AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕರುಣ್ ಕಣ್ಣೀರು… ಸಮಾಧಾನ ಮಾಡಿದ ಕೆಎಲ್ ರಾಹುಲ್

Karun Nair: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಕರುಣ್ ನಾಯರ್ ಟೀಮ್ ಇಂಡಿಯಾ ಪರ 6 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ 7 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ತ್ರಿಶತಕ ಸಿಡಿಸುವ ಮೂಲಕ ಮಿಂಚಿದ್ದರು. ಆದರೆ ಈ ತ್ರಿಪಲ್ ಸೆಂಚುರಿ ಬಳಿಕ ವಿಫಲರಾದ ಕಾರಣ ಅವರನ್ನು ಆ ಬಳಿಕ ಭಾರತ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ. ಇದೀಗ 8 ವರ್ಷಗಳ ಬಳಿಕ ಭಾರತ ತಂಡದಲ್ಲಿ ಕಾಣಿಸಿಕೊಂಡರೂ ಭರ್ಜರಿ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ.

IND vs ENG: ಕರುಣ್ ಕಣ್ಣೀರು... ಸಮಾಧಾನ ಮಾಡಿದ ಕೆಎಲ್ ರಾಹುಲ್
Karun Nair - Kl Rahul
ಝಾಹಿರ್ ಯೂಸುಫ್
|

Updated on: Jul 26, 2025 | 12:32 PM

Share

ಡಿಯರ್ ಕ್ರಿಕೆಟ್… ಇನ್ನೊಂದು ಅವಕಾಶ ನೀಡು ಎಂದು ಬೇಡಿಕೊಂಡಿದ್ದ ಕರುಣ್ ನಾಯರ್​ಗೆ 8 ವರ್ಷಗಳ ಬಳಿಕ ಭಾರತ ತಂಡದಲ್ಲಿ ಮರಳಿ ಸ್ಥಾನ ಲಭಿಸಿತ್ತು.  ಹೀಗೆ ಲಭಿಸಿದ ಅವಕಾಶದೊಂದಿಗೆ ಪ್ಲೇಯಿಂಗ್ ಇಲೆವೆನ್​ನಲ್ಲೂ ಕಾಣಿಸಿಕೊಂಡರು. ಆದರೆ ಈ ಅವಕಾಶಗಳನ್ನು ಬಳಸಿಕೊಳ್ಳುವಲ್ಲಿ ಕರುಣ್ ನಾಯರ್ ಸಂಪೂರ್ಣ ವಿಫಲರಾಗಿದ್ದಾರೆ. ಇಂಗ್ಲೆಂಡ್ ವಿರುದ್ಧ ಆಡಿದ 6 ಇನಿಂಗ್ಸ್​ಗಳಲ್ಲಿ ಕರುಣ್ ಕಲೆಹಾಕಿದ ಒಟ್ಟು ಸ್ಕೋರ್ 131 ರನ್​ಗಳು ಮಾತ್ರ. ಹೀಗಾಗಿಯೇ ನಾಲ್ಕನೇ ಟೆಸ್ಟ್​ನಿಂದ ಕನ್ನಡಿಗನನ್ನು ಕೈ ಬಿಡಲಾಗಿತ್ತು.

ಇತ್ತ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಕರುಣ್ ನಾಯರ್ ಅಳುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಫೋಟೋದಲ್ಲಿ ಕರುಣ್ ಕಣ್ಣೀರು ಹಾಕುತ್ತಿದ್ದರೆ, ಅತ್ತ ಕೆಎಲ್ ರಾಹುಲ್ ತನ್ನ ಸಹಪಾಠಿಯನ್ನು ಸಮಾಧಾನಪಡಿಸುತ್ತಿರುವುದು ಕಾಣಬಹುದು.

ವೈರಲ್ ಫೋಟೋ ಅಸಲಿಯತ್ತೇನು?

ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಫೋಟೋ ಮ್ಯಾಂಚೆಸ್ಟರ್ ಟೆಸ್ಟ್​ ಪಂದ್ಯದ ವೇಳೆ ತೆಗೆದಿದ್ದಲ್ಲ. ಬದಲಾಗಿ ಲಾರ್ಡ್ಸ್​ ಟೆಸ್ಟ್ ಪಂದ್ಯದ ವೇಳೆ ಕಂಡು ಬಂದ ದೃಶ್ಯ. ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಕರುಣ್ ಕೇವಲ 14 ರನ್​ಗಳಿಸಿ ಔಟಾಗಿದ್ದರು. ತನ್ನ ಕೆರಿಯರ್​ಗೆ ನಿರ್ಣಾಯಕವಾಗಿದ್ದ ಈ ಇನಿಂಗ್ಸ್​ನಲ್ಲಿ ಉತ್ತಮ ಪ್ರದರ್ಶನ ನೀಡದೇ ಔಟಾಗಿದ್ದರಿಂದ ಅವರು ನಿರಾಸೆಗೊಂಡಿದ್ದರು.

