AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಒಂದು ಗಂಟೆಯೊಳಗೆ ಪಂದ್ಯ ಮುಗಿಸುತ್ತೇವೆ: ಇಂಗ್ಲೆಂಡ್ ಕೋಚ್

IND vs ENG 3rd Test: ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 387 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ ಕೂಡ ಮೊದಲ ಇನಿಂಗ್ಸ್​ನಲ್ಲಿ 387 ರನ್​ಗಳಿಸಿತು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡವನ್ನು 192 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್​ಗಳು ಯಶಸ್ವಿಯಾಗಿದ್ದಾರೆ.

IND vs ENG: ಒಂದು ಗಂಟೆಯೊಳಗೆ ಪಂದ್ಯ ಮುಗಿಸುತ್ತೇವೆ: ಇಂಗ್ಲೆಂಡ್ ಕೋಚ್
England
ಝಾಹಿರ್ ಯೂಸುಫ್
|

Updated on: Jul 14, 2025 | 1:41 PM

Share

ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಗೆಲ್ಲೋದು ನಾವು. ಐದನೇ ದಿನದಾಟವನ್ನು ಕೇವಲ ಒಂದು ಗಂಟೆಯೊಳಗೆ ಮುಗಿಸುತ್ತೇವೆ. ಹೀಗಂದಿರುವುದು ಮತ್ಯಾರೂ ಅಲ್ಲ. ಇಂಗ್ಲೆಂಡ್ ತಂಡದ ಸಹಾಯಕ ಕೋಚ್ ಮಾರ್ಕಸ್ ಟ್ರೆಸ್ಕೊಥಿಕ್. ಲಾರ್ಡ್ಸ್​ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದೆ. ಐದನೇ ದಿನದಾಟದಲ್ಲಿ ಟೀಮ್ ಇಂಡಿಯಾ ಮುಂದೆ 135 ರನ್​ಗಳ ಗುರಿ ಇದೆ. ಅತ್ತ ಇಂಗ್ಲೆಂಡ್ ತಂಡವು ಈ ಪಂದ್ಯದಲ್ಲಿ ಗೆಲ್ಲಬೇಕಿದ್ದರೆ 6 ವಿಕೆಟ್​ಗಳನ್ನು ಕಬಳಿಸಬೇಕು.

ಈ ಆರು ವಿಕೆಟ್​​ಗಳನ್ನು ನಾವು ಐದನೇ ದಿನದಾಟದ ಮೊದಲ ಒಂದು ಗಂಟೆಯೊಳಗೆ ಕಬಳಿಸಲಿದ್ದೇವೆ ಎಂದು ಇಂಗ್ಲೆಂಡ್ ತಂಡದ ಸಹಾಯಕ ಕೋಚ್ ಮಾರ್ಕಸ್ ಟ್ರೆಸ್ಕೊಥಿಕ್ ಹೇಳಿದ್ದಾರೆ. ನಾಲ್ಕನೇ ದಿನದಾಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಟ್ರೆಸ್ಕೊಥಿಕ್, ಕೊನೆಯ ದಿನದಾಟವು ಬೌಲರ್​ಗಳಿಗೆ ಸಹಕಾರಿಯಾಗಲಿದೆ. ಅದರಂತೆ ಸೋಮವಾರವು ಲಾರ್ಡ್ಸ್​ ಪಿಚ್​ನಲ್ಲಿ ಬೌನ್ಸ್​ ಕಂಡು ಬರುವುದು ಖಚಿತ.

ನಮ್ಮಲ್ಲಿ ಬೌನ್ಸರ್ ಎಸೆಯಬಲ್ಲ ಬೌಲರ್​ಗಳಿರುವುದರಿಂದ ಇದರ ಸಂಪೂರ್ಣ ಲಾಭ ಪಡೆಯಲಿದ್ದಾರೆ. ಈ ಮೂಲಕ ಮೊದಲ ಒಂದು ಗಂಟೆಯೊಳಗೆ 6 ವಿಕೆಟ್​ಗಳನ್ನು ಕಬಳಿಸುವ ವಿಶ್ವಾಸವಿದೆ. ಅಲ್ಲದೆ ಐದನೇ ದಿನದಾಟದ ಮೊದಲ ಸೆಷನ್​ನಲ್ಲೇ ಪಂದ್ಯವನ್ನು ಮುಗಿಸಲಿದ್ದೇವೆ ಎಂದು ಮಾರ್ಕಸ್ ಟ್ರೆಸ್ಕೊಥಿಕ್ ಹೇಳಿದ್ದಾರೆ.

