್ದ ಪಂದ್ಯವು ಇದೀಗ 4ನೇ ದಿನದಾಟದ ಕುತೂಹಲಕ್ಕೆ ಬಂದು ನಿಂತಿದೆ. ಸದ್ಯ 3 ವಿಕೆಟ್ ಕಳೆದುಕೊಂಡು 2ನೇ ಇನಿಂಗ್ಸ್​ನಲ್ಲಿ 125 ರನ್​ ಕಲೆಹಾಕಿರುವ ಟೀಮ್ ಇಂಡಿಯಾ 4ನೇ ದಿನದಾಟದಲ್ಲಿ ಎಷ್ಟು ರನ್ ಬಾರಿಸಲಿದೆ ಎಂಬುದರ ಮೇಲೆ ಇಡೀ ಪಂದ್ಯ ಫಲಿತಾಂಶ ನಿಂತಿದೆ.

Published On - 11:07 am, Mon, 4 July 22

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