ಹೀಗಾಗಿಯೇ ಔಟಾದ ಬಳಿಕ ಲಾರ್ಡ್ಸ್ ಬಾಲ್ಕನಿಯಲ್ಲಿ ಬೇಸರದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಕರ್ನಾಟಕದ ಮತ್ತೋರ್ವ ಆಟಗಾರನಾಗಿರುವ ಕೆಎಲ್ ರಾಹುಲ್ ಅವರನ್ನು ಸಮಾಧಾನ ಮಾಡುತ್ತಿರುವುದು ಕಂಡು ಬಂದಿದೆ. ಇದೇ ಫೋಟೋ ಇದೀಗ ನಾಲ್ಕನೇ ಟೆಸ್ಟ್ ಪಂದ್ಯದ ವೇಳೆ ಕಂಡು ಬಂದ ಸನ್ನಿವೇಶ ಎಂಬ ಟ್ಯಾಗ್​ ಲೈನ್​ನೊಂದಿಗೆ ಹರಿಬಿಡಲಾಗಿದೆ.

ಒಟ್ಟಿನಲ್ಲಿ ಎಂಟು ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಕಂಬ್ಯಾಕ್ ಮಾಡಿದ ಕರುಣ್ ನಾಯರ್ ನಿರೀಕ್ಷಿತ ರೀತಿಯಲ್ಲಿ ಪ್ರದರ್ಶನ ನೀಡಿಲ್ಲ ಎಂಬುದೇ ಸತ್ಯ. ಆಡಿದ 6 ಇನಿಂಗ್ಸ್​ಗಳಲ್ಲಿ ಅವರು ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಅತ್ತ ಸಿಕ್ಕ 2ನೇ ಅವಕಾಶದಲ್ಲಿ 61 ರನ್​ಗಳಿಸುವ ಮೂಲಕ ಸಾಯಿ ಸುದರ್ಶನ್ ಮುಂದಿನ ಪಂದ್ಯಕ್ಕೂ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಹೀಗಾಗಿ 5ನೇ ಟೆಸ್ಟ್ ಪಂದ್ಯದಲ್ಲೂ ಕರುಣ್ ನಾಯರ್​ಗೆ ಅವಕಾಶ ಸಿಗುವುದಿಲ್ಲ ಎಂದೇ ಹೇಳಬಹುದು.

ಇದನ್ನೂ ಓದಿ: 11 ಭರ್ಜರಿ ಸಿಕ್ಸ್, 6 ಫೋರ್​: ಶರವೇಗದ ಶತಕ ಸಿಡಿಸಿ ಭರ್ಜರಿ ದಾಖಲೆ ಬರೆದ ಟಿಮ್ ಡೇವಿಡ್

ಅಲ್ಲದೆ ಮುಂಬರುವ ಸರಣಿಗಳಿಂದಲೂ ಕರುಣ್ ನಾಯರ್ ಹೊರಬೀಳುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ ಅತ್ತ ಸರ್ಫರಾಝ್ ಖಾನ್, ತಿಲಕ್ ವರ್ಮಾ ಸೇರಿದಂತೆ ಕೆಲ ಯುವ ದಾಂಡಿಗರು ಅವಕಾಶವನ್ನು ಎದುರು ನೋಡುತ್ತಿದ್ದು, ಹೀಗಾಗಿ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಬಳಿಕ ಕರುಣ್ ನಾಯರ್ ತಂಡದಿಂದ ಹೊರಬಿದ್ದರೂ ಅಚ್ಚರಿಪಡಬೇಕಿಲ್ಲ.

Follow Us
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
30 ಅಡಿ ಆಳದ ಬಾವಿಗೆ ಬಿದ್ದ ಆನೆ: ಅರಣ್ಯಾಧಿಕಾರಿಗಳ 6 ಗಂಟೆಗಳ ಕಾರ್ಯಚರಣೆ
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಸುದೀಪ್ ಸುಮ್ಮನಿದ್ದಾರೆ ರಜತ್, ವಿನಯ್ ಪ್ರಚೋದಿಸುತ್ತಿದ್ದಾರೆ: ಡಾಗ್ ಸತೀಶ್
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಕಾರ್ಯಕ್ರಮಕ್ಕೆ ಬಾರದ ಬ್ಯಾನರ್ಜಿ ಬಗ್ಗೆ ದ್ರೌಪದಿ ಮುರ್ಮು ಬೇಸರದ ಮಾತು
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಬಾಲ್ಯದ ದಿನಗಳಲ್ಲಿ ಮಿಠಾಯಿ, ತಂಬಿಟ್ಟು ತಿಂತಿರೋ ಕಥೆ ಬಿಚ್ಚಿಟ್ಟ ಸಿಎಂ!
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮಿಥುನ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಲೋಕಸಭೆ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯಕ್ಕೆ ಸಿದ್ಧತೆ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಹುಟ್ಟುಹಬ್ಬದಂದು ಅಭಿಮಾನಿಗಳ ಭೇಟಿ ಮಾಡಿದ ರಾಧಿಕಾ ಪಂಡಿತ್: ವಿಡಿಯೋ
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಟ್ರೋಫಿಗಾಗಿ ಕೆಲವರ ಹೃದಯ ಛಿದ್ರಗೊಳಿಸುವುದರಲ್ಲಿ ತಪ್ಪಿಲ್ಲ; ಸ್ಯಾಂಟ್ನರ್
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ವೃಷಭ ರಾಶಿಗೆ ಈ ವರ್ಷ ಹೇಗಿರಲಿದೆ ಗೊತ್ತಾ?
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ
ಯುಗಾದಿ ವರ್ಷ ಭವಿಷ್ಯ; ಮೇಷ ರಾಶಿಯ ಶುಭ -ಅಶುಭ ಫಲಗಳ ಮಾಹಿತಿ ಇಲ್ಲಿದೆ