ಭಾರತ-ಇಂಗ್ಲೆಂಡ್ 3ನೇ ಟೆಸ್ಟ್ ಸಂಕ್ಷಿಪ್ತ ವಿವರ:

ಲಾರ್ಡ್ಸ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಪರ ಜೋ ರೂಟ್ 104 ರನ್​ಗಳ ಭರ್ಜರಿ ಶತಕ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 387 ರನ್ ಕಲೆಹಾಕಿತು. ಟೀಮ್ ಇಂಡಿಯಾ ಪರ ಜಸ್​ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿ ಮಿಂಚಿದರು.

ಇದರ ಬೆನ್ನಲ್ಲೇ ಮೊದಲ ಇನಿಂಗ್ಸ್ ಶುರು ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100) ಭರ್ಜರಿ ಶತಕ ಬಾರಿಸಿದರು. ಈ ಶತಕದ ಸಹಾಯದೊಂದಿಗೆ ಭಾರತ ತಂಡವು ಮೊದಲ ಇನಿಂಗ್ಸ್​ನಲ್ಲಿ 387 ರನ್​ಗಳಿಸಲು ಶಕ್ತರಾದರು.

ಇನ್ನು ದ್ವಿತೀಯ ಇನಿಂಗ್ಸ್ ಆರಂಭಿಸಿದ ಇಂಗ್ಲೆಂಡ್ ಪರ ಜೋ ರೂಟ್ 40 ರನ್​ ಗಳಿಸಿದರೆ, ಬೆನ್ ಸ್ಟೋಕ್ಸ್ 33 ರನ್ ಬಾರಿಸಿದರು. ಇನ್ನುಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 192 ರನ್​ಗಳಿ ಆಲೌಟ್ ಆಗಿದೆ. ಟೀಮ್ ಇಂಡಿಯಾ ಪರ ವಾಷಿಂಗ್ಟನ್ ಸುಂದರ್ 4 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ಇದೀಗ 193 ರನ್​ಗಳ ಗುರಿ ಬೆನ್ನತ್ತುತ್ತಿರುವ ಟೀಮ್ ಇಂಡಿಯಾ ನಾಲ್ಕನೇ ದಿನದಾಟದ ಅಂತ್ಯಕ್ಕೆ ಯಶಸ್ವಿ ಜೈಸ್ವಾಲ್ (0), ಕರುಣ್ ನಾಯರ್ (14), ಶುಭ್​ಮನ್ ಗಿಲ್ (6) ಹಾಗೂ ಆಕಾಶ್ ದೀಪ್ (1) ವಿಕೆಟ್ ಕಳೆದುಕೊಂಡು 58 ರನ್ ಕಲೆಹಾಕಿದೆ.

ಇದನ್ನೂ ಓದಿ: ವಿಶ್ವ ದಾಖಲೆ… ಮುಂಬೈ ಇಂಡಿಯನ್ಸ್​ ಮುಡಿಗೆ 13ನೇ ಟ್ರೋಫಿ

ಸದ್ಯ ಕ್ರೀಸ್​ನಲ್ಲಿ 33 ರನ್​ಗಳಿಸಿರುವ ಕೆಎಲ್ ರಾಹುಲ್ ಬ್ಯಾಟಿಂಗ್ ಕಾಯ್ದುಕೊಂಡಿದ್ದು, ರಿಷಭ್ ಪಂತ್ ಜೊತೆ ಐದನೇ ದಿನದಾಟದಲ್ಲಿ ಇನಿಂಗ್ಸ್​ ಮುಂದುವರೆಸಲಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 135 ರನ್​ಗಳಿಸಿದರೆ ಲಾರ್ಡ್ಸ್​ ಮೈದಾನದಲ್ಲಿ ಯತಿಹಾಸಿಕ ಗೆಲುವವನ್ನು ತನ್ನದಾಗಿಸಿಕೊಳ್ಳಬಹುದು.

Follow Us
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಆಧುನೀಕರಣಗೊಂಡ 75 ರೈಲ್ವೆ ನಿಲ್ದಾಣಗಳು ನಾಳೆ ಮೋದಿಯಿಂದ ಲೋಕಾರ್ಪಣೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ಅಯೋಧ್ಯೆ ಹಗರಣ: ರಾಜ್ಯದ ಎಲ್ಲಾ ದೇವಾಲಯದ ಹುಂಡಿಗಳ ರಕ್ಷಣೆಗೆ ಬಿಗಿ ಭದ್ರತೆ
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್